ದಿನದ ಸುದ್ದಿ
ಫೇಸ್ ಬುಕ್ ಪೋಸ್ಟ್: ಪವನಜಗೆ ಲೆಫ್ಟ್ ರೈಟ್
ಎನ್ ಮಹೇಶ್ ಅವರ ತೆರೆದ ಪುಸ್ತಕ ಪರೀಕ್ಷೆಯಲ್ಲಿ ಯಾವ ಜಾತಿ ಮಕ್ಕಳು ಎಷ್ಟು ಪುಸ್ತಕ ತೆಗೆದುಕೊಂಡು ಹೋಗಬೇಕೆಂಬ ವಿಜ್ಞಾನ ಬರಹಗಾರ ಪವನಜ ಅವರ ಫೇಸ್ ಬುಕ್ ಪೋಸ್ಟ್ ವಿವಾದ ಹುಟ್ಟುಹಾಕಿದೆ.
ಸುದ್ದಿದಿನ ಡೆಸ್ಕ್: ವಿಜ್ಞಾನ ಬರಹಗಾರ ಯು.ಬಿ. ಪವನಜ ಅವರ ಫೇಸ್ಬುಕ್ ಪೋಸ್ಟ್ ವೊಂದು ಭಾರಿ ವಿವಾದ ಹುಟ್ಟುಹಾಕಿದ್ದು, ಬ್ರಾಹ್ಮಣವಾದದ ಕುರಿತು ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.
ಶಿಕ್ಷಣ ಸಚಿವ ಎನ್. ಮಹೇಶ್ ಅವರು ಓಪನ್ ಬುಕ್ ಟೆಸ್ಟ್ ಅಥವಾ ತೆರೆದ ಪುಸ್ತಕ ಪರೀಕ್ಷೆ ಕುರಿತ ಚಿಂತನೆಯನ್ನು ಹೀಯಾಳಿಸಿ ಪವನಜ ಅವರು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು.
ತೆರೆದ ಪುಸ್ತಕ ಪರೀಕ್ಷೆಯಲ್ಲಿ ಯಾವ ಜಾತಿಯ ಮಕ್ಕಳು ಎಷ್ಟು ಪುಸ್ತಕ ತೆಗೆದುಕೊಂಡು ಹೋಗಬೇಕು ಎಂಬ ಕುರಿತ ಪೋಸ್ಟ್ ಇದಾಗಿದೆ. ಪವನಜ ಅವರ ಈ ಪೋಸ್ಟ್ ಗೆ ಋಣಾತ್ಮಕ ಪ್ರತಿಕ್ರಿಯೆ ವ್ಯಕ್ತವಾದ ಹಿಂದೆಯೇ ಈ ಪೋಸ್ಟ್ ಡಿಲಿಟ್ ಆಗಿದೆ.
ಸದ್ಯ ರಾಜ್ಯದ ಗೌರವಾನ್ವಿತ ಪ್ರಜಾವಾಣಿ ಪತ್ರಿಕೆಯ ಅಂಕಣಕಾರರೂ ಆಗಿರುವ ಪವನಜ ಅವರ ಅಂಕಣವನ್ನು ಈ ಕೂಡಲೇ ನಿಲ್ಲಿಸಬೇಕೆಂಬ ಒತ್ತಾಯಗಳೂ ಕೇಳಿಬರುತ್ತಿವೆ.
ಪವನಜ ಅವರ ಪೋಸ್ಟ್ ಕುರಿತು ವ್ಯಕ್ತವಾಗಿರುವ ಕಮೆಂಟ್ ಗಳು ಇಲ್ಲಿವೆ.
ಇಂಥಹವರೆ ಸಮಾಜದಲ್ಲಿ ಮೀಸಾಲಾತಿ ಬಗ್ಗೆ ತಪ್ಪು ತಪ್ಪು ಸಂದೇಶಗಳನ್ನು ಜಾತಿ ಜಾತಿ ಮಧ್ಯೆ ಬಿತ್ತಿ ತಮ್ಮ ಬೇಳೆಗಳನ್ನು ಬೇಯಿಸಿಕೊಳ್ಳುತ್ತಿರುವವರು , ಹುಟ್ಟುಗುಣ ಈ ಸನಾತನಿ ಮನುವಾದಿಗಳಿಂದ ಹೋಗಲ್ಲ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ನೀಚರು ಇವರು.
ಇಂತಹ ಬರಹಗಾರರು ಇರುವುದರಿಂದಲ್ಲೇ ಭಾರತದ ಮಾಧ್ಯಮಗಳನ್ನೂ ವಿಶ್ವಮಟ್ಟದಲ್ಲಿ ಹೆಸರು ಮಾಡದೆ ಇರುವುದು ತೂ ಅವನ ಜನ್ಮಕ್ಕೆ ಇಷ್ಟು ಮಣ್ಣು ಹಾಕಿ.
ಜನರಲ್ ಕೆಟಗರಿಗೂ ಬಾರದ ಶ್ರೇಷ್ಠತಮವಾದ ‘ಮೂರನೇ ದರ್ಜೆಯ ಬ್ರಾಹ್ಮಣ್ಯ’!
ಮನುವಾದಿ ಕೋಟಾದಲ್ಲಿ ಅಂಕಣಾವಕಾಶ ಸಿಕ್ಕಿರಬೇಕು
ಕಾನೂನಿನಲ್ಲಿ ಎಷ್ಟೊಂದು ಮೀಸಲಾತಿ ಇದ್ದರು ಕೂಡ ಬ್ರಾಹ್ಮಣರ ಸರಕಾರಿ ಹುದ್ದೆಗಳು 75%ರಷ್ಟು ಪಡೆಯಲು ಹೇಗೆ ಸಾದ್ಯವಾಯಿತು ಎಂದು ಕೊರಳು ಪಟ್ಟಿಹಿಡಿದು ಕೇಳಬೇಕು ಪವನಜನಿಗೆ.
ಇವತ್ತು ಬ್ರ್ಹೇಮೀನ್ ಗಳು ಅತಿ ಹೆಚ್ಚು ಸುಳ್ಳು ಹೇಳುವ, ಆಲಿಸುವ, ಚರ್ಚಿಸುವ ಮತ್ತು ವ್ಯಾಖ್ಯಾನಿಸುವ ಕೀಳು ಹಂತಕ್ಕೆ ಕುಸಿದಿದ್ದಾರೆ. ಕೇಂದ್ರ ಸಂಪುಟದಲ್ಲಿ ಶೇಕಡಾ 85 ಅವಕಾಶ ಸಿಕ್ಕಿರುವುದೇ ಕಾರಣವಿರಬೇಕು.
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!