ದಿನದ ಸುದ್ದಿ
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ
ಸುದ್ದಿದಿನಡೆಸ್ಕ್: ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್(93) ಅವರು ಅನಾರೋಗ್ಯದಿಂದ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ತಿಂಗಳಲ್ಲಿ ಕುಸಿದು ಬಿದ್ದಿರುವುದರಿಂದ ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಬೆಳಿಗ್ಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಶ್ರೇಷ್ಠ ಭಾರತೀಯ ಶಾಸ್ತ್ರೀಯ ಸಂಗೀತಗಾರ ಆಗಿರುವ ಅವರು ಸರೋದ್ ವಾದಕರೂ ಆಗಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243