Connect with us

ಕ್ರೀಡೆ

ಸಂಜೆಯ ಪ್ರಮುಖ ಸುದ್ದಿಗಳು

Published

on

ಸಂಜೆಯ ಪ್ರಮುಖ ಸುದ್ದಿಗಳು

  1. ರಾಜ್ಯ ವಿಧಾನಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಾಳೆ ಮತದಾನ ನಡೆಯಲಿದ್ದು, ಇದಕ್ಕಾಗಿ ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ. ಎರಡು ಪದವಿಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ದಕ್ಷಿಣ ಪದವೀಧರ ಕ್ಷೇತ್ರದಿಂದ ನಡೆಯುವ ಚುನಾವಣೆಗೆ ಚಾಮರಾಜನಗರ ಜಿಲ್ಲೆಯಲ್ಲಿ ಸಕಲ ಸಿದ್ದತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
  2. ವಿಜ್ಞಾನದ ಬಗ್ಗೆ ಮಕ್ಕಳಲ್ಲಿ ಇರುವ ಕುತೂಹಲ ತಣಿಸಲು ಹಾಗೂ ಅವರಲ್ಲಿ ಆವಿಷ್ಕಾರದ ಪ್ರವೃತ್ತಿ ಬೆಳೆಸಲು ಕೇಂದ್ರ ಸರ್ಕಾರ, ಶಾಲೆಗಳಲ್ಲಿ ಅಟಲ್ ಟಿಂಕರಿಂಗ್ ಪ್ರಯೋಗಾಲಯ ಆರಂಭಿಸಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಹೊನ್ನಾಳಿ ತಾಲೂಕು ಎಚ್.ಕಡದಕಟ್ಟೆಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಟಿಂಕರಿಂಗ್ ಪ್ರಯೋಗಾಲಯ ಉದ್ಘಾಟಿಸಿ ಅವರು ಮಾತನಾಡಿದರು.
  3. ವಿಶ್ವ ಯೋಗ ದಿನದ ಅಂಗವಾಗಿ ಇಂದು ವಿಶ್ವ ಪಾರಂಪರಿಕ ತಾಣ ಹಂಪಿಯ ಕಮಲ ಮಹಲ್ ಬಳಿ ಯೋಗ್ಯಾಭಾಸ ನಡೆಸಲಾಯಿತು. ಮೊರಾರ್ಜಿ ದೇಸಾಯಿ ಯೋಗ ಸಂಸ್ಥೆ, ಆಯುಷ್ ಇಲಾಖೆ, ಶ್ವಾಸ ಯೋಗ ಸಂಸ್ಥೆ ಹಾಗೂ ಪತಂಜಲಿ ಯೋಗ ಸಮಿತಿ ಇದನ್ನು ಆಯೋಜಿಸಿತ್ತು. ಯೋಗಾಭ್ಯಾಸ ಕಾರ್ಯಕ್ರಮ ಉದ್ಘಾಟಿಸಿದ ಪ್ರವಾಸೋದ್ಯಮ ಸಚಿವ ಆನಂದಸಿಂಗ್ ಯೋಗಾಸನದ ಮಹತ್ವ ಆಚರಣೆಯ ವಿಧಾನ ಮತ್ತು ಪ್ರಯೋಜನವನ್ನು ಮನವರಿಕೆ ಮಾಡಿದರು.
  4. ರೈತರ ಆದಾಯ ಕಾಪಾಡುವುದರೊಂದಿಗೆ ದೇಶೀಯ ಬೇಡಿಕೆ ಪೂರೈಸುವ ಪ್ರಮುಖ ಉದ್ದೇಶದಿಂದ ಸರ್ಕಾರ, ಕಳೆದ ತಿಂಗಳು ಗೋಧಿ ರಫ್ತಿನ ಮೇಲೆ ನಿರ್ಬಂಧ ಹೇರಿದೆ ಎಂದು ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರ, ಎಪಿಇಡಿಎ ಅಧ್ಯಕ್ಷರಾದ ಎಂ.ಅಂಗಮುತು ಹೇಳಿದ್ದಾರೆ.
  5. ಅಂತಾರಾಷ್ಟ್ರೀಯ ಯೋಗ ದಿನದಂದು ಆಯೋಜಿಸಲಾಗುವ ಕಾರ್ಯಕ್ರಮಗಳಲ್ಲಿ 25 ಕೋಟಿ ಜನರು ಭಾಗವಹಿಸುವ ಗುರಿ ಹೊಂದಲಾಗಿದೆ ಎಂದು ಕೇಂದ್ರ ಆಯುಷ್ ಸಚಿವ ಸರ್ಬಾನಂದ್ ಸೋನೊವಾಲ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಪ್ರಧಾನ ಕಾರ್ಯಕ್ರಮ ನಡೆಯಲಿದ್ದು, ದೇಶದ 75 ಪ್ರಮುಖ ಸ್ಥಳಗಳಲ್ಲಿ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಕೇಂದ್ರ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದ್ದಾರೆ.
  6. ವಿಶ್ವ ಬಾಲ ಕಾರ್ಮಿಕ ತಡೆ ದಿನವನ್ನು ಗೌರವಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಎನ್‌ಸಿಪಿಸಿಆರ್ ಇಂದಿನಿಂದ ಬಾಲ ಕಾರ್ಮಿಕ ನಿರ್ಮೂಲನೆ ಸಪ್ತಾಹವನ್ನು ದೇಶದ 75 ಸ್ಥಳಗಳಲ್ಲಿ ಆಚರಿಸುತ್ತಿದೆ. ಸಪ್ತಾಹದ ವೇಳೆ, ಕೂಲಿ ಕೆಲಸ, ಗುಜರಿ ಮತ್ತು ಆಟೋಮೊಬೈಲ್ ಮಾರುಕಟ್ಟೆಗಳಲ್ಲಿನ ಮಕ್ಕಳ ರಕ್ಷಣಾ ಕಾರ್ಯ ನಡೆಯಲಿದೆ.
  7. ಹಾವೇರಿ ಜಿಲ್ಲ್ಲೆಯಲ್ಲಿ 2022-23ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ತಂತ್ರಾಂಶದಲ್ಲಿ ಉಂಟಾಗಿದ್ದ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ಹಾವೇರಿ ಸಂಸದ ಶಿವಕುಮಾರ ಉದಾಸಿ ಹಾನಗಲ್ ನಲ್ಲಿಂದು ಹೇಳಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ ವರ್ಷದ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕೆ ಬೆಳೆಗಳಾದ ಅಡಕೆ, ಶುಂಠಿ ಮತ್ತು ಹಸಿಮೆಣಸಿನಕಾಯಿ ಬೆಳೆಗಳಿಗೆ ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ ಎಂದರು.
  8. ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ದೇಶದ 80 ಕೋಟಿ ಕುಟುಂಬಗಳಿಗೆ ಉಚಿತ ಎಲ್‌ಪಿಜಿ ಸಿಲಿಂಡರ್ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಯಶಸ್ವಿಯಾಗಿ 8 ವರ್ಷ ಪೂರೈಸಿದ ಹಿನ್ನೆಲೆ ಹೊನ್ನಾಳಿ ತಾಲ್ಲೂಕಿನ ದಿಡಗೂರು ಗ್ರಾಮದಲ್ಲಿ ಸರ್ಕಾರದ ಅಭಿವೃದ್ಧಿ ಯೋಜನೆಗಳ ಸಂದೇಶವುಳ್ಳ ಕರಪತ್ರಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
  9. ವೃತ್ತಿಪರ ಕೋರ್ಸ್‌ಗಳ ಸಾಮಾನ್ಯ ಪ್ರವೇಶ ಪರೀಕ್ಷೆ, ಸಿಇಟಿ ಇದೇ 16 ಮತ್ತು 17 ರಂದು ಹಾವೇರಿ ಜಿಲ್ಲೆಯ 7 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ದತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ಹೇಳಿದ್ದಾರೆ.
  10. ಪ್ರಧಾನಿ ನರೇಂದ್ರಮೋದಿ ಈ ತಿಂಗಳ 14 ರಂದು ಮಹಾರಾಷ್ಟ್ರಗೆ ಭೇಟಿ ನೀಡಲಿದ್ದಾರೆ. ಪುಣೆಯ ದೆಹು ನಲ್ಲಿ ಜಗದ್ಗುರು ಶ್ರೀಸಂತ್ ತುಕಾರಾಂ ಮಹಾರಾಜ್ ದೇವಸ್ಥಾನ, ಮುಂಬೈ ರಾಜಭವನದಲ್ಲಿನ ಕ್ರಾಂತಿಕಾರಿಗಲ ಗ್ಯಾಲರಿ ಹಾಗೂ ಜಲ ಭೂಷಣ್ ಕಟ್ಟಡವನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಆ ನಂತರ, ಬಾಂದ್ರದಲ್ಲಿನ ಮುಂಬೈ ಸಮಾಚಾರ್ ದ್ವಿಶತಾಬ್ದಿ ಮಹೋತ್ಸವ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆ.
  11. ಗ್ರಾಮೀಣಾಭಿವೃದ್ಧಿಯ ಆಯಾಮವು ಹಳ್ಳಿಗಳನ್ನು ಅನುಕೂಲಕರಗೊಳಿಸುವುದಾಗಿದೆ. ಇದಕ್ಕಾಗಿ ಕುಗ್ರಾಮಗಳ ಸಂಪರ್ಕ ಅಗತ್ಯವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಗುಜರಾತ್‌ನ ಗ್ರಾಮೀಣ ನಿರ್ವಹಣಾ ಸಂಸ್ಥೆಯ 41ನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯುತ್ ಸಂಪರ್ಕವಿಲ್ಲದ ಗ್ರಾಮಗಳಿಗೆ ಸರ್ಕಾರ ಸಂಪರ್ಕ ಒದಗಿಸಿದೆ. ದೇಶವು ಪರಿಪೂರ್ಣ ಮತ್ತು ಸ್ವತಂತ್ರವಾಗಿರಬೇಕಾದರೆ, ಹಳ್ಳಿಗಳ ಅಭಿವೃದ್ಧಿಯಾಗಬೇಕು ಎಂದು ಹೇಳಿದರು.
  12. ಮೆಕ್ಸಿಕೋದಲ್ಲಿಂದು ನಡೆದ ವೈಟ್ ಲಿಫ್ಟಿಂಗ್ ಯುವ ವಿಶ್ವ ಚಾಂಪಿಯನ್ ಶಿಪ್‌ನ 40 ಕೆ.ಜಿ. ವಿಭಾಗದಲ್ಲಿ ಭಾರತದ ಆಕಾಂಕ್ಷ ವೈವಹರೆ ಬೆಳ್ಳಿ ಪದಕ ಗೆದ್ದಿದ್ದಾರೆ. ಕೇಂದ್ರ ಯುವಜನ ವ್ಯವಹಾರಗಳು ಹಾಗು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಆಕಾಂಕ್ಷ ಅವರನ್ನು ಅಭಿನಂದಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

RCB ಗೆ ಹದಿನೆಂಟರ ಇಡಿಗಂಟು | ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ : ವಿರಾಟ್ ಕೊಹ್ಲಿ

Published

on

ಸುದ್ದಿದಿನಡೆಸ್ಕ್:ಇಂಡಿಯನ್ ಪ್ರೀಮಿಯರ್ ಲೀಗ್ – ಐಪಿಎಲ್ ಟಿ-20 ಕ್ರಿಕೆಟ್‌ನ 18 ನೇ ಆವೃತ್ತಿಯ ಪ್ರಶಸ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಡಿಗೇರಿಸಿಕೊಂಡಿದೆ.

ನಿನ್ನೆ ರಾತ್ರಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದ ನಂತರ, ಆರ್‌ಸಿಬಿ ನಾಯಕ ರಜತ್ ಪಾಟಿದಾರ್, ವಿರಾಟ್ ಕೊಹ್ಲಿ ಮತ್ತು ಎಲ್ಲಾ ಅಭಿಮಾನಿಗಳು ಈ ಗೆಲುವಿಗೆ ಹೆಚ್ಚು ಅರ್ಹರು ಎಂದು ಹೇಳಿದರು. ಪ್ರತಿಯೊಬ್ಬ ಆಟಗಾರನನ್ನು ಬೆಂಬಲಿಸಿದ್ದಕ್ಕಾಗಿ, ತಂಡದ ನಿರ್ವಹಣೆ ಮತ್ತು ತರಬೇತಿ ಸಿಬ್ಬಂದಿಗೆ ಅವರು ಧನ್ಯವಾದ ಅರ್ಪಿಸಿದರು.

ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 190 ರನ್ ಗಳಿಸಿತು. ವಿರಾಟ್ ಕೊಹ್ಲಿ ಗರಿಷ್ಠ 43 ರನ್ ಗಳಿಸಿದರೆ, ನಾಯಕ ಪಾಟಿದಾರ್ 26 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಅರ್ಶ್ದೀಪ್ ಸಿಂಗ್ ಮತ್ತು ಕೈಲ್ ಜೇಮಿಸನ್ ತಲಾ 3 ವಿಕೆಟ್ ಪಡೆದರು. 191 ರನ್‌ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್, ನಿಗದಿತ 20 ಓವರ್‌ಗಳಲ್ಲಿ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಶಶಾಂಕ್ ಸಿಂಗ್ ಅಜೇಯ 61 ರನ್ ಗಳಿಸಿದರು.

ಅಸಾಧಾರಣ ಬೌಲಿಂಗ್‌ಗಾಗಿ, ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಪಂದ್ಯದ ನಂತರದ ಪ್ರಸ್ತುತಿಯಲ್ಲಿ, ಗುಜರಾತ್ ಟೈಟಾನ್ಸ್ನ ಸಾಯಿ ಸುದರ್ಶನ್ ಅತಿ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರೆ. ಅದೇ ತಂಡದ ಸಹ ಆಟಗಾರ ಪ್ರಸಿದ್ಧ್ ಕೃಷ್ಣ ಈ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದಿದ್ದಕ್ಕಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರು. ಮುಂಬೈ ಇಂಡಿಯನ್ಸ್ನ ಸೂರ್ಯ ಕುಮಾರ್ ಯಾದವ್ ಪಂದ್ಯಾವಳಿಯಾದ್ಯAತ ತಮ್ಮ ಅಸಾಧಾರಣ ಬ್ಯಾಟಿಂಗ್‌ಗಾಗಿ ಅತ್ಯಂತ ಮೌಲ್ಯಯುತ ಆಟಗಾರ ಎಂಬ ಪ್ರಶಸ್ತಿಯನ್ನು ಪಡೆದರು.

ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ

17 ವರ್ಷಗಳ ನಂತರ ವಿರಾಟ್ ಕೊಹ್ಲಿ ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಎತ್ತಿ ಹಿಡಿದರು. ಫೈನಲ್‌ನಲ್ಲಿ 35 ಎಸೆತಗಳಲ್ಲಿ 43 ರನ್ ಗಳಿಸಿದ ಕೊಹ್ಲಿ, ಸುಮಾರು ಎರಡು ದಶಕಗಳಿಂದ ಬೆನ್ನಟ್ಟಿದ ಕ್ಷಣ ಅಂತಿಮವಾಗಿ ವಾಸ್ತವವಾದಾಗ ಭಾವುಕರಾದರು “ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ದಿನ ಬರುತ್ತದೆ ಎಂದು ಭಾವಿಸಿರಲಿಲ್ಲ ಎಂದು ಗೆದ್ದು ಭಾವುಕರಾಗಿದ್ದ ವಿರಾಟ್ ಕೊಹ್ಲಿ ಪಂದ್ಯದ ನಂತರದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಆರ್‌ಸಿಬಿ ಗೆಲುವಿನ ಸಂಭ್ರಮದಲ್ಲಿ ಕರ್ನಾಟಕ, ವಿಶೇಷವಾಗಿ ರಾಜಧಾನಿ ಬೆಂಗಳೂರು, ನಿನ್ನೆ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಿದ ನಂತರ ಸಂತೋಷದಿAದ ತುಂಬಿ ತುಳುಕುತ್ತಿತ್ತು. ಅಭಿಮಾನಿಗಳು ಇಂದು ಬೆಳಗಿನ ಜಾವದವರೆಗೆ ಪಟಾಕಿ ಸಿಡಿಸಿ ಬೀದಿಗಳಲ್ಲಿ ಜಮಾಯಿಸಿ ಸಂಭ್ರಮಿಸಿದರು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್‌ಸಿಬಿಯನ್ನು ಶ್ಲಾಘಿಸುತ್ತಾ, “ಐಪಿಎಲ್ ಐತಿಹಾಸಿಕ ವಿಜಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿನಂದನೆ. ಕನಸು ಕೊನೆಗೂ ನನಸಾಗಿದೆ.

ಈ ಸಲಾ ಕಪ್ ನಮ್ದೆ. ಅಚಲವಾದ ಚೈತನ್ಯದಿಂದ, ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ಹೆಚ್ಚಿಸಿದೆ. ಪ್ರಪಂಚದಾದ್ಯAತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ ಎಂದು ಹೇಳಿದ್ದಾರೆ. ಐಪಿಎಲ್ ಪ್ರಶಸ್ತಿ ಗೆದ್ದ ಆರ್‌ಸಿಬಿ ತಂಡಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಆರ್‌ಸಿಬಿ ತಂಡ ಪಡೆದ ರೋಮಾಂಚಕ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲಕ್ಷಾಂತರ ಅಭಿಮಾನಿಗಳ ಕನಸುಗಳು ನನಸಾಗಿದೆ. ಇಡೀ ಆರ್‌ಸಿಬಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಏ.10 ರಿಂದ ಬೇಸಿಗೆ ಕಬಡ್ಡಿ ತರಬೇತಿ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸೃಷ್ಟಿ ಕಬಡಿ ಅಕಾಡೆಮಿ(ರಿ), ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಕಬಡ್ಡಿ ತರಬೇತಿ ಶಿಬಿರವನ್ನು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಿಂದ 30 ರವರೆಗೆ ಬೆಳಿಗ್ಗೆ 6.30 ರಿಂದ 8 ಗಂಟೆಯ ವರೆಗೆ ಹಾಗೂ ಸಾಯಂಕಾಲ ಸಂಜೆ 5 ರಿಂದ 6.30 ರ ವರೆಗೆ ಆಯೋಜಿಸಲಾಗಿದೆ.

ಆಸಕ್ತ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೇಸಿಗೆ ಕಬಡ್ಡಿ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಶ್ರೀಶೈಲ ಎಸ್-ಮೊ.ನಂ: 9448667255 ಹಾಗೂ ನೂರುಲ್ಲ ಮೊ.ನಂ: 9740107364, ಶಿವಯೋಗಿ ಮೊ.ನಂ: 9019619900, ರಾಕೇಶ್ ಮೊನಂ:9448835907 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending