ದಿನದ ಸುದ್ದಿ
ಸಹ್ಯಾದ್ರಿ ಕಾಲೇಜಿನ ಕ್ಯಾಂಪಸ್ ‘ಸಾಯಿ ಖೇಲೋ ಇಂಡಿಯಾ’ ಸಂಸ್ಥೆಗೆ ಏಕೆ..? ಕೊಡಬಾರದು..?
- ಡಾ. ಸಣ್ಣರಾಮ
ವಿಶ್ರಾಂತ ಪ್ರಾಧ್ಯಾಪಕರು
ಹಿರಿಯ ವಿದ್ಯಾರ್ಥಿ. ಸಹ್ಯಾದ್ರಿ ಕಾಲೇಜ್ ಶಿವಮೊಗ್ಗ
1. ಸಹ್ಯಾದ್ರಿ ಕಾಲೇಜು 1941ರಲ್ಲಿ ಶ್ರೀ ಜಯ ಚಾಮರಾಜೇಂದ್ರ ಒಡೆಯರ ಅಮೃತ ಹಸ್ತದಿಂದ ಉದ್ಘಾಟನೆಯಾಗಿ ಶೈಕ್ಷಣಿಕ ಉದ್ದೇಶಕ್ಕೆ ಬಳಸಿಕೊಳ್ಳಲು ಸುಮಾರು 100ಎಕರೆ ಭೂಮಿಯನ್ನು ದಾನಿಗಳಿಂದ ಪಡೆದು ಕೊಡಮಾಡಲ್ಪಟ್ಟಿದೆ.
ಹಾಗಾದರೆ ಸ್ಪೋರ್ಟ್ಸ್ ಶಿಕ್ಷಣವಲ್ಲವೇ?
ಖಂಡಿತ ಅಲ್ಲ. ಎಲ್ಲ ಕಾಲೇಜುಗಳಲ್ಲಿ NCC, NSS, ಹಾಗೆಯೇ ಸ್ಪೋರ್ಟ್ಸ್ ಕೂಡ ಒಂದು ಭಾಗ. ಅದೇ ಮುಖ್ಯವಲ್ಲ.
ಸಾಹಿ ಖೇಲೋ ಇಂಡಿಯಾದವರು ಅಂತರರಾಷ್ಟ್ರ ಮಟ್ಟದ ತರಬೇತಿ ಕೊಡುತ್ತಾರೆ. ಆ ಮಟ್ಟದ ಶಿಕ್ಷಣ ಮತ್ತು ತರಬೇತಿ ಕೊಡುವುದಕ್ಕೆ ವಿಶ್ವವಿದ್ಯಾನಿಲಯದಲ್ಲಿ Bped, Mped ಶಿಕ್ಷಣವನ್ನು ಕೊಡಲಾಗುತ್ತದೆ. ಅತ್ಯತ್ತಮ ಶಿಕ್ಷಕರು ವಿಶ್ವವಿದ್ಯಾನಿಲಯದಲ್ಲೇ ಇದ್ದಾರೆ.
2. ಸಹ್ಯಾದ್ರಿ ಕಾಲೇಜಿಗೆ ಭವ್ಯವಾದ ಪರಂಪರೆ ಇದೆ. ಯು. ಆರ್ ಅನಂತಮೂರ್ತಿ, ಜಿ.ಎಸ್. ಶಿವರುದ್ರಪ್ಪ , ಪಿ ಲಂಕೇಶ್, ಕಲಿತು ಕಲಿಸಿದ ಕಾಲೇಜು. ಕುವೆಂಪು ಅವರಿಂದ ನಾಮಂಕಿತ ಪಡೆದ ಕಾಲೇಜು. ಅಲ್ಲದೆ ಹಲವಾರು ಐ ಎ ಎಸ್, ಐ ಪಿ ಎಸ್, ಅಧ್ಯಾಪಕರು, ಪ್ರಾಧ್ಯಾಪಕರನ್ನು ರಾಜ್ಯಕ್ಕೆ ರಾಷ್ಟ್ರಕ್ಕೆ ಕೊಟ್ಟ ಕಾಲೇಜು.
3. ಡಿಮ್ಡ ವಿಶ್ವವಿದ್ಯಾನಿಲಯವಾಗುವ ಎಲ್ಲ ಅರ್ಹತೆಯನ್ನು ಹೊಂದಿದೆ. ಹಾಗಾದರೆ ಹಲವಾರು ಸ್ವತಂತ್ರ ವಿಭಾಗಗಳು ಸ್ಥಾಪಿಸಬೇಕಾಗುತ್ತದೆ. ಆಗ ಹಾಲಿ ಇರುವ ಜಾಗ ಸಾಲದಾಗುತ್ತದೆ.
4. ರಾಷ್ಟ್ರ ಮಟ್ಟದ ಸಂಶೋಧನಾ ಕೇಂದ್ರಗಳು, ವೈಜ್ಞಾನಿಕ ಕೇಂದ್ರಗಳು ಸ್ಥಾಪನೆಯಾಗಬಹುದು.
5. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕೆಯ ಜ್ಞಾನಗಂಗೋತ್ರಿಯಾಗಿದೆ. ಹಾಲಿ 6500 ವಿದ್ಯಾರ್ಥಿಗಳು ಕಲಿಯುತ್ತಿದ್ದು ಇಲ್ಲಿಯ ಪರಿಸರವೇ ವಿದ್ಯಾರ್ಥಿಗಳಿಗೆ ಆಕರ್ಷಣೀಯವಾಗಿದೆ.
6. ತರಬೇತಿ ನಡೆಯುವುದು 4 ತಿಂಗಳು ಮಾತ್ರ ಉಳಿದಂತೆ ಕಾಲೇಜಿಗೆ ಉಪಯುಕ್ತ
ಸೆಮಿಸ್ಟರ್ ವ್ಯವಸ್ಥೆಯಲ್ಲಿ ಕಾಲೇಜು ನಡೆಯುವುದು ನಾಲ್ಕು ತಿಂಗಳು ಉಳಿದಂತೆ ಎರಡು ತಿಂಗಳು ಪರೀಕ್ಷೆ ಇರುತ್ತದೆ. ವಿದ್ಯಾರ್ಥಿಗಳ ಬಿಡುವು ಸಿಗುವುದೇ ಎರಡು ತಿಂಗಳು ಆದರೆ ಅದೇ ಸಂದರ್ಭದಲ್ಲಿ ಅಂತರಾಷ್ಟ್ರಮಟ್ಟಕ್ಕೆ ತರಬೇತಿ ನಡೆದರೆ ಕಾಲೇಜಿನವರೆಗೆ ಅವಕಾಶ ಸಿಗುವುದು ಕನಸಿನ ಮಾತು.
7. ಸದ್ಯ ಕ್ರೀಡಾ ಹಬ್ ನಲ್ಲಿ ಕೇವಲ 14 ಕ್ರೀಡೆಗಳು ಮಾತ್ರ ತರಬೇತಿ
ಹೌದು ಮುಂದೆ ಇನ್ನೂ ಹೆಚ್ಚಿನ ಕ್ರೀಡೆಗಳಿಗೆ ತರಬೇತಿ ನಡೆಯಬಹುದು. ಆಗ ಕ್ರೀಡೆಗಾಗಿ ವಿಸ್ತರಿಸಬೇಕಾದ ಸಂದರ್ಭ ಬಂದೇ ಬರುತ್ತದೆ. ಆಗ ಎತ್ತಂಗಡಿಯಾಗುವುದು ಸಹ್ಯಾದ್ರಿ ಕಾಲೇಜು.
8. ಮ್ಯಾಚ್ ಫ್ಯಾಕ್ಟರಿಯ ಎಂಟು ಎಕರೆ ಜಾಗ ಕಾಲೇಜಿಗೆ ಕೊಟ್ಟು ಅಲ್ಲಿಗೆ ವಿದ್ಯಾರ್ಥಿ ಮತ್ತು ಅಧ್ಯಾಪಕರು ಹೋಗಿಬರಲು ಮೇಲ್ಸೇತುವೆ ನಿರ್ಮಾಣ ಮಾಡಿ ಕೊಡಲಾಗುವುದು.ಇದು ಸಹ ಕನಸಿನ ಮಾತು ಆ ಜಾಗ ಕೋರ್ಟಿನಲ್ಲಿದೆ. ಅರಣ್ಯ ಇಲಾಖೆಯ ಹಕ್ಕಿನಲ್ಲಿದೆ. ಇದನ್ನು ಬಿಡಿಸಿಕೊಡುವುದು ಕಷ್ಟಕರವಾದ ಮಾತು. ಅಲ್ಲದೆ ಸೇತುವೆ ಮೇಲೆ ಹತ್ತಿ ಇಳಿಯಲಾಗದ ಅಧ್ಯಾಪಕರು, ವಿದ್ಯಾರ್ಥಿಗಳು ವಾಹನದಟ್ಟಣೆಯಲ್ಲಿ ರಸ್ತೆ ದಾಟುವಾಗ ಅಪಘಾತಗಳು ಸಂಭವಿಸುತ್ತದೆ.
ಇಂತಹ ನೂರಾರು ಕಾರಣಗಳನ್ನು ಕೊಡಬಹುದು. ‘‘ಸಾಯಿ ಖೇಲೊ ಇಂಡಿಯಾ ಹಬ್ ’’ ಸ್ಥಾಪನೆಗೆ ನಾವುಗಳು ವಿರೋಧಿಗಳಲ್ಲ. ಅದು ಪ್ರತ್ಯೇಕ ಸ್ಥಳದಲ್ಲಿ ತಲೆಯೆತ್ತಿ ಶಿವಮೊಗ್ಗದಲ್ಲಿ ವಿಜೃಂಭಿಸಬೇಕು. ಸಹ್ಯಾದ್ರಿ ಕಾಲೇಜಿನ ಕ್ಯಾಂಪಸ್ಸಿನ ಉಸಿರುಗಟ್ಟಿದ ಸ್ಥಳದಲ್ಲಿ ಅಲ್ಲ. ಜಿಲ್ಲಾಡಳಿತ, ವಿಶ್ವವಿದ್ಯಾನಿಲಯ ಆಡಳಿತ, ಮಾನ್ಯ ಸಂಸದರು ಈ ನಿಟ್ಟಿನಲ್ಲಿ ಯೋಚಿಸಬೇಕೆಂದು ವಿನಂತಿ.
ಸುದ್ದಿದಿನ.ಕಾಂ| ವಾಟ್ಸಾಪ್ | 9980346243

ದಿನದ ಸುದ್ದಿ
ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ
ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್ಡಿಆರ್ಎಫ್, ಎಸ್ಡಿಆರ್ಎಫ್ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!
ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;
ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.
ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.
ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ3 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ2 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ದಿನದ ಸುದ್ದಿ2 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ3 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ

