ದಿನದ ಸುದ್ದಿ
ಸ್ವಾತಂತ್ರ್ಯ ಸೇನಾನಿಗೆ ಕಟ್ಟಿದರು ಎಂಟು ಅಡಿ ಪ್ರತಿಮೆ: ಹಲುವಾಗಲು ಗ್ರಾಮದ ಯುವಕರ ಮಾದರಿ ಕಾರ್ಯ

ಸುದ್ದಿದಿನ ಡೆಸ್ಕ್: ಸ್ವಾತಂತ್ರ್ಯ ಸೇನಾನಿಗೆ ಕಟ್ಟಿದರು ಎಂಟು ಅಡಿ ಪ್ರತಿಮೆ. ಹಲುವಾಗಲು ಗ್ರಾಮದ ಯುವಕರ ಮಾದರಿ ಕಾರ್ಯ. ಗ್ರಾಮಸ್ಥರಿಂದ ಸಂಗ್ರಹಿಸಿದ್ದು ನಾಲ್ಕು ಲಕ್ಷ, ಯುವಕರು ಶ್ರಮಿಸಿದ್ದು ಹಲವು ತಿಂಗಳು, ಗೋಲ್ಡನ್ ಬಣ್ಣದಲ್ಲಿ ಝಗಮಗಿಸುತ್ತಿದೆ ಸ್ವಾತಂತ್ರ್ಯ ಸೇನಾನಿ ರಾಯಣ್ಣ ಪ್ರತಿಮೆ !
ದಾವಣಗೆರೆ ಜಿಲ್ಲೆಯ ಹಲುವಾಗಲು ಗ್ರಾಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಎಂಟುವರೆ ಅಡಿ ಎತ್ತರದ ಪುತ್ಥಳಿ ನಿರ್ಮಾಣಗೊಂಡಿದೆ. ಸರ್ಕಾರದ ಅನುದಾನ ಬಯಸದೇ ಯುವಕರ ತಂಡವೊಂದು ಪ್ರತಿಮೆ ನಿರ್ಮಾಣಕ್ಕೆ ಹಲವು ತಿಂಗಳು ಶ್ರಮಿಸಿದೆ.
ಸಂಗೊಳ್ಳಿ ರಾಯಣ್ಣ ಗೆಳೆಯರ ಬಳಗದ ಪದಾಧಿಕಾರಿಗಳು ಪ್ರತಿಮೆ ನಿರ್ಮಾಣಕ್ಕಾಗಿ 4 ಲಕ್ಷ ರೂ. ದೇಣಿಗೆ ಸಂಗ್ರಹಿಸಿದ್ದರು. 2017ರ ಆಗಸ್ಟ್ನಲ್ಲಿ ಆರಂಭವಾಗಿದ್ದ ಕಾಮಗಾರಿ ಒಂದು ವರ್ಷದಲ್ಲಿ ಪೂರ್ಣಗೊಂಡಿದೆ.
ಸದ್ಯ ಆ.19ರಂದು ಪ್ರತಿಮೆ ಲೋಕಾರ್ಪಣೆಗೊಳ್ಳಲಿದೆ. ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಹೊಸದುರ್ಗ ಶಾಖಾಮಠದ ಶ್ರೀ ಈಶ್ವರನಾಂದಪುರಿ ಸ್ವಾಮೀಜಿ ಸಾನ್ನಿಧ್ಯದಲ್ಲಿ ಭಾನುವಾರ ನಡೆಯುವ ಸಮಾರಂಭದಲ್ಲಿ ಪ್ರತಿಮೆಯನ್ನು ಶಾಸಕ ಜಿ.ಕರುಣಾಕರ ರೆಡ್ಡಿ ಉದ್ಘಾಟಿಸುವರು. ಯುವಕರ ಈ ಸಮಾಜಮುಖಿ ಕಾರ್ಯಕ್ಕೆ ಗ್ರಾಮಸ್ಥರು ಹಾಗೂ ಮುಖಂಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಟರಾದ ದುನಿಯಾ ವಿಜಯ್, ಯಶ್, ಲೋಸ್ ಮಾದ ಯೋಗಿ, ನಟಿ ಪ್ರಿಯಾಂಕ ಉಪೇಂದ್ರ ಯುವಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ದಾವಣಗೆರೆ | ಗ್ರಾ.ಪಂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ

ಸುದ್ದಿದಿನ,ದಾವಣಗೆರೆ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2020 ರ ಚುನಾವಣೆಯ ನಂತರ ಮೊದಲನೇ 30 ತಿಂಗಳ ಅವಧಿಗೆ ಜಿಲ್ಲೆಯ ಹರಿಹರ ಮತ್ತು ಹೊನ್ನಾಳಿ ತಾಲ್ಲೂಕುಗಳ ಗ್ರಾ.ಪಂಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳ ಹುದ್ದೆಗಳಿಗೆ ತಂತ್ರಾಂಶದ ಮೂಲಕ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯು ಬುಧವಾರ ಜಿಲ್ಲಾಡಳಿತ ಭವನದ ತುಂಗ ಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ವೇಳೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಚುನಾವಣಾ ತಹಶೀಲ್ದಾರ್ ಪ್ರಸಾದ್ ಇತರೆ ಅಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರೈತ ಪರೇಡ್ ವೇಳೆ ಅಹಿತಕರ ಘಟನೆ ; ಹೋರಾಟದಿಂದ ಹಿಂದೆ ಸರಿದ ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆ

ಸುದ್ದಿದಿನ,ನವದೆಹಲಿ : ಗಣರಾಜ್ಯೊತ್ಸವ ದಿನದಂದು ದೆಹಲಿಯಲ್ಲಿ ರೈತ ಪರೇಡ್ ವೇಳೆ ನಡೆದ ಅಹಿತಕರ ಬೆಳವಣಿಗೆಯಿಂದ ಬೇಸರಗೊಂಡಿರುವ ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆ ಹೋರಾಟದಿಂದ ಹಿಂದೆ ಸರಿದಿದೆ.
ರಾಷ್ಟ್ರೀಯ ಕಿಸಾನ್ ಮಜ್ದೂರ್ ಸಂಘಟನೆ ಹಾಗೂ
ಆಲ್ ಇಂಡಿಯಾ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ ಮುಖಂಡರೂ ಆಗಿರುವ ವಿ ಎಂ ಸಿಂಗ್ ಇಂದು ಮಾಧ್ಯಮವನ್ನುದ್ದೇಶಿಸಿ ಮಾತನಾಡಿ ಈ ವಿಷಯ ಪ್ರಕಟಿಸಿದ್ದಾರೆ.
ಭಿನ್ನ ಉದ್ದೇಶವಿರುವವರೊಂದಿಗೆ ನಾವು ಹೋರಾಟ ಮುಂದುವರೆಸಲು ಸಾಧ್ಯವಿಲ್ಲವೆಂದು ವಿ ಎಂ ಸಿಂಗ್ ಹೇಳಿದ್ದಾರೆ.
ಮಂಗಳವಾರ ನಡೆದ ಬೆಳವಣಿಗೆಗಳು, ರೈತ ಮುಖಂಡರ ವಿರುದ್ಧ ಎಫ್ಐಆರ್ ದಾಖಲೆಯಾಗಿರುವ ಹಿನ್ನೆಲೆಯಲ್ಲಿ ಬುಧವಾರ ಸಂಜೆ 7 ಗಂಟೆಗೆ ಕಿಸಾನ್ ಏಕ್ತಾ ಮೋರ್ಚಾ ಪತ್ರಿಕಾಗೋಷ್ಠಿ ಕರೆದಿದೆ.
Delhi: Farmers protest against Rashtriya Kisan Mazdoor Sangathan leader VM Singh following his announcement to withdraw from the agitation.
Visuals from Ghazipur border. https://t.co/CYKZoH9y4y pic.twitter.com/MEhgOIOxkl
— ANI (@ANI) January 27, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಮ ಪಂಚಾಯತಿ ಸದಸ್ಯರಿಗೆ ಹೂವಿನಹೊಳೆ ಪ್ರತಿಷ್ಠಾನ ಗೌರವ ಸದಸ್ಯತ್ವ ಪ್ರದಾನ : ಹಂಚಗುಳಿ ಗ್ರಾಮ ರಾಜ್ಯಕ್ಕೆ ಮಾದರಿ

ಸುದ್ದಿದಿನ, ರಾಮನಗರ : ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕು ಅರಕೆರೆ ಗ್ರಾಮ ಪಂಚಾಯಿತಿಗೆ ಹಂಚಗುಳಿ ಗ್ರಾಮದಿಂದ ಆಯ್ಕೆಯಾದ ಸದಸ್ಯರಾದ ಮಲ್ಲೇಶ್ ಹಾಗೂ ಶಾಂತಮ್ಮ ಅವರಿಗೆ ”ಹೂವಿನಹೊಳೆ ಪ್ರತಿಷ್ಠಾನದ ಐದು ವರ್ಷಗಳ ಗೌರವ ಸದಸ್ಯತ್ವ” ಪ್ರದಾನ ಮಾಡಲಾಯಿತು ಇದೇ ಸಂದರ್ಭದಲ್ಲಿ ನಮ್ನೂರಿಗೆ ನಮ್ಮ ಉಸಿರು ಬಳಗದಿಂದ ಹಂಚಗುಳಿ ಸರ್ಕಾರಿ ಶಾಲೆ ಮಕ್ಕಳಿಗೆ ನೋಟ್ ಬುಕ್ ಮತ್ತು ಶೈಕ್ಷಣಿಕ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು.
ಕಾರ್ಯಕ್ರಮವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಮುನುಚ್ಚೆಗೌಡರು ಉದ್ಘಾಟನೆ ಮಾಡಿ ಮಾತನಾಡುತ್ತಾ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲ ಶಾಲೆಗಳನ್ನು ಕರ್ನಾಟಕ ಸರ್ಕಾರಿ ಪಬ್ಲಿಕ್ ಶಾಲೆಯನ್ನಾಗಿ ಅಭಿವೃದ್ಧಿ ಪಡಿಸುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಹೂವಿನಹೊಳೆ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ನಂದಿ ಜೆ ಹೂವಿನಹೊಳೆ ಗ್ರಾ.ಪ. ಸದಸ್ಯರಿಗೆ ಗೌರವ ಸದಸ್ಯತ್ವ ಪ್ರದಾನ ಮಾಡಿ ಮುಂದಿನ ಐದು ವರ್ಷಗಳಲ್ಲಿ ಹಂಚಗುಳಿ ಗ್ರಾಮದಲ್ಲಿ ನಾವು ಕೆಲಸ ಮಾಡಲು ಹಾಗೂ ಸರ್ಕಾರಿ ಶಾಲೆಯನ್ನು ಅಭಿವೃದ್ಧಿ ಪಡಿಸಲು ಶ್ರಮಿಸುತ್ತೆವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಸ್ ಡಿ ಟಿ ಕಂಪ್ಯೂಟರ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ದಿಲೀಪ್ ಕುಮಾರ್ ಮಾತನಾಡಿ ಶಿಕ್ಷಣ ಎಲ್ಲರ ಹಕ್ಕು ಪ್ರತಿ ಗ್ರಾಮದ ಯುವಕರಿಗೂ ಉನ್ನತ ಕೆಲಸ ಸಿಗುವಂತೆ ಮಾಡುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಹೂವಿನಹೊಳೆ ಪ್ರತಿಷ್ಠಾನದ ಸಂಸ್ಥಾಪಕ ಕಾರ್ಯದರ್ಶಿ ನಾಯ್ಕಲ್ ದೊಡ್ಡಿ ಚಂದ್ರಶೇಖರ್, ಪ್ರಧಾನ ಸಂಚಾಲಕರಾದ ಹಂಚಗುಳಿ ಗಿರೀಶ್ ,ಸುನೀಲ್ ಕುಮಾರ್,ರಾಜಣ್ಣ ಹಾಗೂ ಗ್ರಾಮದ ಮುಖಂಡರಾದ,ಚೆಲುವರಾಜು, ಚಿಕೈದೆಗೌಡ, ಸುಂದ್ರೆಶ್, ಮಣಿಕಂಠ, ಮುತ್ತುರಾಜು,ಭಾಸ್ಕರ್, ಶಿವಕುಮಾರ್ ಅರ್ಚಕರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ4 days ago
ಸಿನಿಮಾ ಪಯಣಕ್ಕೆ ರೀ ಎಂಟ್ರಿ ಕೊಟ್ಟ ಮಂದಹಾಸ ಬೆಡಗಿ : ಬಿಂದುಶ್ರೀ
-
ದಿನದ ಸುದ್ದಿ1 day ago
ದಾವಣಗೆರೆ | ಅತ್ಯಾಚಾರ ಅಪರಾಧಿಗೆ 15 ವರ್ಷ ಸಜೆ, 26 ಸಾವಿರ ದಂಡ
-
ಬಹಿರಂಗ1 day ago
ಸಂವಿಧಾನ ದಿನಾಚರಣೆ ಹೇಗೆ ಗಣರಾಜ್ಯೋತ್ಸವವಾಯಿತು..?
-
ಬಹಿರಂಗ3 days ago
ನುಡಿದ ಸತ್ಯವನ್ನು ಬಂಧಿಸಲಾಗದು
-
ಅಂತರಂಗ1 day ago
ಭಾರತದ ಸಂವಿಧಾನ : ಪ್ರಜೆಗಳ ಓದು
-
ದಿನದ ಸುದ್ದಿ2 days ago
ದಾವಣಗೆರೆ | ಪ್ರವಾಸಿ ಟ್ಯಾಕ್ಸಿಗೆ ಸಹಾಯಧನ : ಅಂತಿಮ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳ ಆಹ್ವಾನ
-
ದಿನದ ಸುದ್ದಿ2 days ago
ಬಿಗ್ ಬಾಸ್ ಖ್ಯಾತಿಯ ಜಯಶ್ರೀ ಆತ್ಮಹತ್ಯೆ ; ಕಾರಣ ಏನು ಗೊತ್ತಾ..!?
-
ದಿನದ ಸುದ್ದಿ1 day ago
ರೈತ ಹೋರಾಟವೆಂಬ ಸಾಗರ ; ಇದು ಬರೀ ಪಂಜಾಬಿನದ್ದಲ್ಲ, ಇಡೀ ದೇಶದ ಹೋರಾಟ