ಲೈಫ್ ಸ್ಟೈಲ್
ಮೊಗುತಿ ಹಾಕಿ ಬೀಗೋ ಹುಡುಗೀರಾ ಎಲ್ಲಾರು ಕಂಡಿರಾ..!
ಮೂಗುತಿ ಸುಂದರಿಯರು
ಮೂಗುತಿ ಎಂದರೆ “ಓಲ್ಡ್ ಫ್ಯಾಷನ್ ” ಎಂದು ಮೂಗು ಮುರಿಯುತ್ತಿದ್ದ ಹೆಂಗಳೆಯರು, ಇಂದು ಸಮಯದೂಂದಿಗೆ ಬದಲಾದ ಮೂಗುತಿಯ ಹೂಸ ರೂಪಕ್ಕೆ ಮಾರುಹೋಗಿದ್ದಾರೆ. “ಓಲ್ಡ್ ಈಸ್ ಗೋಲ್ಡ್ ” ಎಂಬ ನಾಣ್ನುಡಿಯಂತೆ.. ಈ ಹಿಂದೆ ಆಧುನೀಕರಣದ ಹೆಸರಲ್ಲಿ ತಿರಸ್ಕೃತ ಗೊಂಡಿದ್ದ ಮೂಗುತಿ ಮಾನಿನಿಯರ ಮೂಗನ್ನು ಅಲಂಕರಿಸಿದೆ.
ಭಾರತೀಯ ಸಂಸ್ಕೃತಿ ಯಲ್ಲಿ’ಮೂಗುತಿ’ ವಿಶೇಷ ಸ್ಥಾನ ಪಡೆದಿದೆ. ಮುತ್ತೈದೆಯರ ಐದು ಮುತ್ತುಗಳಲ್ಲಿ ಇದೂ ಒಂದು. ಈ ಹಿಂದೆ ,ಮದುವೆ ನಿಶ್ಚಯ ವಾದ ಮೇಲೆ ಹೆಣ್ಣು ಮಕ್ಕಳಿಗೆ ಮೂಗು ಚುಚ್ಚಿಸುವ ಪ್ರತೀತಿ ಇತ್ತು . ಈಗಲೂ ಕೆಲ ಸಂಪ್ರದಾಯಸ್ಥ ಕುಟುಂಬಗಳಲ್ಲಿ ಈ ವಾಡಿಕೆ ಮುಂದುವರೆದಿದೆ.
ಮೂಗುತಿ ಏಕೆ ಧರಿಬರಬೇಕು ?
1. ಮೂಗುತಿ ಧರಿಸುವುದರಿಂದ ಋಣಾತ್ಮಕ ಶಕ್ತಿ ತಗ್ಗಿಸುತ್ತದೆ. ಮೂಗಿನ ಬಿಂದುವಿನ ಮೇಲೆ ಒತ್ತಡ ನಿರ್ಮಾಣ ವಾಗುವುದರಿಂದ ಕೆಟ್ಟ ಶಕ್ತಿ ನಿರ್ನಾಮ ವಾಗುತ್ತದೆ.
2. ಮೂಗುತಿ ಧಾರಣೆ ಶ್ವಾಸಮಾರ್ಗ ಹಾಗೂ ಉಸಿರಾಟದಮಾರ್ಗವನ್ನು ರಕ್ಷಿಸುತ್ತದೆ.
3. ಮೂಗುತಿಯು ಚೈತನ್ಯ ದಾಯಕವಾಗಿದ್ದು ಮೂಗಿನ ಸುತ್ತಲಿನ ವಾಯುಮಂಡಲವನ್ನು ಶುದ್ಧಗೊಳಿಸುತ್ತದೆ.
4. ಸ್ತ್ರೀ ಮನಸ್ಸು ಚಂಚಲ. ಮೂಗುತಿ ಧರಿಸುವುದರಿಂದ ಚಂದ್ರನಾಡಿ ಕಾರ್ಯನಿರತವಾಗಿ ಮನಸ್ಸು ಹಿಡಿತಕ್ಕೆ ಬರುತ್ತದೆ.
ಸ್ಯಾಂಡಲ್ ವುಡ್ ನ ಅಪ್ರತಿಮ ಮೂಗುತಿ ಸುಂದರಿಯರಮೂಗುತಿ ಫ್ಯಾಷನ್
ಈಗಂತೂ ಸ್ಯಾಂಡಲ್ ವುಡ್ ಬ್ಯೂಟಿ ಗಳು ಮೂಗುತಿ ಗೆ ಫುಲ್ ಫಿದಾ ಆಗಿದ್ದಾರೆ. ಸಂಪ್ರದಾಯಿಕ ಅಥವಾ ಪಾಶ್ಚಾತ್ಯ ಶೈಲಿಯ ಸ್ಟೈಲ್ ಆಗಿರಲಿ, ಅದರೊಂದಿಗೆ ಮೂಗುತಿ ಇರಲೇ ಬೇಕು. ಇತ್ತೀಚೆಗೆ ಮೂಗುತಿ ಫ್ಯಾಷನ್ ಸ್ಯಾಂಡಲ್ ವುಡ್ ನಲ್ಲಿ ಜೋರಾಗಿದೆ.
ರಾಧಿಕಾ ಪಂಡಿತ್ ತಮ್ಮ ನಿಶ್ಚಿತಾರ್ಥ ಕ್ಕೆ ತೊಟ್ಟ ಮೂಗುತಿ ಸೋಷಿಯಲ್ ಮೀಡಿಯಾ ದಲ್ಲಿ ಎಷ್ಟರಮಟ್ಟಕ್ಕೆ ವೈರಲ್ ಆಗಿತ್ತೆಂದರೇ.. ಮಾರುಕಟ್ಟೆಯಲ್ಲಿ ರಾಧಿಕಾ ಪಂಡಿತ್ ಮೂಗುತಿ ಎಂದೇ ಆ ಡಿಸೈನ್ ಮೂಗುತಿ ಫೇಮಸ್ ಆಗಿ ಹೋಯಿತು. ಸ್ಯಾಂಡಲ್ ವುಡ್ ಕಂಡ ಅಪ್ರತಿಮ ಮೂಗುತಿ ಸುಂದರಿ ಯರಲ್ಲಿ ಇವರೂ ಒಬ್ಬರು.
ಮೂಗುತಿ ಸುಂದರಿ ಎಂದೇ ಹೆಸರಾಗಿರುವ ಬಿಗ್ ಬಾಸ್ ಮತ್ತು ಅಕ್ಕ ಖ್ಯಾತಿಯ ಅನುಪಮಾ ಗೌಡ ರ ಮೂಗುತಿ ಸ್ಟೈಲ್ ಸೋಷಿಯಲ್ ಮೀಡಿಯಾ ದಲ್ಲಿ ಈಗ ವೈರಲ್! ಈ ಸುಂದರಿಯ ಸೊಬಗಿಗೆ ಕನ್ನಡಿ ಹಿಡಿದಂತಿದೆ ಮೂಗುತಿ. ಇವರ ಸೋಷಿಯಲ್ ಪ್ರೊಫೈಲ್ ನಲ್ಲಿ ಇವರ ಮೂಗುತಿ ಕ್ರೇಜ್ ಕಾಣಿಸುತ್ತದೆ. ದೊಡ್ಡ ಗಾತ್ರದ ಮೂಗುತಿ, ಚಿಕ್ಕ ಮೂಗುತಿ, ಬ್ಲಾಕ್ ಹೀಗೆ ಹಲವಾರು ಬಗೆಯ ಬಗೆಯ ಮೂಗುತಿ ಗಳಲ್ಲಿ ಮಿಂಚುತ್ತಿದ್ದಾರೆ” ಆ ಕರಾಳ ರಾತ್ರಿ” ಚಿತ್ರದ ನಾಯಕಿ ಅನುಪಮಾ ಗೌಡ.
ಇನ್ನು ನಮ್ಮ ಸ್ಯಾಂಡಲ್ ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಕೂಡ ಮೂಗುತಿ ಸುಂದರಿ ಯರ ಸಾಲಿಗೆ ಸೇರಿದವರೇ. ಇತ್ತೀಚಿನ ಫೋಟೋ ಶೂಟ್ ಒಂದರಲ್ಲಿ ಈಕೆ ಧರಿಸಿರುವ ಕಪ್ಪು ಲೋಹದ ಮೂಗುತಿ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.
ಸ್ಯಾಂಡಲ್ ವುಡ್ ನ ಮೂಗುತಿ ಸುಂದರಿ ಯರ ಸಾಲಿಗೆ ಸೇರಿದ ಮತ್ತೊಬ್ಬ ನಟಿ ಶೃತಿ ಹರಿಹರನ್. ಊರ್ವಿ ಖ್ಯಾತಿಯ ಈ ಚೆಲುವೆ ಅತ್ಯುತ್ತಮ ಅಭಿನೇತ್ರಿ ಅಷ್ಟೇ ಅಲ್ಲದೆ, ತಮ್ಮ ವಿಶಿಷ್ಟ ಸ್ಟೈಲ್ ಮತ್ತು ಫ್ಯಾಷನ್ ಗೆ ಹೆಸರಾಗಿರುವ ನಟಿ.ಮೂಗುತಿ ಎಂದರೆ ನನಗಿಷ್ಟ ಎಂದು ತಮ್ಮ ಸೋಷಿಯಲ್ ಮೀಡಿಯಾ ದ ಪ್ರೊಫೈಲ್ ನಲ್ಲಿ ಹಂಚಿಕೊಂಡಿದ್ದಾರೆ ಕೂಡ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.
54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

ಸುದ್ದಿದಿನ,ಬೆಂಗಳೂರು:ಆರ್ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್ ರೆಸ್ಟೋರೆಂಟ್ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.
ಬೆಂಗಳೂರಿನ #NativeCooks ಫುಡ್ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್ಸಿಬಿ ಅಭಿಮಾನಿಗಳ ಮನ ಗೆದ್ದಿದೆ.
ಹೌದು, ಹೆಬ್ಬಾಳ, ಆರ್ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್ಬಾಕ್ಸ್ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.
ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್ ಕುಕ್ಸ್ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್. ವೆಜ್ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್ವೆಜ್ ಊಟವನ್ನು 135 ರೂಪಾಯಿಗೆ ಹಾಗೂ ಎಕ್ ಮೀಲ್ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.
ಸದ್ಯಕ್ಕೆ ಹೆಬ್ಬಾಳ, ಆರ್ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ
-
ದಿನದ ಸುದ್ದಿ2 days ago
ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
-
ದಿನದ ಸುದ್ದಿ15 hours ago
500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ
-
ದಿನದ ಸುದ್ದಿ2 days ago
ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್
-
ದಿನದ ಸುದ್ದಿ16 hours ago
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ
-
ದಿನದ ಸುದ್ದಿ23 hours ago
ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ24 hours ago
ಉದ್ಯೋಗ | ಜುಲೈ 15 ರಂದದು ನೇರ ಸಂದರ್ಶನ