Connect with us

ದಿನದ ಸುದ್ದಿ

‘ಶರಾವತಿ ಉಳಿಸಿ’ ಸಮಾಲೋಚನಾ ಸಭೆಯ ಮುಖ್ಯಾಂಶಗಳು ಹಾಗೂ ನಿರ್ಣಯಗಳು

Published

on

ಸುದ್ದಿದಿನ, ಸಾಗರ : ಜೂನ್ 22 ರಂದು ಸಾಗರದ ನೌಕರರ ಭವನದಲ್ಲಿ ನಡೆದ “ಶರಾವತಿ ಉಳಿಸಿ” ಸಮಾಲೋಚನಾ ಸಭೆಯಲ್ಲಿ ಹಿರಿಯ ಸಾಹಿತಿಗಳಾದ ನಾ ಡಿಸೋಜಾ, ಹಿರಿಯ ಚಿಂತಕ ಪ್ರಸನ್ನ ಹೆಗ್ಗೋಡು, ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ, ಲೇಖಕ ವಿಲಿಂ, ಕಲಾವಿದ ಪರಿಸರವಾದಿ ಅರುಣ್ ಕುಮಾರ್ ಸಾರಾ, ಕೆ ಜಿ ಕೃಷ್ಣ ಮೂರ್ತಿ, ತುಮರಿ, ರಾಜಕೀಯ ಮುಖಂಡರಾದ ಬಿ ಆರ್ ಜಯಂತ್, ಕಲಗೋಡು ರತ್ನಾಕರ, ಮೇಘರಾಜ್ ಟಿಡಿ, ಮಲ್ಲಿಕಾರ್ಜುನ ಹಕ್ರೆ, ರವಿ ಕುಗ್ವೆ, ಪ್ರಭಾವತಿ ಚಂದ್ರಕಾಂತ್, ಸಾಮಾಜಿಕ ಕಾರ್ಯಕರ್ತರಾದ ಶಿವಾನಂದ ಕುಗ್ವೆ, ಬಿ ಎಚ್ ರಾಘವೇಂದ್ರ, ವಾಮದೇವ ಗೌಡ್ರು, ಹುಚ್ರಾಯಪ್ಪ ಶಿಕಾರಿಪುರ ಸೇರಿದಂತೆ ಸುಮಾರು 150 ಪ್ರತಿನಿಧಿಗಳು ಭಾಗವಹಿಸಿದ್ದರು.

ಕರೂರು ಗ್ರಾಮ ಪಂಚಾಯತಿ ಸತ್ಯನಾರಾಯಣ ಜಿ ಟಿ ಎಲ್ಲರನ್ನೂ ಸ್ವಾಗತಿಸಿದರು.‌ಪ್ರಾಸ್ತಸವಿಕವಾಗಿ ಮಾತನಾಡಿದ ಎಚ್ ಬಿ ರಾಘವೇಂದ್ರ ಸಭೆಯ ಉದ್ದೇಶವನ್ನು ಸಂಕ್ಷಿಪ್ತವಾಗಿ ತಿಳಿಸಿದರು.

ಶರಾವತಿ ನದಿಯಿಂದ ಬೆಂಗಳೂರಿಗೆ ನೀರೆತ್ತುವ ಯೋಜನೆಯ ಹಿನ್ನೆಲೆ, ಸಮಸ್ಯೆ ಗಳನ್ನು ಪತ್ರಕರ್ತ ಶಶಿ ಸಂಪಳ್ಳಿ ವಿವರಿಸಿದರು. ಈ ಯೋಜನೆಯ ಪರಿಸರದ ಆಯಾಮವನ್ನು ಪರಿಸರ ಹೋರಾಟಗಾರ ಅಖಿಲೇಶ್ ಚಿಪ್ಳಿ ತಿಳಿಸಿದರು. ಕೈಗೊಳ್ಳಬೇಕಾದ ಹೋರಾಟದ ಸ್ವರೂಪ, ಎಲ್ಲರನ್ನೂ ಒಳಗೊಂಡು ಜನಾಂದೋಲನ ನಡೆಸಬೇಕಾಗಿರುವ ಕುರಿತು ಸಾಮಾಜಿಕ ಕಾರ್ಯಕರ್ತ, ಪತ್ರಕರ್ತ ಹರ್ಷಕುಮಾರ್ ಕುಗ್ವೆ ವಿವರಿಸಿದರು.

ಸಾಹಿತಿ ನಾ ಡಿಸೋಜಾ ಅವರು ಮಾತನಾಡಿ, ಬೆಂಗಳೂರಿಗೆ ಲಿಂಗನಮಕ್ಕಿಯಿಂದ ನೀರನ್ನ ಸಾಗಿಸಲು ಏನೆಲ್ಲಾ ಕೆಲಸ ಆಗಬೇಕು, ಎಷ್ಟೊಂದು ಖರ್ಚು ತಗುಲುತ್ತೆ, ಆ ಹಣ ನಮ್ಮೆಲ್ಲರ ಮೇಲೂ ಹೊರೆ, ನೀರನ್ನ ಸಾಗಿಸಲು ಇಲ್ಲಿ ಎಷ್ಟು ನೀರಿದೆ ಎಂಬುದನ್ನು ನಾವು ಪರಿಶೀಲನೆ ಮಾಡಬೇಕು, ಲಿಂಗನಮಕ್ಕೆ ಜಲಾಶಯದಲ್ಲಿ ಶೇ.೪೦ರಷ್ಟು ಹೂಳೇ ತುಂಬಿದೆ, ಇದರ ಬಗ್ಗೆ ಸರ್ಕಾರಕ್ಕೆ ಆಲೋಚನೆಯೇ ಇಲ್ಲ, ಈ ಸಣ್ಣ ನದಿಗೆ ಚಿಕ್ಕಪುಟ್ಟ ಹತ್ತು ಅಣೆಕಟ್ಟುಗಳಿವೆ. ನ್ಯಾಯಾಲಯಗಳು ಕುಡಿಯುವ ನೀರಿನ ಪರವಾಗಿ ಇರುತ್ವೆ, ಇಲ್ಲಿಂದ ಬೆಂಗಳೂರಿಗೆ ನೀರು ಸರಬರಾಜಾಗಲು ಇರುವ ಆಘಾತಗಳ ಬಗ್ಗೆ ನಿಮ್ಮ ಕಳಕಳಿಗೆ ಧನ್ಯವಾದಗಳು. ಎಲ್ಲರೂ ಸೇರಿ ಈ ಯೋಜನೆ ತಡೆಯಲು ಮುಂದಾಗೋಣ ಎಂದರು.

ಚಿಂತಕ ಪ್ರಸನ್ನ ಅವರು ವಿಶ್ವದ ಎಲ್ಲಾ ರಾಷ್ಟ್ರ ಗಳು ನಗರವನ್ನ ಮಿತಿಗೊಳಿಸುವ ಕೆಲಸ ಮಾಡುತ್ತವೆ ಆದರೆ ನಮ್ಮಲ್ಲಿ ಇಲ್ಲ, ಬೆಂಗಳೂರಿನ ದಾಹಕ್ಕೆ ಕಾವೇರಿ ಹೇಮಾವತಿ ಆಯ್ತು ಈಗ ಶರಾವತಿ, ಐವತ್ತು ವರ್ಷ ಗಮನದಲ್ಲಿಟ್ಟುಕೊಂಡು ಕೆಲಸ ಮಾಡುವುದೇ ಆದರೆ ಬೆಂಗಳೂರನ್ನ ಮಿತಿಗೊಳಿಸಿ. ಉತ್ತರದ ಭಾರತದಲ್ಲಿ ತಿಂಗಳಿಗೊಮ್ಮೆ ನೀರು ಬಿಡಲಾಗುತ್ತಿದೆ, ಈ ಮಾತನ್ನ ನಾವು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕಿದೆ. ಬೆಂಗಳೂರು ಎಷ್ಟು ಎತ್ತರವಿದೆ, ಗುಡ್ಡಕ್ಕೆ ನೀರು ಹೊಡೆಯುತ್ತೇವೆ ಎಂಬುದನ್ನ ಯಾವ ನ್ಯಾಯಾಲಯವೂ ಒಪ್ಪಿಕೊಳ್ಳುವುದಿಲ್ಲ ಎಂದು ತಿಳಿಸಿದರು.

ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಆರ್ ಜಯಂತ್ ಶರಾವತಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯೋಜನೆ ಅತ್ಯಂತ ಮೂರ್ಖ ಯೋಜನೆ. ಇದಕ್ಕೆ ನಮ್ಮೆಲ್ಲರ ವಿರೋಧವಿದೆ. ಇದನ್ನು ತಡೆಯಲೇಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕಲಗೋಡು ರತ್ನಾಕರ್ ಅವರು ಮಾತನಾಡಿ, ಶರಾವತಿ ನದಿ ನೀರನ್ನ ತೆಗೆದುಕೊಂಡು ಹೋಗುವ ಹುನ್ನಾರ ಮೊದಲಿಂದಲೂ ಇತ್ತು..ಈಗ ಮುನ್ನೆಲೆಗೆ ಬಂದಿದೆ. ಹೋರಾಟಕ್ಕೆ ನನ್ನ ಬೆಂಬಲ ಇದೆ ಎಂದರು.

ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ನಮ್ಮ ಭಾಗದ ಜನರಿಗೆ ಕುಡಿಯುವ ನೀರಿನ ಅವಶ್ಯಕತೆ ಇದೆ. ಮೊದಲು ಇಲ್ಲಿನ ಹಳ್ಳಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಗಾಗಿ ಒತ್ತಾಯಿಸಬೇಕು ಎಂದರು. ಈ ವ್ಯಾಪ್ತಿಯ ಎಲ್ಲಾ ಗ್ರಾಮಪಂಚಾಯಿತಿಗಳನ್ನ ಕರೆದು ಸಭೆ ಮಾಡೋಣ, ಇಡೀ ಶಿವಮೊಗ್ಗ ಬಂದ್ ಮಾಡಿಸೋಣ ಎಂದರು.

ಶಂಕರಶರ್ಮಾ ಅವರು ಮಾತನಾಡಿ, ತಾಂತ್ರಿಕವಾಗಿ ಯೋಜನೆಯ ಬಗ್ಗೆ ಚರ್ಚೆ ಮಾಡಿ, ಮೂರು ಸಾವಿರ ಮೆಗಾವ್ಯಾಟ್ ಅಂದರೆ ಈ ನೀರೆತ್ತಲು ಇಲ್ಲಿ ತಯಾರಾಗುವ ಅರ್ಧದಷ್ಟು ವಿದ್ಯುತ್ ಬೇಕು, ಈ ಕುರಿತು ನಾವು ವರದಿ ತಯಾರು ಮಾಡೋಣ, ಯಾವ ಭಾಗದಲ್ಲೂ ನಾಲ್ಕು ನೂರು ಕಿಲೋಮೀಟರ್ ಉದ್ದ ಸಾವಿರ ಅಡಿ ಎತ್ತರಕ್ಕೆ ನೀರು ತೆಗೆದುಕೊಂಡು ಹೋಗುವ ಯೋಜನೆ ಇಲ್ಲ. ನಾವು ಬರೀ ಬೆಂಗಳೂರಿನ ಬೆಳವಣಿಗೆ ನೋಡಿ ಕೂರಬೇಕಾ, ಕಾಳಿ ನದಿ ಪಾತ್ರದ ಜನರು ಹಾಗೂ ಹೊಸಪೇಟೆ ಭಾಗದ ಜನರನ್ನೂ ಹೋರಾಟಕ್ಕೆ ಸೇರಿಸಿಕೊಳ್ಳಬೇಕು. ಬೆಂಗಳೂರಿನಲ್ಲಿ ಶೇ ನಲವತ್ತರಷ್ಟು ನೀರು ಪೋಲಾಗುತ್ತೆ ಇದು ಅಧಿಕೃತ ಮಾಹಿತಿ. ಬೆಂಗಳೂರಿಗೆ ಹದಿನೆಂಟು ಟಿಎಂಸಿಯಷ್ಟೇ ಸಾಕು ಮೂವತ್ತು ಟಿಎಂಸಿ ಯಾಕೆ.. ಎಂದು ಕೇಳಿದರು.

ಪರಿಸರವಾದಿ ಅಜಯ್ ಶರ್ಮಾ ಮಾತನಾಡಿ, ಮಲೆನಾಡಿಗೆ ಮೊದಲು ನೀರು ಕೊಡಿ ನಮಗಾಗಿ ಉಳಿದರೆ ಅದನ್ನ ಬೆಂಗಳೂರಿಗೆ ತೆಗೆದುಕೊಂಡು ಹೋಗಿ ಎಂಬುದನ್ನ ನಾವು ವಿವರಿಸುವ ಅಗತ್ಯ ಇದೆ ಎಂದರು.

ಬಿಜೆಪಿ ಮುಖಂಡ ಮೇಘರಾಜ್ ಟಿ ಡಿ ಅವರು ಮಾತನಾಡಿ, ಈ ವಿಷಯದಲ್ಲಿ ಸರ್ಕಾರ ಹೊಣೆಗೇಡಿಯಾಗಿ ವರ್ತಿಸುತ್ತಿದೆ, ಬೃಹತ್ ಹೋರಾಟವನ್ನು ಎಲ್ಲರೂ ಸೇರಿ ನಡೆಸೋಣ ಎಂದರು.

ಹುಚ್ರಾಯಪ್ಪ ಅವರು ಮಾತನಾಡಿ, ನಾವು ಶಿಕಾರಿಪುರದವರು ಸಾಗರದ ನೀರು ಬಳಸುತ್ತೇವೆ, ಉದಾಹರಣೆಗೆ ಡ್ಯಾಂ ಹೊಸೂರ್, ನಮಗೂ ಇಲ್ಲಿನ ಋಣ ಬಹಳಷ್ಟು ಇದೆ, ಈಗ ಕುಡಿಯಲೂ ನೀರಿಲ್ಲ. ನಾವೂ ಹೋರಾಟಕ್ಕೆ ಸಿದ್ದ ಎಂದರು.
ನಮ್ಮ ನಾಡನ್ನ ಪ್ರತ್ಯೇಕ ರಾಜ್ಯ ಮಾಡಿ ಎಂದಾಗ ಮಾತ್ರ ನಮಗೆ ನ್ಯಾಯ ಸಿಗುತ್ತೆ ಅಂತಹ ಹೋರಾಟ ಆಗಬೇಕು, ಎಚ್ಚರವಿಡಿ ನಾವು ಇಂತಹ ಹೋರಾಟವೇ ಸರ್ಕಾರಕ್ಕೆ ಚಾಟಿ

ನಿತಿನ್ ಹಿರಳೆ ಮಾತನಾಡಿ, ಶರಾವತಿಯನ್ನ ಉಳಿಸಲು, ನಾವು ವರದಿ ಸಿದ್ಧಪಡಿಸಬೇಕು, ಈ ಮೂಲಕ ಇಲ್ಲಿನ ಸಮಸ್ಯೆಗಳನ್ನ ಮನವರಿಕೆ ಮಾಡಿಕೊಡಬೇಕು

ದಂಡಾವತಿ ಹೋರಾಟದ ವಾಮದೇವ ಗೌಡ ಅವರು ಈ ಹೋರಾಟದಲ್ಲಿ ರಾಜಕೀಯ ಮುಖಂಡರ ನಾಯಕತ್ವ ಕೊಡದೇ ಅವರ ಬೆಂಬಲ ಮಾತ್ರ ಪಡೆದು ಎಲ್ಲರ ಹೋರಾಟವಾಗಿ ನಡೆಸಬೇಕು ಎಂದರು.

ಸಾಕಷ್ಟು ಜನರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇನ್ನೂ ಹಲವರು ಮಾತಾಡುವುದಿದ್ದರೂ ಸಮಯದ ಅಭಾವದಿಂದ ಅವಕಾಶ ಆಗಲಿಲ್ಲ.

ನಿರ್ಣಯಗಳು

  1. ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟ’ ವನ್ನು ಸಭೆ ಅಸ್ತಿತ್ವಕ್ಕೆ ತಂದಿತು.
  2. ಒಕ್ಕೂಟದ ಹೋರಾಟ ಗೌರವಾಧ್ಯಕ್ಷರಾಗಿ ಕನ್ನಡದ ನಾಡಿ ಎಂದೇ ಖ್ಯಾತರಾದ ಲೇಖಕರು ನಾ ಡಿಸೋಜ ಅವರನ್ನು ಆಯ್ಕೆ ಮಾಡಲಾಯಿತು.
  3. 30 ಜನರ ಸಂಘಟನಾ ಸಮಿತಿ ರಚಿಸಿಲಾಯಿತು.
    – ಶಂಕರ್ ಶರ್ಮಾ ಅವರನ್ನೊಳಗೊಂಡ ತಜ್ಞರ ಸಮಿತಿಯಲ್ಲಿ ರಾಜ್ಯ ಮಟ್ಟದ ನೀರಾವರಿ ತಜ್ಞರು, ಪರಿಸರ ತಜ್ಞರನ್ನೊಳಗೊಂಡ ಈ ಸಮಿತಿ ಶೀಘ್ರದಲ್ಲೇ ಸರ್ಕಾರದ ಯೋಜನೆಯ ಅನಾಹುತಗಳ ಕುರಿತು ಒಂದು ವರದಿ ಸಲ್ಲಿಸಬೇಕು.
  4. ಕಾನೂನು ಸಮಿತಿ- ಈ ವಿಷಯದಲ್ಲಿ ಕಾನೂನು ಹೋರಾಟ ನಡೆಸುವ ಕುರಿತು ಅಧ್ಯಯನ ನಡೆಸಿ ತೀರ್ಮಾನ ಕೈಗೊಳ್ಳಲು ವಕೀಲ ಪ್ರವೀಣ್ ಕೆ ವಿ ನೇತೃತ್ವದಲ್ಲಿ ಕಾನೂನು ಸಮಿತಿ ರಚಿಸಲಾಯಿತು
  5. ಮಾಧ್ಯಮ/ ಸಾಮಾಜಿಕ ಮಾಧ್ಯಮ ಸಮಿತಿ
  6. ಶರಾವತಿ ಉಳಿಸುವ ಈ ಹೋರಾಟವನ್ನು ಮಾಧ್ಯಮಗಳ ಮೂಲ ಪರಿಣಾಮಕಾರಿಯಾಗಿ ಪ್ರಚಾರ ಮಾಡಲು ಹರ್ಷಕುಮಾರ್ ಕುಗ್ವೆ ಉಸ್ತುವಾರಿಯ ತಂಡವೊಂದನ್ನು ರಚಿಸಲಾಯಿತು.
  7. ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯ ಗಂಭೀರತೆ ಕುರಿತು ವರದಿಯೊಂದನ್ನು ಸಿದ್ಧಪಡಿಸುವ ಅಗತ್ಯವಿದ್ದು ಈ ಹೊಣೆಯನ್ನು ಮಲ್ಲಿಕಾರ್ಜುನ ಹಕ್ರೆ ಅವರಿಗೆ ವಹಿಸಲಾಯಿತು.
  8. ವಾಮದೇವ ಗೌಡ ಅವರ ನೇತೃತ್ವದಲ್ಲಿ ಹಣಕಾಸು ಸಮಿತಿ ರಚಿಸಲಾಯಿತು. ಯಾವುದೇ ರಾಜಕೀಯ ಪಕ್ಷದಿಂದ ಹಣ ತೆಗೆದುಕೊಳ್ಳುವಂತಿಲ್ಲ ಹಾಗೂ 5000 ರೂಪಾಯಿಗಿಂತ ಹೆಚ್ಚಿನ ದೇಣಿಗೆ ಪಡೆಯುವಂತಿಲ್ಲ ಎಂಬ ತೀರ್ಮಾನ ತೆಗೆದುಕೊಳ್ಳಲಾಯಿತು. ಜನರಿಂದಲೇ ಹಣ ಸಂಗ್ರಹಿಸಿ ಹೋರಾಟ ರೂಪಿಸಲು ನಿರ್ಧರಿಸಲಾಯಿತು.
  9. ಜುಲೈ 10 ನೇ ತಾರೀಖಿನಂದು ಶಿವಮೊಗ್ಗ ಜಿಲ್ಲೆ ಬಂದ್ ಕರೆ ನೀಡುವುದು ಎಂದು ಸರ್ವಾನುಮತದಿಂದ ತೀರ್ಮಾನಿಸಲಾಯಿತು.
  10. ಕೂಡಲೇ ಶಿವಮೊಗ್ಗದಲ್ಲಿ ಒಂದು ಪತ್ರಿಕಾ ಗೋಷ್ಟಿ ನಡೆಸುವುದು,
    ಹೊಸನಗರ, ನಗರ, ಶಿವಮೊಗ್ಗ, ತೀರ್ಥಹಳ್ಳಿ, ಸೊರಬಗಳಲ್ಲಿ ಪೂರಕ ಸಭೆಗಳನ್ನು ಶೀಘ್ರದಲ್ಲೇ ಆಯೋಜಿಸಲು ತೀರ್ಮಾನ ಮಾಡಲಾಯಿತು.
  11. ಶರಾವತಿ ನದಿ ಉಳಿಸಿಕೊಳ್ಳುವ ಹೋರಾಟಕ್ಕೆ ನಾಡಿನಾದ್ಯಂತ ಬೆಂಬಲ ಕೋರಲು ನಿರ್ಧರಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ8 hours ago

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ. ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ,...

ದಿನದ ಸುದ್ದಿ8 hours ago

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ತಿರಸ್ಕೃತಗೊಂಡ...

ದಿನದ ಸುದ್ದಿ3 days ago

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ....

ದಿನದ ಸುದ್ದಿ3 days ago

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ...

ದಿನದ ಸುದ್ದಿ4 days ago

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ. ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ...

ದಿನದ ಸುದ್ದಿ5 days ago

ಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ

ಸುದ್ದಿದಿನ,ದಾವಣಗೆರೆ:ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆ ಮಳಿಗೆಗಳು ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕವನ್ನು ಅಳವಡಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ. ಒಂದು...

ದಿನದ ಸುದ್ದಿ6 days ago

ದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಕಂದಗಲ್ಲು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಲಿಂಗೇಶ್ವರ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಡಳಿತಕ್ಕೆ ಒಳಪಟ್ಟಿದೆ. ನಿಯಮಬಾಹಿರವಾಗಿ ಸಾಮಾನ್ಯ...

ದಿನದ ಸುದ್ದಿ2 weeks ago

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ...

ದಿನದ ಸುದ್ದಿ3 weeks ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ದಿನದ ಸುದ್ದಿ3 weeks ago

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ...

Trending