Connect with us

ದಿನದ ಸುದ್ದಿ

2018-19 ರಲ್ಲಿ ಸ್ವಾರ್ಥದ ರಾಜಕಾರಣ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published

on

ಸುದ್ದಿದಿನ,ಮಂಡ್ಯ : 2018-19 ರಲ್ಲಿ ಅಧಿಕಾರವನ್ನು ಸ್ವಾರ್ಥಕ್ಕಾಗಿ, ತಮ್ಮವರ ಸ್ವಾರ್ಥಕ್ಕಾಗಿ ಅಲ್ಲದೇ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳಲು ಎಲ್ಲರ ಜೊತೆ ರಾಜಿಯಾಗಿ, ಕಾನೂನು ಸುವ್ಯವಸ್ಥೆಯನ್ನು ಗಾಳಿಗೆ ತೂರಿ ಸಮಯವನ್ನು ವ್ಯರ್ಥ ಮಾಡಿ, ಸ್ವಾರ್ಥಕ್ಕೆ ಲಾಭ ಮಾಡಿಕೊಂಡಿರುವುದನ್ನು ನಾವು ನೋಡಿದ್ದೇವೆ. ಅದು ಅಧಿಕಾರ ಪಡೆಯುವ ಮತ್ತು ಉಳಿಯುವ ರಾಜಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮತ್ತು ಸರ್ಕಾರಿ ಸವತ್ತುಗಳ ವಿತರಣಾ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ನಾರಾಯಣಗೌಡರು ಯಾಕೆ ರಾಜಿನಾಮೆ ಕೊಟ್ಟರು ಎಂದು ಕೆ.ಆರ್.ಪೇಟೆಯಲ್ಲಿ ದೊಡ್ಡ ಪ್ರಶ್ನೆ ಎದ್ದಿತ್ತು. ಪತ್ರಿಕೆಗಳಲ್ಲಿ ದೊಡ್ಡ ಸುದ್ದಿಯಾಗಿತ್ತು. ನಾರಾಯಣಗೌಡರು ಯಾಕೆ ರಾಜಿನಾಮೆ ಕೊಟ್ಟರು ಎಂಬ ಪ್ರಶ್ನೆಗೆ ಉತ್ತರ ದೊರಕಿದೆ. 17 ಸಾವಿರ ಕೋಟಿ ರೂ.ಗಳ ಅಭಿವೃದ್ಧಿಯನ್ನು ಮಾಡಿ ಕೆ.ಆರ್.ಪೇಟೆಯ ಸಮಗ್ರ ಅಭಿವೃದ್ಧಿಗಾಗಿ ರಾಜಿನಾಮೆ ಕೊಟ್ಟು, ನುಡಿದಂತೆ ನಾನು ನಡೆದಿದ್ದೇನೆ ಎಂದು ತೋರಿಸಿಕೊಟ್ಟಿದ್ದಾರೆ ಎಂದರು.

2019 ರ ಮಧ್ಯ ಭಾಗದಿಂದ ಬಿ.ಎಸ್.ಯಡಿಯೂರಪ್ಪ ಅವರು ಸಿಎಂ‌ ಆಗಿದ್ದಾಗ ಮಹಾಮಾರಿಯನ್ನು ವಿಶ್ರಾಂತಿಯಿಲ್ಲದೆ ನಿರಂತರವಾಗಿ ಕೋವಿಡ್ ವಿರುದ್ಧ ಹೋರಾಡಿದರು. ರಾಜ್ಯ ಬೊಕ್ಕಸದ ಹಣವನ್ನು ಆರೋಗ್ಯ ಇಲಾಖೆಯ ಕಾಯಕಲ್ಪಕ್ಕೆ ಕೊಟ್ಟು ಕೋವಿಡ್ ನಿರ್ವಹಣೆಯನ್ನು ಯಶಸ್ವಿಯಾಗಿ ನಿರ್ವಹಿಸಿದರು. ಹಿಂದಿನ ಸರ್ಕಾರಗಳಲ್ಲಿ ಆರೋಗ್ಯ ವ್ಯವಸ್ಥೆ ಸರಿಯಿರಲಿಲ್ಲ. ಆದರೂ ದಿಟ್ಟತನದಿಂದ ಎದುರಿಸಿದರು. ಅಂದು ಅವರು ಮಾಡಿದ ಕೆಲಸದಿಂದ ಇಂದು ಕೋವಿಡ್ ನಿರ್ವಹಣೆ ಮಾಡಲು ಸಾಧ್ಯವಾಯಿತು.

ಒಂದು ಕಡೆ ಯಡಿಯೂರಪ್ಪ ಅವರ ಕೋವಿಡ್ ವಿರುದ್ಧದ ಕಾರ್ಯಕ್ರಮಗಳು, ಮತ್ತೊಂದೆಡೆ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋಡಿಯವರ ಲಸಿಕಾ ಕಾರ್ಯಕ್ರಮ ಕೋವಿಡ್ ನಿರ್ವಹಣೆ ಮಾಡಲು ಸಹಾಯವಾಯಿತು. ಹೀಗಾಗಿ ನೆಮ್ಮದಿಯಿಂದ ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗಿದೆ. ಕರ್ನಾಟಕದ ಮಹಾಜನತೆ ಈ ಇಬ್ಬರೂ ಮಹನೀಯರನ್ನು ಸದಾ ಕಾಲ ನೆನಪಿನಲ್ಲಿಡಬೇಕು.

ಲಕ್ಷಗಟ್ಟಲೇ ಜನರ ಜೀವ ಉಳಿಸಿದ್ದಾರೆ. ಕೆಲಸವಿಲ್ಲದವರಿಗೆ ಬದುಕು ನೀಡಿದ್ದಾರೆ. ಆಟೋ ಚಾಲಕರು, ಕೂಲಿ ಕಾರ್ಮಿಕರಿಗೂ ಸಹ ಯಡಿಯೂರಪ್ಪ ನವರು ಬದುಕು ನೀಡಿದ್ದಾರೆ. ಇದು ಜನಪರವಾದ ಆಡಳಿತ, ಜನರ ರಾಜಕಾರಣ. ನಾರಾಯಣಗೌಡರು ರಾಜಿನಾಮೆ ಕೊಟ್ಟಿದ್ದೂ ಕೂಡ ಜನರ ರಾಜಕಾರಣದ ಸಲುವಾಗಿ. ನಾರಾಯಣಗೌಡರಿಗೆ ಸದಾ ಕಾಲ ನಿಮ್ಮ ಆಶಿರ್ವಾದ ಇರಬೇಕು ಎಂದರು.

ನಮ್ಮ ಸರ್ಕಾರ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಸಾಗಿದೆ. ಸಮಾಜದ ಕಟ್ಟಕಡೆಯ, ಅತ್ಯಂತ ದುರ್ಬಲ ವ್ಯಕ್ತಿ, ದೀನ ದಲಿತ, ಹಿಂದಳಿದ ವರ್ಗದ ಜನ, ಅವಕಾಶ ವಂಚಿತರಿಗೆ ಅವಕಾಶ, ದುಡಿಯವ ವರ್ಗಕ್ಕೆ ಕೆಲಸ, ಯಡಿಯೂರಪ್ಪ ನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಸಾಲಮನ್ನಾ, ಬಡ್ಡಿ ರಹಿತ ಸಾಲ, ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ, ಭೂಚೇತನ, ಕೆರೆಗಳ ಅಭಿವೃದ್ಧಿ ಮಾಡಿದರು. ರೈತರಿಗೆ 10 ಹೆಚ್.ಪಿ.ವರೆಗೆ ಉಚಿತ ವಿದ್ಯುತ್ ನೀಡಿದರು. ಇದು ರೈತರ ಬಗ್ಗೆ ಅವರಿಗಿದ್ದ ಕಳಕಳಿ. ಅದೇ ದಾರಿಯಲ್ಲಿ ನಾವು ಇಂದು ಮುಂದುವರೆಯುತ್ತಿದ್ದೇವೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending