ದಿನದ ಸುದ್ದಿ

ಪರಿಶಿಷ್ಟ ಸಮುದಾಯಕ್ಕೆ ಹೆಚ್ಚಿನ ಸರ್ಕಾರಿ ಸೌಲಭ್ಯ ಅಗತ್ಯ : ಕೇಂದ್ರ ಸಚಿವ ಎ. ನಾರಾಯಣ ಸ್ವಾಮಿ

Published

on

ಸುದ್ದಿದಿನ, ಬೆಂಗಳೂರು : ಪರಿಶಿಷ್ಟ ಸಮುದಾಯಕ್ಕೆ ಹೆಚ್ಚಿನ ಸೌಲಭ್ಯ ದೊರೆಯಬೇಕೆಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ. ನಾರಾಯಣ ಸ್ವಾಮಿ ಹೇಳಿದ್ದಾರೆ.

ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ ಏರ್ಪಡಿಸಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ಅನೇಕ ಸಮುದಾಯಗಳ ಜತೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು ಹಕ್ಕು ಮತ್ತು ಅವಕಾಶಗಳಿಂದ ವಂಚಿತವಾಗಿವೆ. ದೂರದರ್ಶನ ಕಾರ್ಯಕ್ರಮಗಳ ಮೂಲಕ ಈ ಸಮುದಾಯ ಜಾಗೃತಗೊಳಿಸಿ, ಅವರಿಗೆ ಸರ್ಕಾರಿ ಸೌಲಭ್ಯ ದೊರಕುವಂತೆ ಮಾಡಬೇಕು ಎಂದು ಸಚಿವರು ಹೇಳಿದರು. ಕಾರ್ಯಕ್ರಮದಲ್ಲಿ ದೂರದರ್ಶನ ಮತ್ತು ಆಕಾಶವಾಣಿಯ ಹಿರಿಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version