ದಿನದ ಸುದ್ದಿ
ಫೇಸ್ ಬುಕ್ ಪೋಸ್ಟ್: ಪವನಜಗೆ ಲೆಫ್ಟ್ ರೈಟ್
ಎನ್ ಮಹೇಶ್ ಅವರ ತೆರೆದ ಪುಸ್ತಕ ಪರೀಕ್ಷೆಯಲ್ಲಿ ಯಾವ ಜಾತಿ ಮಕ್ಕಳು ಎಷ್ಟು ಪುಸ್ತಕ ತೆಗೆದುಕೊಂಡು ಹೋಗಬೇಕೆಂಬ ವಿಜ್ಞಾನ ಬರಹಗಾರ ಪವನಜ ಅವರ ಫೇಸ್ ಬುಕ್ ಪೋಸ್ಟ್ ವಿವಾದ ಹುಟ್ಟುಹಾಕಿದೆ.
ಸುದ್ದಿದಿನ ಡೆಸ್ಕ್: ವಿಜ್ಞಾನ ಬರಹಗಾರ ಯು.ಬಿ. ಪವನಜ ಅವರ ಫೇಸ್ಬುಕ್ ಪೋಸ್ಟ್ ವೊಂದು ಭಾರಿ ವಿವಾದ ಹುಟ್ಟುಹಾಕಿದ್ದು, ಬ್ರಾಹ್ಮಣವಾದದ ಕುರಿತು ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.
ಶಿಕ್ಷಣ ಸಚಿವ ಎನ್. ಮಹೇಶ್ ಅವರು ಓಪನ್ ಬುಕ್ ಟೆಸ್ಟ್ ಅಥವಾ ತೆರೆದ ಪುಸ್ತಕ ಪರೀಕ್ಷೆ ಕುರಿತ ಚಿಂತನೆಯನ್ನು ಹೀಯಾಳಿಸಿ ಪವನಜ ಅವರು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು.
ತೆರೆದ ಪುಸ್ತಕ ಪರೀಕ್ಷೆಯಲ್ಲಿ ಯಾವ ಜಾತಿಯ ಮಕ್ಕಳು ಎಷ್ಟು ಪುಸ್ತಕ ತೆಗೆದುಕೊಂಡು ಹೋಗಬೇಕು ಎಂಬ ಕುರಿತ ಪೋಸ್ಟ್ ಇದಾಗಿದೆ. ಪವನಜ ಅವರ ಈ ಪೋಸ್ಟ್ ಗೆ ಋಣಾತ್ಮಕ ಪ್ರತಿಕ್ರಿಯೆ ವ್ಯಕ್ತವಾದ ಹಿಂದೆಯೇ ಈ ಪೋಸ್ಟ್ ಡಿಲಿಟ್ ಆಗಿದೆ.
ಸದ್ಯ ರಾಜ್ಯದ ಗೌರವಾನ್ವಿತ ಪ್ರಜಾವಾಣಿ ಪತ್ರಿಕೆಯ ಅಂಕಣಕಾರರೂ ಆಗಿರುವ ಪವನಜ ಅವರ ಅಂಕಣವನ್ನು ಈ ಕೂಡಲೇ ನಿಲ್ಲಿಸಬೇಕೆಂಬ ಒತ್ತಾಯಗಳೂ ಕೇಳಿಬರುತ್ತಿವೆ.
ಪವನಜ ಅವರ ಪೋಸ್ಟ್ ಕುರಿತು ವ್ಯಕ್ತವಾಗಿರುವ ಕಮೆಂಟ್ ಗಳು ಇಲ್ಲಿವೆ.
ಇಂಥಹವರೆ ಸಮಾಜದಲ್ಲಿ ಮೀಸಾಲಾತಿ ಬಗ್ಗೆ ತಪ್ಪು ತಪ್ಪು ಸಂದೇಶಗಳನ್ನು ಜಾತಿ ಜಾತಿ ಮಧ್ಯೆ ಬಿತ್ತಿ ತಮ್ಮ ಬೇಳೆಗಳನ್ನು ಬೇಯಿಸಿಕೊಳ್ಳುತ್ತಿರುವವರು , ಹುಟ್ಟುಗುಣ ಈ ಸನಾತನಿ ಮನುವಾದಿಗಳಿಂದ ಹೋಗಲ್ಲ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ನೀಚರು ಇವರು.
ಇಂತಹ ಬರಹಗಾರರು ಇರುವುದರಿಂದಲ್ಲೇ ಭಾರತದ ಮಾಧ್ಯಮಗಳನ್ನೂ ವಿಶ್ವಮಟ್ಟದಲ್ಲಿ ಹೆಸರು ಮಾಡದೆ ಇರುವುದು ತೂ ಅವನ ಜನ್ಮಕ್ಕೆ ಇಷ್ಟು ಮಣ್ಣು ಹಾಕಿ.
ಜನರಲ್ ಕೆಟಗರಿಗೂ ಬಾರದ ಶ್ರೇಷ್ಠತಮವಾದ ‘ಮೂರನೇ ದರ್ಜೆಯ ಬ್ರಾಹ್ಮಣ್ಯ’!
ಮನುವಾದಿ ಕೋಟಾದಲ್ಲಿ ಅಂಕಣಾವಕಾಶ ಸಿಕ್ಕಿರಬೇಕು
ಕಾನೂನಿನಲ್ಲಿ ಎಷ್ಟೊಂದು ಮೀಸಲಾತಿ ಇದ್ದರು ಕೂಡ ಬ್ರಾಹ್ಮಣರ ಸರಕಾರಿ ಹುದ್ದೆಗಳು 75%ರಷ್ಟು ಪಡೆಯಲು ಹೇಗೆ ಸಾದ್ಯವಾಯಿತು ಎಂದು ಕೊರಳು ಪಟ್ಟಿಹಿಡಿದು ಕೇಳಬೇಕು ಪವನಜನಿಗೆ.
ಇವತ್ತು ಬ್ರ್ಹೇಮೀನ್ ಗಳು ಅತಿ ಹೆಚ್ಚು ಸುಳ್ಳು ಹೇಳುವ, ಆಲಿಸುವ, ಚರ್ಚಿಸುವ ಮತ್ತು ವ್ಯಾಖ್ಯಾನಿಸುವ ಕೀಳು ಹಂತಕ್ಕೆ ಕುಸಿದಿದ್ದಾರೆ. ಕೇಂದ್ರ ಸಂಪುಟದಲ್ಲಿ ಶೇಕಡಾ 85 ಅವಕಾಶ ಸಿಕ್ಕಿರುವುದೇ ಕಾರಣವಿರಬೇಕು.

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ5 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ4 days ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ