Connect with us

ಬಹಿರಂಗ

ನಕಲಿ ಆದಿವಾಸಿಗಳ ಚಿನ್ನಾಟ : ಅಸಲಿ ಆದಿವಾಸಿಗಳ ಪ್ರಾಣ ಸಂಕಟ

Published

on

ನನ್ನ ಮಾತನ್ನು ಅವನೇಕೆ, ಅವರಪ್ಪನೂ ಕೇಳಬೇಕು’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ತಂದೆಯಾದ ಮಾಜಿ ಪ್ರಧಾನಿ ದೇವೇಗೌಡರನ್ನು ಕುರಿತು, ರಾಜನಹಳ್ಳಿ ಶ್ರೀ ಮಹರ್ಷಿ ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದ ಪುರಿ ಎಂಬ ಸ್ವಾಮಿ ಒದರಿದ್ದು ಇಡೀ ಕರ್ನಾಟಕ ರಾಜ್ಯವೇ ಕೇಳಿದೆ. ಈ ಸ್ವಾಮಿ ಸಾಂಸ್ಕøತಿಕ ಮತ್ತು ಧಾರ್ಮಿಕ ಪರಂಪರೆಯನ್ನು ಪಾಲಿಸುವ ಬೆಳೆಸುವ ಬದಲು, ರಾಜಕೀಯದಲ್ಲಿ ತನ್ನ ಬಾಲ ಆಡಿಸುವುದೇ ಈತನ ಕಸುಬು. ರಾಜನಹಳ್ಳಿ ಶ್ರೀ ವಾಲ್ಮೀಕಿ ಪೀಠವೆಂಬುದು ಸಂಸ್ಕøತಿ ಮತ್ತು ಧರ್ಮವನ್ನು ಕಾಪಾಡುವ ಮಠವಲ್ಲ, ಇದು ಒಂದು ರಾಜಕಾಣಿಗಳ ಕೂಟ. ನಕಲಿ ಬುಡಕಟ್ಟು ಜನರ, ಅಸಲಿ ಬಣ್ಣ ಮುಚ್ಚುವ ಕವಚ. ನಿಜವಾಗಿ ಪರಿಶಿಷ್ಟ ಪಂಗಡದ ಮೀಲಾತಿಗೆ ಅರ್ಹರಿರುವ ‘ನಾಯಕ ಬುಡಕಟ್ಟಿನ ಜನರಿಗೆ’ ಹಾಕಿರುವ ಬಲೆ.

1991ರಲ್ಲಿ ಶ್ರೀ ಚಂದ್ರಶೇಖರ್‍ರವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ, ಆಗಿನ ಚಳ್ಳಕೆರೆಯ ಮಾಜಿ ಮಂತ್ರಿಗಳಾದ ದಿ. ಶ್ರೀ ತಿಪ್ಪೇಸ್ವಾಮಿಯವರು ಹೆಚ್.ಡಿ ದೇವೇಗೌಡರಿಂದ ಪ್ರದಾನಿಯಾದ ಚಂದ್ರಶೇಖರವರಿಗೆ ಹೇಳಿಸಿ ‘ವಾಲ್ಮೀಕಿ, ನಾಯ್ಕ, ನಾಯಕ್, ಬೇಡ, ಬೇಡರ್,’ ಎಂಬ ಪದಗಳನ್ನು ‘ನಾಯಕ’ ಬುಡಕಟ್ಟಿನ ಸಮನಾರ್ಥಪದಗಳೆಂದು ಎಸ್.ಟಿ ಪಟ್ಟಿಯಲ್ಲಿ ಸೇರಿಸಲಾಯಿತು. ಇದರಲ್ಲಿ ದೇವೇಗೌಡರ ಪರಿಶ್ರಮವು ಸಹ ಇದೆ. ಬಳ್ಳಾರಿ ಜಿಲ್ಲೆಯಲ್ಲಿ ಮ್ಯಾಸ ನಾಯಕರು ತಮ್ಮ ಪಂಗಡದ ಹೆಸರನ್ನು ‘ವಾಲ್ಮೀಕಿ’ ಎಂದು ದಾಖಲೆಗಳಲ್ಲಿ ನಮೂದಿಸಿಕೊಂಡಿದ್ದರು ಮತ್ತು ನಮೂದಿಸಿಕೊಳ್ಳುತ್ತಿದ್ದರು. ಇದನ್ನು ಮೂಲವಾಗಿ ಪ್ರಸ್ತಾವನೆಯನ್ನು ಚಳ್ಳಕೆರೆಯ ಮಾಜಿಮಂತ್ರಿಗಳಾದ ತಿಪ್ಪೇಸ್ವಾಮಿಯವರ ಮೂಲಕ ಬಳ್ಳಾರಿ ಜಿಲ್ಲೆಯವರಿಗೆ ಅನುಕೂಲವಾಗಲೆಂದು ಕೇಳಿಕೊಂಡ ಕಮಲಾಪುರದ ಡಾ. ಪಾಪಯ್ಯನವರಿಗೆ ನೀಡಿದ ಕಾಣಿಕೆಯಂತೆ ಈ ಕೆಲಸ ಮಾಡಿಸಲಾಯಿತು.

ಆದ್ದರಿಂದ ಎಸ್.ಟಿ ಸೌಲಭ್ಯ ಈ ಬುಡಕಟ್ಟು ಜನಾಂಗಕ್ಕೆ ಸೇರಲೆಂದು ಡಾ. ಪಾಪಯ್ಯನವರ ಶ್ರಮವಾಗಿದೆ. ಈ ‘ವಾಲ್ಮೀಕಿ’ ಎಂಬ ಪದವೇ ತಳವಾರದವರಿಗೆ ಎಸ್ ಟಿ ಮೀಸಲಾತಿ ಕದಿಯಲು ಅನುಕೂಲವಾದ ಪದ. ಮತ್ತು ಈ ಡಾ. ಪಾಪಯ್ಯನವರೇ ಈಗ ಮ್ಯಾಸ ನಾಯಕ (ಮ್ಯಾಸ ಬೇಡ) ಬುಡಕಟ್ಟು ಸಂಸ್ಕøತಿ ಸಂರಕ್ಷಣಾ ಸಮಿತಿ (ರಿ)ನ ಅಧ್ಯಕ್ಷರಾಗಿದ್ದಾರೆ ಮತ್ತು ತಳವಾರ ಪರವಾರದವರಿಂದ ಮ್ಯಾಸ ಬೇಡರ ಮುಕ್ತಿಗಾಗಿ ಹೋರಾಡುತ್ತಿದ್ದಾರೆ. 1996 ರಲ್ಲಿ ವಾಲ್ಮೀಕಿ ಮಠ ಸ್ಥಾಪನೆ ಮಾಡಲು ದಿ. ತಿಪ್ಪೇಸ್ವಾಮಿಯವರಿಗೆ ದೇವೇಗೌಡರು ಬೆಂಬಲ ವ್ಯಕ್ತಿಪಡಿಸಿದ್ದರು. ಅಂದು ದೇವೇಗೌಡರು ಸಹಾಯ ಮಾಡದಿದ್ದರೆ ಇಂದು ವಾಲ್ಮೀಕಿ ಗುರು ಪೀಠ ಮತ್ತು ಈ ಪ್ರಸನ್ನಾನಂದ ಪುರಿ ಸ್ವಾಮಿಯೇ ಇರುತ್ತಿರಲಿಲ್ಲ. ಇಂದು ವಾಲ್ಮೀಕಿ ಮಠ ಮತ್ತು ಪೀಠಾಧಿಪತಿ ಎಂದು ಹೇಳಿಕೊಳ್ಳುವುದು ಇದೆ ಎಂದರೆ ಅದರಲ್ಲಿ ದೇವೇಗೌಡರ ಪರಿಶ್ರಮವು ಇದೆ. ಮಠ ಅಭಿವೃದ್ಧಿ ಆದ ಮೇಲೆ ದಿ.ತಿಪ್ಪೇಸ್ವಾಮಿಯವರನ್ನು ಮೂಲೆಗುಂಪು ಮಾಡಿದರು. ಮಠದಲ್ಲಿ ಇಂದು ಸುಳ್ಳು ಜಾತಿ ಪ್ರಮಾಣ ಪತ್ರಕ್ಕೆ ಮಠದ ಲೇಟರ್ ಪ್ಯಾಡ್‍ನಲ್ಲಿ ಶಿಫಾರಸ್ಸು ಮಾಡಲಾಗುತ್ತದೆ. ಈ ನಕಲಿ ಎಸ್ ಟಿ ಗಳಿಗೇನು ಗೊತ್ತು, ಅಸಲಿ ಇತಿಹಾಸ.

ನವ ದೆಹಲಿಯ ರಿಜಿಸ್ಟರ್ ಜನರಲ್ ಆಫ್ ಇಂಡಿಯಾವು 1993 ಮತ್ತು 2004ರ ತನ್ನ ವರದಿಯಲ್ಲಿ ಹೀಗೆ ಹೇಳಿರುತ್ತದೆ: ಕರ್ನಾಟಕದಲ್ಲಿ ಎರಡು ವಿಧದ’ ‘ನಾಯಕ’ ’ಜನಾಂಗ ವಿದೆ. ಒಂದು ಆದಿವಾಸಿ ‘ನಾಯಕ’ ಜನಾಂಗವಾಗಿದ್ದು ಇದು ಮಧ್ಯ ಪ್ರದೇಶದ ‘ಬಿಲ್’’’ಜನಾಂಗವನ್ನು ಹೋಲುತ್ತದೆ. ಮತ್ತು ಈ ಬುಡಕಟ್ಟು ಜನರನ್ನು ಈಗಾಗಲೇ ಪರಿಶಿಷ್ಟ ಪಂಗಡ ಪಟ್ಟಿಯಲ್ಲಿ ಸೇರಿಸಲಾಗಿದೆ (ಇದೇ ಮ್ಯಾಸ ನಾಯಕ ಅಥವಾ ಮ್ಯಾಸ ಬೇಡ ಜನಾಂಗ). ಮತ್ತು ಇನ್ನೊಂದು ‘ನಾಯಕ’ ಜಾತಿ ಎಂದು ಹೇಳಿಕೊಳ್ಳುತ್ತಿದ್ದು, ಅದು ಬೇಂಡರ್, ಬೇರಡ್, ತಳವಾರ ಜಾತಿಯವರು ಸಹ ತಮ್ಮ ಜಾತಿಯನ್ನು ‘ನಾಯಕ’ ಎಂದು ಹೇಳಿಕೊಳ್ಳುತ್ತಾರೆ. ಈ ಜಾತಿಯವರಿಗೆ ಯಾವುದೇ ಬುಡಕಟ್ಟು ಲಕ್ಷಣಗಳು ಇಲ್ಲ ಎಂದು ಹೇಳಿದ್ದಾರೆ. ವಾಸ್ತವ ಹೀಗಿದ್ದರೆ, ಈಗ ನಡೆಯುತ್ತಿರುವ ಎಸ್ ಟಿ ಮೀಸಲಾತಿಯನ್ನು 3%ನಿಂದ 7.5% ಹೆಚ್ಚಿಸಿ ಎಂದು ರಾಜನಹಳ್ಳಿ ಸ್ವಾಮಿ ಮಾಡುತ್ತಿರುವ ಗಲಾಟೆ, ಪರಿಶಿಷ್ಟ ಪಂಗಡಕ್ಕೆ ಸೇರಿದ ಬುಡಕಟ್ಟು ಜನರು ಯಾರೆಂದು ಮುಚ್ಚಿಟ್ಟು, ಈ ತಳವಾರ ಸ್ವಾಮೀನ ಮುಂದಿಟ್ಟು, ಗೋಕಾಕಿನ ಅರ್ಯಾಕ್ ದೊರೆಗಳು ಮಾಡುತ್ತಿರುವ ರಾಜಕೀಯ ಹೈಡ್ರಾಮಾ.

ನಿಜ ಹೇಳಬೇಕೆಂದರೆ, ಕರ್ನಾಟಕದಲ್ಲಿ ಎರಡು ವಿಧದ ‘ನಾಯಕ’ ಜನಾಂಗವಿದೆ. ಒಂದು ‘ನಾಯಕ ಬುಡಕಟ್ಟು’, ಇದರ ಪರ್ಯಾಯ ಹೆಸರುಗಳು ‘ಮ್ಯಾಸ ನಾಯಕ’, ‘ಮ್ಯಾಸ ಬೇಡ’, ‘ವಾಲ್ಮೀಕಿ’ ಬೇಡ, ಬೇಡರ, ‘ನಾಯ್ಕ’ ನಾಯಕ್ ಇತ್ಯಾದಿಗಳು. ಇವರು ಮೂರ್ತಿ ಪೂಜಕರಾಗಿರದೆ ಪಶು ಪೂಜಕರಾಗಿರುತ್ತಾರೆ. ವೈದಿಕ ಧರ್ಮದ ಸಂಪ್ರದಾಯಗಳನ್ನು ಆಚರಿಸುವುದಿಲ್ಲ. ತೆಲಗು ಉಪಭಾಷೆಯಂತಿರುವ ಇವರದೇ ಪ್ರತ್ಯೇಕ ಭಾಷೆ ಇದೆ. ಈ ಬುಡಕಟ್ಟು ಜನರ ಸಾಂಸ್ಕøತಿಕ ಉಡುಗೆಗಳು ಬಿಳಿ ಚಲ್ಲಣ, ಹೆಗಲ ಮೇಲೆ ಕರಿ ಕಂಬಳಿ, ಕೈಯಲ್ಲಿ ಸುಮಾರು 7 ಅಡಿ ಉದ್ದದ ಬಿದಿರು ಕೋಲು. ಇವರು ಮುಖ್ಯವಾಹಿನಿಯಿಂದ ಪ್ರತ್ಯೇಕವಾಗಿ ವಾಸವಾಗಿರುತ್ತಾರೆ ಮತ್ತು ಇವರ ವಾಸ ಸ್ಥಳಗಳನ್ನು ‘ಮ್ಯಾಸರಟ್ಟಿ’ ಎಂದು ಕರೆಯುತ್ತಾರೆ.

ಇವರು ಕುರಿ, ಮೇಕೆ, ಕಾಡುಹಂದಿ, ಕೌಜವನ್ನು ತಿನ್ನುವುದರೊಂದಿಗೆ, ಕೋಣವನ್ನೂ ಸಮಾನ್ಯಾಗಿ ತಿನ್ನುತ್ತಾರೆ. ಆದರೆ ಸಾಕುವ ಕೋಳಿ ತಿನ್ನುವುದಿಲ್ಲ. ಈಚಲ ಚಾಪೆಯನ್ನು ಬಳಸುವುದಿಲ್ಲ. ಚಿತ್ರದುರ್ಗದ ಪಾಳೆಗಾರರು ಈ ಬುಡಕಟ್ಟಿಗೆ ಸೇರಿದವರಾಗಿದ್ದು, ‘ಕಾಮಗೇತಿ’ ಬೆಡಗಿನವರು. ಮ್ಯಾಸ ಬೇಡರು ‘ಮ್ಯಾಸ ಮಂಡಲ’ ವೆಂಬ ಆಂಧ್ರ ಪ್ರದೇಶ ಮತ್ತು ಕರ್ನಾಟಕದ ಗಡಿಭಾಗಗಳಲ್ಲಿರುವ ತಮ್ಮ ಸಾಂಸ್ಕøತಿಕ ರಾಜ್ಯದಲ್ಲಿ ವಾಸಿಸುತ್ತಾರೆ. ಈ ‘ಮ್ಯಾಸ ನಾಯಕರು’ ಹನ್ನೆರಡು ಗುಡಿಕಟ್ಟೆಗಳಲ್ಲಿ ಒಂದೊಂದು ಬೆಡಗಿನ ದೇವರು ಮತ್ತು ಆಯಾ ಗುಡಿಕಟ್ಟೆಗೆ ಸೇರಿದವರೆಂದು ವಿಭಸಿಕೊಂಡಿದ್ದಾರೆ. ಒಂದೊಂದು ಗುಡಿಕಟ್ಟೆಗಳಿಗೆ ಸೇರಿದ ಹತ್ತಾರು ಉಪ ಬೆಡಗುಗಳಿದ್ದು, ಇವರುಗಳನ್ನು ಒಂದು ‘ಮೀಸಲು ಹಡಿಗೆ ಅಥವಾ ಪುಟ್ಟಿಯವರು’ ಎಂದು ವಿಭಜಿಸಲಾಗಿದೆ. ಒಂದೊಂದು ಮೀಸಲು ಪುಟ್ಟಿಗೆ ಐದಾರು ಮನೆತನಗಳು ಸೇರಿರುತ್ತವೆ. ಇವರು ಸಾಮಾನ್ಯವಾಗಿ ಬೇಟೆ, ಪಶುಪಾಲನೆ, ಬೇಸಾಯ, ಕೂಲಿಗಳಾಗಿ ದುಡಿದು ಜೀವನ ಸಾಗಿಸುತ್ತಾರೆ. ಇವರೆಲ್ಲ ಬಡವರಾಗಿದ್ದು, ಇವರಲ್ಲಿ ವಿದ್ಯೆ ಕಡಿಮೆ. ಇವರನ್ನು ಸಮಾಜದಲ್ಲಿ ಅಸ್ಪøಶ್ಯರೆಂದು ಪರಿಗಣಿಸಲಾಗಿದೆ.

ಇನ್ನೊಂದು ‘ನಾಯಕ ಜಾತಿ’ ಎಂದು ಕರೆಯಲಾಗುತ್ತದೆ. ಇವರು ವಿಜಯನಗರ ಕಾಲದಲ್ಲಿ ಅಮರಂ ನಾಯಕತನ ಪದ್ದತಿಯಲ್ಲಿ ನಾಯಕ ಎಂದು ಬಿರುದು ಪಡೆದುಕೊಂಡವರು ಈ ‘ನಾಯಕ’ ಜಾತಿಯನ್ನು ತಳವಾರ, ಪರಿವಾರ, ಊರು ನಾಯಕ ಎಂದು ಕರೆಯುತ್ತಾರೆ. ಇವರೆಲ್ಲ ಮೂಲತಃ ಗಂಗಮತ ಮತ್ತು ಬೆಸ್ತ ಜಾತಿಯ ಮೂಲದವರಾಗಿದ್ದು, ಸಮಾಜದ ಮುಖ್ಯವಾಹಿಯಲ್ಲಿ ಬೆರೆತು ಊರುಗಳಲ್ಲಿ ಬದುಕುತ್ತಾರೆ. ವಿಜಯನಗರ ಕಾಲದಲ್ಲಿನ ಆಯಗಾರ ಪದ್ಧತಿಯಲ್ಲಿ ಒಂದಾದ, ತಳವಾರಿಕೆ ಇವರು ವೃತ್ತಿಯಾಗಿತ್ತು. ಇವರು ವೈದಿಕ ಸಂಪ್ರದಾಯದ ದೇವರುಗಳನ್ನೇ ಆರಾದಿಸುತ್ತಾರೆ. ಇವರು ಮ್ಯಾಸ ನಾಯಕರಿಗಿಂತ ಸಾಮಾಜಿ, ರಾಜಕೀಯದಲ್ಲಿ ಉನ್ನತ ಸ್ಥಾನಗಳಿಸುರುತ್ತಾರೆ. ಇವರಲ್ಲಿ ಉನ್ನತ ವಿದ್ಯಾವಂತರೂ ದನಿಕರೂ ಇದ್ದಾರೆ. ಈ ಜಾತಿ ನಾಯಕರೇ, ಬುಡಕಟ್ಟು ನಾಯಕರು, ವಾಲ್ಮೀಕಿ ಜನಾಂಗದವರು ಎಂದು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಮೆರೆಯುತ್ತಿರುವುದು.

ಎಲ್ಲಾ ನಾಯಕರೂ ಒಂದೇ ಎಂದು ಹೇಳುತ್ತಾ ಬುಡಕಟ್ಟು ಜನರಾದ ಮ್ಯಾಸ ನಾಯಕರಿಗೆಲ್ಲದೇ ದೇಶದ ಇಡೀ ಬುಡಕಟ್ಟು ಜನರಿಗೆ ಪಂಗನಾಮ ಹಾಕಿರುವುದು. ಮ್ಯಾಸ ನಾಯಕ ರಾಜಕಾರಣಿಗಳಿಂದಲೇ ರಾಜನಹಳ್ಳಿಯಲ್ಲಿ ಶ್ರೀ ವಾಲ್ಮೀಕಿ ಗುರು ಪೀಠ ಮಾಡಿಸಿ, ತಳವಾರ ಪರಿವಾರದವರೇ ಇದರ ಆಡಳಿತವನ್ನು ಕಿತ್ತುಕೊಂಡು, ಬೆಸ್ತರ ತಳವಾರ ಜಾತಿಯ ಶ್ರೀ ಪ್ರಸನ್ನಾನಂದ ಪುರಿ ಸ್ವಾಮಿಯೇ ಎಡಬಿಡಂಗಿ ಕಥಾನಾಯಕ. ಜಾರಕಿಹೊಳೆ ಸಹೋದರರ, ಬಳ್ಳಾರಿಯ ಬೋಯಾ ಶ್ರೀರಾಮುಲು ಸಂಬಂಧಿಕರ ತಾಳಕ್ಕೆ ಕುಣಿಯುತ್ತಿರುವ ಆಸಾಮಿ ಈ ರಾಜನಹಳ್ಳಿ ಸ್ವಾಮಿ. ಈ ಸ್ವಾಮಿಗೆ ಮ್ಯಾಸ ಮಂಡಲದಲ್ಲಿ ಕಿಂಚಿತ್ತೂ ಮರ್ಯಾದೆ ಕೊಡುವುದಿಲ್ಲ.

ಮ್ಯಾಸ ಬೇಡರ ಸಂಸ್ಕøತಿಯಲ್ಲಿ ದೇವರ ಎತ್ತು ಕಾಯುವ ಕಿಲಾರಿಗಳನ್ನು ‘ಪದಿ ಪೂಜಾರಿ’ ಎಂದು ಕರೆಯುತ್ತಾರೆ. ಮ್ಯಾಸ ಬೇಡರು ಇವರನ್ನು ದೇವರ ಸ್ವರೂಪವೆಂದು ಕಾಲಿಗೆ ಬಿದ್ದು ನಮಸ್ಕರಿಸುತ್ತಾರೆ. ಇವರನ್ನು ವಿಶೇಷ ಮರ್ಯಾದೆಯಿಂದ ಕಾಣುತ್ತಾರೆ ಮತ್ತು ಉನ್ನತ ಸ್ಥಾನದಲ್ಲಿ ಕುಳ್ಳಿರಿಸುತ್ತಾರೆ. ಇಂತಹ, ಮ್ಯಾಸ ಬೇಡರ ಸಾಂಸ್ಕøತಿಕ ಉಡುಪು ಧರಿಸಿದ್ದ ಕಿಲಾರಿಗಳಿಗೆ ಆಮಿಷತೋರಿಸಿ, ಕಳ್ಳತನದಿಂದ ಕರೆಯಿಸಿ, ಅವರ ಜೊತೆಯಲ್ಲಿ ಅವರ ಮಧ್ಯೆ ಕುಳಿತು ಈ ಸ್ವಾಮಿಗಳು ಫೋಟೋ ತೆಗಸಿಕೊಳ್ಳುತ್ತಿದ್ದಾರೆ. ಇದು ಮ್ಯಾಸ ಬೇಡರ ಬುಡಕಟ್ಟು ಲಕ್ಷಣಗಳನ್ನು ಕದಿಯುವ ಪ್ರಯತ್ನವಾಗಿದೆ. ಇದು ನಮ್ಮ ‘ನಾಯಕ’ ಬುಡಕಟ್ಟಿಗೆ ಅಷ್ಟೇ ಅಲ್ಲದೆ, ಇಡೀ ಭಾರತ ದೇಶದ ಆದಿವಾಸಿಗಳಿಗೆ ಮಾಡುತ್ತಿರುವ ಅನ್ಯಾಯವಲ್ಲವೇ?

‘ನಾಯಕ’ ಬುಡಕಟ್ಟಿಗೆ ಸೇರಿದವರಲ್ಲದವರೂ ಸಹ ತಮ್ಮ ನಿಜ ಜಾತಿಗಳನ್ನು ಬರೆಸದೆ, ಜನಗಣತಿ ಮಾಡುವವರಿಗೆ ಸುಳ್ಳು ಮಾಹಿತಿ ನೀಡಿ ‘ನಾಯಕ, ವಾಲ್ಮೀಕಿ’ ಎಂದು ಮಾಹಿತಿ ಬರೆಯಿಸುತ್ತಿರುವುದರಿಂದ ನಿಜವಾದ, ಪರಿಶಿಷ್ಟ ಪಂಗಡಕ್ಕೆ ಸೇರಿದ ಆದಿವಾಸಿಗಳ ಜನಸಂಖ್ಯೆಯೇ ಲಭ್ಯವಿಲ್ಲ. ಕರ್ನಾಟಕದಲ್ಲಿ ಎಸ್. ಟಿ. ಮೀಸಲಾತಿಯನ್ನು ಈಗಿನ 3%ನಿಂದ 7.5%ಗೆ ಹೆಚ್ಚಿಸು ಎಂದು ಕೇಳುವುದು ಎಷ್ಟರ ಮಟ್ಟಿಗೆ ಸರಿ? ಈ ಸ್ವಾಮಿ ‘ಎಮ್ಮೆಯನ್ನು ನೀರಲ್ಲಿ ಮಲಗಿಸಿ, ಆ ಎಮ್ಮೆ ವ್ಯಾಪಾರ ಹೇಳುತ್ತಿದ್ದೀದ್ದಾರೆ’. ಈ ಸ್ವಾಮಿ ಈಗ ಮಾಡಿರುವ ಪಾದ ಯಾತ್ರೆಯು ಸರ್ಕಾರಕ್ಕೆ ತಮ್ಮ ಜನಸಂಖ್ಯಾ ಪ್ರಾಭಲ್ಯ, ರಾಜಕೀಯ ಬಲ ತೋರಿಸುವುದು, ಮತ್ತು ರಾಜ್ಯ ಸಭೆಯಲ್ಲಿ ‘ತಳವಾರ ಮತ್ತು ಪರಿವಾರ’’ಜಾತಿಯ ಹೆಸರುಗಳನ್ನು, ಇವು ‘ನಾಯಕ’ ಬುಡಕಟ್ಟಿನ ಸಮಾನಾರ್ಥ ಪದಗಳೆಂದು ಸುಳ್ಳು ವರದಿಗಳ ಮೇಲೆ ತಯಾರಿಸಿರುವ ಮತ್ತು ಈಗ ಸಂಸತ್ತಿನ ರಾಜ್ಯಸಭೆಯಲ್ಲಿರುವ ಬಿಲ್ಲನ್ನು ಪಾಸುಮಾಡಿಸುವುದು ಆಗಿದೆ.

ಈ ಬಿಲ್ಲು ಏನಾದರೂ ಪಾಸಾದರೆ, ಅದು ಮ್ಯಾಸ ನಾಯಕರಿಗೆ ಮತ್ತು ಇತರೆ ಬುಡಕಟ್ಟು ಜನಾಂಗಕ್ಕೆ ಮರಣ ಶಾಸನವಾಗಲಿದೆ. ಏಕೆಂದರೆ ಕಾನೂನು ಬಾಹಿರವಾಗಿ ಮ್ಯಾಸ ನಾಯಕ ಎಂಬ ಪದವನ್ನು ರಾಜ್ಯದ ಜಾತಿ ಪಟ್ಟಿಯಲ್ಲಿ ಕೆಟಗರಿ-1ರಲ್ಲಿ ಮತ್ತು ಕೇಂದ್ರ ಓಬಿಸಿ ಪಟ್ಟಿಯಲ್ಲಿ ಸೇರಿಸಿದ್ದಾರೆ. ಆದ್ದರಿಂದ ಆ ಬಿಲ್ಲು ಪಾಸಾದರೆ, ತಳವಾರ ಮತ್ತು ಪರಿವಾರದವರೇ ನಿಜವಾದ ಪರಿಶಿಷ್ಟ ಪಂಗಡದ ‘ನಾಯಕ’ ಎಂದು ಹೇಳಿ, ಮ್ಯಾಸ ಬೇಡರಿಗೆ ಎಸ್ ಟಿ ಮೀಸಲಾತಿ ಬಾಗಿಲು ಬಂದ್ ಮಾಡಿಸುತ್ತಾರೆ. ಆದ್ದರಿಂದ, 7.5% ಎಸ್ ಟಿ ಮೀಸಲಾತಿ ಎಂಬ ಮಂಕುಬೂದಿ ಎರಚಿ, ಮ್ಯಾಸ ಬೇಡರ ಅಸ್ಥಿತ್ವವನ್ನು ನಾಶಮಾಡುವುದು, ಮತ್ತು ಅವರ ಬುಡಕಟ್ಟು ಲಕ್ಷಣಗಳನ್ನು ಅಪಹರಿಸುವುದು, ಸಂಸ್ಕøತಿ ಕದಿಯುವುದು ಇದರ ಒಳಗುಟ್ಟು.

ಈ ತಳವಾರ ಪರಿವಾರದವರ ಗುರುವಾದ ಶ್ರೀ ಪ್ರಸನ್ನಾನಂದ ಸ್ವಾಮಿಗೆ ಬೆಂಬಲವಾಗಿ, ಆಧಿಕಾರದ ಲಾಲಸೆಯಿಂದ ರಾಜಕೀಯದಲ್ಲಿ ಬೇಳೆ ಬೇಯಿಸಿ ಕೊಳ್ಳಲು, ಸ್ವಜನರ ಭವಿಷ್ಯವನ್ನು ಒತ್ತೆಹಿಡಲು ಹೊರಟಿರುವ ಕೆಲವು ಮ್ಯಾಸ ಬೇಡ ರಾಜಕಾರಣಿಗಳು ಇದ್ದಾರೆ. ತಮ್ಮ ಮೂಲ ಸಂಸ್ಕøತಿಯನ್ನು ಬಿಡುವುದೇ ನಾಗರೀಕತೆ ಎಂದು ತಿಳಿದು, ತಳವಾರ ಮತ್ತು ಪರಿವಾರದವರೊಡನೆ ವೈವಾಹಿಕ ಸಂಬಂಧ ಬೆಳೆಸಿರುವ ಅಲ್ಪ ವಿದ್ಯೆ ಕಲಿತ ಅವಿವೇಕಿ ಕೆಲವು ಮ್ಯಾಸ ನಾಯಕರುಗಳು ಏನೂ ಗೊತ್ತಿಲ್ಲದ ಮಳ್ಳರಂತೆ ಸ್ವಾಮಿ ಪಾದ ನೆಕ್ಕುತ್ತಿದ್ದಾರೆ. ಸ್ವಾಭಿಮಾನದಿಂದ ಬದುಕದೆ, ತಳವಾರ ಮತ್ತು ಪರಿವಾರದವರು ಕೊಡುವ ಎಂಜಲು ಕಾಸಿಗಾಗಿ ಬಾಯಿತೆರೆದು ಕುಳಿತಿರುವ ನಾಚಿಕೆ ಇಲ್ಲದ ಕೆಲವು ಮ್ಯಾಸ ನಾಯಕರು. ತಳವಾರ, ಪರಿವಾರ, ಎಲ್ಲಾ ನಾಯಕರೂ ಒಂದೇ ಎಂದು ಕಳಪೆ ಇತಿಹಾಸ ಮತ್ತು ಸಾಹಿತ್ಯ ಬರೆದಿರುವ, ಮತ್ತು ತಾವು ಮಾಡಿರುವ ತಪ್ಪೇ ಸರಿಯೆಂದು ವಿತಂಡವಾದಕ್ಕೆ ನಿಂತಿರುವ, ಅಪ್ರಭುದ್ಧ ಕೆಲವು ಮ್ಯಾಸ ಬೇಡ ಜನಾಂಗದ ಸಾಹಿತಿಗಳು ಬರಹಗಾರರು, ಮುಖ ತೋರಿಸಲಾಗದೆ ತಲೆಬಗ್ಗಿಸಿ ಸ್ವಾಮಿ ಹಿಂದೆ ಹೆಜ್ಜೆ ಹಾಕುತ್ತಿದ್ದಾರೆ.

Empty vessel make loud noise’ ಎಂಬುದನ್ನು ಇಲ್ಲಿ ನೆನಪುಮಾಡಿಕೊಳ್ಳ ಬಹುದು. ಈ ಸ್ವಾಮಿಯ ಅನುಯಾಯಿಗಳು ಎಸ್ ಟಿ ಮೀಸಲಾತಿಗೆ ಹಕ್ಕುದಾರರೇ ಅಲ್ಲ. ತಳವಾರ ಮತ್ತು ಪರಿವಾರದವರನ್ನು ಸೇರಿಸಿಕೊಂಡು ಸುಳ್ಳನ್ನೇ ನಿಜವೆಂದು ಒದರಿ, ಸತ್ಯವೆಂದು ಸಾಬೀತು ಪಡಿಸಲು ಹೊರಟಿರುವ ದುಸ್ಸಾಹಸಿ. ಬೆದರಿಸಿ ಪಡೆಯುವುದು ಹಕ್ಕನಲ್ಲ, ಪರರ ಸೊತ್ತನ್ನು. ಸರ್ಕಾರವನ್ನು ಇಕ್ಕಟ್ಟಿಗೆ ಸಿಕ್ಕಿಸುವುದು, ಬೀಳಿಸುತ್ತೇವೆಂದು ಹೆದರಿಸುವುದು ಇವರಿಗೆ ಪ್ರಜಾಭುತ್ವದ ಬಗ್ಗೆ ಇರುವ ಅಗೌರವನ್ನು ತೋರಿಸುತ್ತಿದೆ.

ದೊಡ್ಡಮನಿ ಪ್ರಸಾದ್
ವಕೀಲರು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

Published

on

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಈ ಮಹತ್ವದ ಜವಾಬ್ದಾರಿಯನ್ನು ಬಿ.ಕೆ. ಹರಿಪ್ರಸಾದ್ ಅವರಿಗೆ ನೀಡಿದೆ.

ಈ ನೇಮಕ ಕೇವಲ ಸಂಘಟನಾತ್ಮಕ ಬದಲಾವಣೆಯಲ್ಲ. ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ದಿಕ್ಕು, ಪಕ್ಷದ ಒಳಾಂಗಣ ಸಮತೋಲನ ಮತ್ತು ಭವಿಷ್ಯದ ಚುನಾವಣಾ ತಂತ್ರಗಳಿಗೆ ಇದು ಪ್ರಮುಖ ಸೂಚನೆಯಾಗಿದೆ. ಹಲವು ದಶಕಗಳ ರಾಜಕೀಯ ಅನುಭವ, ಸಂಘಟನಾ ಕೌಶಲ್ಯ ಮತ್ತು ಹೈಕಮಾಂಡ್‌ಗೆ ನಿಕಟ ಸಂಪರ್ಕ ಹೊಂದಿರುವ ಹರಿಪ್ರಸಾದ್ ಅವರು ಈಗ ರಾಜ್ಯ ಕಾಂಗ್ರೆಸ್‌ನ ನೂತನ ಸಾರಥಿಯಾಗಿ ಹೊರಹೊಮ್ಮಿದ್ದಾರೆ.

ಆರಂಭಿಕ ಜೀವನ ಮತ್ತು ಶಿಕ್ಷಣ

ಬಿ.ಕೆ. ಹರಿಪ್ರಸಾದ್ ಅವರು 1954ರ ಜುಲೈ 29ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಎ. ಕೆಂಪಯ್ಯ ಹಾಗೂ ತಾಯಿ ಕೆ. ಗುಣಾವತಿ. ಬಾಲ್ಯದಿಂದಲೇ ಸಾಮಾಜಿಕ ಮತ್ತು ರಾಜಕೀಯ ಚಟುವಟಿಕೆಗಳತ್ತ ಆಸಕ್ತಿ ಹೊಂದಿದ್ದ ಅವರು ಬೆಂಗಳೂರಿನ ಎಂ.ಇ.ಎಸ್. ಕಾಲೇಜಿನಲ್ಲಿ ಬಿ.ಕಾಂ ಪದವಿ ಶಿಕ್ಷಣ ಪಡೆದರು. ವಿದ್ಯಾರ್ಥಿ ಜೀವನದಲ್ಲಿಯೇ ಕಾಂಗ್ರೆಸ್ ಚಟುವಟಿಕೆಗಳೊಂದಿಗೆ ಗುರುತಿಸಿಕೊಂಡ ಅವರು ಮುಂದೆ ಪೂರ್ಣಾವಧಿ ರಾಜಕಾರಣಿಯಾಗಿ ಬೆಳೆದರು.

ವಿದ್ಯಾರ್ಥಿ ರಾಜಕಾರಣದಿಂದ ರಾಷ್ಟ್ರೀಯ ಮಟ್ಟದ ನಾಯಕತ್ವದವರೆಗೆ

ಹರಿಪ್ರಸಾದ್ ಅವರ ರಾಜಕೀಯ ಬದುಕು ವಿದ್ಯಾರ್ಥಿ ಕಾಂಗ್ರೆಸ್ ಮತ್ತು ಯುವ ಕಾಂಗ್ರೆಸ್ ಸಂಘಟನೆಗಳಿಂದ ಆರಂಭವಾಯಿತು. ಸಂಘಟನಾ ರಾಜಕಾರಣದಲ್ಲಿ ತೋರಿದ ಸಾಮರ್ಥ್ಯದಿಂದ ಅವರು ಶೀಘ್ರದಲ್ಲೇ ಪಕ್ಷದ ಹಿರಿಯ ನಾಯಕರ ಗಮನ ಸೆಳೆದರು.

ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೆ ರಾಷ್ಟ್ರೀಯ ಮಟ್ಟದಲ್ಲೂ ಕಾಂಗ್ರೆಸ್ ಸಂಘಟನೆಯಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಹಲವು ರಾಜ್ಯಗಳ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ನಾಯಕರಲ್ಲಿ ಹರಿಪ್ರಸಾದ್ ಪ್ರಮುಖರು ಎಂದು ಪರಿಗಣಿಸಲಾಗುತ್ತದೆ.

ಬಿ.ಕೆ. ಹರಿಪ್ರಸಾದ್ ಅವರು ಹಲವು ಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. 1990ರಿಂದಲೇ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ ವಹಿಸುತ್ತಾ ಬಂದಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಪರವಾಗಿ ಹಲವು ವಿಷಯಗಳ ಬಗ್ಗೆ ಧ್ವನಿ ಎತ್ತಿದ ಅವರು ಸಂಸತ್ತಿನ ಚರ್ಚೆಗಳಲ್ಲಿ ಗಮನ ಸೆಳೆದಿದ್ದರು.

ಅವರು ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿ ಎನ್‌ಡಿಎ ಅಭ್ಯರ್ಥಿ ಹರಿವಂಶ್ ನಾರಾಯಣ್ ಸಿಂಗ್ ವಿರುದ್ಧ ಪೈಪೋಟಿ ನಡೆಸಿದ್ದರು. ಸೋಲು ಕಂಡಿದ್ದರೂ ರಾಷ್ಟ್ರೀಯ ರಾಜಕೀಯದಲ್ಲಿ ಅವರ ಸ್ಥಾನಮಾನ ಮತ್ತಷ್ಟು ಬಲವತ್ತಾಯಿತು.

1999ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಜಯ ಸಾಧಿಸಲು ಸಾಧ್ಯವಾಗದಿದ್ದರೂ ಅವರು ಕಾಂಗ್ರೆಸ್‌ನ ಪ್ರಮುಖ ಮುಖವಾಗಿ ಗುರುತಿಸಿಕೊಂಡರು.

ಸಂಘಟನಾ ರಾಜಕಾರಣದಲ್ಲಿ ಹೆಚ್ಚು ಸಕ್ರಿಯರಾಗಿದ್ದ ಕಾರಣ, ಚುನಾವಣಾ ಗೆಲುವಿಗಿಂತ ಪಕ್ಷ ನಿರ್ಮಾಣದಲ್ಲಿ ಅವರ ಪಾತ್ರವೇ ಹೆಚ್ಚು ಗಮನ ಸೆಳೆಯಿತು.

ಕಾಂಗ್ರೆಸ್ ಸಂಘಟನೆಯಲ್ಲಿ ‘ಟಾಸ್ಕ್ ಮಾಸ್ಟರ್’

ಕಾಂಗ್ರೆಸ್ ಪಕ್ಷದಲ್ಲಿ ಹರಿಪ್ರಸಾದ್ ಅವರನ್ನು ಸಂಘಟನಾ ತಜ್ಞ ಎಂದು ಕರೆಯಲಾಗುತ್ತದೆ. ಪಕ್ಷ ಎದುರಿಸಿದ ಸಂಕಷ್ಟದ ಸಂದರ್ಭಗಳಲ್ಲಿ ಹಲವು ರಾಜ್ಯಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘಟನೆಯನ್ನು ಬಲಪಡಿಸಿದ ಅನುಭವ ಅವರಿಗೆ ಇದೆ.

ಇತ್ತೀಚಿನ ಅವಧಿಯಲ್ಲಿ ಅವರು ಹರಿಯಾಣ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ರಾಜಕೀಯದ ಸೂಕ್ಷ್ಮ ಸಮೀಕರಣಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಮತ್ತು ಕಾರ್ಯಕರ್ತರೊಂದಿಗೆ ನೇರ ಸಂಪರ್ಕ ಸಾಧಿಸುವ ಶೈಲಿ ಅವರ ವಿಶೇಷತೆ ಎಂದು ಪಕ್ಷದ ನಾಯಕರು ಹೇಳುತ್ತಾರೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಹರಿಪ್ರಸಾದ್ ಅವರು ಹಲವು ದಶಕಗಳಿಂದ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಪಕ್ಷದ ಒಳಗಿನ ಭಿನ್ನಾಭಿಪ್ರಾಯಗಳ ಸಂದರ್ಭದಲ್ಲೂ ಅವರು ಸಮತೋಲನ ಸಾಧಿಸುವ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ವಿಧಾನ ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅವರು, 2022 ರಿಂದ 2023ರವರೆಗೆ ಕರ್ನಾಟಕ ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸರ್ಕಾರದ ನೀತಿಗಳ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸುವ ಮೂಲಕ ಅವರು ಗಮನ ಸೆಳೆದಿದ್ದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ

2026ರಲ್ಲಿ ಕರ್ನಾಟಕ ರಾಜಕೀಯದಲ್ಲಿ ನಡೆದ ನಾಯಕತ್ವ ಬದಲಾವಣೆಯ ಬಳಿಕ ಮುಖ್ಯಮಂತ್ರಿ ಹುದ್ದೆಯನ್ನು ಡಿ.ಕೆ. ಶಿವಕುಮಾರ್ ವಹಿಸಿಕೊಂಡರು. ಇದರ ಪರಿಣಾಮವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಪಕ್ಷದೊಳಗೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಅವರನ್ನು ಆಯ್ಕೆ ಮಾಡಿತು.

ಈ ನಿರ್ಧಾರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಹೈಕಮಾಂಡ್ ಸಂಘಟನಾ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿ ಪರಿಗಣಿಸಿದೆ. ಪಕ್ಷದ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮತೋಲನ ಕಾಯ್ದುಕೊಳ್ಳಲು ಹರಿಪ್ರಸಾದ್ ಅವರ ಅನುಭವ ನೆರವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಹಿಂದೆ ಹಲವು ರಾಜಕೀಯ ಕಾರಣಗಳಿವೆ. ಮೊದಲನೆಯದಾಗಿ, ಅವರು ಯಾವುದೇ ಒಂದು ಗುಂಪಿಗೆ ಸೀಮಿತವಾಗದ ನಾಯಕ ಎಂಬ ಚಿತ್ರಣ ಹೊಂದಿದ್ದಾರೆ. ಎರಡನೆಯದಾಗಿ, ಸಂಘಟನಾ ಅನುಭವ ಅಪಾರವಾಗಿದೆ. ಮೂರನೆಯದಾಗಿ, ಹೈಕಮಾಂಡ್‌ಗೆ ಅತ್ಯಂತ ವಿಶ್ವಾಸಾರ್ಹ ನಾಯಕರಲ್ಲಿ ಒಬ್ಬರು. ನಾಲ್ಕನೆಯದಾಗಿ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳು ಮತ್ತು ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಾಮರ್ಥ್ಯ ಅವರಿಗಿದೆ ಎಂದು ಕಾಂಗ್ರೆಸ್ ನಾಯಕತ್ವ ನಂಬಿದೆ.

ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಅವರ ಮುಂದಿರುವ ಸವಾಲುಗಳು ಸಣ್ಣದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೂ ಸಂಘಟನೆಯನ್ನು ಸದೃಢವಾಗಿಡುವುದು ದೊಡ್ಡ ಜವಾಬ್ದಾರಿ. ಕಾರ್ಯಕರ್ತರ ಅಸಮಾಧಾನ, ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ, ಪ್ರಾದೇಶಿಕ ಸಮೀಕರಣಗಳು ಮತ್ತು ಜಾತಿ ಆಧಾರಿತ ರಾಜಕೀಯ ಬೇಡಿಕೆಗಳನ್ನು ಸಮತೋಲನಗೊಳಿಸಬೇಕಾಗಿದೆ.

ಇದರ ಜೊತೆಗೆ ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಸಂಘಟನೆಯನ್ನು ನಿರಂತರ ಚಟುವಟಿಕೆಯಲ್ಲಿ ಇರಿಸುವುದು ಅವರ ಪ್ರಮುಖ ಗುರಿಯಾಗಲಿದೆ.

ಹರಿಪ್ರಸಾದ್ ಅವರು ಹೆಚ್ಚು ಪ್ರಚಾರಪ್ರಿಯ ರಾಜಕಾರಣಿಯಲ್ಲ. ಸಂಘಟನೆಯೊಳಗೆ ಕೆಲಸ ಮಾಡುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಇದೆ. ಕಾರ್ಯಕರ್ತರೊಂದಿಗೆ ನೇರ ಸಂಪರ್ಕ, ಹಂತ ಹಂತವಾಗಿ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಳ್ಮೆಯ ರಾಜಕೀಯ ಅವರ ಕಾರ್ಯಶೈಲಿಯ ಮುಖ್ಯ ಲಕ್ಷಣಗಳು.

ಅವರ ರಾಜಕೀಯ ಜೀವನದಲ್ಲಿ ಅನೇಕ ಏರಿಳಿತಗಳು ಬಂದಿದ್ದರೂ ಪಕ್ಷದ ಮೇಲಿನ ನಿಷ್ಠೆ ಪ್ರಶ್ನಾತೀತವಾಗಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಹಲವು ಬಾರಿ ಅವರಿಗೆ ಪ್ರಮುಖ ಜವಾಬ್ದಾರಿಗಳನ್ನು ನೀಡಿದೆ.

ರಾಜಕೀಯದ ಜೊತೆಗೆ ಸರಳ ಜೀವನಶೈಲಿಗೆ ಹೆಸರುವಾಸಿಯಾಗಿರುವ ಹರಿಪ್ರಸಾದ್ ಅವರು ಉಷಾ ಅವರೊಂದಿಗೆ ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಅವರಿಗೆ ಒಬ್ಬ ಪುತ್ರಿಯಿದ್ದಾರೆ. ಕುಟುಂಬ ಜೀವನವನ್ನು ರಾಜಕೀಯದಿಂದ ಸಾಧ್ಯವಾದಷ್ಟು ದೂರ ಇಡುವ ನಾಯಕ ಎಂಬ ಹೆಸರನ್ನು ಅವರು ಗಳಿಸಿದ್ದಾರೆ.

ಭವಿಷ್ಯದ ರಾಜಕೀಯ ಪಾತ್ರ

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹರಿಪ್ರಸಾದ್ ಅವರ ರಾಜಕೀಯ ಜೀವನದ ಮತ್ತೊಂದು ಮಹತ್ವದ ಅಧ್ಯಾಯವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರ್ಕಾರ ಮತ್ತು ಪಕ್ಷ ಸಂಘಟನೆಯ ನಡುವೆ ಸಮನ್ವಯ ಸಾಧಿಸುವಲ್ಲಿ ಅವರ ಪಾತ್ರ ನಿರ್ಣಾಯಕವಾಗಲಿದೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯ ಮಟ್ಟದ ತಂತ್ರ ರೂಪಿಸುವುದು, ಕಾರ್ಯಕರ್ತರ ಬಲವರ್ಧನೆ, ಚುನಾವಣಾ ಸಿದ್ಧತೆ ಮತ್ತು ಹೈಕಮಾಂಡ್‌ನೊಂದಿಗೆ ಸಮನ್ವಯ ಸಾಧಿಸುವ ಪ್ರಮುಖ ಹೊಣೆಗಾರಿಕೆ ಅವರ ಮೇಲಿದೆ. ಈ ಎಲ್ಲ ಸವಾಲುಗಳನ್ನು ಅವರು ಹೇಗೆ ನಿಭಾಯಿಸುತ್ತಾರೆ ಎಂಬುದರ ಮೇಲೆ ಕರ್ನಾಟಕ ಕಾಂಗ್ರೆಸ್‌ನ ಮುಂದಿನ ರಾಜಕೀಯ ಭವಿಷ್ಯ ಬಹುಮಟ್ಟಿಗೆ ಅವಲಂಬಿತವಾಗಿದೆ.

ಸುಮಾರು ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ದುಡಿದಿರುವ ಬಿ.ಕೆ. ಹರಿಪ್ರಸಾದ್ ಇಂದು ಕರ್ನಾಟಕ ಕಾಂಗ್ರೆಸ್‌ನ ಅತ್ಯುನ್ನತ ಸಂಘಟನಾ ಹುದ್ದೆಯನ್ನು ಅಲಂಕರಿಸಿದ್ದಾರೆ. ವಿದ್ಯಾರ್ಥಿ ರಾಜಕಾರಣದಿಂದ ಆರಂಭವಾದ ಅವರ ಪಯಣ ರಾಜ್ಯಸಭೆ, ರಾಷ್ಟ್ರೀಯ ಸಂಘಟನೆ, ವಿಧಾನ ಪರಿಷತ್ ಮತ್ತು ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನವರೆಗೆ ತಲುಪಿದೆ.

ಅನುಭವ, ಸಂಘಟನಾ ಕೌಶಲ್ಯ, ರಾಜಕೀಯ ಪ್ರೌಢಿಮೆ ಮತ್ತು ಪಕ್ಷದ ಮೇಲಿನ ನಿಷ್ಠೆ ಎಂಬ ನಾಲ್ಕು ಅಂಶಗಳು ಅವರ ರಾಜಕೀಯ ವ್ಯಕ್ತಿತ್ವದ ಪ್ರಮುಖ ಗುರುತುಗಳಾಗಿವೆ. ಕರ್ನಾಟಕ ಕಾಂಗ್ರೆಸ್ ಹೊಸ ರಾಜಕೀಯ ಹಾದಿಯಲ್ಲಿ ಸಾಗುತ್ತಿರುವ ಈ ಸಂದರ್ಭದಲ್ಲಿ, ಬಿ.ಕೆ. ಹರಿಪ್ರಸಾದ್ ಅವರ ನಾಯಕತ್ವ ಪಕ್ಷಕ್ಕೆ ಹೊಸ ಶಕ್ತಿ ತುಂಬುತ್ತದೆಯೇ ಎಂಬುದನ್ನು ರಾಜ್ಯದ ರಾಜಕೀಯ ಕುತೂಹಲದಿಂದ ಗಮನಿಸುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ

Published

on

~ಡಾ.ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಭಾರತದ ವೈದ್ಯಕೀಯ ಶಿಕ್ಷಣ ರಂಗದಲ್ಲಿ ಏಕರೂಪತೆ ಮತ್ತು ಪಾರದರ್ಶಕತೆಯನ್ನು ತರುವ ಆಶಯದೊಂದಿಗೆ ಜಾರಿಗೆ ಬಂದರೂ, ಪ್ರಾಯೋಗಿಕವಾಗಿ ಅದು ದೇಶದ ಸಾಮಾಜಿಕ, ರಾಜಕೀಯ ಮತ್ತು ಶೈಕ್ಷಣಿಕ ನೆಲೆಗಳಲ್ಲಿ ತೀವ್ರ ಸ್ವರೂಪದ ಬಿಕ್ಕಟ್ಟುಗಳನ್ನು ಸೃಷ್ಟಿಸಿದೆ. ಕೇವಲ ಒಂದು ತಾಂತ್ರಿಕ ಪ್ರವೇಶ ಪರೀಕ್ಷೆಯಾಗಿ ಕಾಣುವ ಈ ವ್ಯವಸ್ಥೆಯು, ವಾಸ್ತವದಲ್ಲಿ ಭಾರತದ ಬಹುಸಂಸ್ಕೃತಿ ಮತ್ತು ಒಕ್ಕೂಟ ತತ್ತ್ವದ ಆಳವಾದ ರಚನೆಗಳ ಮೇಲೆ ಪ್ರಹಾರ ನಡೆಸುತ್ತಿದೆ. ಗುಣಮಟ್ಟದ ಶಿಕ್ಷಣದ ಹೆಸರಿನಲ್ಲಿ ತರಲಾದ ಈ ಕೇಂದ್ರೀಕೃತ ಮಾದರಿಯು ಹೇಗೆ ಸಾಮಾನ್ಯ ವಿದ್ಯಾರ್ಥಿ ಸಮೂಹವನ್ನು ಶೈಕ್ಷಣಿಕ ಪ್ರಕ್ರಿಯೆಯಿಂದ ಹೊರದೂಡುತ್ತಿದೆ, ಪ್ರಾದೇಶಿಕ ಸ್ವಾಯತ್ತತೆಯನ್ನು ಧ್ವಂಸಗೊಳಿಸುತ್ತಿದೆ ಮತ್ತು ಸಾಂಪ್ರದಾಯಿಕ ಶ್ರೇಣೀಕೃತ ಅಸಮಾನತೆಗಳನ್ನು ಆಧುನಿಕ ರೂಪದಲ್ಲಿ ಮರುಸ್ಥಾಪಿಸುತ್ತಿದೆ ಎಂಬುದನ್ನು ಸಾಮಾಜಿಕ ನ್ಯಾಯ ಮತ್ತು ವಿಮರ್ಶಾತ್ಮಕ ಸಿದ್ಧಾಂತಗಳ ಹಿನ್ನೆಲೆಯಲ್ಲಿ ವಿವರವಾಗಿ ವಿಶ್ಲೇಷಿಸಬೇಕಾಗಿದೆ.

1. ತಾರತಮ್ಯದ ಆರ್ಥಿಕ ಮತ್ತು ಪಠ್ಯಕ್ರಮದ ನೆಲೆಗಳು (Socio-Economic and Curricular Discrimination)

ನೀಟ್ ಪರೀಕ್ಷೆಯು “ಎಲ್ಲರಿಗೂ ಸಮಾನ ಅವಕಾಶ” ಎಂಬ ಭ್ರಮೆಯನ್ನು ಸೃಷ್ಟಿಸುತ್ತದೆಯಾದರೂ, ಅದರ ಒಳಗಣ್ಣು ಕೇವಲ ಒಂದು ನಿರ್ದಿಷ್ಟ ವರ್ಗದ ಪರವಾಗಿ ಕೆಲಸ ಮಾಡುತ್ತಿದೆ. ಈ ಪರೀಕ್ಷಾ ಪದ್ಧತಿಯು ಭಾರತೀಯ ಸಮಾಜದಲ್ಲಿ ಹೊಸದೊಂದು ಆರ್ಥಿಕ ತಾರತಮ್ಯವನ್ನು ಕಾನೂನುಬದ್ಧಗೊಳಿಸಿದೆ. ಇಂದು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕೇವಲ ವಿದ್ಯಾರ್ಥಿಯ ಪ್ರತಿಭೆಯನ್ನಷ್ಟೇ ಅವಲಂಬಿಸಿಲ್ಲ, ಬದಲಿಗೆ ಆ ಪೋಷಕರ ಆರ್ಥಿಕ ಸೌಲಭ್ಯವನ್ನು ಅವಲಂಬಿಸಿದೆ. ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುವ ಕಾರ್ಪೊರೇಟ್ ಕೋಚಿಂಗ್ ಉದ್ಯಮದ (Coaching Industry) ಹಬ್‌ಗಳಾದ ಹಲವಾರು ಪ್ರತಿಷ್ಠಿತ ಕೇಂದ್ರಗಳಿಗೆ ಪ್ರವೇಶ ಪಡೆಯಲು ಸಾಧ್ಯವಾಗದ ಬಡ ಮತ್ತು ಕೆಳಮಧ್ಯಮ ವರ್ಗದ ಗ್ರಾಮೀಣ ವಿದ್ಯಾರ್ಥಿಗಳು ಸ್ಪರ್ಧೆಯ ಆರಂಭಿಕ ಹಂತದಲ್ಲೇ ಸೋಲಿಸಲ್ಪಡುತ್ತಿದ್ದಾರೆ. ಇದರೊಂದಿಗೆ, ಪಠ್ಯಕ್ರಮದ ತಾರತಮ್ಯವು ಈ ಬಿಕ್ಕಟ್ಟನ್ನು ಮತ್ತಷ್ಟು ತೀವ್ರಗೊಳಿಸಿದೆ. ದೇಶದ ವೈವಿಧ್ಯಮಯ ರಾಜ್ಯಗಳು ತಮ್ಮದೇ ಆದ ಸಾಂಸ್ಕೃತಿಕ ಮತ್ತು ಪ್ರಾದೇಶಿಕ ಅಗತ್ಯಗಳಿಗನುಗುಣವಾಗಿ ರೂಪಿಸಿಕೊಂಡ ರಾಜ್ಯ ಪಠ್ಯಕ್ರಮಗಳನ್ನು (State Syllabus) ಸಂಪೂರ್ಣವಾಗಿ ನಿರ್ಲಕ್ಷಿಸಿ, ಕೇವಲ ಸಿಬಿಎಸ್ಇ (NCERT) ಪಠ್ಯಕ್ರಮವನ್ನು ಮಾತ್ರ ಮಾನದಂಡವಾಗಿರಿಸಿಕೊಳ್ಳಲಾಗಿದೆ. ಇದು ಪ್ರಾದೇಶಿಕ ಭಾಷಾ ಮಾಧ್ಯಮಗಳಲ್ಲಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಓದಿದ ಸಮಾಜದ ಕಟ್ಟಕಡೆಯ ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣದ ಕನಸಿನಿಂದಲೇ ವಂಚಿಸುವ ವ್ಯವಸ್ಥಿತ ತಾರತಮ್ಯವಾಗಿದೆ.

2. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವ್ಯವಸ್ಥೆಯ ವಿಶ್ವಾಸಾರ್ಹತೆಯ ಕುಸಿತ

ಕೇಂದ್ರೀಕೃತ ಪರೀಕ್ಷಾ ವ್ಯವಸ್ಥೆಯು ಅತ್ಯಂತ ಸುರಕ್ಷಿತ ಮತ್ತು ಭ್ರಷ್ಟಾಚಾರ ಮುಕ್ತ ಎಂಬ ವಾದವನ್ನು ನೀಟ್ ಪರೀಕ್ಷೆಯ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆಗಳು (Paper Leaks) ಮತ್ತು ಅಕ್ರಮಗಳು ಸಂಪೂರ್ಣವಾಗಿ ಬೆತ್ತಲೆಗೊಳಿಸಿವೆ. ಇಡೀ ದೇಶಕ್ಕೆ ಒಂದೇ ಪರೀಕ್ಷೆ ಎಂಬ ಹಠದ ಪರಿಣಾಮವಾಗಿ, ಪ್ರಶ್ನೆ ಪತ್ರಿಕೆಗಳು ವ್ಯವಸ್ಥಿತ ಜಾಲಗಳ ಮೂಲಕ ಕೋಟ್ಯಂತರ ರೂಪಾಯಿಗಳಿಗೆ ಮಾರಾಟವಾಗುತ್ತಿರುವುದು ಪರೀಕ್ಷಾ ಮಂಡಳಿಗಳ ಸಾಂಸ್ಥಿಕ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ಪ್ರಾಮಾಣಿಕವಾಗಿ ಹಗಲಿರುಳು ಶ್ರಮಿಸಿದ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಭವಿಷ್ಯವು, ಕಪ್ಪುಹಣ ಮತ್ತು ರಾಜಕೀಯ ಪ್ರಭಾವ ಬಳಸಿ ಪ್ರಶ್ನೆ ಪತ್ರಿಕೆಯನ್ನು ಮೊದಲೇ ಖರೀದಿಸುವ ಪ್ರಭಾವಿ ತರಬೇತಿ ಕೇಂದ್ರಗಳು ಹಾಗೂ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ವ್ಯವಸ್ಥಿತ ಹಗರಣಗಳು ಕೇವಲ ಅರ್ಹ ವಿದ್ಯಾರ್ಥಿಗಳಿಗೆ ಮಾಡುವ ಅನ್ಯಾಯವಷ್ಟೇ ಅಲ್ಲ; ಇಡೀ ಶೈಕ್ಷಣಿಕ ಆಡಳಿತದ ಮೇಲಿರುವ ಸಾರ್ವಜನಿಕ ವಿಶ್ವಾಸಾರ್ಹತೆಯನ್ನೇ ಧ್ವಂಸಗೊಳಿಸಿವೆ. ಪಾರದರ್ಶಕತೆಯ ಹೆಸರಿನಲ್ಲಿ ತರಲಾದ ವ್ಯವಸ್ಥೆಯು ಇಂದು ಭ್ರಷ್ಟಾಚಾರದ ಅತಿ ದೊಡ್ಡ ಆಡುಂಬೊಲವಾಗಿ ಮಾರ್ಪಟ್ಟಿರುವುದು ಈ ಪರೀಕ್ಷಾ ಮಾದರಿಯ ನೈತಿಕ ಪತನಕ್ಕೆ ಸಾಕ್ಷಿಯಾಗಿದೆ.

3. ವ್ಯವಸ್ಥೆ ಸೃಷ್ಟಿಸಿದ ಆತ್ಮಹತ್ಯೆಗಳು ಮತ್ತು ಮಾನಸಿಕ ಹಿಂಸೆ (Institutional Tragedies and Mental Trauma)

ನೀಟ್ ಹೇರಿರುವ ಕಠಿಣ ಪರೀಕ್ಷಾ ಸ್ವರೂಪ ಮತ್ತು ಪದೇಪದೇ ಉಂಟಾಗುವ ಸಾಂಸ್ಥಿಕ ಲೋಪಗಳು ದೇಶದ ಯುವ ಸಮುದಾಯದ ಮೇಲೆ ಅಭೂತಪೂರ್ವ ಮಾನಸಿಕ ಒತ್ತಡವನ್ನು ಸೃಷ್ಟಿಸಿವೆ. ಇವು ಕೇವಲ ವೈಯಕ್ತಿಕ ವೈಫಲ್ಯದ ಸಾವುಗಳಲ್ಲ, ಬದಲಿಗೆ ಇವುಗಳನ್ನು “ಸಾಂಸ್ಥಿಕ ಕೊಲೆಗಳು” (Institutional Murders) ಎಂದು ಕರೆಯಬೇಕಾಗುತ್ತದೆ. ವಿದ್ಯಾರ್ಥಿಯೊಬ್ಬನ ಸುದೀರ್ಘ ವರ್ಷಗಳ ಶ್ರಮ, ಅರ್ಹತೆ ಮತ್ತು ಇಡೀ ಬದುಕಿನ ಸಾಮರ್ಥ್ಯವನ್ನು ಕೇವಲ ಮೂರು ಗಂಟೆಗಳ ಒಂದು ಅಮಾನವೀಯ ವಸ್ತುನಿಷ್ಠ (MCQ) ಪರೀಕ್ಷೆಯಲ್ಲಿ ನಿರ್ಧರಿಸುವ ಕ್ರೂರ ನಡೆ ಇದು. ಕೃಷಿ ಅಥವಾ ಶ್ರಮಿಕ ಹಿನ್ನೆಲೆಯಿಂದ ಬಂದ ಪೋಷಕರು ತಮ್ಮ ಇಡೀ ಜೀವಮಾನದ ದುಡಿಮೆಯನ್ನು ಸಾಲದ ರೂಪದಲ್ಲಿ ಸುರಿದು ಮಕ್ಕಳನ್ನು ಓದಿಸುತ್ತಿರುವಾಗ, ಆ ಸಾಲದ ಹೊರೆ, ಪರೀಕ್ಷಾ ಅಕ್ರಮಗಳ ಆತಂಕ ಮತ್ತು ಸಾಮಾಜಿಕ ನಿರೀಕ್ಷೆಗಳು ವಿದ್ಯಾರ್ಥಿಗಳ ಮೇಲೆ ಅತಿಯಾದ ಮಾನಸಿಕ ಹಿಂಸೆಯಾಗಿ ರೂಪಾಂತರಗೊಳ್ಳುತ್ತವೆ. ತಮಿಳುನಾಡಿನ ಅನಿತ್ಯಾಳಿಂದ ಹಿಡಿದು ದೇಶದ ನೂರಾರು ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿ ಹಾಗೂ ಕೋಟಾದಲ್ಲಿ ತರಬೇತಿ ಪಡೆಯುತ್ತಿದ್ದ ಅಭ್ಯರ್ಥಿಗಳ ಸಾಲು ಸಾಲು ಆತ್ಮಹತ್ಯೆಗಳು ಈ ಕಠಿಣ ಶೈಕ್ಷಣಿಕ ವ್ಯವಸ್ಥೆಯ ಕ್ರೂರತೆಗೆ ಸಾಕ್ಷಿಯಾಗಿವೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗುವುದನ್ನು ಇಡೀ ಬದುಕಿನ ಸೋಲು ಎಂಬಂತೆ ಬಿಂಬಿಸುವ ಇಂತಹ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯು, ಶಿಕ್ಷಣದ ಮೂಲ ಆಶಯವಾದ ವ್ಯಕ್ತಿತ್ವ ವಿಕಸನವನ್ನು ಕೊಲೆ ಮಾಡಿ ಯುವ ಮನಸ್ಸುಗಳಲ್ಲಿ ಕೀಳರಿಮೆ ಹಾಗೂ ತೀವ್ರ ಖಿನ್ನತೆಯನ್ನು ಬಿತ್ತುತ್ತಿದೆ.

4. ಪ್ರಾದೇಶಿಕ ಪ್ರಾಬಲ್ಯ ಮತ್ತು ಒಕ್ಕೂಟ ವ್ಯವಸ್ಥೆಯ ಮೇಲಿನ ಪ್ರಹಾರ

ಭಾರತೀಯ ಸಂವಿಧಾನದ ಆಶಯದಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳು ಜಂಟಿ ಪಟ್ಟಿಯಲ್ಲಿದ್ದು (Concurrent List), ಪ್ರಾದೇಶಿಕ ಅಗತ್ಯಗಳಿಗೆ ತಕ್ಕಂತೆ ನೀತಿಗಳನ್ನು ರೂಪಿಸಿಕೊಳ್ಳುವ ಹಕ್ಕು ರಾಜ್ಯ ಸರ್ಕಾರಗಳಿಗಿದೆ. ಆದರೆ ನೀಟ್ ಪದ್ಧತಿಯು ರಾಜ್ಯಗಳ ಈ ಸಾಂವಿಧಾನಿಕ ಹಕ್ಕುಗಳನ್ನು ಸಂಪೂರ್ಣವಾಗಿ ಹರಣ ಮಾಡಿದೆ. ರಾಜ್ಯ ಸರ್ಕಾರಗಳು ತಮ್ಮ ತೆರಿಗೆದಾರರ ಹಣದಿಂದ, ತಮ್ಮದೇ ಭೂಮಿಯಲ್ಲಿ ನಿರ್ಮಿಸಿದ ವೈದ್ಯಕೀಯ ಕಾಲೇಜುಗಳ ಸೀಟುಗಳ ಮೇಲಿನ ನಿಯಂತ್ರಣವನ್ನು ಕೇಂದ್ರದ ಏಜೆನ್ಸಿಯೊಂದು ಕಸಿದುಕೊಂಡಿರುವುದು ಒಕ್ಕೂಟ ವ್ಯವಸ್ಥೆಯ (Federalism) ಮೇಲಿನ ಗಂಭೀರ ಪ್ರಹಾರವಾಗಿದೆ. ಇದರ ಪರಿಣಾಮವಾಗಿ, ಸ್ಥಳೀಯ ಭಾಷೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಸೂಕ್ಷ್ಮತೆಗಳ ಅರಿವಿಲ್ಲದ ಭಿನ್ನ ಪ್ರಾಂತ್ಯಗಳ ವಿದ್ಯಾರ್ಥಿಗಳು ದಕ್ಷಿಣದ ಅಥವಾ ನಿರ್ದಿಷ್ಟ ರಾಜ್ಯಗಳ ಗ್ರಾಮೀಣ ಕೋಟಾಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಸ್ಥಳೀಯ ರೋಗಿಗಳೊಂದಿಗೆ ಭಾಷಾ ಸಂವಹನ ನಡೆಸಲಾಗದ ಇಂತಹ ವೈದ್ಯರಿಂದಾಗಿ ಗ್ರಾಮೀಣ ಸಾರ್ವಜನಿಕ ಆರೋಗ್ಯ ರಕ್ಷಣಾ ವ್ಯವಸ್ಥೆಯು (Public Healthcare) ಸಂಪೂರ್ಣವಾಗಿ ದುರ್ಬಲಗೊಳ್ಳುತ್ತಿದೆ. ಸ್ಥಳೀಯ ಸಮುದಾಯಗಳ ಅಗತ್ಯಗಳಿಗೆ ಸ್ಪಂದಿಸುವ ಮತ್ತು ಗ್ರಾಮೀಣ ಭಾಗಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರುವ ವೈದ್ಯರ ಲಭ್ಯತೆಯನ್ನು ಕಡಿತಗೊಳಿಸುವ ಮೂಲಕ ಈ ವ್ಯವಸ್ಥೆಯು ಪ್ರಾದೇಶಿಕ ಜನಸಂಖ್ಯಾಶಾಸ್ತ್ರ ಮತ್ತು ಆರೋಗ್ಯ ಸಮತೋಲನವನ್ನು ಏರುಪೇರು ಮಾಡಿದೆ.

5. ಜಾತೀಯತೆಯ ಕರಾಳತೆ ಮತ್ತು ಯಜಮಾನಿಕೆಯ ಮರುಸ್ಥಾಪನೆ (Perpetuation of Caste Hegemony)

ಸಮಕಾಲೀನ ಸನ್ನಿವೇಶದಲ್ಲಿ ನೀಟ್ ಪರೀಕ್ಷೆಯು “ಮೆರಿಟ್” (Meritocracy) ಮತ್ತು “ಪ್ರತಿಭೆ” ಎಂಬ ಅತ್ಯಂತ ಆಕರ್ಷಕ ಮುಖವಾಡವನ್ನು ಧರಿಸಿ ಬಂದಿದೆ. ಆದರೆ, ವಿಮರ್ಶಾತ್ಮಕವಾಗಿ ನೋಡಿದಾಗ ಈ ‘ಮೆರಿಟ್’ ಎನ್ನುವುದು ಕೇವಲ ವೈಯಕ್ತಿಕ ಸಾಮರ್ಥ್ಯವಲ್ಲ, ಬದಲಿಗೆ ಅದು ತಲೆಮಾರುಗಳಿಂದ ಒಂದು ನಿರ್ದಿಷ್ಟ ವರ್ಗವು ಅನುಭವಿಸಿಕೊಂಡು ಬಂದ ಸಾಮಾಜಿಕ ಮತ್ತು ಸಾಂಸ್ಕೃತಿಕ ಬಂಡವಾಳದ (Cultural Capital) ಹೊಸ ರೂಪವೇ ಹೊರತು ಬೇರೇನಲ್ಲ. ಶತಶತಮಾನಗಳಿಂದ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿ, ಈಗಷ್ಟೇ ಮೊದಲ ತಲೆಮಾರಿನ ಶಿಕ್ಷಣ ಪಡೆಯುತ್ತಿರುವ ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ವಿದ್ಯಾರ್ಥಿಗಳಿಗೆ ಆಧುನಿಕ ಇಂಗ್ಲಿಷ್ ತರಬೇತಿ, ದುಬಾರಿ ಕೋಚಿಂಗ್ ಅಥವಾ ಇತ್ತೀಚಿನ ಪತ್ರಿಕೆ ಸೋರಿಕೆಯಂತಹ ಕರಾಳ ದಂಧೆಗಳ ರಹಸ್ಯ ಜಾಲಗಳಿಗೆ ಪ್ರವೇಶ ಪಡೆಯುವ ಸಾಮಾಜಿಕ ಹಿನ್ನೆಲೆ ಇರುವುದಿಲ್ಲ. ನೀಟ್ ವ್ಯವಸ್ಥೆಯು ಇಂತಹ ಐತಿಹಾಸಿಕ ಅಸಮಾನತೆಗಳನ್ನು ಸಂಪೂರ್ಣವಾಗಿ ಕಣ್ಣುಮುಚ್ಚಿ ಕುಳಿತು, ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿಯ ಆಶಯಗಳನ್ನು ತಾಂತ್ರಿಕವಾಗಿ ತಲೆಕೆಳಗು ಮಾಡುತ್ತಿದೆ. ಇದರ ಪರಿಣಾಮವಾಗಿ, ವೈದ್ಯಕೀಯ ಕ್ಷೇತ್ರವು ಸಮಾಜದ ಬಹುಪಾಲು ಶ್ರಮಿಕ ಮತ್ತು ತಳಸಮುದಾಯಗಳ ಕೈತಪ್ಪಿ, ಮತ್ತೆ ಕೇವಲ ಆಯ್ದ ಕೆಲವು ಉನ್ನತ ವರ್ಗಗಳ ಯಜಮಾನಿಕೆಯ (Hegemony) ತಾಣವಾಗಿ ಬದಲಾಗುತ್ತಿದೆ. ಇದು ಸಾಂಪ್ರದಾಯಿಕ ಜಾತೀಯತೆಯ ಶ್ರೇಣೀಕೃತ ಕರಾಳತೆಯನ್ನು ಅತ್ಯಂತ ಸೂಕ್ಷ್ಮ ಹಾಗೂ ಆಧುನಿಕ ಶೈಕ್ಷಣಿಕ ನಿಯಮಗಳ ಮೂಲಕ ಪುನರುತ್ಪಾದಿಸುವ ಅಪಾಯಕಾರಿ ನೆಲೆಯಾಗಿದೆ.

6. ಸಮನ್ವಯದ ದಾರಿ….

ನೀಟ್ ಸೃಷ್ಟಿಸಿರುವ ಈ ಸಾಂಸ್ಥಿಕ, ಆರ್ಥಿಕ ಮತ್ತು ಸಾಮಾಜಿಕ ಅವಾಂತರಗಳು ನಮಗೆ ಶಿಕ್ಷಣ ವ್ಯವಸ್ಥೆಯ ಮರುಚಿಂತನೆಯ ತುರ್ತು ಅಗತ್ಯವನ್ನು ನೆನಪಿಸುತ್ತವೆ. ಪ್ರಜಾಪ್ರಭುತ್ವದ ನಿಜವಾದ ಆಶಯವಿರುವುದು ಕೇವಲ ಕಾಗದದ ಮೇಲಿನ ತಾಂತ್ರಿಕ “ಏಕರೂಪತೆ”ಯಲ್ಲಲ್ಲ, ಬದಲಿಗೆ ಭಿನ್ನ ಹಿನ್ನೆಲೆಯ ಜನರನ್ನು ಒಳಗೊಳ್ಳುವ “ಸಮಾನತೆ” ಮತ್ತು “ಸಾಮಾಜಿಕ ನ್ಯಾಯ”ದಲ್ಲಿ ಮಾತ್ರ. ಕೇವಲ ಬಂಡವಾಳಶಾಹಿ ಮಾರುಕಟ್ಟೆಯ, ಕೋಚಿಂಗ್ ಮಾಫಿಯಾಗಳ ಮತ್ತು ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಕರಾಳ ಜಾಲಗಳ ಹಿತಾಸಕ್ತಿಯನ್ನು ಕಾಯುವ ಇಂತಹ ಪ್ರವೇಶ ಪರೀಕ್ಷೆಗಳು ವೈದ್ಯಕೀಯ ಕ್ಷೇತ್ರವನ್ನು ಕೇವಲ ವ್ಯಾಪಾರೀಕರಣದ ಕೇಂದ್ರವನ್ನಾಗಿ ಮಾಡುತ್ತವೆಯೇ ಹೊರತು ಮಾನವೀಯತೆಯುಳ್ಳ ವೈದ್ಯರನ್ನು ಸೃಷ್ಟಿಸಲಾರವು. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಸ್ವಾಯತ್ತತೆ, ಬಹುತ್ವ ಮತ್ತು ತಳಸಮುದಾಯಗಳ ಶೈಕ್ಷಣಿಕ ಹಕ್ಕುಗಳನ್ನು ರಕ್ಷಿಸಲು ನೀಟ್ ಮಾದರಿಯ ಕೇಂದ್ರೀಕೃತ ಪರೀಕ್ಷೆಗಳ ತಾರತಮ್ಯದ ನೆಲೆಗಳನ್ನು ತಕ್ಷಣವೇ ಮರುಪರಿಶೀಲಿಸಬೇಕಾಗಿದೆ; ಇಲ್ಲದಿದ್ದರೆ ಇದು ದೇಶದ ಒಕ್ಕೂಟ ರಚನೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡುವುದು ಖಂಡಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಸಮರ್ಥ್ ಶಾಮನೂರು ಪ್ರಯಾಸದ ಗೆಲುವು ಮತ್ತು ಮುಂದಿನ ಸವಾಲುಗಳು

Published

on

~ಗೋವರ್ಧನ ನವಿಲೇಹಾಳು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ನಿಧನದ ನಂತರ ಖಾಲಿಯಾದ ಈ ಕ್ಷೇತ್ರವು ಕುಟುಂಬದ ರಾಜಕೀಯ ಉತ್ತರಾಧಿಕಾರ, ಅಲ್ಪಸಂಖ್ಯಾತರ ಅಸಮಾಧಾನ ಮತ್ತು ಪಕ್ಷಾಂತರದ ಆರೋಪಗಳ ನಡುವೆ ತೀವ್ರ ಸ್ಪರ್ಧೆಯನ್ನು ಕಂಡಿತು. ಸುಮಾರು 5,708 ಮತಗಳ ಅಂತರದಿಂದ ಗೆದ್ದ ಸಮರ್ಥ್ ಅವರು ಶಾಮನೂರು ಕುಟುಂಬದ ಮೂರನೇ ಪೀಳಿಗೆಯ ಪ್ರತಿನಿಧಿಯಾಗಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. ಈ ಗೆಲುವು ಕಾಂಗ್ರೆಸ್‌ಗೆ ಸಂತೋಷದ ಸುದ್ದಿಯಾದರೂ, ಎಸ್‌ಡಿಪಿಐ ಪಡೆದ ಗಣನೀಯ 18,975 ಮತಗಳು ಮತ್ತು ಬಿಜೆಪಿಯ ತೀವ್ರ ಪೈಪೋಟಿ ರಾಜಕೀಯ ಸಮೀಕರಣಗಳಲ್ಲಿ ಹೊಸ ತಿರುವುಗಳನ್ನು ಸೂಚಿಸುತ್ತವೆ.

ಈ ಉಪಚುನಾವಣೆಯು ಕೇವಲ ಕ್ಷೇತ್ರೀಯ ಘಟನೆಯಾಗಿರದೆ, ಕರ್ನಾಟಕ ರಾಜಕೀಯದಲ್ಲಿ ಅಲ್ಪಸಂಖ್ಯಾತರ ಮತಬ್ಯಾಂಕ್, ಕುಟುಂಬ ರಾಜಕೀಯ ಮತ್ತು ಪ್ರತಿಪಕ್ಷದ ತಂತ್ರಗಳ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಯಿತು. ಶಾಮನೂರು ಕುಟುಂಬದ ದೀರ್ಘಕಾಲದ ಸೇವೆಯನ್ನು ಜನರು ಮೆಚ್ಚಿದ್ದರೂ, ಕಾಂಗ್ರೆಸ್‌ನಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನಿರಾಕರಣೆಯಿಂದಾಗಿ ಉಂಟಾದ ಅಸಮಾಧಾನವು ಎಸ್‌ಡಿಪಿಐಗೆ ಅವಕಾಶ ಮಾಡಿಕೊಟ್ಟಿತು. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ತೀವ್ರ ಪ್ರಚಾರ ನಡೆಸಿದ್ದರೂ, ಕಾಂಗ್ರೆಸ್‌ನ ಅಭಿವೃದ್ಧಿ ಕಾರ್ಯಗಳು ಮತ್ತು ಐದು ಗ್ಯಾರಂಟಿಗಳ ಪ್ರಭಾವವು ಗೆಲುವಿಗೆ ನೆರವಾಯಿತು. ಆದರೆ ಈ ಗೆಲುವು ಸುಲಭವಾಗಿರಲಿಲ್ಲ; ಅದು ಎಲ್ಲಾ ಪಕ್ಷಗಳಿಗೂ ಪಾಠವನ್ನು ಕಲಿಸುತ್ತದೆ.

ಸಮರ್ಥ್ ಶಾಮನೂರು ಅವರ ಮುಂದಿನ ನಡೆ

ಕಿರಿಯ ವಯಸ್ಸಿನಲ್ಲಿ (ದೇಶದ ಎರಡನೇ ಅತಿ ಕಿರಿಯ ಶಾಸಕರಾಗಿ) ಗೆದ್ದ ಸಮರ್ಥ್ ಅವರು ತಮ್ಮ ಅಜ್ಜರ ರಾಜಕೀಯ ಪರಂಪರೆಯನ್ನು ಮುಂದುವರಿಸುವ ಜವಾಬ್ದಾರಿಯಲ್ಲಿದ್ದಾರೆ. ಮುಂದಿನ ನಡೆಯು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕೇಂದ್ರೀಕರಣಗೊಳ್ಳಬೇಕು. ದಾವಣಗೆರೆಯಂತಹ ನಗರ-ಗ್ರಾಮೀಣ ಮಿಶ್ರ ಕ್ಷೇತ್ರದಲ್ಲಿ ನೀರಾವರಿ, ಉದ್ಯೋಗ, ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಬಲಪಡಿಸುವುದು ಮುಖ್ಯ. ಶಾಮನೂರು ಕುಟುಂಬದ ಹೆಸರು ಅಭಿವೃದ್ಧಿಗೆ ಸಮಾನವಾಗಿದೆ; ಇದನ್ನು ಮುಂದುವರಿಸಿ, ಎಲ್ಲಾ ಸಮುದಾಯಗಳ ನಡುವೆ ಸೇತುವೆಯಾಗಬೇಕು.

ವಿಶೇಷವಾಗಿ ಅಲ್ಪಸಂಖ್ಯಾತರ ಅಸಮಾಧಾನವನ್ನು ನಿವಾರಿಸುವುದು ಅಗತ್ಯ. ಟಿಕೆಟ್ ವಿವಾದದ ನಂತರ ಉಂಟಾದ ಬಿರುಕುಗಳನ್ನು ತುಂಬುವ ಮೂಲಕ ಏಕತೆಯ ಸಂದೇಶ ನೀಡಬೇಕು. ಯುವಕರಾಗಿರುವುದರಿಂದ ಆಧುನಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಪಾರದರ್ಶಕ ಆಡಳಿತದ ಮೂಲಕ ಹೊಸ ಚಿಂತನೆ ತರಬಹುದು. ರಾಜಕೀಯದಲ್ಲಿ ವೈಯಕ್ತಿಕ ದಾಳಿ ಬದಲು ನಿರ್ಮಾಣಾತ್ಮಕ ವಿಮರ್ಶೆಯನ್ನು ಪ್ರೋತ್ಸಾಹಿಸುವುದು ಅವರ ಯಶಸ್ಸಿಗೆ ಕಾರಣವಾಗುತ್ತದೆ. ಜನಸಂಪರ್ಕವನ್ನು ನಿರಂತರವಾಗಿ ಉಳಿಸಿಕೊಂಡು, ಕ್ಷೇತ್ರದ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತುತಪಡಿಸುವುದು ಅವರ ಮುಂದಿನ ಗುರಿಯಾಗಬೇಕು. ಗೆಲುವು ಕುಟುಂಬದ ಆಸ್ತಿಯಲ್ಲ, ಜನರ ವಿಶ್ವಾಸದ ಫಲ; ಇದನ್ನು ಕಾಯ್ದುಕೊಳ್ಳುವುದು ದೊಡ್ಡ ಸವಾಲು.

ಬಿಜೆಪಿಯ ಮುಂದಿನ ಸವಾಲುಗಳು

ಬಿಜೆಪಿ ಈ ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಿದ್ದರೂ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ನ ಒಳಜಗಳಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಪೂರ್ಣವಾಗಿ ಬಳಸಿಕೊಳ್ಳಲು ವಿಫಲವಾಯಿತು ಎಂಬ ಮಾತುಗಳು ಕೇಳಿಬರುತ್ತಿವೆ. ಮುಂದೆ ಬಿಜೆಪಿಗೆ ಸವಾಲುಗಳು ಹಲವು: ಮೊದಲನೆಯದು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ನಡುವೆ ವಿಶ್ವಾಸಾರ್ಹತೆಯನ್ನು ಕಟ್ಟುವುದು. ಧ್ರುವೀಕರಣದ ತಂತ್ರಗಳು ಸೀಮಿತ ಯಶಸ್ಸು ನೀಡುತ್ತವೆ ಎಂಬುದು ಈ ಫಲಿತಾಂಶ ಸೂಚಿಸುತ್ತದೆ.

ಕ್ಷೇತ್ರದಲ್ಲಿ ಸ್ಥಳೀಯ ನಾಯಕರನ್ನು ಬಲಪಡಿಸುವುದು, ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಸಂಪರ್ಕ ಹೆಚ್ಚಿಸುವುದು ಅಗತ್ಯ. ರಾಜ್ಯ ಮಟ್ಟದಲ್ಲಿ ಪ್ರತಿಪಕ್ಷದ ಪಾತ್ರವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಾ, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದು ಮುಂದಿನ ಚುನಾವಣೆಗಳಲ್ಲಿ ನೆರವಾಗುತ್ತದೆ. ಈ ಗೆಲುವು ಕಾಂಗ್ರೆಸ್‌ಗೆ ಎಚ್ಚರಿಕೆಯಾಗಿದ್ದರೆ, ಬಿಜೆಪಿಗೆ ಕ್ರಿಯಾಶೀಲತೆಯ ಅಗತ್ಯವನ್ನು ತೋರಿಸುತ್ತದೆ.

ಎಸ್‌ಡಿಪಿಐ ಮುಂದಿನ ಸವಾಲು

ಎಸ್‌ಡಿಪಿಐ ಈ ಚುನಾವಣೆಯಲ್ಲಿ ಗಮನಾರ್ಹ ಮತಗಳನ್ನು ಪಡೆದು ತನ್ನ ಉಪಸ್ಥಿತಿಯನ್ನು ಸಾಬೀತುಪಡಿಸಿದೆ. ಅಲ್ಪಸಂಖ್ಯಾತರ, ವಿಶೇಷವಾಗಿ ಮುಸ್ಲಿಂ ಸಮುದಾಯದ ಅಸಮಾಧಾನವನ್ನು ಬಳಸಿಕೊಂಡು ತನ್ನ ಮತಬ್ಯಾಂಕ್‌ನ್ನು ವಿಸ್ತರಿಸಿದೆ. ಆದರೆ ಇದು ಸವಾಲುಗಳನ್ನೂ ತಂದಿದೆ. ಮುಂದೆ ಎಸ್‌ಡಿಪಿಐಗೆ ಬ್ರಾಡ್ ಆಪೀಲ್ ಅಗತ್ಯ – ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗದೆ, ಆರ್ಥಿಕ-ಸಾಮಾಜಿಕ ನ್ಯಾಯ, ಶಿಕ್ಷಣ ಮತ್ತು ಉದ್ಯೋಗದಂತಹ ವಿಷಯಗಳಲ್ಲಿ ಎಲ್ಲರಿಗೂ ಸ್ಪಂದಿಸುವ ಧೋರಣೆ ಬೆಳೆಸಬೇಕು.

ಚುನಾವಣಾ ಅನಿಯಮಗಳ ಆರೋಪಗಳು ಮತ್ತು ಮುಖ್ಯ ಪಕ್ಷಗಳ ನಡುವಿನ ತಂತ್ರಗಳ ನಡುವೆ ಸಿಲುಕದೆ, ಸ್ವತಂತ್ರ ರಾಜಕೀಯವನ್ನು ಬಲಪಡಿಸುವುದು ಮುಖ್ಯ. ದೀರ್ಘಕಾಲದ ಯಶಸ್ಸಿಗೆ ಸಮುದಾಯಗಳ ನಡುವಿನ ಸೇತುವೆಯಾಗುವುದು ಅಗತ್ಯ; ಇಲ್ಲದಿದ್ದರೆ ಮತ ವಿಭಜನೆಯ ಆರೋಪಗಳು ಮುಂದುವರಿಯುತ್ತವೆ.

ಈ ಫಲಿತಾಂಶವು ಭಾರತೀಯ ಜನತಂತ್ರದ ಜೀವಂತತೆಯನ್ನು ತೋರಿಸುತ್ತದೆ. ಗೆಲುವು ಸಂಭ್ರಮಿಸುವುದರ ಜೊತೆಗೆ, ಸೋಲಿನಿಂದ ಪಾಠ ಕಲಿಯುವುದು ಎಲ್ಲಾ ಪಕ್ಷಗಳ ಕರ್ತವ್ಯ. ಸಮರ್ಥ್ ಶಾಮನೂರು ಅವರು ತಮ್ಮ ಯುವಕರ ಉತ್ಸಾಹ ಮತ್ತು ಕುಟುಂಬ ಪರಂಪರೆಯನ್ನು ಸಂಯೋಜಿಸಿ, ಎಲ್ಲಾ ವರ್ಗಗಳ ಜನರ ಸೇವೆಗೆ ಮುಂದಾಗಬೇಕು. ಕಾಂಗ್ರೆಸ್ ಅಂತರ್ಗತ ಏಕತೆಯನ್ನು ಬಲಪಡಿಸಬೇಕು. ಬಿಜೆಪಿ ಮತ್ತು ಎಸ್‌ಡಿಪಿಐ ತಮ್ಮ ತಂತ್ರಗಳನ್ನು ಪುನರ್ ಪರಿಶೀಲಿಸಿ, ಜನಕೇಂದ್ರಿತ ರಾಜಕೀಯಕ್ಕೆ ಮರಳಬೇಕು.

ದಾವಣಗೆರೆ ದಕ್ಷಿಣದ ಜನರು ಅಭಿವೃದ್ಧಿ ಮತ್ತು ಸಾಮರಸ್ಯವನ್ನು ಬಯಸುತ್ತಾರೆ. ಹೊಸ ಶಾಸಕರು ಈ ನಿರೀಕ್ಷೆಯನ್ನು ಪೂರೈಸುವಲ್ಲಿ ಯಶಸ್ವಿಯಾಗಲಿ ಎಂದು ಹಾರೈಸುತ್ತೇವೆ. ರಾಜಕೀಯವು ಸೇವೆಯಾಗಬೇಕೇ ವಿನಾ ಕುಟುಂಬ ಅಥವಾ ಸಮುದಾಯ ದ್ವೇಷದ ಆಟವಾಗಬಾರದು. ಈ ಉಪಚುನಾವಣೆಯ ಪಾಠಗಳು ರಾಜ್ಯದ ಭವಿಷ್ಯದ ಚುನಾವಣೆಗಳಿಗೆ ದಾರಿ ತೋರಿಸುತ್ತವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಅಂಕಣ21 hours ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ21 hours ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ1 day ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

ದಿನದ ಸುದ್ದಿ3 days ago

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು...

ದಿನದ ಸುದ್ದಿ4 days ago

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ...

ದಿನದ ಸುದ್ದಿ4 days ago

ಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ

ಸುದ್ದಿದಿನ,ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ (B. K. Hariprasad) ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ...

ಅಂಕಣ4 days ago

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು...

ದಿನದ ಸುದ್ದಿ4 days ago

ಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್

ಸುದ್ದಿದಿನ ಡೆಸ್ಕ್:ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾನು ಇಂದು ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಮುಖ್ಯಮಂತ್ರಿಯಾಗಿ ರಾಜ್ಯದ ಏಳುಕೋಟಿ ಜನತೆಯ ಸೇವೆ ಮಾಡಲು ಒದಗಿ ಬಂದಿರುವ ಈ ಅವಕಾಶ ನನ್ನ...

ದಿನದ ಸುದ್ದಿ4 days ago

ಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ

ಸುದ್ದಿದಿನ,ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ರಾಜ್ಯದ ಜನತೆಗೆ ಹಲವು ಮಹತ್ವದ ಘೋಷಣೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣವಚನ...

ದಿನದ ಸುದ್ದಿ5 days ago

ದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ

ಸುದ್ದಿದಿನಡೆಸ್ಕ್:ದಾವಣಗೆರೆಮಹಾನಗರದಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ ಮಾಡುವ ಮುನ್ನ ಪೂರ್ವಭಾವಿಯಾಗಿ ಒಂದಿಷ್ಟು ಮಾಹಿತಿಯ ಅಗತ್ಯವಿದೆ. ದಾವಣಗೆರೆ ಅತ್ಯಂತ ನಿಖರವಾಗಿ ಕರ್ನಾಟಕದ ಮಧ್ಯಭಾಗದಲ್ಲಿದೆ. ಅದ್ದರಿಂದ ಈ ನಗರವನ್ನೇ...

Trending