ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು
ಬೆಳಗಿನ ಪ್ರಮುಖ ಸುದ್ದಿಗಳು
- ಕರ್ನಾಟಕ ( Karnataka) ಸಂಪದ್ಭರಿತ ರಾಜ್ಯವಾಗಿದ್ದು, ಹತ್ತು ಕೃಷಿ ಹವಾಮಾನ ವಲಯಗಳನ್ನು ಹೊಂದಿದೆ. ಇಲ್ಲಿನ ಜನರು ಹೆಚ್ಚು ಉದ್ಯಮಶೀಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಬೆಂಗಳೂರಿನಲ್ಲಿ ನಿನ್ನೆ ತಿಳಿಸಿದ್ದಾರೆ.ಆಸ್ಟ್ರೇಲಿಯಾ ನ್ಯೂ ಸೌತ್ ವೇಲ್ಸ್ ಪ್ರೀಮಿಯರ್ ಡೊಮಿನಿಕ್ ಪೆರೊಟ್ವಿಟ್ ಅವರ ನೇತೃತ್ವದ ನಿಯೋಗದೊಂದಿಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.
- ರಾಷ್ಟ್ರಮಟ್ಟದ ಸ್ವಚ್ಛ ವಿದ್ಯಾಲಯ ಪುರಸ್ಕಾರಕ್ಕೆ ರಾಜ್ಯದ ಒಟ್ಟು 26 ಶಾಲೆಗಳು ಆಯ್ಕೆಯಾಗಿವೆ. ಈ ಶಾಲೆಗಳಿಗೆ ಇಂದು ಮಧ್ಯಾಹ್ನ 12.30ಕ್ಕೆ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಪ್ರಶಸ್ತಿ ಪ್ರಮಾಣ ಪತ್ರ ವಿತರಣಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕರು ತಿಳಿಸಿದ್ದಾರೆ.
- ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಜಲಸಂಪನ್ಮೂಲ ಇಲಾಖೆ ಸಚಿವರು ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸುವುದಾಗಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣಸ್ವಾಮಿ ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದ್ದಾರೆ.
- ದೇಶದಲ್ಲಿ ಕಳೆದ 7 ವರ್ಷಗಳ ಅವಧಿಯಲ್ಲಿ 1.5ಲಕ್ಷ ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಚಿಕ್ಕಬಳ್ಳಾಪುರ ತಾಲೂಕಿನ ಅಂದಾರಲಹಳ್ಳಿಯಲ್ಲಿ ನಿನ್ನೆ ತಿಳಿಸಿದ್ದಾರೆ. ವಿದ್ಯುತ್ ಉತ್ಪಾದನೆಯಲ್ಲಿ ದೇಶ ಸ್ವಾವಲಂಬನೆ ಸಾಧಿಸುವಲ್ಲಿ ಯಶಸ್ವಿಯಾಗಿದೆ ಅವರು ತಿಳಿಸಿದ್ದಾರೆ.
- ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 13 ರಿಂದ 15 ರ ವರೆಗೆ ಹಮ್ಮಿಕೊಂಡಿರುವ ’ಹರ್ ಘರ್ ತಿರಂಗಾ’ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆ, ತಾಲೂಕು ಮತ್ತು ಗ್ರಾಮ ಪಂಚಾಯತ್ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
- ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಾಷ್ಟ್ರದಲ್ಲಿ ವಿದ್ಯುತ್ ಸ್ವಾವಲಂಬನೆ ಸಾಧಿಸಲು ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಕೆ.ಜಿ. ಬೋಪಯ್ಯ ಮಡಿಕೇರಿಯಲ್ಲಿ ನಿನ್ನೆ ಹೇಳಿದ್ದಾರೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ನಡೆದ ಉಜ್ವಲ ಭಾರತ – ಉಜ್ವಲ ಭವಿಷ್ಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಪ್ರಮಾಣಪತ್ರ ವಿತರಿಸಿದ ಅವರು ಮಾತನಾಡಿದರು.
- ದೇಶದಲ್ಲಿ ಮೊದಲ ಬಾರಿಗೆ ಆಯೋಜಿಸಿರುವ ಅಖಿಲ ಭಾರತೀಯ ಕಾನೂನು ಸೇವಾ ಪ್ರಾಧಿಕಾರದ ಪ್ರಥಮ ಸಭೆಯನ್ನುದ್ದೇಶಿಸಿ ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನಾ ಭಾಷಣ ಮಾಡಲಿದ್ದಾರೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಇದೇ ಮೊದಲ ಬಾರಿಗೆ ರಾಷ್ಟ್ರ ಮಟ್ಟದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಭೆ ಆಯೋಜಿಸಲಾಗಿದ್ದು, ಈ ಸಭೆಯಲ್ಲಿ ಏಕರೂಪತೆ ಮತ್ತು ಸರಿ ಹೊಂದಿಸುವಿಕೆ ಕುರಿತು ಚರ್ಚೆ ನಡೆಯಲಿದೆ.
- ರಾಜ್ಯದ ಗ್ರಾಮೀಣ ಪ್ರದೇಶಗಳು ಸುಧಾರಣೆ ಕಾಣುತ್ತಿದ್ದು, ರಸ್ತೆ ಸಂಪರ್ಕ ಉತ್ತಮಗೊಳ್ಳುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ. ಶಾಲೆ, ಆರೋಗ್ಯ, ಡಿಜಿಟಲ್ ಸಂಪರ್ಕಗಳನ್ನೂ ಇನ್ನೂ ಹೆಚ್ಚಿನ ರೀತಿಯಲ್ಲಿ ಸುಧಾರಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.
- ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಕಡಬ ಹೋಬಳಿಗಳಲ್ಲಿ ಆಗಸ್ಟ್ 6ರ ರಾತ್ರಿ 12 ಗಂಟೆಯ ತನಕ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ಗುಂಪು ಸೇರುವುದು, ಸಭೆ-ಸಮಾರಂಭ ನಡೆಸಲು ಯಾವುದೇ ಅನುಮತಿ ಇರುವುದಿಲ್ಲ, ಶಾಂತಿ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
- ಇದನ್ನೂ ಓದಿ | ಬಿಜೆಪಿ ಕಾರ್ಯಕರ್ತರಿಗೆ ಪ್ರಬುದ್ಧತೆ ಕಡಿಮೆ ; ಅವರನ್ನು ಮನೆಗೆ ಕಳುಹಿಸುವುದು ಐದು ನಿಮಿಷದ ಕೆಲಸ : ಕೆ.ಎಸ್ ಈಶ್ವರಪ್ಪ
- ಒಂದು ರಾಷ್ಟ್ರ ಒಂದು ಜಾಲ ಯೋಜನೆಯಡಿ ದೇಶದಲ್ಲಿ 1.63 ಲಕ್ಷ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಿ, ಪ್ರತಿ ಕುಟುಂಬಕ್ಕೂ ಗುಣಮಟ್ಟದ ವಿದ್ಯುತ್ ಸಂಪರ್ಕ ಕಲ್ಪಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ರಾಜ್ಯ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ ಮಡಿಕೇರಿಯಲ್ಲಿ ನಿನ್ನೆ ಹೇಳಿದ್ದಾರೆ. ಜಲವಿದ್ಯುತ್, ಕಿರು ವಿದ್ಯುತ್, ಸೌರಶಕ್ತಿ ಮತ್ತು ನವೀಕರಿಸಬಹುದಾದ ಇಂಧನಕ್ಕೂ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
- ಕಾಮನ್ವೆಲ್ತ್ ಕ್ರೀಡಾಕೂಟದ ಆಗಸ್ಟ್ 8ರ ಸಮಾರೋಪ ಸಮಾರಂಭದ ವರೆಗೂ ಎಲ್ಲಾ ಪಂದ್ಯಗಳನ್ನು ಡಿಡಿ ಸ್ಪೋರ್ಟ್ಸ್, ದೂರದರ್ಶನ ಸ್ಪೋರ್ಟ್ಸ್ ನೇರ ಪ್ರಸಾರ ಮಾಡಲಿದೆ. ಇಂಗ್ಲೆಂಡ್ನ ಬರ್ಮಿಂಗ್ಹ್ಯಾಮ್ನಲ್ಲಿ ಕ್ರೀಡಾಕೂಟ ಪ್ರಗತಿಯಲ್ಲಿದ್ದು, 20 ವಿವಿಧ ಕ್ರೀಡಾ ವಿಭಾಗದ ಪಂದ್ಯಾವಳಿಗಳನ್ನು ಡಿಡಿ ಸ್ಪೋರ್ಟ್ಸ್ ಮತ್ತು ಡಿಡಿ ಫ್ರೀ ಡಿಶ್ ನಿನ್ನೆಯಿಂದಲೇ ನೇರ ಪ್ರಸಾರ ಮಾಡುತ್ತಿವೆ.
- ಟ್ರಿನಿಡಾಡ್ನ ತರೌಬಾದಲ್ಲಿ ಕಳೆದ ರಾತ್ರಿ ನಡೆದ ಮೊದಲ ಟಿ20 ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ 68 ರನ್ ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿದೆ. ಇದರೊಂದಿಗೆ ಐದು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯಲ್ಲಿ ರೋಹಿತ್ ಶರ್ಮ ಸಾರಥ್ಯದ ಭಾರತ 1-0 ಅಂತರದ ಮುನ್ನಡೆ ಗಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಕಲ್ಲು-ಮುಳ್ಳಿನ ದಾರಿಯಲ್ಲೂ ನಿಲ್ಲದ ಹೆಜ್ಜೆ; ತಾಯಿಯ ಛಲಕ್ಕೆ ಮ್ಯಾರಥಾನ್ನಲ್ಲಿ ಪ್ರಥಮ ಸ್ಥಾನ
ಸುದ್ದಿದಿನ,ಮುಂಬಯಿ: ಬದುಕಿನಲ್ಲಿ ಎದುರಾಗುವ ಸಂಕಷ್ಟಗಳು ಕೆಲವೊಮ್ಮೆ ಮನುಷ್ಯನನ್ನು ಕುಗ್ಗಿಸುತ್ತವೆ. ಆದರೆ ತಾಯಿಯೊಬ್ಬಳಿಗೆ ಮಕ್ಕಳ ಭವಿಷ್ಯದ ಕನಸು ದೊಡ್ಡದಾಗಿದ್ದರೆ, ಆಕೆಯ ಮುಂದೆ ನೋವು, ಬಡತನ, ಅಡೆತಡೆ ಯಾವುದೂ ನಿಲ್ಲುವುದಿಲ್ಲ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಂಬಾಜೋಗೈನ 47 ವರ್ಷದ ರಮಾಬಾಯಿ ರಣವೀರ್ ಅವರ ಕಥೆ ಇದಕ್ಕೆ ಜೀವಂತ ಸಾಕ್ಷಿಯಾಗಿದೆ. ಪತಿಯ ಅಕಾಲಿಕ ಅಗಲಿಕೆಯ ಬಳಿಕ ಇಬ್ಬರು ಹೆಣ್ಣುಮಕ್ಕಳ ಭವಿಷ್ಯಕ್ಕಾಗಿ ಹೋರಾಟ ನಡೆಸುತ್ತಿರುವ ರಮಾಬಾಯಿ, ಬರಿಗಾಲಿನಲ್ಲಿ ಮ್ಯಾರಥಾನ್ ಓಡಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
http://Visit : www.suddidina.com
ಕೂಲಿ ಕೆಲಸದಿಂದ ಅಡುಗೆ ಕೆಲಸದವರೆಗೆ
ಮುಂಬಯಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಪತಿಯನ್ನು ಕಳೆದುಕೊಂಡ ಬಳಿಕ ರಮಾಬಾಯಿ ಕುಟುಂಬದ ಜವಾಬ್ದಾರಿಯನ್ನು ಸಂಪೂರ್ಣವಾಗಿ ತಮ್ಮ ಹೆಗಲ ಮೇಲೆ ಹೊತ್ತರು. ಗದ್ದೆಗಳಲ್ಲಿ ಕೂಲಿ ಕೆಲಸ ಮಾಡುತ್ತಾ ಮಕ್ಕಳನ್ನು ಬೆಳೆಸಿದ ಅವರು, ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಅಂಬಾಜೋಗೈನ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವೊಂದರಲ್ಲಿ ಅಡುಗೆ ಕೆಲಸಕ್ಕೂ ಸೇರಿದರು.
ದಿನವಿಡೀ ಅಡುಗೆ ಮಾಡುವುದು, ಪಾತ್ರೆ ತೊಳೆಯುವುದು ಸೇರಿದಂತೆ ದುಡಿಮೆಯ ನಡುವೆಯೂ ಅವರ ಮನಸ್ಸಿನಲ್ಲಿದ್ದದ್ದು ಒಂದೇ ಕನಸು—ತಮ್ಮ ಇಬ್ಬರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಸ್ವಾವಲಂಬಿಗಳನ್ನಾಗಿ ಮಾಡುವುದು.
₹3 ಸಾವಿರಕ್ಕಾಗಿ ಆರಂಭವಾದ ಓಟ
ಮಕ್ಕಳ ವಿದ್ಯಾಭ್ಯಾಸದ ಅಗತ್ಯಕ್ಕೆ ಪುಸ್ತಕಗಳನ್ನು ಖರೀದಿಸಲು ಹಣ ಬೇಕಾಗಿತ್ತು. ಇದೇ ಸಂದರ್ಭದಲ್ಲಿ ‘ಅಮೃತ್ ದೌಡ್’ ಮ್ಯಾರಥಾನ್ ಕುರಿತು ಅವರಿಗೆ ಮಾಹಿತಿ ದೊರೆಯಿತು. ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವಾಗಿ ₹3 ಸಾವಿರ ನೀಡಲಾಗುತ್ತದೆ ಎಂಬುದು ತಿಳಿದ ತಕ್ಷಣ ರಮಾಬಾಯಿ ಓಟದಲ್ಲಿ ಭಾಗವಹಿಸಲು ನಿರ್ಧರಿಸಿದರು.
ಯುವಕರು ಟ್ರ್ಯಾಕ್ಸೂಟ್ ಮತ್ತು ಶೂ ಧರಿಸಿ ಓಟಕ್ಕೆ ಸಜ್ಜಾಗಿದ್ದರೆ, ರಮಾಬಾಯಿ ಮಾತ್ರ ಸಾಮಾನ್ಯ ಸೀರೆಯಲ್ಲೇ ಸ್ಪರ್ಧೆಯ ಕಣಕ್ಕಿಳಿದರು. ಆರಂಭದಲ್ಲಿ ಕಾಲಿಗೆ ಚಪ್ಪಲಿ ಇದ್ದರೂ ಓಟದ ವೇಗ ಹೆಚ್ಚಾದಂತೆ ಅದು ಜಾರಲಾರಂಭಿಸಿತು.
ಚಪ್ಪಲಿ ಬಿಟ್ಟು ಬರಿಗಾಲಿನಲ್ಲಿ ಓಟ
ಗುರಿ ಮುಟ್ಟಬೇಕೆಂಬ ಛಲದ ಮುಂದೆ ಚಪ್ಪಲಿ ಅಡ್ಡಿಯಾಗಬಾರದು ಎಂದು ನಿರ್ಧರಿಸಿದ ರಮಾಬಾಯಿ, ಚಪ್ಪಲಿಯನ್ನು ಕೈಗೆತ್ತಿಕೊಂಡು ಬರಿಗಾಲಿನಲ್ಲೇ ಓಡತೊಡಗಿದರು. ರಸ್ತೆಯ ಕಲ್ಲು-ಮುಳ್ಳುಗಳು ಕಾಲಿಗೆ ಚುಚ್ಚಿದರೂ ಅವರು ಓಟ ನಿಲ್ಲಿಸಲಿಲ್ಲ.
ಸೀರೆಯ ಅಂಚನ್ನು ಸರಿಪಡಿಸಿಕೊಳ್ಳುತ್ತಾ, ನೋವನ್ನು ಮರೆತು ಗುರಿಯತ್ತ ಮುನ್ನುಗ್ಗಿದ ಅವರು ಎಲ್ಲ ಸ್ಪರ್ಧಿಗಳನ್ನು ಹಿಂದಿಕ್ಕಿ ಮೊದಲಿಗರಾಗಿ ಫಿನಿಶ್ ಲೈನ್ ತಲುಪಿದರು. ಈ ಗೆಲುವಿನ ಹಿಂದೆ ಬಹುಮಾನದ ಹಣಕ್ಕಿಂತಲೂ ದೊಡ್ಡದಾದ ಒಂದು ಕನಸು—ಮಕ್ಕಳ ಭವಿಷ್ಯ—ಇತ್ತು.
ತಾಯಿಯ ಹಾದಿಯಲ್ಲೇ ಮಗಳ ಗೆಲುವು
ಈ ಮ್ಯಾರಥಾನ್ನಲ್ಲಿ ರಮಾಬಾಯಿಯ ಮಗಳು ಪೂಜಾ ಕೂಡ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುವುದು ವಿಶೇಷ. ತಾಯಿಯ ಪರಿಶ್ರಮದಿಂದ ಪ್ರೇರಣೆ ಪಡೆದ ಪೂಜಾ, ಭವಿಷ್ಯದಲ್ಲಿ ಪೊಲೀಸ್ ಅಧಿಕಾರಿಯಾಗುವ ಸಂಕಲ್ಪ ಮಾಡಿದ್ದಾರೆ. ಮತ್ತೊಬ್ಬ ಮಗಳು ಬ್ಯಾಂಕಿಂಗ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾರೆ.
ಪೂಜಾಳ ಪರಿಶ್ರಮ ಮತ್ತು ರಮಾಬಾಯಿಯ ತ್ಯಾಗವನ್ನು ಗಮನಿಸಿದ ತರಬೇತಿ ಅಕಾಡೆಮಿಯ ನಿರ್ದೇಶಕರು ಪೂಜಾಳ ಶಿಕ್ಷಣ ಶುಲ್ಕವನ್ನು ಸಂಪೂರ್ಣ ಮನ್ನಾ ಮಾಡಿದ್ದಾರೆ. ಹೀಗಾಗಿ ಒಂದು ಮ್ಯಾರಥಾನ್ ಗೆಲುವು ಕೇವಲ ₹3 ಸಾವಿರದ ಬಹುಮಾನಕ್ಕೆ ಸೀಮಿತವಾಗದೆ, ಕುಟುಂಬದ ಭವಿಷ್ಯಕ್ಕೆ ಹೊಸ ಆಶಾಕಿರಣವನ್ನೇ ಮೂಡಿಸಿದೆ.

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್ಎಚ್ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್ನ ನಾಯಕನಾಗಿದ್ದ ಎನ್.ಆರ್.ಎಚ್.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್, 2ನೇ ಮೇನ್ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್ಎಚ್ ರಮೇಶ ನಿಧನಕ್ಕೆ ಎಫ್ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 hours agoಬೆಂಗಳೂರು ಇ-ಕಾಮರ್ಸ್ ಡಾರ್ಕ್ ಸ್ಟೋರ್ಗಳಲ್ಲಿ ಅವಧಿ ಮೀರಿದ ಆಹಾರ, ಔಷಧ ಪತ್ತೆ
-
ದಿನದ ಸುದ್ದಿ3 hours agoಮಧ್ಯಪ್ರಾಚ್ಯದಲ್ಲಿ ಏಳು ತಿಂಗಳಿನಿಂದ ಯುದ್ಧದ ಕಾರ್ಮೋಡ – ಇರಾನ್–ಅಮೆರಿಕ ಸಂಘರ್ಷ ತೀವ್ರ
-
ದಿನದ ಸುದ್ದಿ3 hours agoಸ್ಕ್ರೀನ್ ಬೆಳಕು, ಸಾಮಾಜಿಕ ಜಾಲತಾಣ – ನಿದ್ರೆಗೆ ಅಡ್ಡಿ, ಆರೋಗ್ಯಕ್ಕೆ ಹಾನಿ
-
ದಿನದ ಸುದ್ದಿ3 hours agoGold Rate Fall: 24 ಕ್ಯಾರೆಟ್ ಚಿನ್ನದ ದರ ₹104 ಇಳಿಕೆ, ಬೆಳ್ಳಿ ಗ್ರಾಂಗೆ ₹250 ಸ್ಥಿರ
-
ದಿನದ ಸುದ್ದಿ3 hours agoದಾವಣಗೆರೆ ನಗರಕ್ಕೆ ರಾಜ್ಯಮಟ್ಟದ “ಸ್ವಚ್ಛ ವಾರ್ಡ್ ವಾಯು ಸರ್ವೇಕ್ಷಣೆ 2025” ಪ್ರಶಸ್ತಿಯ ಗರಿ: ರೂ 25.00 ಲಕ್ಷ ನಗದು ಬಹುಮಾನ
-
ದಿನದ ಸುದ್ದಿ3 hours agoKPSCExam: ಬೆಂಗಳೂರು ಸೇರಿದಂತೆ ಜಿಲ್ಲೆಗಳಲ್ಲಿ ವೈದ್ಯರ ಕೊರತೆ – ತಕ್ಷಣ ನೇಮಕಾತಿ ಅಗತ್ಯ
-
ದಿನದ ಸುದ್ದಿ3 hours agoಬೆಂಗಳೂರು ಸೆಪ್ಟೆಂಬರ್ನಲ್ಲಿ 31.9 ಡಿ.ಸೆ. ದಾಖಲೆ – ಹವಾಮಾನ ಇಲಾಖೆ ಎಚ್ಚರಿಕೆ
-
ದಿನದ ಸುದ್ದಿ33 minutes agoEV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ



