ದಿನದ ಸುದ್ದಿ
ಕೋಲಾರ | ‘ಚಿಂತಕ ಆನಂದ್ ತೇಲ್ತುಂಬ್ಡೆ ಬಂಧನ ಖಂಡಿಸಿ’ ಎಸ್ಎಫ್ಐ ನಿಂದ ಪ್ರತಿಭಟನೆ

ಸುದ್ದಿದಿನ,ಕೋಲಾರ : ಮಾನವ ಹಕ್ಕುಗಳ ಹೋರಾಟಗಾರ,ಚಿಂತಕ ಹಾಗೂ ಅಂಬೇಡ್ಕರ್ ಮೊಮ್ಮಗ ಆನಂದ್ ತೇಲ್ತುಂಬ್ಡೆ ಬಂಧನ ಖಂಡಿಸಿ ಇಂದು ಕೋಲಾರ ನಗರದಲ್ಲಿ ಹೋರಾಟ ನಡೆಸಲಾಯಿತು.
ಕಾಲೇಜು ವೃತ್ತದಲ್ಲಿ ರಸ್ತೆ ತಡೆ ನಡೆಸಿ ಅಲ್ಲಿಂದ ತಾಲ್ಲೂಕು ಕಛೇರಿ ವರೆಗೂ ಮೆರವಣಿಗೆ ನಡೆಯಿತು.ಪ್ರತಿಭಟನೆಯನ್ನುದ್ದೇಶಿಸಿ ಎಸ್ಎಫ್ಐ ಜಿಲ್ಲಾಧ್ಯಕ್ಷ ಕೆ. ವಾಸುದೇವರೆಡ್ಡಿ ಮಾತನಾಡಿ. ದೇಶದಲ್ಲಿ ಪ್ರಗತಿಪರ ಚಿಂತಕರು, ಹೋರಾಟಗಾರ ಧ್ವನಿ ಅಡಗಿಸಲು ಮೋದಿ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.
ಕಳೆದ ವರ್ಷ ಜನವರಿ-01 ರಂದು ಕೋರೆಂಗಾವ್ ನಲ್ಲಿ ಕಲ್ಲು ತೂರಾಟ ನಡೆಸಿ ಹಿಂಸಾಚಾರ ಪೇಶ್ವೆದಳ, RSS ಗೂಂಡಾಗಳನ್ನು ವಿರುದ್ಧ ಕ್ರಮಕೈಗೊಳ್ಳುವ ಬದಲು ಈ ಕಿಡಿಗೇಡಿಗಳಿಗೆ ಕ್ಲೀನ್ ಚಿಟ್ ನೀಡಲಾಗಿದೆ. ಆದರೆ ಈ ಹಿಂಸಾಚಾರದ ಕೃತ್ಯ ಖಂಡಿಸಿ ಕೋರೆಂಗಾವ್ ಸಭೆಯಲ್ಲಿ ಶಾಂತಿಯುತವಾಗಿ ಭಾಗವಹಿಸಿದ್ದ ಪ್ರಗತಿಪರ ಚಿಂತಕರು, ಹೋರಾಟಗಾರರ ಮೇಲೆ ಮೊಕದ್ದಮೆ ದಾಖಲು ಮಾಡಿ ಮಹಾರಾಷ್ಟ್ರ BJP ಸರ್ಕಾರ, ಮೋದಿ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡಲು ಹೊರಟಿದ್ದಾರೆ.
ಈ ಪ್ರಕರಣದಲ್ಲಿ ಆನಂದ್ ತೇಲ್ತುಂಬ್ಡೆ ಯವರನ್ನು ಅನಾವಶ್ಯಕವಾಗಿ ಸಿಲುಕಿಸಲು RSS, BJP ವ್ಯವಸ್ಥಿತವಾಗಿ ಸಂಚು ರೂಪಿಸಿದ್ದಾರೆ. ಆದ್ದರಿಂದ ಈ ಕೂಡಲೇ ಬೇಷರತ್ತಾಗಿ ಆನಂದ್ ತೇಲ್ತುಂಬ್ಡೆ, ವರವರ ರಾವ್ ಸೇರಿದಂತೆ ಇನ್ನಿತರ ಚಿಂತಕರು, ಸಾಹಿತಿಗಳನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು. ತಾಲ್ಲೂಕು ದಂಡಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ನೀಡಲಾಯಿತು.
ಪ್ರತಿಭಟನೆಯಲ್ಲಿ ಡಿಎಸ್ಎಸ್ ಮುಖಂಡ ವಕ್ಕಲೇರಿ ರಾಜಪ್ಪ, ರೈತ ಸಂಘದ ರಾಜ್ಯ ಉಪಾಧ್ಯಕ್ಷ ನಾರಾಯಣಗೌಡ, ಎಸ್ಎಫ್ಐ ರಾಜ್ಯಾಧ್ಯಕ್ಷ ವಿ.ಅಂಬರೀಶ್, ಜನಾಧೀಕಾರ ಜಿಲ್ಲಾ ಅಧ್ಯಕ್ಷರು ಹೂವರಸನಹಳ್ಳಿ ರಾಜಪ್ಪ, ರಾಮಮೂರ್ತಿ, ಸಿ.ವಿ.ನಿಗರಾಜ್, ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಶಿವಪ್ಪ, ಜೆಎಂಎಸ್ ಜಿಲ್ಲಾ ಕಾರ್ಯದರ್ಶಿ ವಿಜಯ ಕುಮಾರಿ, ಎಸ್ಎಫ್ಐ ತಾಲ್ಲೂಕು ಅಧ್ಯಕ್ಷರಾದ ಗಾಯತ್ರಿ, ಕಾರ್ಯದರ್ಶಿ ಶ್ರೀಕಾಂತ್, ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ವಿಜಯ ಕೃಷ್ಣ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಭೀಮರಾಜ್, ಹಾಗೂ ನೂರಾರು ಎಸ್ಎಫ್ಐ ಕಾರ್ಯಕರ್ತರು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
