ದಿನದ ಸುದ್ದಿ
ಸಸ್ಯ ಸಂಕುಲ ಇದ್ದರೆ ಮನು ಕುಲಕ್ಕೆ ಒಳಿತು : ಶಾಸಕ ಎಸ್.ಎ.ರವೀಂದ್ರನಾಥ್

- 33 ನೇ ವಾರ್ಡ್ನ್ನು ಹಸಿರು, ಸ್ವಚ್ಛಮಯ ಮಾಡುವುದು ನನ್ನ ಗುರಿ.- ಕೆ.ಎಮ್.ವೀರೇಶ್, ಪಾಲಿಕೆ ಸದಸ್ಯ
- 33 ನೇ ವಾರ್ಡ್ನಲ್ಲಿ ವಿಶ್ವ ಪರಿಸರ ದಿನಾಚರಣೆ.
ಸರಸ್ವತಿ ನಗರದ ಉದ್ಯಾನವನದಲ್ಲಿ ಒಂದು ನೂರು ಗಿಡಗಳನ್ನು ನೆಟ್ಟು ಪರಿಸರ ದಿನದ ಆಚರಣೆ
ಕೋರೋನಾ ವೈರಸ್ ಮನುಷ್ಯನಿಗೆ ಪರಿಸರ ಸಂರಕ್ಷಣೆಯ ಅವಶ್ಯಕತೆಯ ಪಾಠ ಕಲಿಸಿದೆ. ಪರಿಸರ ನಾಶವೇ ಮನುಷ್ಯನ ಇಂದಿನ ಎಲ್ಲ ಸಮಸ್ಯೆಗಳಿಗೆ ಕಾರಣವಾಗಿದೆ. ಸಸ್ಯ ಸಂಕುಲವಿದ್ದರೆ ಮಾತ್ರ ಮನುಕುಲಕ್ಕೆ ಒಳಿತು ಎಂದು ದಾವಣಗೆರೆ ಉತ್ತರ ಶಾಸಕ ಎಸ್.ಎ.ರವೀಂದ್ರನಾಥ್ ಅಭಿಪ್ರಾಯಪಟ್ಟರು.
33 ನೇ ವಾರ್ಡ್ನಲ್ಲಿ ಪಾಲಿಕೆ ಸದಸ್ಯ ಕೆ.ಎಮ್.ವೀರೇಶ್ ಅವರು ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಉದ್ಯಾನವನದಲ್ಲಿ ಒಂದು ನೂರು ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ನಮಗಿಂದು ಆಮ್ಲಜನಕದ ಮಹತ್ವ ಅರಿವಾಗಿದೆ. ನೈಸರ್ಗಿಕವಾಗಿ ಸಿಗುವ ಆಮ್ಲಜನಕದ ಮೂಲವನ್ನು ನಾಶ ಮಾಡಿ ಕೃತಕ ಆಮ್ಲಜನಕದ ಮೊರೆ ಹೋಗುವ ಪರಿಸ್ಥಿತಿ ಬಂದೊದಗಿದೆ. ಮುಂದಿನ ದಿನಗಳಲ್ಲಿ ಪರಿಸರ ಸ್ನೇಹಿ ವಾತಾವರಣದ ಸೃಷ್ಟಿಗೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಶಾಸಕರು ಕರೆ ನೀಡಿದರು.
ವಿಶ್ವ ಪರಿಸರ ದಿನಾಚರಣೆಯನ್ನು ಆಯೋಜಿಸಿದ್ದ ಪಾಲಿಕೆ ಸದಸ್ಯ ಕೆ.ಎಮ್.ವೀರೇಶ್ ಅವರು ಮಾತನಾಡಿ ವಿಶ್ವ ಸಂಸ್ಥೆಯು ಈ ವರ್ಷ “ಪರಿಸರ ವ್ಯವಸ್ಥೆಯ ಮರು ಸ್ಥಾಪನೆ” ಎಂಬ ಘೋಷವಾಕ್ಯದ ಮೂಲಕ ಪರಿಸರದ ಮೂಲ ವ್ಯವಸ್ಥೆಗೆ ತಕ್ಕನಾಗಿ ಪರಿಸರವನ್ನು ಮರುಸ್ಥಾಪಿಸಬೇಕೆಂದು ಕರೆ ನೀಡಿದೆ. ಈಗಾಗಲೇ ಪರಿಸರ ನಾಶದಿಂದ ಜಾಗತಿಕ ತಾಪಮಾನವು ಸತತವಾಗಿ ಹೆಚ್ಚಾಗುತ್ತಿದೆ. ಅಂತರ್ಜಲ ಹಂತ ಹಂತವಾಗಿ ಕುಸಿಯುತ್ತಿದೆ.
ಜೊತೆಗೆ ಆಮ್ಲಜನಕದ ಕೊರತೆಯಾಗುತ್ತಿರುವುದು ನಮ್ಮ ಅನುಭವಕ್ಕೆ ಬರುತ್ತಿದೆ. ಹಾಗಾಗಿ ನಾವೆಲ್ಲರೂ ಪರಿಸರದ ಸಂರಕ್ಷಣೆಗೆ ಮುಂದಾಗೋಣ. ಗಿಡಗಳನ್ನು ನೆಡುವುದು ಮಾತ್ರವಲ್ಲದೇ ಅವುಗಳನ್ನು ಪೋಷಿಸೋಣ. ಜೊತೆಗೆ ಸ್ವಚ್ಛತೆಯನ್ನು ಕಾಪಾಡಿ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳೋಣ. 33ನೇ ವಾರ್ಡನ್ನು ಹಸಿರು ಮತ್ತು ಸ್ವಚ್ಛಮಯ ಮಾಡೋದು ನನ್ನ ಗುರಿ ಮತ್ತು ಕನಸಾಗಿದೆ. ಹಾಗಾಗಿ ಮಹಾನಗರ ಪಾಲಿಕೆಯ ಜೊತೆಗೆ ಸಾರ್ವಜನಿಕರು ಕೈಜೋಡಿಸಿ ಸಹಕರಿಸಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಶ್ರೀ ಸೋಮೇಶ್ವರ ವಿದ್ಯಾಲಯದ ಕಾರ್ಯದರ್ಶಿ ಕೆ.ಎಮ್.ಸುರೇಶ್, ವಿಶ್ವ ಕರ್ನಾಟಕ ರಕ್ಷಣಾ ವೇದಿಕೆಯ ಕೆ.ಜಿ.ಯಲ್ಲಪ್ಪ, ಲಿಂಗಪ್ಪ, ಎಲ್ಐಸಿ ರುದ್ರೇಶ್, ಕೂಲಂಬಿ ಬಸಣ್ಣ, ಹೆಚ್.ಎಮ್.ಮಲ್ಲಿಕಾರ್ಜುನಪ್ಪ, ವಿ.ಸಿದ್ದೇಶ್ ಮತ್ತಿತರರು ಹಾಜರಿದ್ದರು.
ವರದಿ | ಕೆ.ರಾಘವೇಂದ್ರ ನಾಯರಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ

ಸುದ್ದಿದಿನ,ಬಳ್ಳಾರಿ:ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
2022-23 ಹಾಗೂ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ವಿವರ
ಮಹಿಳಾ ಆಯವ್ಯಯದಡಿ 10 ಮಹಿಳೆಯರು, ಪರಿಶಿಷ್ಟ ಜಾತಿ ಉಪಯೋಜನೆಯಡಿ 10 ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ 4 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಒಟ್ಟು 24 ಅಭ್ಯರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ ಒದಗಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಶಿಪ್ ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್ಶಿಪ್ ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ 20,000/- ರೂ. ಸ್ಟೆöÊಫಂಡ್ ನೀಡಲಾಗುವುದು.
ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/UgNqDcFs1v6akyAD9 ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.
ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನವಾಗಿದ್ದು, ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಯುವ ಚೈತನ್ಯ ಕಾರ್ಯಕ್ರಮದಡಿ ಕ್ರೀಡಾ ಕಿಟ್ಗಳನ್ನು ಸರಬರಾಜು ಮಾಡಲು ಯುವಕ, ಯುವತಿಯರ ಸಂಘಗಳಿಂದ ಸೇವಾ ಸಿಂಧೂ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ದಾವಣಗೆರೆ ದೂ.ಸಂ: 08192-237480 ನ್ನು ಸಂಪರ್ಕಿಸಲು ಸಹಾಯಕ ನಿರ್ದೇಶಕ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ : ದೂರು ದಾಖಲು

ಸುದ್ದಿದಿನ,ದಾವಣಗೆರೆ:ದಾವಣಗೆರೆ ನಗರದ ಡಿಸಿಎಂ ಲೇಔಟಿನ ಎಂಎಸ್ಎಂ ಪ್ಲಾಜಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆನ್ಲೈನ್ ರಿಂಗ್ ವ್ಯವಹಾರ ನಡೆಸಲು ತೆರೆದಿರುವ ಎಂಪೈರ್ ಟ್ರೇಡಿಂಗ್ ಕಂಪನಿ ತೆರೆದುಕೊಂಡು ಸಾರ್ವಜನಿಕರಿಂದ ಹಣವನ್ನು ಆರೋಪಿತರಾದ ಗಜಾನನ ತಂದೆ ರಾಮಪೂಜಾರಪ್ಪ ಇವರು ತಮ್ಮ ಸ್ನೇಹಿತರೊಂದಿಗೆ ಪಡೆದುಕೊಂಡು ಪ್ರತಿ ತಿಂಗಳು ಶೇಕಡಾ 5 ರಷ್ಟು ಲಾಭಾಂಶವನ್ನು ಕೊಡುವುದಾಗಿ ಹೇಳಿ ಕೆಲವು ತಿಂಗಳು ಕೊಟ್ಟು ನಂತರದ ದಿನಗಳಲ್ಲಿ ಲಾಭಾಂಶವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಒಟ್ಟು ಸಾರ್ವಜನಿಕರಿಂದ 31.50,000/- ರೂಗಳನ್ನು ಕಟ್ಟಿಸಿಕೊಂಡು 61.62.800/- ರೂ ಲಾಭಾಂಶದ ಹಣವನ್ನು ಜಮಾ ಮಾಡಿದ್ದು ರೂ.37,33,500ಗಳನ್ನು 6 ತಿಂಗಳ ಲಾಭಾಂಶದ ಹಣವನ್ನು ಮತ್ತು ಅಸಲಿನ ಹಣವನ್ನು ಕೊಡದೇ ಮೋಸ ಮಾಡಿರುತ್ತಾರೆ ಎಂದು ಹರೀಶ.ಕೆ ತಂದೆ ಉಮೇಶಪ್ಪ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುತ್ತಾರೆ.
ಠೇವಣಿದಾರರು ಎಂಪೈರ್ ಟ್ರೇಡಿಂಗ್ ಕಂಪನಿಯಲ್ಲಿ ಹಣವನ್ನು ತೊಡಗಿಸಿ ಮೋಸ ಹೋಗಿದ್ದಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ದಾವಣಗೆರೆ ನಗರದ ಸಿಇಎನ್ ಪೊಲೀಸ್ ಠಾಣೆ, ಮೊದಲನೇ ಮಹಡಿ ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ರವರ ಬಳಿ ಹೋಗಿ ಮಾಹಿತಿ ನೀಡಬೇಕು. ದೂ.ಸಂ:08192-225119 ನ್ನು ಸಂಪರ್ಕಿಸಲು ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
