ದಿನದ ಸುದ್ದಿ
ಹಿರಿಯ ಪತ್ರಕರ್ತ ಕುಲದೀಪ್ ನಯ್ಯರ್ ವಿಧಿವಶ
ಸುದ್ದಿದಿನ ಡೆಸ್ಕ್ | ಹಿರಿಯ ಪತ್ರಕರ್ತರಾದ ಕುಲದೀಪ್ ನಯ್ಯರ್ ವಿಧಿವಶರಾಗಿದ್ದಾರೆ. ಪತ್ರಿಕಾ ಅಂಕಣಕಾರರು, ಮಾನವಹಕ್ಕು ಕಾರ್ಯಕರ್ತರು ಮತ್ತು ಲೇಖಕರಾಗಿದ್ದ ನಯ್ಯರ್, 1997ರಲ್ಲಿ ಭಾರತದ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ನಯ್ಯರ್ ಅವರ ಅಂಕಣಗಳು 14 ಭಾಷೆಗಳ ೮೦ ಪತ್ರಿಕೆಗಳಲ್ಲಿ ಪ್ರಕಟಗೊಳ್ಳುತ್ತಿದ್ದವು. 1990ರಲ್ಲಿ ಗ್ರೇಟ್ ಬ್ರಿಟನ್ ದೇಶಕ್ಕೆ ಹೈ ಕಮಿಶನರ್ ಆಗಿ ಕೂಡ ನೇಮಕಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401