ದಿನದ ಸುದ್ದಿ
ಕುಡಚಿ ಶಾಸಕ ಪಿ. ರಾಜೀವ್ ಅವರಿಗೆ ಮಂತ್ರಿಸ್ಥಾನ ನೀಡದಿದ್ದರೆ ಉಗ್ರ ಹೋರಾಟ : ಬಂಜಾರ ಸಮುದಾಯ ರಾಜ್ಯಾಧ್ಯಕ್ಷೆ ಸವಿತಾ ಬಾಯಿ ಮಲ್ಲೇಶ ನಾಯ್ಕ ಎಚ್ಚರಿಕೆ
ಸುದ್ದಿದಿನ, ಚಿತ್ರದುರ್ಗ : ಕುಡಚಿ ಶಾಸಕರಾದ ಪಿ. ರಾಜೀವ್ ಇವರಿಗೆ ಮಂತ್ರಿಸ್ಥಾನವನ್ನು ಕೊಡಲೇಬೇಕು. ಇಲ್ಲವಾದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ನಮ್ಮಬಂಜಾರ ಸಮುದಾಯದಿಂದ ಉಗ್ರ ಹೋರಾಟವನ್ನು ಮಾಡಲಾಗುತ್ತದೆ ಎಂದು ರಾಜ್ಯ ಬಂಜಾರ ಸಮಾಜದ ಅಧ್ಯಕ್ಷರಾದ ಶ್ರೀಮತಿ ಸವಿತಾ ಬಾಯಿ, ಮಲ್ಲೇಶನಾಯ್ಕ (ಮಹಿಳಾ ಘಟಕ), ಅವರು ಎಚ್ಚರಿಕೆ ನೀಡಿದರು.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ವರ್ಗದವರನ್ನು ಭಾಜಪ ಸರ್ಕಾರದವರು ನಿರ್ಲಕ್ಷಿಸಿ ತಮ್ಮ ಪುರಾತನ ಕಾಲದ ಜಾತಿಯತೆಯ ಚಾಳಿಯನ್ನು ಮುಂದುವರಿಸಿದ್ದಾರೆ ಎಂದು ಕಿಡಿಕಾರಿದರು.
ಬಿಜೆಪಿ ಸರ್ಕಾರವು ಮೇಲ್ದಾತಿಯ ಜನರಿಗೆ ತಮಗೆ ಬೇಕಾದ ಎಲ್ಲಾ ಖಾತೆಗಳನ್ನು ಕೊಟ್ಟು ನಮ್ಮ 3300 ತಾಂಡಗಳಲ್ಲಿ ಬಂಜಾರ ಜನಾಂಗದವರಿಗೆ ಕೇವಲ ಒಂದೇ ಒಂದು ಖಾತೆಯನ್ನು ಕೊಟ್ಟಿದ್ದಾರೆ.
ಕರ್ನಾಟಕದಲ್ಲಿ 30 ರಿಂದ 35 ಲಕ್ಷ ಜನಗತಿಯಿದ್ದು ನಮ್ಮ ಜಾತಿಯ ಕೇವಲ ಒಬ್ಬರಿಗೆ ಮಾತ್ರ ತೂರಿಕೆಯ ರೀತಿಯಲ್ಲಿ ಮಂತ್ರಿ ಪದವಿಕೊಟ್ಟು ಉಳಿದಂತಹ ಕೇವಲ 3 ರಿಂದ 4 ಲಕ್ಷ ಜನಗತಿಯ ಮೇಲ್ದಾತಿಯವರಿಗೆ ಎರಡು ಮಂತ್ರಿ ಸ್ಥಾನವನ್ನು ಕೊಟ್ಟು ತಾರತಮ್ಯ ಮತ್ತು ಜಾತೀಯತೆಯನ್ನು ತೋರಿಸಿದ್ದಾರೆ ಎಂದರು.
ನಮ್ಮ ಹಿಂದುಳಿದ ಜನರಿಗೆ ಇನ್ನೊಂದು ಮಂತ್ರಿಸ್ಥಾನ ಕೊಟ್ಟು ತಮ್ಮ ಜಾತೀಯತೆ ಸಂಸ್ಕೃತಿಗೆ ಪರದೆ ಎಳೆಯಬೇಕು ಹಾಗೂ ನಮ್ಮ ಸಮಾಜಕ್ಕೆ ಸರಿಸಮನಾದ ಹಕ್ಕುಗಳನ್ನು ಕೊಡಬೇಕು ಎಂದು ಒತ್ತಾಯಿಸಿದರು.
ಹಿಂದಿನ ಸರ್ಕಾರ ನಮ್ಮ ತಾಂಡ, ಅಭಿವೃದ್ಧಿ ನಿಗಮಕ್ಕೆ 250 ರಿಂದ 500 ಕೋಟಿ ರೂಪಾಯಿಗಳನ್ನು ಅನುದಾನವಾಗಿ ನೀಡಿದ್ದರು. ಆದರೆ ಇಂದಿನ ಮೇಲ್ವಾತಿ ವರ್ಷದ ಬಿಜೆಪಿ ಸರ್ಕಾರ ಕೇವಲ 25 ಕೋಟಿ ಅನುದಾನ ನೀಡುತ್ತೇವೆಂದು ಹೇಳಿ ಇದುವರೆಗೆ ಯಾವುದೇ ರೀತಿಯ ಅನುದಾನ ಬಿಡುಗಡೆ ಮಾಡಿರುರುವುದಿಲ್ಲ. ಹಾಗೂ ಅವರು ಬಿಡುಗಡೆ ಮಾಡುತ್ತೇವೆ ಎಂದು ಅನುದಾನವು ನಮ್ಮ ಕಛೇರಿಯ ಖರ್ಚು ವೆಚ್ಚಗಳಿಗೆ ಸಾಲುವುದಿಲ್ಲ. ಇನ್ನೂ ತಾಂಡ ಅಭಿವೃದ್ಧಿ ಕಷ್ಟ ಸಾಧ್ಯ ಹಾಗೂ ಇದು ಒಂದು ಕನಸೋ ಎನ್ನುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ವಿಡಿಯೋ ನೋಡಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243