ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2022/05/suddidina_news_suddidina.jpg&description=ಬೆಳಗಿನ ಪ್ರಮುಖ ಸುದ್ದಿಗಳು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2022/05/suddidina_news_suddidina.jpg&description=ಬೆಳಗಿನ ಪ್ರಮುಖ ಸುದ್ದಿಗಳು', 'pinterestShare', 'width=750,height=350'); return false;" title="Pin This Post">
ಬೆಳಗಿನ ಪ್ರಮುಖ ಸುದ್ದಿಗಳು
- ಕರ್ನಾಟಕ ( Karnataka) ಸಂಪದ್ಭರಿತ ರಾಜ್ಯವಾಗಿದ್ದು, ಹತ್ತು ಕೃಷಿ ಹವಾಮಾನ ವಲಯಗಳನ್ನು ಹೊಂದಿದೆ. ಇಲ್ಲಿನ ಜನರು ಹೆಚ್ಚು ಉದ್ಯಮಶೀಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಬೆಂಗಳೂರಿನಲ್ಲಿ ನಿನ್ನೆ ತಿಳಿಸಿದ್ದಾರೆ.ಆಸ್ಟ್ರೇಲಿಯಾ ನ್ಯೂ ಸೌತ್ ವೇಲ್ಸ್ ಪ್ರೀಮಿಯರ್ ಡೊಮಿನಿಕ್ ಪೆರೊಟ್ವಿಟ್ ಅವರ ನೇತೃತ್ವದ ನಿಯೋಗದೊಂದಿಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.
- ರಾಷ್ಟ್ರಮಟ್ಟದ ಸ್ವಚ್ಛ ವಿದ್ಯಾಲಯ ಪುರಸ್ಕಾರಕ್ಕೆ ರಾಜ್ಯದ ಒಟ್ಟು 26 ಶಾಲೆಗಳು ಆಯ್ಕೆಯಾಗಿವೆ. ಈ ಶಾಲೆಗಳಿಗೆ ಇಂದು ಮಧ್ಯಾಹ್ನ 12.30ಕ್ಕೆ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಪ್ರಶಸ್ತಿ ಪ್ರಮಾಣ ಪತ್ರ ವಿತರಣಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.
- ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಜಲಸಂಪನ್ಮೂಲ ಇಲಾಖೆ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸುವುದಾಗಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದ್ದಾರೆ.
- ದೇಶದಲ್ಲಿ ಕಳೆದ 7 ವರ್ಷಗಳ ಅವಧಿಯಲ್ಲಿ 1.5ಲಕ್ಷ ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಚಿಕ್ಕಬಳ್ಳಾಪುರ ತಾಲೂಕಿನ ಅಂದಾರಲಹಳ್ಳಿಯಲ್ಲಿ ನಿನ್ನೆ ತಿಳಿಸಿದ್ದಾರೆ. ವಿದ್ಯುತ್ ಉತ್ಪಾದನೆಯಲ್ಲಿ ದೇಶ ಸ್ವಾವಲಂಬನೆ ಸಾಧಿಸುವಲ್ಲಿ ಯಶಸ್ವಿಯಾಗಿದೆ ಅವರು ತಿಳಿಸಿದ್ದಾರೆ.
- ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 13 ರಿಂದ 15 ರ ವರೆಗೆ ಹಮ್ಮಿಕೊಂಡಿರುವ ’ಹರ್ ಘರ್ ತಿರಂಗಾ’ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆ, ತಾಲೂಕು ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಷ್ಟ್ರದಲ್ಲಿ ವಿದ್ಯುತ್ ಸ್ವಾವಲಂಬನೆ ಸಾಧಿಸಲು ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಕೆ.ಜಿ. ಬೋಪಯ್ಯ ಮಡಿಕೇರಿಯಲ್ಲಿ ನಿನ್ನೆ ಹೇಳಿದ್ದಾರೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ನಡೆದ ಉಜ್ವಲ ಭಾರತ – ಉಜ್ವಲ ಭವಿಷ್ಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಿಸಿದ ಅವರು ಮಾತನಾಡಿದರು.
- ದೇಶದಲ್ಲಿ ಮೊದಲ ಬಾರಿಗೆ ಆಯೋಜಿಸಿರುವ ಅಖಿಲ ಭಾರತೀಯ ಕಾನೂನು ಸೇವಾ ಪ್ರಾಧಿಕಾರದ ಪ್ರಥಮ ಸಭೆಯನ್ನುದ್ದೇಶಿಸಿ ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನಾ ಭಾಷಣ ಮಾಡಲಿದ್ದಾರೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಇದೇ ಮೊದಲ ಬಾರಿಗೆ ರಾಷ್ಟ್ರ ಮಟ್ಟದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಭೆ ಆಯೋಜಿಸಲಾಗಿದ್ದು, ಈ ಸಭೆಯಲ್ಲಿ ಏಕರೂಪತೆ ಮತ್ತು ಸರಿ ಹೊಂದಿಸುವಿಕೆ ಕುರಿತು ಚರ್ಚೆ ನಡೆಯಲಿದೆ.
- ರಾಜ್ಯದ ಗ್ರಾಮೀಣ ಪ್ರದೇಶಗಳು ಸುಧಾರಣೆ ಕಾಣುತ್ತಿದ್ದು, ರಸ್ತೆ ಸಂಪರ್ಕ ಉತ್ತಮಗೊಳ್ಳುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ. ಶಾಲೆ, ಆರೋಗ್ಯ, ಡಿಜಿಟಲ್ ಸಂಪರ್ಕಗಳನ್ನೂ ಇನ್ನೂ ಹೆಚ್ಚಿನ ರೀತಿಯಲ್ಲಿ ಸುಧಾರಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.
- ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಕಡಬ ಹೋಬಳಿಗಳಲ್ಲಿ ಆಗಸ್ಟ್ 6ರ ರಾತ್ರಿ 12 ಗಂಟೆಯ ತನಕ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಗುಂಪು ಸೇರುವುದು, ಸಭೆ-ಸಮಾರಂಭ ನಡೆಸಲು ಯಾವುದೇ ಅನುಮತಿ ಇರುವುದಿಲ್ಲ, ಶಾಂತಿ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
- ಇದನ್ನೂ ಓದಿ | ಬಿಜೆಪಿ ಕಾರ್ಯಕರ್ತರಿಗೆ ಪ್ರಬುದ್ಧತೆ ಕಡಿಮೆ ; ಅವರನ್ನು ಮನೆಗೆ ಕಳುಹಿಸುವುದು ಐದು ನಿಮಿಷದ ಕೆಲಸ : ಕೆ.ಎಸ್ ಈಶ್ವರಪ್ಪ
- ಒಂದು ರಾಷ್ಟ್ರ ಒಂದು ಜಾಲ ಯೋಜನೆಯಡಿ ದೇಶದಲ್ಲಿ 1.63 ಲಕ್ಷ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಿ, ಪ್ರತಿ ಕುಟುಂಬಕ್ಕೂ ಗುಣಮಟ್ಟದ ವಿದ್ಯುತ್ ಸಂಪರ್ಕ ಕಲ್ಪಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ರಾಜ್ಯ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ ಮಡಿಕೇರಿಯಲ್ಲಿ ನಿನ್ನೆ ಹೇಳಿದ್ದಾರೆ. ಜಲವಿದ್ಯುತ್, ಕಿರು ವಿದ್ಯುತ್, ಸೌರಶಕ್ತಿ ಮತ್ತು ನವೀಕರಿಸಬಹುದಾದ ಇಂಧನಕ್ಕೂ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
- ಕಾಮನ್ವೆಲ್ತ್ ಕ್ರೀಡಾಕೂಟದ ಆಗಸ್ಟ್ 8ರ ಸಮಾರೋಪ ಸಮಾರಂಭದ ವರೆಗೂ ಎಲ್ಲಾ ಪಂದ್ಯಗಳನ್ನು ಡಿಡಿ ಸ್ಪೋರ್ಟ್ಸ್, ದೂರದರ್ಶನ ಸ್ಪೋರ್ಟ್ಸ್ ನೇರ ಪ್ರಸಾರ ಮಾಡಲಿದೆ. ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ನಲ್ಲಿ ಕ್ರೀಡಾಕೂಟ ಪ್ರಗತಿಯಲ್ಲಿದ್ದು, 20 ವಿವಿಧ ಕ್ರೀಡಾ ವಿಭಾಗದ ಪಂದ್ಯಾವಳಿಗಳನ್ನು ಡಿಡಿ ಸ್ಪೋರ್ಟ್ಸ್ ಮತ್ತು ಡಿಡಿ ಫ್ರೀ ಡಿಶ್ ನಿನ್ನೆಯಿಂದಲೇ ನೇರ ಪ್ರಸಾರ ಮಾಡುತ್ತಿವೆ.
- ಟ್ರಿನಿಡಾಡ್ನ ತರೌಬಾದಲ್ಲಿ ಕಳೆದ ರಾತ್ರಿ ನಡೆದ ಮೊದಲ ಟಿ20 ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ 68 ರನ್ ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿದೆ. ಇದರೊಂದಿಗೆ ಐದು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯಲ್ಲಿ ರೋಹಿತ್ ಶರ್ಮ ಸಾರಥ್ಯದ ಭಾರತ 1-0 ಅಂತರದ ಮುನ್ನಡೆ ಗಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
RCB ಗೆ ಹದಿನೆಂಟರ ಇಡಿಗಂಟು | ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ : ವಿರಾಟ್ ಕೊಹ್ಲಿ
ಸುದ್ದಿದಿನಡೆಸ್ಕ್:ಇಂಡಿಯನ್ ಪ್ರೀಮಿಯರ್ ಲೀಗ್ – ಐಪಿಎಲ್ ಟಿ-20 ಕ್ರಿಕೆಟ್ನ 18 ನೇ ಆವೃತ್ತಿಯ ಪ್ರಶಸ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಡಿಗೇರಿಸಿಕೊಂಡಿದೆ.
ನಿನ್ನೆ ರಾತ್ರಿ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದ ನಂತರ, ಆರ್ಸಿಬಿ ನಾಯಕ ರಜತ್ ಪಾಟಿದಾರ್, ವಿರಾಟ್ ಕೊಹ್ಲಿ ಮತ್ತು ಎಲ್ಲಾ ಅಭಿಮಾನಿಗಳು ಈ ಗೆಲುವಿಗೆ ಹೆಚ್ಚು ಅರ್ಹರು ಎಂದು ಹೇಳಿದರು. ಪ್ರತಿಯೊಬ್ಬ ಆಟಗಾರನನ್ನು ಬೆಂಬಲಿಸಿದ್ದಕ್ಕಾಗಿ, ತಂಡದ ನಿರ್ವಹಣೆ ಮತ್ತು ತರಬೇತಿ ಸಿಬ್ಬಂದಿಗೆ ಅವರು ಧನ್ಯವಾದ ಅರ್ಪಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ, ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ಗಳಿಗೆ 190 ರನ್ ಗಳಿಸಿತು. ವಿರಾಟ್ ಕೊಹ್ಲಿ ಗರಿಷ್ಠ 43 ರನ್ ಗಳಿಸಿದರೆ, ನಾಯಕ ಪಾಟಿದಾರ್ 26 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಅರ್ಶ್ದೀಪ್ ಸಿಂಗ್ ಮತ್ತು ಕೈಲ್ ಜೇಮಿಸನ್ ತಲಾ 3 ವಿಕೆಟ್ ಪಡೆದರು. 191 ರನ್ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್, ನಿಗದಿತ 20 ಓವರ್ಗಳಲ್ಲಿ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಶಶಾಂಕ್ ಸಿಂಗ್ ಅಜೇಯ 61 ರನ್ ಗಳಿಸಿದರು.
ಅಸಾಧಾರಣ ಬೌಲಿಂಗ್ಗಾಗಿ, ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಪಂದ್ಯದ ನಂತರದ ಪ್ರಸ್ತುತಿಯಲ್ಲಿ, ಗುಜರಾತ್ ಟೈಟಾನ್ಸ್ನ ಸಾಯಿ ಸುದರ್ಶನ್ ಅತಿ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರೆ. ಅದೇ ತಂಡದ ಸಹ ಆಟಗಾರ ಪ್ರಸಿದ್ಧ್ ಕೃಷ್ಣ ಈ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್ಗಳನ್ನು ಪಡೆದಿದ್ದಕ್ಕಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರು. ಮುಂಬೈ ಇಂಡಿಯನ್ಸ್ನ ಸೂರ್ಯ ಕುಮಾರ್ ಯಾದವ್ ಪಂದ್ಯಾವಳಿಯಾದ್ಯAತ ತಮ್ಮ ಅಸಾಧಾರಣ ಬ್ಯಾಟಿಂಗ್ಗಾಗಿ ಅತ್ಯಂತ ಮೌಲ್ಯಯುತ ಆಟಗಾರ ಎಂಬ ಪ್ರಶಸ್ತಿಯನ್ನು ಪಡೆದರು.
ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ
17 ವರ್ಷಗಳ ನಂತರ ವಿರಾಟ್ ಕೊಹ್ಲಿ ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಎತ್ತಿ ಹಿಡಿದರು. ಫೈನಲ್ನಲ್ಲಿ 35 ಎಸೆತಗಳಲ್ಲಿ 43 ರನ್ ಗಳಿಸಿದ ಕೊಹ್ಲಿ, ಸುಮಾರು ಎರಡು ದಶಕಗಳಿಂದ ಬೆನ್ನಟ್ಟಿದ ಕ್ಷಣ ಅಂತಿಮವಾಗಿ ವಾಸ್ತವವಾದಾಗ ಭಾವುಕರಾದರು “ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ದಿನ ಬರುತ್ತದೆ ಎಂದು ಭಾವಿಸಿರಲಿಲ್ಲ ಎಂದು ಗೆದ್ದು ಭಾವುಕರಾಗಿದ್ದ ವಿರಾಟ್ ಕೊಹ್ಲಿ ಪಂದ್ಯದ ನಂತರದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಆರ್ಸಿಬಿ ಗೆಲುವಿನ ಸಂಭ್ರಮದಲ್ಲಿ ಕರ್ನಾಟಕ, ವಿಶೇಷವಾಗಿ ರಾಜಧಾನಿ ಬೆಂಗಳೂರು, ನಿನ್ನೆ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಿದ ನಂತರ ಸಂತೋಷದಿAದ ತುಂಬಿ ತುಳುಕುತ್ತಿತ್ತು. ಅಭಿಮಾನಿಗಳು ಇಂದು ಬೆಳಗಿನ ಜಾವದವರೆಗೆ ಪಟಾಕಿ ಸಿಡಿಸಿ ಬೀದಿಗಳಲ್ಲಿ ಜಮಾಯಿಸಿ ಸಂಭ್ರಮಿಸಿದರು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್ಸಿಬಿಯನ್ನು ಶ್ಲಾಘಿಸುತ್ತಾ, “ಐಪಿಎಲ್ ಐತಿಹಾಸಿಕ ವಿಜಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿನಂದನೆ. ಕನಸು ಕೊನೆಗೂ ನನಸಾಗಿದೆ.
ಈ ಸಲಾ ಕಪ್ ನಮ್ದೆ. ಅಚಲವಾದ ಚೈತನ್ಯದಿಂದ, ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ಹೆಚ್ಚಿಸಿದೆ. ಪ್ರಪಂಚದಾದ್ಯAತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ ಎಂದು ಹೇಳಿದ್ದಾರೆ. ಐಪಿಎಲ್ ಪ್ರಶಸ್ತಿ ಗೆದ್ದ ಆರ್ಸಿಬಿ ತಂಡಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಆರ್ಸಿಬಿ ತಂಡ ಪಡೆದ ರೋಮಾಂಚಕ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲಕ್ಷಾಂತರ ಅಭಿಮಾನಿಗಳ ಕನಸುಗಳು ನನಸಾಗಿದೆ. ಇಡೀ ಆರ್ಸಿಬಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಏ.10 ರಿಂದ ಬೇಸಿಗೆ ಕಬಡ್ಡಿ ತರಬೇತಿ ಶಿಬಿರ
ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸೃಷ್ಟಿ ಕಬಡಿ ಅಕಾಡೆಮಿ(ರಿ), ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಕಬಡ್ಡಿ ತರಬೇತಿ ಶಿಬಿರವನ್ನು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಿಂದ 30 ರವರೆಗೆ ಬೆಳಿಗ್ಗೆ 6.30 ರಿಂದ 8 ಗಂಟೆಯ ವರೆಗೆ ಹಾಗೂ ಸಾಯಂಕಾಲ ಸಂಜೆ 5 ರಿಂದ 6.30 ರ ವರೆಗೆ ಆಯೋಜಿಸಲಾಗಿದೆ.
ಆಸಕ್ತ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೇಸಿಗೆ ಕಬಡ್ಡಿ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಶ್ರೀಶೈಲ ಎಸ್-ಮೊ.ನಂ: 9448667255 ಹಾಗೂ ನೂರುಲ್ಲ ಮೊ.ನಂ: 9740107364, ಶಿವಯೋಗಿ ಮೊ.ನಂ: 9019619900, ರಾಕೇಶ್ ಮೊನಂ:9448835907 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ3 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ3 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ5 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

