Connect with us

ದಿನದ ಸುದ್ದಿ

ಶರಾವತಿ ಉಳಿಸಿ | ಶರಾವತಿ ನದಿ ಎಂಬುದು ಮಲೆನಾಡಿನ ನಾಡಿ ಮಿಡಿತ‌

Published

on

ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟ

ಮಾನ್ಯರೇ ,

ಶರಾವತಿ ನದಿ ಎಂಬುದು ಮಲೆನಾಡಿನ ನಾಡಿ ಮಿಡಿತ. ಮಲೆನಾಡಿನ ಬದುಕಿನ ಜೊತೆ ಹಾಸುಹೊಕ್ಕಾಗಿರುವ ಮತ್ತು ಮಲೆನಾಡಿನ ಹೆಗ್ಗುರುತಾಗಿ ಬೆಳೆದುಬಂದಿರುವ ಜೀವನದಿ ಅದು. ಅದು ಸೃಷ್ಟಿಸುವ ಜೋಗ ಜಲಪಾತದ ಸೌಂದರ್ಯದಂತೆಯೇ ಅದರ ಹೆಸರೇ ನಮಗೆ ಒಂದು ಐಡೆಂಟಿಟಿಯನ್ನು ತಂದುಕೊಟ್ಟಿದೆ. ಸಾಲು ಸಾಲು ಜಲಾಶಯಗಳು ಮುಳುಗಿಸಿದ ಬದುಕಿನ ಹೊರತಾಗಿಯೂ ಅದರೊಂದಿಗೆ ಮಲೆನಾಡಿನ ಮಣ್ಣಿನಮಕ್ಕಳು ಹೊಂದಿರುವ ಕಳ್ಳುಬಳ್ಳಿಯ ಸಂಬಂಧ ಕಡಿದುಕೊಂಡಿಲ್ಲ. ಹಾಗಾಗಿ ಇದು ಅಮ್ಮ-ಮಕ್ಕಳ ಅನುಬಂಧ.

ಆದರೆ, ಇಂತಹ ನಮ್ಮೆಲ್ಲರ ಬದುಕಿನ ಭಾಗವಾಗಿರುವ ನದಿಗೆ ಈಗ ಅಪಾಯ ಬಂದೊದಗಿದೆ. ಆ ನದಿಯ ಲಿಂಗನಮಕ್ಕಿ ಅಣೆಕಟ್ಟೆಯಿಂದ ಸುಮಾರು 400 ಕಿ.ಮೀ ದೂರದ ಬೆಂಗಳೂರಿಗೆ ನೀರು ಒಯ್ಯುವ ಕುರಿತ ತ್ಯಾಗರಾಜ್ ಸಮಿತಿ ವರದಿಯ ಪ್ರಕಾರ, ಯೋಜನೆಯ ಡಿಪಿಆರ್(ವಿಸ್ತೃತ ಯೋಜನಾ ವರದಿ) ತಯಾರಿಸುವಂತೆ ರಾಜ್ಯ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಾ ಜಿ ಪರಮೇಶ್ವರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹಾಗೆ ನೋಡಿದರೆ, 2010ರಷ್ಟು ಹಿಂದೆಯೇ ಈ ಬಗ್ಗೆ ಯೋಚಿಸಿದ್ದ ಅಂದಿನ ರಾಜ್ಯ ಸರ್ಕಾರ, ತ್ಯಾಗರಾಜ್ ನೇತೃತ್ವದಲ್ಲಿ ಒಂಭತ್ತು ಮಂದಿ ತಜ್ಞರ ಸಮಿತಿ ರಚಿಸಿ, ಬೆಳೆಯುತ್ತಿರುವ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಮೂಲಕಗಳ ಕುರಿತು ವರದಿ ನೀಡುವಂತೆ ಸೂಚಿಸಿತ್ತು. ಸಾಕಷ್ಟು ನೀರು ಲಭ್ಯವಿರುವ ಮತ್ತು ಅಂತಾರಾಜ್ಯ ವಿವಾದಗಳಿಲ್ಲದ ಲಿಂಗನಮಕ್ಕಿ ಜಲಾಶಯದಿಂದ ಶರಾವತಿ ನದಿ ನೀರನ್ನು ಒಯ್ಯುವುದು ಮತ್ತು ಹಂತಹಂತವಾಗಿ ಶರಾವತಿ ಕಣಿವೆಯ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿ ಸಂಪೂರ್ಣ ನೀರನ್ನು ಬೆಂಗಳೂರು ಮೈಸೂರು ಭಾಗದ ಹಲವು ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡಬಹುದು ಎಂದು ಸಮಿತಿ 2013ರ ತನ್ನ ವರದಿಯಲ್ಲಿ ಹೇಳಿತ್ತು.

ಇದೀಗ ಮಾನ್ಯ ಉಪಮುಖ್ಯಮಂತ್ರಿಗಳ ಪ್ರಸ್ತಾಪದೊಂದಿಗೆ ಆ ವರದಿಯನ್ನೇ ಮುಂದಿಟ್ಟುಕೊಂಡು ಯೋಜನೆ ಅನುಷ್ಠಾನಕ್ಕೆ ಸರ್ಕಾರ ಮುಂದಾಗಿರುವುದು ಸ್ಪಷ್ಟ.

ಆದರೆ, ಮಲೆನಾಡಿಗರಾಗಿ, ಲಿಂಗನಮಕ್ಕಿಯೂ ಸೇರಿದಂತೆ ಶರಾವತಿ ಕಣಿವೆಯ ಸರಣಿ ಜಲಾಶಯಗಳಿಗಾಗಿ ನಮ್ಮ ಮನೆಮಠ, ಆಸ್ತಿಪಾಸ್ತಿ ಕಳೆದುಕೊಂಡು, ಬೀದಿಗೆ ಬಿದ್ದಿರುವ ಮುಳುಗಡೆ ಸಂತ್ರಸ್ತರಾಗಿ, ಮಲೆನಾಡು ವ್ಯಾಪ್ತಿಯಲ್ಲಿದ್ದೂ ತೀವ್ರ ಬರ ಮತ್ತು ಕುಡಿಯುವ ನೀರಿನ ಹಾಹಾಕಾರ ಎದುರಿಸುತ್ತಿರುವ ನದಿ ತಟದ ನತದೃಷ್ಟರಾಗಿ, ಈ ಯೋಜನೆಗೆ ನಮ್ಮ ಸಂಪೂರ್ಣ ವಿರೋಧ ಇದೆ.

12 ಸಾವಿರ ಕೋಟಿ ರೂಪಯಿ ಬೃಹತ್ ಮೊತ್ತದ ಯೋಜನೆಯ ಹಿಂದೆ ಯಾವುದೇ ವೈಜ್ಞಾನಿಕ, ಕಾರ್ಯಸಾಧುವಾದ ಯೋಚನೆ, ಚಿಂತನೆ ಇರದೆ, ಕೇವಲ ರಾಜಕೀಯ ಲಾಭ ಮತ್ತು ಸಾರ್ವಜನಿಕ ಹಣವನ್ನು ಲೂಟಿ ಹೊಡೆಯುವ ಲೆಕ್ಕಾಚಾರ ಇದರ ಹಿಂದಿದೆ ಮತ್ತು ಪರಿಸರ ಮತ್ತು ಮಲೆನಾಡಿನ ಜನಜೀವನದ ಮೇಲು ಉಂಟಾಗಬಹುದಾದ ಪರಿಣಾಮದ ಕಾರಣದಿಂದಾಗಿ ಇಂತಹ ಮೂರ್ಖತನದ ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕು ಮತ್ತು ಮೂಲಭೂತವಾಗಿ ವಿದ್ಯುತ್ ಉತ್ಪಾದನೆಯ ಉದ್ದೇಶಕ್ಕಾಗಿಯೇ ನಿರ್ಮಾಣವಾಗಿರುವ ಶರಾವತಿ ಕಣಿವೆಯ ಲಿಂಗನಮಕ್ಕಿ ಮತ್ತಿತರ ಜಲಾಶಯಗಳ ನೀರನ್ನು ಆ ಉದ್ದೇಶಕ್ಕಲ್ಲದೆ ಅನ್ಯ ಉದ್ದೇಶಕ್ಕೆ ಬಳಸುವುದೇ ಆದರೆ, ನದಿ ತಟದಲ್ಲೇ ಕುಡಿಯುವ ನೀರಿನ ತೀವ್ರ ಬಿಕ್ಕಟ್ಟು ಎದುರಿಸುತ್ತಿರುವ ಜನರಿಗೆ ಮತ್ತು ಕಣಿವೆಯ ಜಲವಿದ್ಯುತ್ ಯೋಜನೆಗಳಿಂದ ಸಂತ್ರಸ್ತರಾಗಿ ಸೂಕ್ತ ಪರಿಹಾರವೂ ಕಾಣದೆ, ಅಲ್ಲಲ್ಲಿ ಬರಪೀಡಿತ ಒಣಭೂಮಿ ಬೇಸಾಯ ಮಾಡಿಕೊಂಡಿರುವ ಸಂತ್ರಸ್ತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂಬ ಬೇಡಿಕೆ ಮುಂದಿಟ್ಟುಕೊಂಡು ಈ ಶರಾವತಿ ನದಿ ಉಳಿಸಿ ಹೋರಾಟ ಒಕ್ಕೂಟ, ಮಲೆನಾಡಿನ ಸಾಕ್ಷಿಪ್ರಜ್ಞೆಯಂತಿರುವ ಹಿರಿಯ ಸಾಹಿತಿ ಮತ್ತು ಶರಾವತಿ ಕಣಿವೆಯ ಬದುಕನ್ನು ಕಂಡುಂಡ ಶ್ರೀಯುತ ನಾ. ಡಿಸೋಜ ಅವರ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿದೆ.

ಮಾನ್ಯರ ನೇತೃತ್ವದಲ್ಲಿ ಸಾಗರದಲ್ಲಿ 22-06-19ರಂದು ನಡೆದ ಒಕ್ಕೂಟದ ಮೊದಲ ಸಮಾಲೋಚನಾ ಸಭೆಯಲ್ಲಿ ಉಪ ಮುಖ್ಯಮಂತ್ರಿಗಳ ಪ್ರಸ್ತಾಪವನ್ನು ವಿರೋಧಿಸಿ, ಮಲೆನಾಡಿನಾದ್ಯಂತ ದಿಟ್ಟ ಹೋರಾಟ ನಡೆಸುವ ಮತ್ತು ಸರ್ಕಾರಕ್ಕೆ ನಮ್ಮ ಆಕ್ರೋಶ ವ್ಯಕ್ತಪಡಿಸುವ ಮಾರ್ಗವಾಗಿ ಜುಲೈ 10ರಂದು ಸಂಪೂರ್ಣ ಶಿವಮೊಗ್ಗ ಜಿಲ್ಲಾ ಬಂದ್ ನಡೆಸುವ ಕುರಿತು ನಿರ್ಧರಿಸಲಾಯಿತು.

ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯೋಜನೆ ಕೇವಲ ಶರಾವತಿ ಕಣಿವೆಯ ಜನರ ಸಮಸ್ಯೆ ಅಲ್ಲ. ಇದು ಇಡೀ ಮಲೆನಾಡಿನ ಜೀವ ಪರಿಸರ ಮತ್ತು ಜನಜೀವನದ ಭವಿಷ್ಯದ ಪ್ರಶ್ನೆ. ಹಾಗಾಗಿ ಸರ್ಕಾರದ ವಿವೇಚನಾಹೀನ ಯೋಜನೆಯ ಭವಿಷ್ಯದ ಗಂಭೀರ ಪರಿಣಾಮಗಳನ್ನು ಅರಿತು ಇಡೀ ಮಲೆನಾಡಿನ ಜನ ಈ ಹೋರಾಟಕ್ಕೆ ದನಿಗೂಡಿಸಬೇಕಿದೆ.

ಶಿವಮೊಗ್ಗ ನಗರ ಮತ್ತು ಜಿಲ್ಲೆಯ ಸಮಸ್ತ ಜನತೆ ಈ ಹೋರಾಟಕ್ಕೆ ಬೆಂಬಲ ನೀಡಿ, ಜುಲೈ 10ರ ಬಂದ್ ಬೆಂಬಲಿಸಬೇಕಾಗಿ ಒಕ್ಕೂಟ ಮನವಿ ಮಾಡುತ್ತದೆ. ಜಿಲ್ಲೆಯ ಧಾರ್ಮಿಕ ಮಠ-ಮಾನ್ಯಗಳ ಮುಖಂಡರು ಮತ್ತು ಮಠಾಧೀಶರು, ಎಲ್ಲಾ ರಾಜಕೀಯ ಪಕ್ಷಗಳು ಮತ್ತು ಮುಖಂಡರು, ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳು, ಆಟೋ ಚಾಲಕರ ಸಂಘ, ಬಸ್ ಮಾಲೀಕರ ಸಂಘ, ಸರಕು ಸಾಗಣೆ ವಾಹನ ಮಾಲೀಕರ ಸಂಘ, ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ವಿವಿಧ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘ- ಸಂಸ್ಥೆಗಳು, ಸರ್ಕಾರಿ ನೌಕರರ ಸಂಘ, ಅಡಿಕೆ ಮಂಡಿ ಮಾಲೀಕರ ಸಂಘ ಮತ್ತು ಅಡಿಕೆ ಬೆಳೆಗಾರರ ಸಂಘಟನೆಗಳು, ಅಂಗಡಿ ಮುಂಗಟ್ಟು ಮಾಲೀಕರು, ವ್ಯಾಪಾರಸ್ಥರು ಮತ್ತು ಹೋಟೆಲ್ ಉದ್ಯಮಿಗಳು, ವಿದ್ಯಾರ್ಥಿ ಸಂಘಟನೆಗಳು, ವಿವಿಧ ಜಾತಿ- ಜನಾಂಗ ಸಂಘಟನೆಗಳು, ಮುಖ್ಯವಾಗಿ ಜಿಲ್ಲೆಯ ಇಡೀ ಮಾಧ್ಯಮ ಸ್ನೇಹಿತರು ಸದುದ್ದೇಶದದ ಮತ್ತು ಪಕ್ಷಾತೀತವಾದ ಹೋರಾಟಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಒಕ್ಕೂಟ ಕೋರುತ್ತದೆ.

ಸರ್ಕಾರ ಸಂಪೂರ್ಣ ತನ್ನ ಪ್ರಸ್ತಾವನೆಯಿಂದ ಹಿಂದೆ ಸರಿದು, ತ್ಯಾಗರಾಜ್ ಸಮಿತಿ ವರದಿಯನ್ನು ಅಧಿಕೃತವಾಗಿ ತಿರಸ್ಕರಿಸಬೇಕು ಮತ್ತು ಭವಿಷ್ಯದಲ್ಲಿ ಕೂಡ ಶರಾವತಿ ನದಿ ಕಣಿವೆಯ ನೀರನ್ನು ಕಣಿವೆ ವ್ಯಾಪ್ತಿ ಹೊರಗಿನ ಬಳಕೆಗೆ ಮುಂದಾಗುವುದಿಲ್ಲ ಎಂದು ಭರವಸೆ ನೀಡಬೇಕು ಎಂಬ ಹಕ್ಕೊತ್ತಾಯಕ್ಕೆ ದನಿಗೂಡಿಸಬೇಕು ಎಂದು ಮನವಿ ಮಾಡುತ್ತದೆ.

ಹಕ್ಕೊತ್ತಾಯಗಳು

  1. ಶರಾವತಿ ನೀರನ್ನು ಬೆಂಗಳೂರಿಗೆ ಒಯ್ಯುವ ಪ್ರಸ್ತಾಪವನ್ನು ಸಾರಾಸಗಟಾಗಿ ಕೈಬಿಡಬೇಕು ಮತ್ತು ತ್ಯಾಗರಾಜ್ ವರದಿಯನ್ನು ಅಧಿಕೃತವಾಗಿ ತಿರಸ್ಕರಿಸಬೇಕು.
  2. ಶರಾವತಿ ಕಣಿವೆಯ ಆಸುಪಾಸಿನ ವಿವಿಧ ಯೋಜನೆಗಳ ಸಂತ್ರಸ್ತರು ಸೇರಿದಂತೆ ಆ ಭಾಗದ ಕುಡಿಯುವ ನೀರು ಮತ್ತು ಒಣ ಭೂಮಿಗೆ ನೀರಾವರಿ ಒದಗಿಸಲು ಜಲಾಶಯದ ನೀರು ಬಳಕೆಗೆ ಆದ್ಯತೆ ನೀಡಬೇಕು. ಈ ಕುರಿತು ಸರ್ಕಾರ ಕೂಡಲೇ ಡಿಪಿಆರ್ ತಯಾರಿಸಲು ಆದೇಶ ನೀಡಬೇಕು.

ಸಹಿಗಳು:

ಡಾ. ನಾ ಡಿಸೋಜಾ, ಹಿರಿಯ ಸಾಹಿತಿಗಳು (ಗೌರವಾಧ್ಯಕ್ಷರು),ಪ್ರೊ. ಶ್ರೀಕಂಠ ಕೂಡಿಗೆ ಚಿಂತಕರು,ಶಂಕರ್ ಶರ್ಮಾ, ಇಂಧನ ತಜ್ಞರು,
ಹರ್ಷಕುಮಾರ್ ಕುಗ್ವೆ,ಶಶಿ ಸಂಪಳ್ಳಿ,ಎಚ್ ಬಿ ರಾಘವೇಂದ್ರ,ಜಿ ಟಿ ಸತ್ಯನಾರಾಯಣ ಕರೂರು,
ಅಜಯ್ ಶರ್ಮಾ,ವಿನ್ಸೆಂಟ್ ರೋಡ್ರಿಗಸ್,ಕನ್ನಪ್ಪ ಈಡಿಗ,ತಾರಾಮೂರ್ತಿ,
ಇತರರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ ಬಿಡುಗಡೆ ಮಾಡಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಬುಧವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶಿವಮೊಗ್ಗ ಹಾಲು ಒಕ್ಕೂಟದಿಂದ ಬೇರ್ಪಡಿಸಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಒಳಗೊಂಡ ಮೆಗಾ ಡೈರಿ ಆರಂಭಿಸಲು ನನ್ನ ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿಯಲ್ಲಿ ಭೂಮಿ ಖರೀದಿಸಿದ್ದೇವೆ. ಸರ್ಕಾರ ಕೂಡಲೇ ಅನುದಾನ ಬಿಡುಗಡೆ ಮಾಡಿ ಡೈರಿ ಆರಂಭಿಸಿದರೆ ಈ ಭಾಗದ ರೈತರು ಆರ್ಥಿಕವಾಗಿ ಸಬಲರಾಗಲಿದ್ದಾರೆ ಎಂದು ಸದನದ ಗಮನ ಸೆಳೆದರು.

ಹೈನುಗಾರಿಕೆಯಲ್ಲಿ ಮಹಿಳೆಯರಿಗೆ ಶೇ.50ರಷ್ಟು ಸಬ್ಸಿಡಿ ಕೊಡುವುದನ್ನು ಶೇ.75ರಷ್ಟು ಹೆಚ್ಚಳ ಮಾಡಿದರೆ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಿ ಉತ್ತಮ ಬದುಕು ಕಟ್ಟಿಕೊಳ್ಳುತ್ತಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಬೇಕೆಂದರು.

ಮಧ್ಯ ಕರ್ನಾಟಕದ ಕೇಂದ್ರ ಬಿಂದು, ಹಿಂದುಳಿದ ಜಿಲ್ಲೆ ದಾವಣಗೆರೆ. ಅದರಲ್ಲೂ ಅತೀ ಹಿಂದುಳಿದ ಮೀಸಲು ಕ್ಷೇತ್ರ ಮಾಯಕೊಂಡ. ಸಿರಿಗೆರೆ ತರಳಬಾಳು ಜಗದ್ಗುರುಗಳ ಹೋರಾಟದ ಫಲವಾಗಿ ನನ್ನ ಕ್ಷೇತ್ರದಲ್ಲಿ 22 ಕೆರೆಗಳ ಯೋಜನೆ ಜಾರಿಗೊಂಡು ಎಲ್ ಅಂಡ್ ಟಿ ಕಂಪನಿ ಕಾಮಗಾರಿ ನಡೆಸಿತ್ತು. ಕಳಪೆ ಕಾಮಗಾರಿಯಿಂದ 100 ಹಳ್ಳಿಗಳಿಗೆ ಕುಡಿಯುವ ನೀರು, ನೀರಾವರಿ ಕಲ್ಪಿಸಬೇಕೆಂಬ ಉದ್ದೇಶ ಈಡೇರಿಲ್ಲ. ಪುನಃ ಹೊಸ ಪೈಪ್‌ಲೈನ್ ಕಾಮಗಾರಿಗೆ ಹಣ ನೀಡಿ ಕಾಮಗಾರಿ ಆರಂಭಿಸುವAತೆ ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಕೂಡಲೇ ಸರ್ಕಾರ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು.

ನನ್ನ ಕ್ಷೇತ್ರದಲ್ಲಿ ಹೆಚ್ಚು ಗುಡ್ಡಗಾಡು ಪ್ರದೇಶ ಹೊಂದಿದ್ದು, ಈ ಪ್ರದೇಶಗಳಲ್ಲಿ ಅತೀ ಹೆಚ್ಚು ಕೆರೆಗಳನ್ನು ನಿರ್ಮಾಣ ಮಾಡಿದರೆ ಜನಜಾನುವಾರುಗಳಿಗೆ ಕುಡಿಯುವ ನೀರು, ಅಂತರ್ಜಲ ಮಟ್ಟ ವೃದ್ಧಿಗೆ ಅನುಕೂಲವಾಗುತ್ತದೆ. ಅಲ್ಲದೇ ಬ್ರಿಟಿಷರು ನಿರ್ಮಿಸಿದ ಕೆರೆ ಇದೆ. ಅದನ್ನು ಜೀರ್ಣೋದ್ಧಾರ ಮಾಡಿದರೆ ಇಡೀ ಪಕ್ಷಿ ಸಂಕುಲ, ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸಬಹುದು ಎಂದು ಸದನ ಗಮನ ಸೆಳೆದರು.

ಎಸ್ಸಿ-ಎಸ್ಟಿ ಅಭಿವೃದ್ಧಿ ನಿಗಮಗಳಿಗೆ ಅನೇಕ ಸೌಲಭ್ಯ ಒದಗಿಸಲು ಅನುದಾನದ ಕೊರತೆ ಇದೆ. ಹೆಚ್ಚಿನ ಅನುದಾನ ನೀಡಬೇಕು. ಎಸ್ಸಿ-ಎಸ್ಟಿ ಸಮುದಾಯ ಆರ್ಥಿಕವಾಗಿ ಸಬಲರಾಗಲು ಭೂಒಡೆತನ ಯೋಜನೆ ಜಾರಿಗೊಳಿಸಿದ್ದು, ಕ್ಷೇತ್ರಕ್ಕೆ ಕೇವಲ ಒಂದೇ ಕೊಟ್ಟರೆ ಸಾಧ್ಯವಾಗುವುದಿಲ್ಲ. ಇದಕ್ಕೆ ಹೆಚ್ಚು ಒತ್ತು ಕೊಡಬೇಕು. ಖಾಸಗಿ ಕಾಲೇಜುಗಳಲ್ಲಿ ಡಿಪ್ಲೊಮಾ, ನರ್ಸಿಂಗ್, ಪ್ಯಾರಾ ಮೆಡಿಕಲ್ ಸೇರಿದಂತೆ ವೃತ್ತಿಪರ ಕೋರ್ಸ್ನಲ್ಲಿ ಅಭ್ಯಾಸ ಮಾಡುವ ಎಸ್ಸಿ-ಎಸ್ಟಿ ಮಕ್ಕಳಿಗೆ 2013-18ರಲ್ಲಿ ಹಾಸ್ಟೆಲ್ ಸೌಲಭ್ಯ ಇತ್ತು, ಈಗ ಇಲ್ಲ. ಕೂಡಲೇ ಈ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿದರು.

ಹೊರ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಹಗಲು ದರೋಡೆ ಮಾಡಲಾಗುತ್ತಿದೆ. ಹೊರ ಗುತ್ತಿಗೆ ತೆಗೆದು ನೇರವಾಗಿ ನೇಮಕಾತಿ ಮಾಡಿಕೊಂಡರೆ ಅವರ ಬದುಕು ಉಜ್ವಲವಾಗುತ್ತದೆ. ಶೋಷಿತ ಸಮುದಾಯಗಳಿಗೆ ತ್ವರಿತ ನ್ಯಾಯ ಒದಗಿಸಲು ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯಡಿ ರಾಜ್ಯದಲ್ಲಿ 33 ವಿಶೇಷ ಪೊಲೀಸ್ ಠಾಣೆ ತೆರೆಯಲು ಕ್ರಮ, ಅಲ್ಲದೇ ಎಸ್ಸಿ-ಎಸ್ಟಿ ಗುತ್ತಿಗೆದಾರರಿಗೆ 2 ಕೋಟಿ ಮೀಸಲು, ಅದರಂತೆ ಒಬಿಸಿ, ಅಲ್ಪಸಂಖ್ಯಾತರಿಗೂ 2 ಕೋಟಿ ಮೀಸಲಿಡುವ ಮೂಲಕ ರೈತರು, ಕಾಯಕ ಜೀವಿಗಳು, ವಿಶೇಷವಾಗಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಎಸ್‌ಸಿಪಿ-ಎಸ್‌ಟಿಪಿ ಯೋಜನೆಯಡಿ 48,018 ಕೋಟಿ ರೂ. ಬಜೆಟ್‌ನಲ್ಲಿ ಮೀಸಲಿಟ್ಟಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದರು.


  • ತ್ವರಿತವಾಗಿ ಕಾಮಗಾರಿ ಪೂರ್ಣಗೊಳಿಸಿ
    ಮಳೆಗಾಲದಲ್ಲಿ ತುಂಗಾ ಜಲಾಯಶದಿಂದ ಭದ್ರಾ ಜಲಾಶಯಕ್ಕೆ ನೀರು ತುಂಬಿಸಿ ಅಪರ್ ಭದ್ರಾ ಯೋಜನೆ ನೀರು ನೀಡುವ ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದರೆ ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ರೈತರಿಗೆ ಅನುಕೂಲವಾಗಲಿದೆ. ಇಲ್ಲದಿದ್ದರೆ, ನಮ್ಮ ಭಾಗದ ರೈತರಿಗೆ ಅನಾನುಕೂಲವಾಗಲಿದೆ. ಕೂಡಲೇ ಸರ್ಕಾರ ಈ ಯೋಜನೆಯ ಕಾಮಗಾರಿ ಪೂರ್ಣಗೊಳಿಸಬೇಕು. ರಾಗಿ, ಭತ್ತ, ತೊಗರಿ ಬೆಂಬಲ ಬೆಲೆಯಡಿ ಖರೀದಿಸಿದಂತೆ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಡಿ ಖರೀದಿಸಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್ ಪಾರ್ಸಿ ಧರ್ಮದವರಿಗೆ 75% ಸ್ಥಾನ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ 25% ಸ್ಥಾನಗಳು ಮೀಸಲಾಗಿವೆ.ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆಯ ಆಧಾರದ ಮೇಲೆ ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ : https://sevasindhuservices.karnataka.gov.in/

ಪ್ರವೇಶ ಪಡೆಯಲು ಅರ್ಹತೆಗಳು

  • 05 ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
  • ಪೋಷಕರ ಆದಾಯದ ಮಿತಿ ಎಸ್.ಸಿ/ಎಸ್.ಟಿ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ
  • 1 ಲಕ್ಷ ರೂ.ಗಳು ಮತ್ತು ಅಲ್ಪಸಂಖ್ಯಾತರಿಗೆ 2.5ಲಕ್ಷ ರೂ.ಗಳು ಮತ್ತು ಹಿಂದುಳಿದ ವರ್ಗದವರಿಗೆ 44500/- ರೂ.ಗಳಿಗೆ ಮೀರಿರಬಾರದು.

ವಸತಿ ಶಾಲೆಯಲ್ಲಿ ದೊರೆಯುವ ಸೌಲಭ್ಯಗಳು

  • ಆಯ್ಕೆಯಾದ ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದ 12 ತರಗತಿಯವರೆಗೆ ಉಚಿತ ಶಿಕ್ಷಣ.
  • ಉಚಿತ ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, ಸಮವಸ್ತ್ರ, ಶೂ ಮತ್ತು ಸಾಕ್ಸ್, ಹಾಸಿಗೆ ಹೊದಿಕೆ ಜೊತೆಗೆ ಉತ್ತಮ ಮೂಲ ಸೌಲಭ್ಯ ಒದಗಿಸಲಾಗುವುದು.
  • ಸುಸಜ್ಜಿತ ಕೊಠಡಿ ಹಾಗೂ ವಸತಿ ನಿಲಯಗಳು, ವಿದ್ಯುತ್ ವ್ಯವಸ್ಥೆ, 24×7 ಬಿಸಿ ನೀರಿನ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇದೆ.
  • ನುರಿತ ಶಿಕ್ಷಕರು ಮತ್ತು ಉಪನ್ಯಾಸಕರಿಂದ ಭೋದನೆ, ಪ್ರತಿ ವಿಷಯಕ್ಕೆ ಸುಸಜ್ಜಿತ ಪ್ರಯೋಗಾಲಯ ಸೌಲಭ್ಯ ಹಾಗೂ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ ಇದೆ.
  • ಉಚಿತ ವಸತಿ ಮತ್ತು ಭೋಜನ ವ್ಯವಸ್ಥೆ ಇದೆ. ಜೊತೆಗೆ 24×7 CCTV ನಿರೀಕ್ಷಣೆಯಲ್ಲಿ ಇರುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ

Published

on

ಸುದ್ದಿದಿನ,ದಾವಣಗೆರೆ:ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ಸಹಕಾರ ಸಂಘಗಳ ನಿಯಮ 1960ರಡಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಿಧದ ಸಹಕಾರ ಸಂಘಗಳ ಸದಸ್ಯರು ಮಾರ್ಚ್ 31ರೊಳಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಹೊಸ ಸದಸ್ಯರನ್ನು ನೊಂದಾಯಿಸುವ ಮತ್ತು ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಮತ್ತು ಯಾವುದೇ ಒಂದು ಸಹಕಾರ ಸಂಘದ ಸದಸ್ಯರಾಗಿದ್ದರೆ, ಈ ಯೋಜನೆಯ ಫಲಾನಭವಿಗಳಾಗಬಹುದು ಎಂದು ಸಹಕಾರ ಸಂಘಗಳ ಉಪನಿಬಂಧಕ ಮಧು ಶ್ರೀನಿವಾಸ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ16 hours ago

ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ...

ದಿನದ ಸುದ್ದಿ19 hours ago

ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್...

ದಿನದ ಸುದ್ದಿ20 hours ago

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ

ಸುದ್ದಿದಿನ,ದಾವಣಗೆರೆ:ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ಸಹಕಾರ ಸಂಘಗಳ ನಿಯಮ 1960ರಡಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಿಧದ ಸಹಕಾರ ಸಂಘಗಳ ಸದಸ್ಯರು ಮಾರ್ಚ್ 31ರೊಳಗಾಗಿ ಯಶಸ್ವಿನಿ...

ದಿನದ ಸುದ್ದಿ20 hours ago

ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ಸುದ್ದಿದಿನ,ದಾವಣಗೆರೆ:ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಜೀವಿತಾವಧಿ ಪ್ರಮಾಣ...

ದಿನದ ಸುದ್ದಿ21 hours ago

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ

ಸುದ್ದಿದಿನಡೆಸ್ಕ್:ಭಾರತದ 6 ಮಹತ್ವದ ಐತಿಹಾಸಿಕ ಸ್ಥಳಗಳು ಹಾಗೂ ಹೆಗ್ಗುರುತುಗಳು ಯುನೆಸ್ಕೋದ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ, ಸೇರ್ಪಡೆಗೊಂಡಿವೆ. ಇತ್ತೀಚೆಗೆ ಚಕ್ರವರ್ತಿ ಅಶೋಕನ ಶಿಲಾ ಶಾಸನಗಳು ಈ...

ದಿನದ ಸುದ್ದಿ2 days ago

ನೆಲಮಂಗಲ ಸಮೀಪದ ದಾಸನಪುರದಲ್ಲಿ 306 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕೃಷಿ ಮಾರುಕಟ್ಟೆ ನಿರ್ಮಾಣ : ಸಚಿವ ಶಿವಾನಂದಪಾಟೀಲ್

ಸುದ್ದಿದಿನ,ಬೆಂಗಳೂರು:ರಾಜ್ಯದಲ್ಲಿ ಪ್ರಸ್ತುತ 171 ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಹಾಗೂ 410 ಉಪ ಮಾರುಕಟ್ಟೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಸಚಿವ ಶಿವಾನಂದ ಪಾಟೀಲ್ ವಿಧಾನಪರಿಷತ್ತಿಗೆ ಇಂದು ತಿಳಿಸಿದರು....

ದಿನದ ಸುದ್ದಿ3 days ago

ಕವಿತೆ | ಮತ್ತಿನ ಕುಣಿಕೆ

ಗುರು ಸುಳ್ಯ ನಿದೆರೆಗೆ ದೂಡದ ಮದಿರೆಯ ಅನುಭವ ಸದಾ ಸಂಕಟಗಳ ಹೆರುವ ಮತ್ತಿನ ಕುಣಿಕೆ ನನ್ನ ಮಡಿಲ ಮೇಲೆ ನನ್ನದೇ ಒಡಲು ಮಲಗಿರಲು ಮಲಗಲು ಹಂಬಲಿಸುವ ಮಗುವಿನ...

ದಿನದ ಸುದ್ದಿ4 days ago

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು. ಶಾಸಕ ನಿವಾಸದಲ್ಲಿ ಶನಿವಾರ...

ದಿನದ ಸುದ್ದಿ5 days ago

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು....

ದಿನದ ಸುದ್ದಿ6 days ago

2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ. ಅರ್ಹರನ್ನು...

Trending