Connect with us

ಭಾವ ಭೈರಾಗಿ

ಕವಿತೆ | ಕಲಿಯಲು ಮತ್ತು ಕಾರ್ಯೋನ್ಮುಖರಾಗಲು ಎದ್ದೇಳಿ

Published

on

  • ಸ್ವತಃ ಸಾವಿತ್ರಿ ಬಾಫುಲೆಯವರೇ ರಚಿಸಿದ ಒಂದು ಕವನ, ಅವರ ಹುಟ್ಟು ಹಬ್ಬದ ಸಂದರ್ಭದಲ್ಲಿ. ಈ ಕವಿತೆಯನ್ನು”ಕಬ್ಯ ಫುಲೆ” ಕವನ ಸಂಕಲನದಿಂದ ಆಯ್ದುಕೊಳ್ಳಲಾಗಿದೆ. ಪ್ರಕಟಣೆ: 1854

-ಸಾವಿತ್ರಿ ಬಾಫುಲೆ
ಕನ್ನಡಕ್ಕೆ : ಅಲೆಮಾರಿ

ಲಹೀನರೇ ಮತ್ತು ದಬ್ಬಾಳಿಕೆಗೊಳಪಟ್ಟವರೇ
ಎದ್ದೇಳಿ ನನ್ನ ಸೋದರರೇ
ಗುಲಾಮಗಿರಿಯ ಜೀವನದಿಂದ ಹೊರಬನ್ನಿರಿ
ಮನು-ಹಿಂಬಾಲಕ ಪೇಶ್ವೆಗಳು
ಸತ್ತು ತೊಲಗಿದರು
ಮನುವೇ ನಮಗೆ ಶಿಕ್ಷಣವನ್ನು
ನಿಷೇಧಿಸಿದ್ದು
ಜ್ಞಾನ ನೀಡುವ ಆಂಗ್ಲರು
ಬಂದಿರುವರು
ಕಲಿಯಿರಿ, ನಿಮಗೆ ಈ
ಸಹಸ್ರಮಾನದಲ್ಲೆ ಅವಕಾಶವಿರಲಿಲ್ಲ
ನೀವು ಕಲಿಯಿರಿ ಮತ್ತು
ನಿಮ್ಮ ಮಕ್ಕಳಿಗೆ ಕಲಿಸಿರಿ
ಜ್ಞಾನ ಪಡೆಯಿರಿ, ತಾರತಮ್ಯವನರಿಯಲು
ಜಾಣರಾಗಿರಿ.

ಮತ್ಸರದ ಕಿಡಿ ಉರಿಯುತ್ತಿದೆ
ನನ್ನ ಆತ್ಮದಲ್ಲಿ
ಅಳುತ್ತಿದೆ ಜ್ಞಾನಕ್ಕಾಗಿ
ಅದೇ ಎಲ್ಲವಾಗಿ
ಈ ಕೊಳೆತ ಗಾಯ
ಜಾತಿಯ ಗುರುತು
ಅಳಿಸುವೆ ಕಡೆಗೊಂದು ದಿನ
ನನ್ನ ಜೀವನದಲ್ಲಿ.

ಬಲಿರಾಜನ ರಾಜ್ಯದಲ್ಲಿ
ಜಾಗೃತರಾಗುವ
ನಮ್ಮ ಶ್ರೇಷ್ಠ ಬಾವುಟ
ಹಾರುತ್ತಿದೆ ಮತ್ತು ಪ್ರಜ್ವಲಿಸುತ್ತಿದೆ
“ಕಷ್ಟ ದೂರವಾಗಲಿ ಮತ್ತು
ಬಲಿ ರಾಜ್ಯ ಬರಲಿ”
ಎಂದು ನಾವು ಹೇಳುವ
ಏಳಿ, ಎದ್ದೇಳಿ ಮತ್ತು ಶಿಕ್ಷಿತರಾಗಿ
ಸಂಪ್ರದಾಯ ಮರಿಯಿರಿ
ಮುಕ್ತಿಯನ್ನು ಹೊಂದಿರಿ
ಬರುವೆವು ನಾವು ಒಟ್ಟಾಗಿ
ಮತ್ತು ಕಲಿಯುವೆವು
ರಾಜನೀತಿ-ಸರಿದಾರಿ-ಧರ್ಮವ
ನಿದ್ರಿಸದಿರಿ ಆದರೆ
ಊದಿರಿ ಕಹಳೆಯ
ಓ ಬ್ರಾಹ್ಮಣ, ಕಸಿವಿಸಿಯಾದೀಯ ಜೋಕೆ
ರಣಕಹಳೆ ಊದಿರಿ
ಬೇಗನೆ ಎದ್ದೇಳಿರಿ
ಕಲಿಯಲು ಎದ್ದೇಳಿ
ಮತ್ತು ಕಾರ್ಯೋನ್ಮುಖರಾಗಿರಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಕವಿತೆ | ಅಲರ್ಟ್..!

Published

on

  • ಸುನೀತ ಕುಶಾಲನಗರ

ದಿಯ ನೇವರಿಸಿದ ಗಾಳಿ
ಮುದಗೊಳಿಸಿ ಸರಿಯಿತು.
ಜಡಿ ಮಳೆ ಧೋ ಎಂದು
ಸಕಾಲಿಕವಾಗಿ ಸುರಿದು
ಹೊಸ ಹುಟ್ಟು.

ಆದರೇನು?
ಹಿಂಗಾರು, ಮುಂಗಾರು
ಆಗೊಮ್ಮೆ ಈಗೊಮ್ಮೆ
ಪದೇ ಪದೇ ಅದೇ ರಾಗ .

ಸುರಿದು ತುಂತುರು
ಕಾಣಿಸಿ ನಿಂತಿತೆನ್ನುವಾಗ
ಮತ್ತೆ ನಿಲ್ಲದ ಹಠ.

ಮಳೆಗೆ ಈಗ ಮುಟ್ಟು
ನಿಲ್ಲುವ ಸಮಯವೋ?
ಗುಡುಗು,ಮಿಂಚಿನಿಂದ
ಮುಟ್ಟಿನಲ್ಲಿ ಏರುಪೇರೋ ?
ಒಟ್ಟಿನಲ್ಲಿ
ನದಿಯ ಸೋಕಿದ ಗಾಳಿ
ಸಮುದ್ರದೊಳಗೆ ವಿಲೀನ.

ಅಕಾಲಿಕ ಮಳೆ…
ಇಳೆಗೆ ಸೊಂಟ ಬೇನೆ
ನದಿಯ ತಾಕಿದ ಬೆಳದಿಂಗಳು
ಕಿವಿಯಲ್ಲಿ ಉಸುರಿತು

ಹರಿಯುತ್ತಿರುವ ನದಿಯು
ಬೀಸುವ ಗಾಳಿಯು
ತಲೆಯೆತ್ತಿ ನಿಂತ ಬೆಟ್ಟವೂ
ಸ್ಥಾನ ಬದಲಿಸಲು
ಹೊತ್ತು ಬೇಕೆ?
ನಿಲ್ಲದ ಮಳೆಯ ಮುಟ್ಟಿಗೆ
ಸಲ್ಲುವ ಘೋಷಣೆ
ಹೈ ಅಲರ್ಟ್!

ಬದುಕಿನ ಧ್ಯಾನ
ಯೆಲ್ಲೋ, ಆರೆಂಜ್, ರೆಡ್
ಬಣ್ಣಗಳ ಅಲರ್ಟ್ ನಲ್ಲೇ
ಕಳೆದು ಹೋಗುತ್ತಿದೆ.

ಕಾಮನ ಬಿಲ್ಲ ತೋರಿಸಿ
ಸರಿದು ಬಿಡು ಮಳೆಯೇ
ಇಳೆಯ ಉಸಿರು
ಹಸಿರಾಗಲಿ. (ಕವಯಿತ್ರಿ: ಸುನೀತ ಕುಶಾಲನಗರ)

ಕವಯಿತ್ರಿ: ಸುನೀತ ಕುಶಾಲನಗರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಕವಿತೆ | ಮತ್ತಿನ ಕುಣಿಕೆ

Published

on

  • ಗುರು ಸುಳ್ಯ

ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ

ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ

ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…

ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ

ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ

ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)

ಕವಿ : ಗುರು ಸುಳ್ಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಮ್ಮ‌ ಪೂರ್ವಿಕ ಶಿವನೂ ; ಅವರ ಡುಬಾಕು ಸನಾತನವೂ..

Published

on

  • ಹರ್ಷಕುಮಾರ್ ಕುಗ್ವೆ

ಲಿಂಗವು ದೇವರಲ್ಲ ಶಿವನು ದೇವರಲ್ಲ
ಶಕ್ತಿಯೂ ದೇವರಲ್ಲ. ಮನುಷ್ಯನ ಕಲ್ಪನೆಯ ಆಳವನ್ನು ಮೀರಿದ ಯಾವ ದೇವರೂ ಇಲ್ಲ. ಅಸಲಿಗೆ ಇಡೀ ಜಗತ್ತನ್ನು ನಡೆಸುವ ದೇವರೆಂಬುದೇ ಇಲ್ಲ.

ಶಿವನು ನಮ್ಮ ಪೂರ್ವಿಕ, ಗೌರಿ ಅತವಾ ಶಕ್ತಿ ನಮ್ಮ ಪೂರ್ವಿಕಳು. ಗಂಗೆ ನಮ್ಮ ಬದುಕು. ಶಿವನ ಕೊರಳಿನ ನಾಗ ನಮ್ಮ ಕುಲ. ಲಿಂಗ ಫಲವಂತಿಕೆಯ ಸಂಕೇತವೂ ಹೌದು, ಶಿವ ಶಕ್ತಿಯರ ಸಮಾಗಮದ ಸಂಕೇತವೂ ಹೌದು. ನಮ್ಮ ಜನರಿಗೆ ಸಂಕೇತಗಳು ಶಕ್ತಿಯಾಗಿದ್ದವು, ಪ್ರೇರಣೆಯಾಗಿದ್ದವು. ಡೊಳ್ಳು ಹೊಡೆದು ಕೇಕೆ ಹಾಕಿದಾಗ ಮಳೆ ಬಂದರೆ, ನಮ್ಮ ಡೊಳ್ಳಿನ ಸದ್ದಿನ ಶಕ್ತಿಯಿಂದಲೇ, ನಮ್ಮ ಕೇಕೆಯಿಂದಲೇ ಮಳೆ ಬಂತು ಎಂದು ನಂಬಿದರು. ಇದನ್ನು primitive magic ಪರಿಕಲ್ಪನೆ ಎನ್ನಲಾಗಿದೆ.‌ ನಮ್ಮ ಬಳ್ಳಾರಿಯ ಸಂಗನಕಲ್ಲಿನಲ್ಲಿ 3000 ವರ್ಷಗಳ ಹಿಂದೆ ಕಲ್ಲು ಬಂಡೆಗಳ ಮೇಲೆ ಕೆತ್ತಿದ ಹೋರಿ ಮತ್ತು ಉದ್ದ ಕೊಂಬಿನ ಕೆತ್ತನೆಗಳು ಸಹ ಇಂತಹ ಒಂದು ಆದಿಮ ಮಾಂತ್ರಿಕ ಶಕ್ತಿಯ ಆಚರಣೆಯಾಗಿದೆ.

ನಂಬಿಕೆಗಳನ್ನು ಸಂಸ್ಕೃತಿಯಾಗಿ, ಪರಂಪರೆಯಾಗಿ ಗ್ರಹಿಸಬೇಕೇ ಹೊರತು ದೇವರಾಗಿ ಅಲ್ಲ. ದೇವ ಎಂಬ ಕಲ್ಪನೆಯೇ ದ್ರಾವಿಡರಲ್ಲಿ ಇರಲಿಲ್ಲ. 50 ಸಾವಿರ ವರ್ಷಗಳಿಂದ ಬಂದ ಲಿಂಗ- ಯೋನಿ ಪೂಜೆ, ಗೌರಿ ಪೂಜೆ, 9,000 ವರ್ಷಗಳಿಂದ ಬಂದ ಬೂಮ್ತಾಯಿ ಪೂಜೆ, ಅರಳಿ ಮರದ ಪೂಜೆ, ಐದು ಸಾವಿರ ವರ್ಷಗಳಿಂದ ಬಂದ ಶಿವನ ಪೂಜೆ, ಗಣಪತಿ ಪೂಜೆ, ನಾಗನ ಪೂಜೆ, 4000 ವರ್ಷಗಳಿಂದ ಬಂದ ಗತಿಸಿದ ಹಿರೀಕರ ಪೂಜೆ, ಇದರ ಮುಂದುವರಿಕೆಯಾಗಿಯೇ 2600 ವರ್ಷಗಳ ಹಿಂದೆ ಬುದ್ದ ಗುರುವು ತೀರಿದ ಬಳಿಕ ಅವನ ಅಸ್ತಿಯನ್ನು ಇಟ್ಟ ಸ್ತೂಪಗಳನ್ನು ಪೂಜಿಸಿದೆವು, ದೂಪ ಹಾಕಿದೆವು..‌. ಇದುವೇ ಈ ನೆಲದ ಪೂಜನ ಸಂಸ್ಕತಿಯಾಗಿತ್ತು.

‘ದೇವ’ ಮತ್ತು ಅಸುರ ಇಬ್ಬರೂ ಬಂದಿದ್ದು ಮಧ್ಯ ಏಷ್ಯಾದಿಂದ ಹೊರಟಿದ್ದ ಆರ್ಯರಿಂದಲೇ. ಅವರಿಗೆ ಪೂಜೆ ಗೊತ್ತಿರಲಿಲ್ಲ. ಯಜ್ಞ ಗೊತ್ತಿತ್ತು, ಹೋಮ ಗೊತ್ತಿತ್ತು. ‘ದೇವ’ ಅತವಾ “ದ-ಏವ” ಕೂಡಾ ಮೂಲದಲ್ಲಿ ಆರ್ಯರ ಪೂರ್ವಿಕ ಕುಲ ನಾಯಕರೇ ಆಗಿದ್ದಾರು.‌.. ಹೀಗಾಗಿಯೇ ಆರ್ಯ ವೈದಿಕರ ದೇವ ಎಂದರೆ ಅವರ ದಾಯಾದಿಗಳಾಗಿದ್ದ ಪಾರ್ಸಿಯನ್ (ಜೊರಾಸ್ಟ್ರಿಯನ್) ಆರ್ಯ ಅವೆಸ್ತನ್ನರಿಗೆ ಕೆಡುಕಿನ ಸಂಕೇತ‌ವಾಗಿತ್ತು. ಹಾಗೇ ಆರ್ಯ ವೈದಿಕರು ಕೆಡುಕು ಎಂದ ಅಸುರ (ಅಹುರ) ಆರ್ಯ ಅವೆಸ್ತನ್ನರ ಪಾಲಿಗೆ “ನಾಯಕ”ನಾಗಿದ್ದ. ಅವರನ್ನು ಅಹುರ ಮಜ್ದಾ ಎಂದು ಕರೆದು ಆರಾದಿಸಿದರು.

ಭಾರತಕ್ಕೆ ಪ್ರವೇಶಿಸಿದ ಬಳಿಕ ಆರ್ಯ ವೈದಿಕರಿಗೆ ಈ ನೆಲದ ಮೊದಲ ನಿವಾಸಿಗಳ ಮೇಲೆ ಯಜಮಾನಿಕೆ ಸ್ತಾಪಿಸಬೇಕಿತ್ತು. ಅದಕ್ಕಾಗಿ ನಮ್ಮಿಂದ ಪೂಜೆಗೊಳ್ಳುತ್ತಿದ್ದ ಪೂರ್ವಿಕರನ್ನು ತಮ್ಮ “ದೇವರು” ಮಾಡಿದರು. ಆ ದೇವರ ಪೂಜೆಗೆ ಅವರೇ ನಿಂತರು. ತಮ್ಮ ಜುಟ್ಟು ಬಿಟ್ಟುಕೊಂಡು ನಮ್ಮ ಜುಟ್ಟು ಹಿಡಿದರು. ನಾವು ಪೂರ್ವಿಕರನ್ನು ಬಿಟ್ಟು ಕೊಟ್ಟು, ಅವರ ಕೈಯಲ್ಲಿ ದೇವರುಗಳ ಪೂಜೆ ನಡೆಯುವಾಗ ನಮ್ಮ ಪೂರ್ವಿಕರಿಗೆ ಗೊತ್ತೇ ಇರದಿದ್ದ ವೇದ ಮಂತ್ರಗಳನ್ನ ಕೇಳಿ ಪುನೀತರಾದೆವು. ಈ ಮಂತ್ರ ಭಾಷೆಯೇ ದೇವರಿಗೆ ಅರ್ಥವಾಗುವುದು ಎಂದು ಪುಂಗಿದ್ದಕ್ಕೆ ತಲೆಯಾಡಿಸಿ ಕೈಮುಗಿದು ಗರ್ಭಗುಡಿಯ ಹೊರಗೆ ಸಾಲಿನಲ್ಲಿ ನಿಂತೆವು.‌ ಮುಂದಿನ 2000 ವರ್ಷಗಳ ಕಾಲ ಗುಲಾಮರಾದೆವು.‌ ಪುರಾಣಗಳನ್ನು ಕೇಳಿದೆವು, ನಂಬಿದೆವು ಮತಿಗೆಟ್ಟೆವು, ಗತಿಗೆಟ್ಟೆವು.

ಇನ್ನೂ ಉಳಿದಿರುವುದೇನು?
ನಾವು ಶಿವನ ವಕ್ಕಲು, ಗೌರಿ- ಗಂಗೆಯರ ಒಕ್ಕಲು. ಅವರು ಇಂದ್ರ ಅಗ್ನಿಯರ ವಕ್ಕಲಾಗಿದ್ದವರು ತಮ್ಮ ದೇವರಿಗೆ ಕಿಮ್ಮತ್ತಿಲ್ಲ ಎಂದರಿತು ಅವರನ್ನೇ ಬಿಟ್ಟರು. ಈಗ ಹೇಳುತ್ತಾರೆ ನಾವೇ ಸನಾತನರು ಎಂದು! ಅವರ ಡುಬಾಕು ಸನಾತನದಲ್ಲಿ ನಮ್ಮತನ ಕಳೆದುಕೊಂಡ “ಶೂದ್ರ ಮುಂಡೇಮಕ್ಕಳಾಗಿ”, ಅವರಿಗಾಗಿ ಬಾಳು ಬದುಕು ಹಾಳುಮಾಡಿಕೊಂಡು, ಅವರ ಹೋಮ ಹವನ ಮಾಡಿಸಿ, ನಮ್ಮ ಉಳಿಕೆ ಕಾಸು ಕಳೆದುಕೊಂಡು, ಗೌರವ ಗನತೆ ಕಳೆದುಕೊಳ್ಳುವುದೇ ಇವತ್ತಿನ ಸನಾತನ!

– ಹರ್ಷಕುಮಾರ್ ಕುಗ್ವೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending