ದಿನದ ಸುದ್ದಿ
ಈ ಮೂರು ಜನಾಂಗಗಳೀಗ ಎಸ್ಟಿಗೆ ಸೇರ್ಪಡೆ..!
ಸುದ್ದಿದಿನ,ಬೆಂಗಳೂರು: ಹಲವು ವರ್ಷಗಳ ಬೇಡಿಕೆಯಂತೆ ಪರಿಶಿಷ್ಟ ಪಂಗಡಕ್ಕೆ ತಳವಾರ, ಪರಿವಾರ, ಸಿದ್ಧಿ ಜನಾಂಗವನ್ನು ಸೇರಿಸಿ ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿದೆ.
ಸಂವಿಧಾನ ತಿದ್ದುಪಡಿ ಕಾಯ್ದೆ 2020ರ ಅನ್ವಯ ಪರಿವಾರ ಮತ್ತು ತಳವಾರ ಹಾಗೂ ಸಿದ್ಧಿ ಸಮುದಾಯವನ್ನು (ಉತ್ತರ ಕನ್ನಡ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯಲ್ಲಿರುವ) ಎಸ್ಟಿಗೆ ಸೇರಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.
ಸರ್ಕಾರದ ಈ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಸಚಿವ ಶ್ರೀರಾಮುಲು, ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಟ್ವೀಟ್ ಈ ಕೆಳಗಿನಂತಿದೆ. ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಡಿ.
ಪರಿವಾರ ಹಾಗೂ ತಳವಾರ ಸಮುದಾಯಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ನಾವು ಕಂಡ ಕನಸು ಈಡೇರಿದೆ. ಈ ಬಗ್ಗೆ ಮೊದಲಿನಿಂದಲೂ ಕೂಗು ಇತ್ತು.
Now dreams come true. It's celebrating time. All the effort n fight gave us results pic.twitter.com/U6OLhx9hbU— B Sriramulu (@sriramulubjp) May 31, 2020
ಸುದ್ದಿದಿನ.ಕಾಂ|ವಾಟ್ಸಾಪ್|9980346243