Connect with us

ದಿನದ ಸುದ್ದಿ

ವಿಡಿಯೋ | ಹಿಂದೂ-ಮುಸ್ಲಿಂ ಭಾವೈಕ್ಯತೆಯ ಜಿಲೇಬಿ ಜಾತ್ರೆ : ಇಲ್ಲಿ ಜಿಲೇಬಿ ಸವಿದರೆ ಇಷ್ಟಾರ್ಥ ಸಿದ್ದಿ ಎಂಬ ನಂಬಿಕೆ

Published

on

  • ವರದಿ: ನಿಂಗಣ್ಣ

ಸುದ್ದಿದಿನ,ಯಾದಗಿರಿ (ಶಹಾಪುರ): ಆ ಗ್ರಾಮದ ದರ್ಗಾದ ದೇವರು ಹಿಂದೂ-ಮುಸ್ಲಿಮರ ಆರಾಧ್ಯದೈವ
ಚಾವಡಿ ಮುಂದೆ ವರ್ಷಕ್ಕೊಮ್ಮೆ ನಡೆಯುವ ಜಿಲೇಬಿ ಜಾತ್ರೆ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಗಮ ಕೂಡ ಆದರೆ ದೇವರ ದರ್ಶನ ಪಡೆದ ನಂತರ ರುಚಿ ರುಚಿ ಜಿಲೇಬಿ ತಿನ್ನಲೇಬೇಕು.

ಅರೆ, ದೇವರ ದರ್ಶನಕ್ಕೂ ಜಿಲೇಬಿ ತಿನ್ನುವುದಕ್ಕೂ ಏನು ಸಂಬಂಧ ಅಂತೀರಾ..? ಈ ಸ್ಟೋರಿ ನೋಡಿ..

ಹೀಗೆ ಎಲ್ಲಿ ನೋಡಿದರೂ ಬಾಯಲ್ಲಿ ನೀರೂರಿಸುವ ವಿವಿಧ ಬಗೆಯ ಜಿಲೇಬಿ ಕಾಣಸಿಗುವುದು, ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾಗರ ಗ್ರಾಮದ ಗ್ರಾಮದ ಹಜರತ್ ಮುನವರ್ ಬಾಷ
ದರ್ಗಾದ ಜಿಲೇಬಿ ಜಾತ್ರೆಯಲ್ಲಿ.

ಹೌದು, ಈ ಗ್ರಾಮದ ಆರಾಧ್ಯದೈವ ಹಿಂದೂ-ಮುಸ್ಲಿಮರ ಭಾವೈಕ್ಯತೆ ನಾನಾಬಗೆಯ ರುಚಿ ರುಚಿ ಜಿಲೇಬಿ ತಿನ್ನುವುದು ಇಲ್ಲಿ ವಾಡಿಕೆ
ಈ ಪದ್ಧತಿ ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದ್ದು, ಹೀಗೆ ದೇವರ ದರ್ಶನ ಪಡೆದು ಜಿಲೇಬಿ ತಿಂದರೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ಇದೆ.

ಸಗರ ಗ್ರಾಮದ ಹೃದಯಭಾಗದ ದರ್ಗಾದ ಚಾವಡಿ ಮುಂದೆ ಕೇವಲ ಮೂರು ಗಂಟೆ ಮಾತ್ರ ಈ ಜಿಲೇಬಿ ಜಾತ್ರೆ ನಡೆಯುತ್ತದೆ. ಆನಂತರ ಬಂದವರಿಗೆ ಒಂದು ಸ್ವಲ್ಪವೂ ಜಿಲೇಬಿ ಸಿಗುವುದಿಲ್ಲ.

ಇನ್ನು ಜಾತ್ರೆಯಲ್ಲಿ ಸಜ್ಜೆ ಜಿಲೇಬಿ ತುಂಬಾ ಫೇಮಸ್. ಜಿಲೇಬಿ ವ್ಯಾಪಾರಿಗಳು ಭಕ್ತರು ಬೇಡಿದಾಗ ತಕ್ಷಣ ಬಿಸಿಬಿಸಿ ಜಿಲೇಬಿ ಹಾಕಿ ಕೊಡುತ್ತಾರೆ ಸಜ್ಜೆ ಸಕ್ಕರೆ ಬೆಲ್ಲದಿಂದ ಮಾಡಿದ ಮೆತ್ತ ಮತ್ತೆಗೆ ಮತ್ತು ಕುರುಕಲು ಸ್ವಾದಿಷ್ಟ ಜಿಲೇಬಿ ಇಲ್ಲಿ ಸಿಗುತ್ತದೆ.

ಈ ಜಿಲೇಬಿ ಸ್ವಾದ ಸವಿಯಲೆಂದೇ ಜಿಲ್ಲೆಯ ನಾನಾ ಭಾಗಗಳಿಂದ ಜನ ಬಂದು ಜಿಲೇಬಿ ಚಪ್ಪರಿಸುತ್ತಾರೆ ದೇವರ ದರ್ಶನ ನಂತರ ಜಿಲೇಬಿ ಸವಿದರೆ ಇಷ್ಟಾರ್ಥ ನೆರವೇರುತ್ತದೆ ಎಂಬುದು ಭಕ್ತರ ನಂಬಿಕೆಯಾಗಿದೆ.

ಜಾತ್ರೆ ಗಳೆಂದರೆ ಹಾಗೆ ತನ್ನದೇ ವೈಶಿಷ್ಟ್ಯ ಹೊಂದಿರುತ್ತದೆ ಜಾತ್ರೆಯಲ್ಲಿ ಜಿಲೇಬಿ ಸಿಗುವುದು ಕಾಮನ್ ಆದರೆ ಇಲ್ಲಿ ಜಾತ್ರೆ ನಡೆಯುತ್ತದೆ. ವಿಶೇಷ ನಿಮಗೂ ಜಿಲೇಬಿಯ ಸ್ವಾದ ಸವಿಯ ಬೇಕೆನ್ನಿಸಿದರೆ, ವಿವಿಧ ಬಗೆಯ ಜಿಲೇಬಿಗೆಂದೇ ಪ್ರಸಿದ್ಧವಾದ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಸಗರ ಗ್ರಾಮದ ಈ ಜಾತ್ರೆ
ಜಿಲೇಬಿ ಜಾತ್ರೆಗೆ ಬನ್ನಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending