ದಿನದ ಸುದ್ದಿ
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿ.ಯು.ಸಿ. ಮತ್ತು ಪದವಿ ,ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳು ತಮ್ಮ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಜಂಟಿ ನಿರ್ದೇಶಕಾರಾದ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿ ವಾಸವಿದ್ದರೆ ಮಾಹಿತಿ ಕೊಡಿ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳ ಉಪಟಳ ತಡೆಯಲು ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಮತ್ತು ಸರ್ಕಾರಿ ಆಸ್ಪತೆಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಮಾಹಿತಿಯನ್ನು ಹರಿಹರ ಪೌರಾಯುಕ್ತರಿಗೆ ನೀಡಲು ತಿಳಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖರೀದಿಸಿದ ಸಾಮಾಗ್ರಿಗಳ ಬಿಲ್ಲಿನ ದಿನಾಂಕಕ್ಕೂ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಇರುವ ವ್ಯತ್ಯಾಸಕ್ಕೆ ಸ್ಪಷ್ಟನೆ ಕೋರಿ 3 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ಕರ್ತವ್ಯ ಲೋಪ ಎಸಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದಾರೆ.
ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ರಿಂದ 2024-25ನೇ ಸಾಲಿನ ಅವಧಿಯ ದಾಸ್ತಾನು ವಹಿಯನ್ನು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಪಡೆದು ಪರಿಶಿಲನೆ ಮಾಡಿದಾಗ ಸಾಮಾಗ್ರಿಗಳು ಖರೀದಿ ದಿನಾಂಕ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಸಾಕಷ್ಟು ವ್ಯತ್ಯಾಸ ಕಂಡು ಬಂದಿದ್ದು, ಈ ಬಗ್ಗೆ ಸ್ಪಷ್ಟತೆ ನೀಡುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯವರಿಗೆ ಅರ್ಜಿ ಸಲ್ಲಿಸಿರುತ್ತಾರೆ. ನಿಗದಿತ ಅವಧಿಯಲ್ಲಿ ಯಾವುದೇ ಸ್ಪಷ್ಟನೆ ನೀಡದ ಕಾರಣ ಜ್ಞಾಪನವನ್ನು ನೀಡಲಾಗಿತ್ತು. ಜ್ಞಾಪನ ಪತ್ರ ನೀಡಿ ನಿಗದಿತ ಅವಧಿ ಮುಕ್ತಾಯವಾದರೂ ಯಾವುದೇ ಸ್ಪಷ್ಟನೆ ನೀಡದೆ ನಿರ್ಲಕ್ಷö್ಯ ತೋರಿದ ರೇಣುಕಾ ದೇವಿಯವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:2024 ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡಾಪಟುಗಳು ಅಧಿಕೃತ ಜಾಲತಾಣ http://sevasindhu.karnataka.gov.in ಆನ್ಲೈನ್ ಮೂಲಕ ಡಿಸೆಂಬರ್ 3 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-237480 ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ಹರ್ಷ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಕರ್ತವ್ಯ ಲೋಪ ; ಪಿ.ಮಣಿವಣ್ಣನ್, ಕ್ರೈಸ್ ಇ.ಡಿ ಕಾಂತರಾಜು ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಸಚಿವ ಪ್ರಿಯಾಂಕ ಖರ್ಗೆ ಪಂಚಾಯತ್ ರಾಜ್ ಇಲಾಖೆ ನಿರ್ಲಕ್ಷ್ಯ | ದೂರು ನೀಡಿ 6 ತಿಂಗಳಾದರೂ ಯಾವುದೇ ಕ್ರಮವಿಲ್ಲ ; ವಕೀಲ ಡಾ.ಕೆ.ಎ.ಓಬಳಪ್ಪ ಆರೋಪ
-
ದಿನದ ಸುದ್ದಿ6 days agoಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ | 8 ಕುಲಸಚಿವರು, 10 ಹಣಕಾಸು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ6 days agoಹೊಳಲ್ಕೆರೆ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ; ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಖರೀದಿ ವ್ಯವಹಾರ ಪ್ರಾಂಶುಪಾಲ ಡಾ ಎಸ್.ಪಿ ರವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಓಬಳೇಶ್ ದೂರು
-
ದಿನದ ಸುದ್ದಿ3 days agoಕರ್ತವ್ಯ ಲೋಪ | ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ5 days agoನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
-
ದಿನದ ಸುದ್ದಿ5 days agoಇದೇ 15 ರಂದು ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

