Connect with us

ಕ್ರೀಡೆ

ಬೆಳಗಿನ ಪ್ರಮುಖ ಸುದ್ದಿಗಳು

Published

on

ಬೆಳಗಿನ ಪ್ರಮುಖ ಸುದ್ದಿಗಳು

  1. ಕರ್ನಾಟಕ ( Karnataka) ಸಂಪದ್ಭರಿತ ರಾಜ್ಯವಾಗಿದ್ದು, ಹತ್ತು ಕೃಷಿ ಹವಾಮಾನ ವಲಯಗಳನ್ನು ಹೊಂದಿದೆ. ಇಲ್ಲಿನ ಜನರು ಹೆಚ್ಚು ಉದ್ಯಮಶೀಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಬೆಂಗಳೂರಿನಲ್ಲಿ ನಿನ್ನೆ ತಿಳಿಸಿದ್ದಾರೆ.ಆಸ್ಟ್ರೇಲಿಯಾ ನ್ಯೂ ಸೌತ್ ವೇಲ್ಸ್ ಪ್ರೀಮಿಯರ್ ಡೊಮಿನಿಕ್ ಪೆರೊಟ್ವಿಟ್ ಅವರ ನೇತೃತ್ವದ ನಿಯೋಗದೊಂದಿಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.
  2. ರಾಷ್ಟ್ರಮಟ್ಟದ ಸ್ವಚ್ಛ ವಿದ್ಯಾಲಯ ಪುರಸ್ಕಾರಕ್ಕೆ ರಾಜ್ಯದ ಒಟ್ಟು 26 ಶಾಲೆಗಳು ಆಯ್ಕೆಯಾಗಿವೆ. ಈ ಶಾಲೆಗಳಿಗೆ ಇಂದು ಮಧ್ಯಾಹ್ನ 12.30ಕ್ಕೆ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಪ್ರಶಸ್ತಿ ಪ್ರಮಾಣ ಪತ್ರ ವಿತರಣಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.
  3. ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಜಲಸಂಪನ್ಮೂಲ ಇಲಾಖೆ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸುವುದಾಗಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದ್ದಾರೆ.
  4. ದೇಶದಲ್ಲಿ ಕಳೆದ 7 ವರ್ಷಗಳ ಅವಧಿಯಲ್ಲಿ 1.5ಲಕ್ಷ ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಚಿಕ್ಕಬಳ್ಳಾಪುರ ತಾಲೂಕಿನ ಅಂದಾರಲಹಳ್ಳಿಯಲ್ಲಿ ನಿನ್ನೆ ತಿಳಿಸಿದ್ದಾರೆ. ವಿದ್ಯುತ್ ಉತ್ಪಾದನೆಯಲ್ಲಿ ದೇಶ ಸ್ವಾವಲಂಬನೆ ಸಾಧಿಸುವಲ್ಲಿ ಯಶಸ್ವಿಯಾಗಿದೆ ಅವರು ತಿಳಿಸಿದ್ದಾರೆ.
  5. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 13 ರಿಂದ 15 ರ ವರೆಗೆ ಹಮ್ಮಿಕೊಂಡಿರುವ ’ಹರ್ ಘರ್ ತಿರಂಗಾ’ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆ, ತಾಲೂಕು ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
  6. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಷ್ಟ್ರದಲ್ಲಿ ವಿದ್ಯುತ್ ಸ್ವಾವಲಂಬನೆ ಸಾಧಿಸಲು ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಕೆ.ಜಿ. ಬೋಪಯ್ಯ ಮಡಿಕೇರಿಯಲ್ಲಿ ನಿನ್ನೆ ಹೇಳಿದ್ದಾರೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ನಡೆದ ಉಜ್ವಲ ಭಾರತ – ಉಜ್ವಲ ಭವಿಷ್ಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಿಸಿದ ಅವರು ಮಾತನಾಡಿದರು.
  7. ದೇಶದಲ್ಲಿ ಮೊದಲ ಬಾರಿಗೆ ಆಯೋಜಿಸಿರುವ ಅಖಿಲ ಭಾರತೀಯ ಕಾನೂನು ಸೇವಾ ಪ್ರಾಧಿಕಾರದ ಪ್ರಥಮ ಸಭೆಯನ್ನುದ್ದೇಶಿಸಿ ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನಾ ಭಾಷಣ ಮಾಡಲಿದ್ದಾರೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಇದೇ ಮೊದಲ ಬಾರಿಗೆ ರಾಷ್ಟ್ರ ಮಟ್ಟದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಭೆ ಆಯೋಜಿಸಲಾಗಿದ್ದು, ಈ ಸಭೆಯಲ್ಲಿ ಏಕರೂಪತೆ ಮತ್ತು ಸರಿ ಹೊಂದಿಸುವಿಕೆ ಕುರಿತು ಚರ್ಚೆ ನಡೆಯಲಿದೆ.
  8. ರಾಜ್ಯದ ಗ್ರಾಮೀಣ ಪ್ರದೇಶಗಳು ಸುಧಾರಣೆ ಕಾಣುತ್ತಿದ್ದು, ರಸ್ತೆ ಸಂಪರ್ಕ ಉತ್ತಮಗೊಳ್ಳುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ. ಶಾಲೆ, ಆರೋಗ್ಯ, ಡಿಜಿಟಲ್ ಸಂಪರ್ಕಗಳನ್ನೂ ಇನ್ನೂ ಹೆಚ್ಚಿನ ರೀತಿಯಲ್ಲಿ ಸುಧಾರಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.
  9. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಕಡಬ ಹೋಬಳಿಗಳಲ್ಲಿ ಆಗಸ್ಟ್ 6ರ ರಾತ್ರಿ 12 ಗಂಟೆಯ ತನಕ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಗುಂಪು ಸೇರುವುದು, ಸಭೆ-ಸಮಾರಂಭ ನಡೆಸಲು ಯಾವುದೇ ಅನುಮತಿ ಇರುವುದಿಲ್ಲ, ಶಾಂತಿ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
  10. ಇದನ್ನೂ ಓದಿ | ಬಿಜೆಪಿ ಕಾರ್ಯಕರ್ತರಿಗೆ ಪ್ರಬುದ್ಧತೆ ಕಡಿಮೆ ; ಅವರನ್ನು ಮನೆಗೆ ಕಳುಹಿಸುವುದು ಐದು ನಿಮಿಷದ ಕೆಲಸ : ಕೆ.ಎಸ್ ಈಶ್ವರಪ್ಪ
  11. ಒಂದು ರಾಷ್ಟ್ರ ಒಂದು ಜಾಲ ಯೋಜನೆಯಡಿ ದೇಶದಲ್ಲಿ 1.63 ಲಕ್ಷ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಿ, ಪ್ರತಿ ಕುಟುಂಬಕ್ಕೂ ಗುಣಮಟ್ಟದ ವಿದ್ಯುತ್ ಸಂಪರ್ಕ ಕಲ್ಪಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ರಾಜ್ಯ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ ಮಡಿಕೇರಿಯಲ್ಲಿ ನಿನ್ನೆ ಹೇಳಿದ್ದಾರೆ. ಜಲವಿದ್ಯುತ್, ಕಿರು ವಿದ್ಯುತ್, ಸೌರಶಕ್ತಿ ಮತ್ತು ನವೀಕರಿಸಬಹುದಾದ ಇಂಧನಕ್ಕೂ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
  12. ಕಾಮನ್‌ವೆಲ್ತ್ ಕ್ರೀಡಾಕೂಟದ ಆಗಸ್ಟ್ 8ರ ಸಮಾರೋಪ ಸಮಾರಂಭದ ವರೆಗೂ ಎಲ್ಲಾ ಪಂದ್ಯಗಳನ್ನು ಡಿಡಿ ಸ್ಪೋರ್ಟ್ಸ್, ದೂರದರ್ಶನ ಸ್ಪೋರ್ಟ್ಸ್ ನೇರ ಪ್ರಸಾರ ಮಾಡಲಿದೆ. ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ಕ್ರೀಡಾಕೂಟ ಪ್ರಗತಿಯಲ್ಲಿದ್ದು, 20 ವಿವಿಧ ಕ್ರೀಡಾ ವಿಭಾಗದ ಪಂದ್ಯಾವಳಿಗಳನ್ನು ಡಿಡಿ ಸ್ಪೋರ್ಟ್ಸ್ ಮತ್ತು ಡಿಡಿ ಫ್ರೀ ಡಿಶ್ ನಿನ್ನೆಯಿಂದಲೇ ನೇರ ಪ್ರಸಾರ ಮಾಡುತ್ತಿವೆ.
  13. ಟ್ರಿನಿಡಾಡ್‌ನ ತರೌಬಾದಲ್ಲಿ ಕಳೆದ ರಾತ್ರಿ ನಡೆದ ಮೊದಲ ಟಿ20 ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ 68 ರನ್ ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿದೆ. ಇದರೊಂದಿಗೆ ಐದು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯಲ್ಲಿ ರೋಹಿತ್ ಶರ್ಮ ಸಾರಥ್ಯದ ಭಾರತ 1-0 ಅಂತರದ ಮುನ್ನಡೆ ಗಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ಲೋಕಸಭಾ ಚುನಾವಣೆ ; ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸಭೆ : ಇತರೆ ಪ್ರಮುಖ ಸುದ್ದಿಗಳು

Published

on

ಮದ್ಯಾಹ್ನದ ಸುದ್ದಿಮುಖ್ಯಾಂಶಗಳು

  1. ಮಹಿಳೆಯರ ಅಭ್ಯುದಯಕ್ಕಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ನಾರಿಶಕ್ತಿಯ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
  2. ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ನವದೆಹಲಿಯಲ್ಲಿ ’ಸಶಕ್ತ ನಾರಿ ವಿಕಸಿತ ಭಾರತ’ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಅವರು ’ನಮೋ ಡ್ರೋನ್ ದೀದಿ’ ಯೋಜನೆಯಲ್ಲಿ ಏರ್ಪಡಿಸಿರುವ ಕೃಷಿಗೆ ಸಂಬಂಧಿಸಿದ ಡ್ರೋನ್ ಪ್ರದರ್ಶನ ವೀಕ್ಷಿಸಿದರು.
  3. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಗುರುಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ವಿವಿಧ ರಾಜ್ಯಗಳಿಗೆ ಸುಮಾರು ಒಂದು ಲಕ್ಷ ಕೋಟಿ ರೂಪಾಯಿ ಮೌಲ್ಯದ 112 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
  4. ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ದೆಹಲಿಯಲ್ಲಿಂದು ಸಂಜೆ ರಾಷ್ಟ್ರೀಯಾಧ್ಯಕ್ಷ ಜೆ.ಪಿ. ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ರಾಜ್ಯದ 18 ರಿಂದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ.
  5. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಯಾಬ್ ಚಾಲಕರು, ಕಾರ್ಮಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಅನ್ನು ಇಂದಿನಿಂದ ಆರಂಭಿಸಲಾಗಿದೆ.
  6. ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ ಹಾಲಿವುಡ್‌ನ ಪ್ರಮುಖ ತಾರೆಯರು 96 ನೇ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ’ಯೊರ್ಗೊಸ್ ಲ್ಯಾಂಥಿಮೋಸ್ ಪೂರ್ ಥಿಂಗ್ಸ್’ ಚಿತ್ರದ ’ಬೆಲ್ಲಾ ಬ್ಯಾಕ್ಸ್ಟರ್’ ಪಾತ್ರದ ಅಭಿನಯಕ್ಕಾಗಿ ’ಎಮ್ಮಾ ಸ್ಟೋನ್’ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
  7. ಐಸಿಸಿ ವಿಶ್ವ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ಅಗ್ರಸ್ಥಾನಕ್ಕೆ ಮರಳಿದೆ. ಆಸ್ಟ್ರೇಲಿಯಾ 2ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ 3ನೇ ಸ್ಥಾನದಲ್ಲಿದೆ. ಇದರೊಂದಿಗೆ ಕ್ರಿಕೆಟ್‌ನ ಎಲ್ಲಾ ಮೂರೂ ಮಾದರಿಯಲ್ಲೂ ಭಾರತ ತಂಡ ನಂ. 1ಸ್ಥಾನ ಪಡೆದಿದೆ.
  8. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯದಲ್ಲಿಂದು ಗುಜರಾತ್ ಜಯಂಟ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಅಭಿಮಾನಿಗಳೊಂದಿಗೆ ಕ್ರಿಕೆಟಿಗ ದಿನೇಶ್ ಕಾರ್ತಿಕ್ ‘ಸ್ಟಾರ್ ಟಾಕ್’ ಕಾರ್ಯಕ್ರಮ

Published

on

ಸುದ್ದಿದಿನ,ಬೆಂಗಳೂರು : ಜಗತ್ತಿನ ಅತ್ಯುನ್ನತ ಅಥ್ಲೆಟ್ ಗಳಿಂದ ಸ್ಫೂರ್ತಿ ಪಡೆದ ಕ್ರೀಡಾ ಉಡುಪುಗಳ ಬ್ರಾಂಡ್ – ಪರಿಮ್ಯಾಚ್ ಸ್ಪೋರ್ಟ್ಸ್ ಬೆಂಗಳೂರಿನ ಮಂತ್ರಿ ಸ್ಟೋರ್ ಮಾಲ್‌ನಲ್ಲಿ ಭಾನುವಾರ ಖ್ಯಾತ ಕ್ರಿಕೆಟಿಗೆ ದಿನೇಶ್ ಕಾರ್ತಿಕ ಅವರೊಂದಿಗೆ ಅಭಿಮಾನಿಗಳ ಪ್ರತ್ಯೇಕ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿತ್ತು.

ಪರಿಮ್ಯಾಚ್ ಸ್ಪೋರ್ಟ್ಸ್ನ ಅಧಿಕೃತ ಬ್ರಾಂಡ್ ರಾಯಭಾರಿಯಾಗಿರುವ ದಿನೇಶ್ ಕಾರ್ತಿಕ್ ಅವರು ಅಭಿಮಾನಿಗಳೊಂದಿಗೆ ಛಾಯಾಚಿತ್ರಗಳನ್ನು ತೆಗೆಸಿಕೊಂಡರಲ್ಲದೇ ಪ್ರಶೋತ್ತರ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಈ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಗೂ ಸಂವಾದ ನಡೆಸಿದರು.
ಕ್ರಿಕೆಟ್ ಕ್ಷೇತ್ರದಲ್ಲಿ ಪ್ರಮುಖ ವ್ಯಕ್ತಿಯಾಗಿರುವ ದಿನೇಶ್ ಕಾರ್ತಿಕ್ ಅವರ ಅಸಾಧಾರಣ ಕೌಶಲ್ಯಗಳಿಗೆ ಖ್ಯಾತಿ ಹೊಂದಿದ್ದಾರಲ್ಲದೇ ಅದರಲ್ಲೂ ಮುಖ್ಯವಾಗಿ ಪಂದ್ಯದ ಅಂತಿಮ ಓವರ್‌ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವಲ್ಲಿ ಹೆಸರಾಗಿದ್ದಾರೆ. ಭಾರರತದ ಅಂತಾರಾಷ್ಟ್ರೀಯ ಟಿ29 ತಂಡದಲ್ಲಿ ಕಾರ್ತಿಕ ಅತ್ಯಂತ ಪ್ರಮುಖ ಆಟಗಾರರಾಗಿದ್ದಾರೆ. ಅವರ ಅಸಾಧಾರಣ ವೇಗ ಮತ್ತು ಸ್ವಿಂಗ್‌ಗಳು ಜಗತ್ತಿನ ಕೆಲವು ಅಗ್ರ ಬ್ಯಾಟ್ಸ್‌ಮನ್‌ಗಳಿಗೆ ಸತತವಾಗಿ ಸವಾಲೆಸೆಯುತ್ತಿವೆ.

ಈ ಸಂದರ್ಭದಲ್ಲಿ ದಿನೇಶ್ ಕಾರ್ತಿಕ ಅವರು ಮುಂಬರಲಿರುವ ಕ್ರಿಕೆಟ್ ಋತುವಿಗೆ ತಮ್ಮ ವೈಯಕ್ತಿಕ ಗುರಿಗಳ ಕುರಿತು ಒಳನೋಟಗಳನ್ನು ಹಂಚಿಕೊಂಡರು. ಅಲ್ಲದೇ ಪ್ರದರ್ಶನದ ಒತ್ತಡವನ್ನು ಯಶಸ್ವಿಯಾಗಿ ನಿಭಾಯಿಸುವುದಕ್ಕಾಗಿ ಅಶ್ಲೀಟ್‌ಗಳು ಬಳಸಿಕೊಳ್ಳುವ ಕಾರ್ಯತಂತ್ರಗಳನ್ನು ಕುರಿತು ತಿಳಿಸಿದರು.

ಚರ್ಚೆಯ ಗಮನಾರ್ಹವಾದ ಮುಖ್ಯಾಂಶ ಎಂದರೆ ಅದು ಪರಿಮ್ಯಾಚ್ ಸ್ಪೋರ್ಟ್ಸ್ನೊಂದಿಗೆ ಅವರ ಪಾಲುದಾರಿಕೆ ಕುರಿತ ಚರ್ಚೆಯಾಗಿತ್ತು. ಇದರಲ್ಲಿ ಕಾರ್ತಿಕ್ ಅವರ ಕ್ರೀಡಾ ಮಹತ್ವಾಕಾಂಕ್ಷೆಗಳಿಗೆ ಬ್ರಾಂಡ್‌ನ ಅಚಲ ಬೆಂಬಲ ಕುರಿತು ಅವರು ಒತ್ತಿ ಹೇಳಿದರು. ತಮ್ಮ ಪ್ರತ್ಯೇಕವಾದ ಸ್ಪೋರ್ಟ್ಸ್ ವೇರ್ ಶ್ರೇಣಿಯಲ್ಲಿನ ಪೊಲೊ ಶರ್ಟ್ ಅನ್ನು ಕಾರ್ತಿಕ ಹೆಮ್ಮೆಯಿಂದ ಧರಿಸಿದ್ದರು. ಈ ಶ್ರೇಣಿ ಪರಿಮ್ಯಾಚ್ ಸ್ಪೋರ್ಟ್ಸ್ ನೊಂದಿಗೆ ಜಂಟಿ ಯೋಜನೆಯಾಗಿದೆ. ಕಾರ್ತಿಕ್ ಅವರಿಗೆ ಕ್ರೀಡೆ ಕುರಿತು ಇರುವ ಅಚಲ ಭಾವೋತ್ಸಾಹ ಮತ್ತು ಅವರ ಅನನ್ಯ ಶೈಲಿಯನ್ನು ಇದು ಬಿಂಬಿಸುತ್ತದೆ.

“ಡೇರ್ ಟು ಬಿ ಎ ಚಾಂಪಿಯನ್” ಎಂಬ ಹೊಸ ಬ್ರಾಂಡ್ ಅಭಿಯಾನಕ್ಕೆ ಸಮರ್ಪಿತವಾದ ಇತ್ತೀಚಿನ ಪರಿಮ್ಯಾಚ್ ಕ್ರೀಡಾ ಬ್ರಾಂಡ್ ವಿಡಿಯೋಗಾಗಿ ಚಿತ್ರೀಕರಣದ ಸಂದರ್ಭದಲ್ಲಿನ ತಮ್ಮ ಅನುಭವವನ್ನು ಕೂಡ ಅವರು ಹಂಚಿಕೊಂಡರು.
ಪರಿಮ್ಯಾಚ್ ಸ್ಪೋರ್ಟ್ಸ್ ಕುರಿತು : ಜಗತ್ತಿನ ಆಗ್ರಮಾನ್ಯ ಅಶ್ಲೀಟ್‌ಗಳಿಂದ ಸ್ಪೂರ್ತಿ ಪಡೆದ ಅತ್ಯುನ್ನತ ಗುಣಮಟ್ಟದ ಕ್ರೀಡಾ ಉಡುಪುಗಳ ಬ್ರಾಂಡ್ ಪರಿಮ್ಯಾಚ್ ಸ್ಪೋರ್ಟ್ಸ್ ಆಗಿದೆ.

ಪ್ರತಿ ಧೈರ್ಯಶಾಲಿ ಆಥೀಟ್‌ಗಳು ತಮ್ಮ ಗೆಲುವಿನ ಮಾರ್ಗದಲ್ಲಿ ಸಜ್ಜಾಗಿ ಇರುವಂತೆ ಇವುಗಳನ್ನು ವಿನ್ಯಾಸಗೊಳಿಸಲಾಗಿರುತ್ತದೆ. ಮೂಲವಾಗಿ ಕ್ರೀಡೆ ಕುರಿತ ಭಾವೋತ್ಸಾಹದೊಂದಿಗೆ ಪರಿಮ್ಯಾಚ್ ಸ್ಪೋರ್ಟ್ಸ್ ಪ್ರೊ-ಆನ್-ಫೀಲ್ಡ್ ಕಿಟ್‌ಗಳನ್ನು ಫುಟ್ಬಾಲ್ ಮತ್ತು ಕ್ರಿಕೆಟ್ ತಂಡಗಳಿಗಾಗಿ ಸೃಷ್ಟಿಸುತ್ತಿದೆ. ಜೊತೆಗೆ ಫ್ಯಾನ್‌ಗಳಿಗೆ ಪ್ರತಿದಿನದ ವರ್ಕ್‌ ಔಟ್ ಉಡುಪುಗಳ ಸಮಗ್ರ ಶೈಲಿಯನ್ನು ಸಾದರಪಡಿಸುತ್ತಿದೆ.

ಇದರ ಪ್ರತ್ಯೇಕ ವಿನ್ಯಾಸದೊಂದಿಗೆ ಈ ಉಡುಪುಗಳು ಗುಂಪಿನಲ್ಲಿ ಪ್ರತ್ಯೇಕವಾದ ಸ್ಥಾನ ಕಂಡುಕೊಳ್ಳುತ್ತವೆ. ಜಗತ್ತಿನ ಅಗ್ರ ಅಥ್ಲೆಟ್‌ಗಳು ಮತ್ತು ಅವರು ಕ್ರೀಡಾಂಗಣದಲ್ಲಿ ಗಳಿಸಿದ ವಿಜಯಗಳಿಂದ ಈ ಶ್ರೇಣಿ ಸ್ಫೂರ್ತಿ ಪಡೆದಿದೆ. ಕ್ರೀಡೆ ಕುರಿತಂತೆ ಭಾರತದ ಪ್ರೀತಿಯನ್ನು ವಿಸ್ತರಿಸುವ ಮತ್ತು ಅದನ್ನು ಸಂಪೂರ್ಣ ನೂತನ ಮಟ್ಟಕ್ಕೆ ತರುವ ಮಹತ್ವಾಕಾಂಕ್ಷೆಯ ಗುರಿ ಸಾಧಿಸುವ ಮಾರ್ಗದಲ್ಲಿ ಪರಿಮ್ಯಾಚ್ ಸ್ಪೋರ್ಟ್ಸ್ ಸಾಗುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಪೆಪ್ಪರ್ ಇಂಟರಾಕ್ಟಿವ್ ಕಮ್ಯುನಿಕೇಷನ್ಸ್,

  • karishma@pepperinteractive.in। +91 98333 28499
    – gl janaki@pepperinteractive.in। +91 97414 10688

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ವಾಲಿಬಾಲ್ ಪಂದ್ಯಾವಳಿ | ಹೊಸದುರ್ಗ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರಥಮ ಸ್ಥಾನ

Published

on

ಸುದ್ದಿದಿನ, ಹೊನ್ನಾಳಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊನ್ನಾಳಿ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ ಇವರುಗಳ ಸಂಯುಕ್ತ ಆಶ್ರಯದಲ್ಲಿ 2023-24ನೇ ಸಾಲಿನ ದಾವಣಗೆರೆ ವಿಶ್ವವಿದ್ಯಾನಿಲಯದ ಅಂತರ್ ಕಾಲೇಜುಗಳ ಪುರುಷ ಮತ್ತು ಮಹಿಳೆಯರ ಪಂದ್ಯಾವಳಿಯನ್ನುಇದೇ 17-18 ರಂದು ಆಯೋಜಿಸಲಾಗಿತ್ತು.

ಈ ಪಂದ್ಯಾವಳಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊಸದುರ್ಗ ಪ್ರಥಮ ಸ್ಥಾನ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊನ್ನಾಳಿ ದ್ವಿತೀಯ ಸ್ಥಾನ, ಹೆಚ್ ಪಿ ಪಿ ಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚಳ್ಳಕೆರೆ ತೃತೀಯ ಸ್ಥಾನ, ಶ್ರೀ ಶಿವಲಿಂಗೇಶ್ವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚನ್ನಗಿರಿ ನಾಲ್ಕನೇ ಸ್ಥಾನವನ್ನು ಪಡೆದು ಕಾಲೇಜಿಗೆ ಮತ್ತು ವಿಶ್ವ ವಿದ್ಯಾನಿಲಯಕ್ಕೆ ಕೀರ್ತಿ ತಂದಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ ಜಿ ಧನಂಜಯ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು.

ಈ ಸಮಾರಂಭದಲ್ಲಿ ಪ್ರೊ. ಡಿ ಸಿ ಪಾಟೀಲ್, ಗ್ರಂಥಪಾಲಕರಾದ ಪ್ರೊ. ಎಂ ನಾಗರಾಜ ನಾಯ್ಕ ಕ್ರೀಡಾ ಆಯೋಜಕರಾದ ಡಾ. ಹರೀಶ ಪಿ ಎಸ್, ಬೆಳ್ಳುಳ್ಳಿ ಕೊಟ್ರೇಶ, ಹೆಚ್ ವಿ ಗೀತಾ, ಅಮೂಲ್ಯ ಆರ್ ಹೆಚ್, ಡಾ. ಮಂಜುನಾಥ ಗುರು ವಿ ಜಿ ದಾವಣಗೆರೆ ವಿಶ್ವವಿದ್ಯಾನಿಲಯ ಕ್ರೀಡಾಧಿಕಾರಿಗಳಾದ ಡಾ. ವೀರಪ್ಪ ಬಿ ಹೆಚ್ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ಡಾ. ಚಂದ್ರಶೇಖರ್ ಸಿ, ಡಾ. ರೇಖಾ ಎಂ ಆರ್, ಗಿರೀಶ್ ಎಂ ಎಸ್, ಬಾಲಚಂದ್ರಣ್ಣ ಬಿ. ಆರ್. ಕಲ್ಲೇಶಪ್ಪ ಹರೀಶ್ ಕೆ ಎಂ , ತೀರ್ಪುಗಾರರಾದ ಆಶಿಕ್ ಮತ್ತು ಕಲೀಲ್, ಇಬ್ರಾಹಿಂ ಜಾಫರ್ ಮುಖ್ಯ ಮುಖ್ಯ ತೀರ್ಪುಗಾರರಾದ ಪರಮೇಶ್ವರಪ್ಪ ಮತ್ತು ನಮ್ಮ ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending