Connect with us

ದಿನದ ಸುದ್ದಿ

ಕುಡಚಿ ಶಾಸಕ ಪಿ. ರಾಜೀವ್ ಅವರಿಗೆ ಮಂತ್ರಿಸ್ಥಾನ ನೀಡದಿದ್ದರೆ ಉಗ್ರ ಹೋರಾಟ : ಬಂಜಾರ ಸಮುದಾಯ ರಾಜ್ಯಾಧ್ಯಕ್ಷೆ ಸವಿತಾ ಬಾಯಿ ಮಲ್ಲೇಶ ನಾಯ್ಕ ಎಚ್ಚರಿಕೆ

Published

on

ಸುದ್ದಿದಿನ, ಚಿತ್ರದುರ್ಗ : ಕುಡಚಿ ಶಾಸಕರಾದ ಪಿ. ರಾಜೀವ್ ಇವರಿಗೆ ಮಂತ್ರಿಸ್ಥಾನವನ್ನು ಕೊಡಲೇಬೇಕು. ಇಲ್ಲವಾದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ನಮ್ಮಬಂಜಾರ ಸಮುದಾಯದಿಂದ ಉಗ್ರ ಹೋರಾಟವನ್ನು ಮಾಡಲಾಗುತ್ತದೆ ಎಂದು ರಾಜ್ಯ ಬಂಜಾರ ಸಮಾಜದ ಅಧ್ಯಕ್ಷರಾದ ಶ್ರೀಮತಿ ಸವಿತಾ ಬಾಯಿ, ಮಲ್ಲೇಶನಾಯ್ಕ (ಮಹಿಳಾ ಘಟಕ), ಅವರು ಎಚ್ಚರಿಕೆ ನೀಡಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ವರ್ಗದವರನ್ನು ಭಾಜಪ ಸರ್ಕಾರದವರು ನಿರ್ಲಕ್ಷಿಸಿ ತಮ್ಮ ಪುರಾತನ ಕಾಲದ ಜಾತಿಯತೆಯ ಚಾಳಿಯನ್ನು ಮುಂದುವರಿಸಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿ ಸರ್ಕಾರವು ಮೇಲ್ದಾತಿಯ ಜನರಿಗೆ ತಮಗೆ ಬೇಕಾದ ಎಲ್ಲಾ ಖಾತೆಗಳನ್ನು ಕೊಟ್ಟು ನಮ್ಮ 3300 ತಾಂಡಗಳಲ್ಲಿ ಬಂಜಾರ ಜನಾಂಗದವರಿಗೆ ಕೇವಲ ಒಂದೇ ಒಂದು ಖಾತೆಯನ್ನು ಕೊಟ್ಟಿದ್ದಾರೆ.

ಕರ್ನಾಟಕದಲ್ಲಿ 30 ರಿಂದ 35 ಲಕ್ಷ ಜನಗತಿಯಿದ್ದು ನಮ್ಮ ಜಾತಿಯ ಕೇವಲ ಒಬ್ಬರಿಗೆ ಮಾತ್ರ ತೂರಿಕೆಯ ರೀತಿಯಲ್ಲಿ ಮಂತ್ರಿ ಪದವಿಕೊಟ್ಟು ಉಳಿದಂತಹ ಕೇವಲ 3 ರಿಂದ 4 ಲಕ್ಷ ಜನಗತಿಯ ಮೇಲ್ದಾತಿಯವರಿಗೆ ಎರಡು ಮಂತ್ರಿ ಸ್ಥಾನವನ್ನು ಕೊಟ್ಟು ತಾರತಮ್ಯ ಮತ್ತು ಜಾತೀಯತೆಯನ್ನು ತೋರಿಸಿದ್ದಾರೆ ಎಂದರು.

ನಮ್ಮ ಹಿಂದುಳಿದ ಜನರಿಗೆ ಇನ್ನೊಂದು ಮಂತ್ರಿಸ್ಥಾನ ಕೊಟ್ಟು ತಮ್ಮ ಜಾತೀಯತೆ ಸಂಸ್ಕೃತಿಗೆ ಪರದೆ ಎಳೆಯಬೇಕು ಹಾಗೂ ನಮ್ಮ ಸಮಾಜಕ್ಕೆ ಸರಿಸಮನಾದ ಹಕ್ಕುಗಳನ್ನು ಕೊಡಬೇಕು ಎಂದು ಒತ್ತಾಯಿಸಿದರು‌.

ಹಿಂದಿನ ಸರ್ಕಾರ ನಮ್ಮ ತಾಂಡ, ಅಭಿವೃದ್ಧಿ ನಿಗಮಕ್ಕೆ 250 ರಿಂದ 500 ಕೋಟಿ ರೂಪಾಯಿಗಳನ್ನು ಅನುದಾನವಾಗಿ ನೀಡಿದ್ದರು. ಆದರೆ ಇಂದಿನ ಮೇಲ್ವಾತಿ ವರ್ಷದ ಬಿಜೆಪಿ ಸರ್ಕಾರ ಕೇವಲ 25 ಕೋಟಿ ಅನುದಾನ ನೀಡುತ್ತೇವೆಂದು ಹೇಳಿ ಇದುವರೆಗೆ ಯಾವುದೇ ರೀತಿಯ ಅನುದಾನ ಬಿಡುಗಡೆ ಮಾಡಿರುರುವುದಿಲ್ಲ. ಹಾಗೂ ಅವರು ಬಿಡುಗಡೆ ಮಾಡುತ್ತೇವೆ ಎಂದು ಅನುದಾನವು ನಮ್ಮ ಕಛೇರಿಯ ಖರ್ಚು ವೆಚ್ಚಗಳಿಗೆ ಸಾಲುವುದಿಲ್ಲ. ಇನ್ನೂ ತಾಂಡ ಅಭಿವೃದ್ಧಿ ಕಷ್ಟ ಸಾಧ್ಯ ಹಾಗೂ ಇದು ಒಂದು ಕನಸೋ ಎನ್ನುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವಿಡಿಯೋ ನೋಡಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕವಿತೆ | ಮತ್ತಿನ ಕುಣಿಕೆ

Published

on

  • ಗುರು ಸುಳ್ಯ

ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ

ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ

ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…

ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ

ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ

ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)

ಕವಿ : ಗುರು ಸುಳ್ಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

Published

on

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು.

ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

Published

on

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending