ಲೈಫ್ ಸ್ಟೈಲ್
ಸೀರಿಯಲ್ ಸುಂದರಿಯರ ಟ್ರೆಂಡೀ ಆಭರಣಗಳ ಗುಟ್ಟು, ರಟ್ಟಾಯ್ತು ನೋಡಿ..!
ಮಹಿಳೆಯರಿಗೂ ಸೀರಿಯಲ್ ಗೂ ಇರುವ ಅವಿನಾಭಾವ ಸಂಬಂಧ ವಿವರಿಸಲು ಕೂತರೆ ಸಾವಿರ ಪುಟಗಳು ಸಾಲದು. ಮಹಿಳೆಯರ ಒಡವೆಗಳ ವ್ಯಾಮೋಹ ಎಲ್ಲರಿಗೂ ತಿಳಿದಿರುವ ಸಂಗತಿ. ಇತ್ತೀಚೆಗೆ ಸೀರಿಯಲ್ ಕ್ರೇಜ್ ಹೆಚ್ಚಿದ್ದು..ಕಿರುತೆರೆ ಈ ಪಾತ್ರಗಳು ಸಮಾಜಕ್ಕೆ ಹತ್ತಿರವಾಗುತ್ತಿದೆ. ಮಹಿಳಾ ಪ್ರಧಾನ ಕಥಾಹಂದರವನ್ನು ಹೊಂದಿರುವ ಈ ಸೀರಿಯಲ್ ಗಳು ಮಹಿಳೆಯರಿಂದ ಮಹಿಳೆಯರಿಗಾಗಿ ಎಂಬಂತೆ ರೂಪಗೊಂಡಿದ್ದು ಹೆಚ್ಚು ಮಹಿಳಾ ಪ್ರೇಕ್ಷಕರನ್ನು ಹೊಂದಿದೆ.
ಸೀರಿಯಲ್ ಗಳಲ್ಲಿನ ಪಾತ್ರ ದಷ್ಪೇ ಫೇಮಸ್ ಆ ಪತ್ರದ ಸ್ಟೈಲ್ ಸ್ಟೇಟ್ ಮೆಂಟ್! ಈಗಂತೂ ಸೀರಿಯಲ್ ತಾರೆಯರು ಸೀರೆ-ಒಡವೆಗಳ ಫ್ಯಾಷನ್ ಫಾಲೋ ಮಾಡುವ ಮಹಿಳೆಯರ ಸಂಖ್ಯೆ ಹೆಚ್ಚಿದೆ. ಅಂತಹದೇ ಸ್ಟೋರಿ ಇಲ್ಲಿದೆ ನೋಡಿ.
ಕಲರ್ಸ್ ಕನ್ನಡ ದ “ರಾಧಾರಮಣ” ಸೀರಿಯಲ್ ಸಿಕ್ಕಾಪಟ್ಟೆ ಫೇಮಸ್ ಆಗಿದ್ದು ಪ್ರತಿ ಪಾತ್ರ್ರ ತನ್ನದೇ ವಿಭಿನ್ನ ಸ್ಟೈಲ್ ಸ್ಟೇಟ್ ಮೆಂಟ್ ಹೊಂದಿದೆ.
ಈ ಸೀರಿಯಲ್ ನ ಮತ್ತೊಂದು ಪ್ರಮುಖ ಪಾತ್ರ “ಸಿತಾರಾದೇವಿ” ನೆಗಟಿವ್ ಷೇಡ್ ಹೊಂದಿದ್ದರೂ ತನ್ನದೇ ವಿಭಿನ್ನ ಮ್ಯಾನರಿಸಂ, ಸ್ಟೈಲ್ ಮತ್ತು ಅಧ್ಬುತ ನಟನೆಯಿಂದ ವೀಕ್ಷಕರ ಮನಗೆದ್ದಿದ್ದಾರೆ ಕಾಮಿಡಿ ಟೈಮ್ ಖ್ಯಾತಿಯ ಸುಜಾತಾ ರವರು. ಇವರ ಖಡಕ್ ಡೈಲಾಗ್..ಹಾವ-ಭಾವ ಗಳಷ್ಟೇ ಫೇಮಸ್ “ಸಿತಾರಾದೇವಿಯ” ಇವರ ಫ್ಯಾಷನಬಲ್ ಲುಕ್.. ಇವರ ವಿಶಿಷ್ಟ ಶೈಲಿಯ ಒಡವೆಗಳು ಸೀರಿಯಲ್ ಪ್ರಿಯರಲ್ಲಿ ತುಂಬಾ ನೇ ಚರ್ಚೆಗೆ ಗ್ರಾಸವಾಗಿದೆ.
ಈಗಂತೂ ಫ್ಯಾಷನ್ ಜಿವಲೆರಿ ಟ್ರೆಂಡ್ ಫಾಲೋ ಆಗುತ್ತಿದ್ದು..ಸೆಲಿಬ್ರಿಟಿ ಗಳಾಗಲೀ..ಸಾಮಾನ್ಯ ಜನರಾಗಲೀ ಎಲ್ಲರೂ ತಮ್ಮದೇ ಆದ ವಿಭಿನ್ನ ಫ್ಯಾಷನ್ ಮತ್ತು ಸ್ಟೈಲ್ ಸ್ಟೇಟ್ ಮೆಂಟ್ ಹೊಂದಲು ಬಯಸುತ್ತಾರೆ.
ಬಣ್ಣ ಬಣ್ಣದ ಟೆರಾಕೋಟಾ ಒಡವೆಗಳು.. ಕಾಪರ್, ಕಪ್ಪು ಲೋಹ, ಬಿಳಿ ಲೋಹ..ಬೆಳ್ಳಿ ಯ ಒಡವೆಗಳು ಭಾರೀ ಪ್ರಮಾಣದಲ್ಲಿ ಟ್ರೆಂಡ್ ಸೃಷ್ಟಿಸಿದೆ. ವಿಭಿನ್ನ ಹಾಗೂ ಆಕರ್ಷಕ ವಿನ್ಯಾಸಗಳಲ್ಲಿ ಮಹಿಳೆಯರ ಮನಸೂರೆ ಗೊಂಡಿದೆ ಈ ಫ್ಯಾಷನ್ ಜಿವೆಲೆರೀ..
ಅಂದಹಾಗೆ ಈ ಸೀರಿಯಲ್ ಬೆಡಗಿಯರ ಕಿವಿ ಓಲೆ..ಝುಮಕಿ, ಸರ.. ಬಳೆ..ಮೂಗುತಿ.. ಎಲ್ಲವೂ ವಿಭಿನ್ನ ಹಾಗೂ ವಿಶಿಷ್ಟ. ಇವರ ಈ ವಿಶಿಷ್ಟ ಒಡವೆಗಳ ಹಿಂದಿನ ರಹಸ್ಯ ತಿಳಿಯುವ ಕುತೂಹಲ ನಿಮಗಿದ್ದರೆ , ಸೀರಿಯಲ್ ಬೆಡಗಿಯರ ಜಿವಲೆರಿ ಸ್ಟೋರಿ ನಿಮಗಾಗಿ ಇಲ್ಲಿದೆ ನೋಡಿ..
ಜೋಜೋಲಾಲಿ ಸೀರಿಯಲ್ ನ ನವ್ಯಾ ಶೆಟ್ಟಿ..ಸುವರ್ಣ ವಾಹಿನಿಯ “ಪುಟ್ಟಮಲ್ಲಿ” ಖ್ಯಾತಿಯ ವೀಣಾ ಪೊಣ್ಣಪ್ಪ.. ಆರನೇ ಮೈಲಿ ಚಿತ್ರದ ನಾಯಕನಟಿಯ ವಿಶೇಷ ಸ್ಟೈಲ್ ಸ್ಟೇಟ್ ಮೆಂಟ್… ಕೇವಲ ಸೀರಿಯಲ್ ಸುಂದರಿರು ಅಷ್ಟೇ ಅಲ್ಲದೆ, ಸ್ಯಾಂಡಲ್ ವುಡ್ ನ ಖ್ಯಾತ ಗಾಯಕಿ ಅನನ್ಯಾ ಭಟ್ ರ ಸ್ಟೈಲಿಶ್ ಲುಕ್ ನ ಹಿಂದಿನ ರಹಸ್ಯ ನಿಮಗಾಗಿ ನವು ತಂದಿದ್ದೇವೆ.
ಈ ಎಲ್ಲಾ ಸುಂದರಿ ಯರ ಚೆಲುವನ್ನ ತಮ್ಮ ವಿಶಿಷ್ಟ ಸ್ಟೈಲಿಂಗ್ ನಿಂದ ತೆರೆಯ ಮೇಲೆ ಸುಂದರವಾಗಿ ಮಿಂಚುವಂತೆ ಮಾಡಿರುವುದು..ಪ್ರತಿಷ್ಠಿತ ಸೆಲಿಬ್ರಿಟಿ ಜಿವಲೆರಿ ಡಿಸೈನರ್ , ಸೀಮಾ ಆಥ್ರೇಯ.
ಯಾರು ಸೀಮಾ ಆಥ್ರೇಯ..?
ಬೆಂಗಳೂರಿನ ಪದ್ಮ ಮತ್ತು ನಾಗರಾಜ್ ದಂಪತಿಗಳ ಮಗಳು ಸೀಮಾ. ಪಿ.ಜಿ ಇನ್ ಬಿಸಿನೆಸ್ ಅಡ್ಮಿನಿಸ್ಟೇಷನ್ ಪಧವೀಧರೆ ಆಗಿರುವ ಸೀಮಾಗೆ ಕಲೆ ಯಲ್ಲಿ ವಿಶೇಷ ಆಸಕ್ತಿ. ಪತಿ ಹರೀಶ್ ರೊಂದಿಗೆ ಬೆಂಗಳೂರಿನಲ್ಲೇ ನೆಲಸಿರುವಾ ಸೀಮಾ ಜಿವಲೆರಿ ಡಿಸೈನಿಂಗ್ ಪ್ರವೀಣೆ . ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಸೀಮಾ ತಮ್ಮ ದೇ ವಿಶಿಷ್ಟ ಜಿವಲೆರಿ ಡಿಸೈನ್ ಗಳಿಂದ ಸೆಲಿಬ್ರಿಟಿ ಡಿಸೈನರ್ ಆಗಿ ಮಿಂಚುತ್ತಿದ್ದಾರೆ. ಇವರ *ಬೀಡೆಡ್ ಜಿವಲೆರಿ*ಸಂಸ್ಥೆ ಮುಖಾಂತರ ಹಲವಾರು ಖ್ಯಾತ ಸೀರಿಯಲ್ ಸುಂದರಿಯರ ನ್ನು ಸ್ಟೈಲ್ ಮಾಡಿದ್ದಾರೆ.
ಸುಜಾತಾ..ಅನನ್ಯಾ ಭಟ್..ಸುರಭಿ ವಸಿಷ್ಟ..ವೀಣಾ ಪೂಣಚ್ಚ..ನವ್ಯ ಶೆಟ್ಟಿ.. ಹಲವಾರು ಸೆಲಿಬ್ರಿಟಿ ನಟಿಯರ ಮನಮೋಹಕ ಒಡವೆಗಳ ಕತೃ ಇವರು. ಸೆಲಿಬ್ರಿಟಿ ಗಳಷ್ಟೇ ಅಲ್ಲದೆ, ಸಾಫ್ಟವೇರ್ ಕಂಪನಿ..M.N.C ಕಂಪನಿಗಳು ಸೇರಿ.. ನಾಟಕಗಳಿಗೂ ಇವರು ಜಿವಲೆರಿ ಡಿಸೈನರ್ ಆಗಿದ್ದಾರೆ. ಜಿವಲೆರಿ ಡಿಸೈನಿಂಗ್ ಕ್ಷೇತ್ರದಲ್ಲಿ ಯಾರು ಅತ್ಯುತ್ತಮ ಡಿಸೈನ್ಗಳನ್ನು ನೀಡುತ್ತಾರೋ ಅವರೇ ಹೆಚ್ಚು ಕಾಲ ಉಳಿಯಲು ಸಾಧ್ಯ ಎನ್ನುತ್ತಾರೆ ಸೀಮ.
ಕ್ರಿಯಾಶೀಲತೆ..ಹೊಸತನ..ಫ್ಯಾಷನ್..ಸ್ಟೈಲ್ ಎಲ್ಲವೂ ಇದ್ದಲ್ಲಿ ಮಾತ್ರ ಇಲ್ಲಿ ಬಹೈಕಾಲ ಉಳಿಯಲು ಸಾಧ್ಯ. ತಮ್ಮ ಅದ್ಭುತ ಕಲೆ ಹಾಗೂ ವಿನ್ಯಾಸ ದಿಂದ ಸೀರಿಯಲ್ ಕ್ಷೇತ್ರದಲ್ಲಿ ದಿ ಬೆಸ್ಟ್ ಜಿವಲೆರಿ ಸ್ಟೈಲಿಸ್ಟ್ ಆಗಿ ಮಿಂಚುತ್ತಿರುವ ಸೀಮಾ ರ ಎಲ್ಲಾ ಕನಸುಗಳು ಈಡೇರಲಿ ಎಂದು ಹಾರೈಸೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.
54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

ಸುದ್ದಿದಿನ,ಬೆಂಗಳೂರು:ಆರ್ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್ ರೆಸ್ಟೋರೆಂಟ್ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.
ಬೆಂಗಳೂರಿನ #NativeCooks ಫುಡ್ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್ಸಿಬಿ ಅಭಿಮಾನಿಗಳ ಮನ ಗೆದ್ದಿದೆ.
ಹೌದು, ಹೆಬ್ಬಾಳ, ಆರ್ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್ಬಾಕ್ಸ್ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.
ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್ ಕುಕ್ಸ್ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್. ವೆಜ್ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್ವೆಜ್ ಊಟವನ್ನು 135 ರೂಪಾಯಿಗೆ ಹಾಗೂ ಎಕ್ ಮೀಲ್ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.
ಸದ್ಯಕ್ಕೆ ಹೆಬ್ಬಾಳ, ಆರ್ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ, ಗಿಗ್, ಸಿನಿ ಹಾಗೂ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ಅಧಿನಿಯಮ ಜಾರಿಗೆ ಕ್ರಮ : ಸಚಿವ ಸಂತೋಷ್ ಲಾಡ್
-
ಅಂಕಣ3 days ago
ಆತ್ಮಕತೆ | ಕೃಷ್ಣಪ್ಪನವರ ನಿಧನ : (09.06.1938 – 30.04.1997)
-
ದಿನದ ಸುದ್ದಿ5 days ago
500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ
-
ದಿನದ ಸುದ್ದಿ4 days ago
ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 9360 ಪ್ರಕರಣ ಇತ್ಯರ್ಥ ; ವಿಚ್ಚೇದನ ಕೋರಿ ಸಲ್ಲಿಸಿದ್ದ 23 ಜೋಡಿ ವೈವಾಹಿಕ ಜೀವನ ಸುಖಾಂತ್ಯ
-
ದಿನದ ಸುದ್ದಿ6 days ago
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ
-
ದಿನದ ಸುದ್ದಿ5 days ago
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ
-
ದಿನದ ಸುದ್ದಿ6 days ago
ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ