Connect with us

ಅಂತರಂಗ

ಭಾವ ಸಂಗಮ ಸಮಾಗಮ : ನೆನಪೇ ಸಂಭ್ರಮ

Published

on

ಅಬ್ಬಾ ಪ್ರತಿದಿನದ ಜಂಜಾಟ, ಯಾಂತ್ರಿಕ ಜೀವನ, ಎಲ್ಲವನ್ನೂ ಮರೆತು ಕುಟುಂಬದವರೆಲ್ಲರೂ ಒಂದಾಗುವ ಸೇರುವ ಸಮಾಗಮವೆ, ಸಾಹಿತ್ಯ ಸಮಾಗಮ. ಈ ಸಂಗಮಕ್ಕೆ ನನ್ನನ್ನೂ ರಾಜೇಂದ್ರ ಪಾಟೀಲ್ ಭಾವಸಂಗಮದ ಸಂಚಾಲಕರು ಮೂರು ತಿಂಗಳ ಹಿಂದೆ ಸೇರಿಸಿದರು. ಮೊದಮೊದಲು ಸಂಗಮಕ್ಕೆ ಸೇರಿದಾಗ ಕೊಂಚ ಅಳುಕಿತ್ತು.

ಏಕೆಂದರೆ ಈ ಸಂಗಮದಲ್ಲಿ ಎಲ್ಲರೂ ಪದಗಳ ಜೊತೆಗೆ ಆಟವಾಡುವ ಸಾಹಿತಿಗಳು, ಕಲ್ಪನಾ ಲೋಕದಲ್ಲಿ ಮುಳುಗಿರುವ ಕವಿ, ಕವಯಿತ್ರಿಯರು, ತಪ್ಪುಗಳನ್ನು ತಿದ್ದಿ, ಕಲ್ಲನ್ನು ಶಿಲ್ಪಿ ಮಾಡುವ ಶಿಲ್ಪಿಕಾರಂತಿರುವ ಶಿಕ್ಷಕ-ಶಿಕ್ಷಕಿಯರು, ನ್ಯಾಯ ದೇವತೆಯ ಪುತ್ರರು, ಸದಾಕಾಲ ನ್ಯಾಯವನ್ನು ಎತ್ತಿ ಹಿಡಿಯುವಂತಹ ವಕೀಲರು, ಶಿಸ್ತಿನ ಸೀಪಾಯಿಗಳಂತೆ ಸಮವಸ್ತ್ರ ತೊಟ್ಟು ಕೈಯಲ್ಲೊಂದು ಲಾಠಿ ಹಿಡಿಯುವ ಆರಕ್ಷಕರು, ಸಮಾಜವನ್ನು ಒಂದು ನಿರ್ದಿಷ್ಟ ದಾರಿಯತ್ತ ಕೈಹಿಡಿದು ಸದಾಕಾಲ ಸಮಾಜದ ಅಭಿವದ್ಧಿಗಾಗಿ ದುಡಿಯುವ ವಿವಿಧ ರಾಜ್ಯಮಟ್ಟ, ಜೀಲ್ಲಾಮಟ್ಟ, ಪ್ರಾದೇಶಿಕ ಮಟ್ಟದ ಪತ್ರಿಕೆಗಳ ಹಿರಿಯ ಪರ್ತಕರ್ತರು, ಆಕಾಶವಾಣಿ ಹಾಗೂ ದೂರವಾಣಿಯ ವರದಿಗಾರರು, ಸಮಾಜದ ಅಭಿವೃದ್ಧಿಯಲ್ಲಿ ತಮ್ಮದೆ ರಿತಿಯಲ್ಲಿ ವಿಶಾಲವಾದ ಜಗತ್ತಿಗೆ ಕಾಲಿಡುತ್ತಿರುವ ಭಾವಿ ಪತ್ರಕರ್ತರು, ಹೀಗೆ ಅನೇಕ ವಿಭಿನ್ನ ಮನಸ್ಸುಗಳ ಸಮಾಗಮವೆ ಈ ಭಾವ ಸಂಗಮವಾಗಿತ್ತು.

‘ಭಾವ ಸಂಗಮ’ ವಾಟ್ಸ್ ಗ್ರೂಪ್ ಸಂಯೋಜನೆಗೆ ಕಾರಣ ಹಾಗೂ ಮೂಲ
ಕನ್ನಡ ಸಾಹಿತ್ಯ, ಸಂಗೀತ, ನಾಟಕ, ಕಲೆ ಇತ್ಯಾದಿ ಸೃಜನಶೀಲ ಚಟುವಟಿಕೆಗಳಲ್ಲಿ ಆಸಕ್ತಿಯುಳ್ಳವರನ್ನು, ಪ್ರತಿಭಾನ್ವಿತರನ್ನು, ಉದಯೋನ್ಮುಖರನ್ನು, ಹಾಗೂ ಸಹೃದಯದವರನ್ನು ಎಲ್ಲರನ್ನು ಒಂದೇ ಕಡೆಗೆ ಸೇರಿಸುವುದಾಗಿದೆ. ಇವರೆಲ್ಲರ ಸಾಹಿತಿಕ ಬರವಣಿಗೆಗಳನ್ನು ಪ್ರತಿಭೆಗಳನ್ನು ಎಲ್ಲರೂ ನೋಡಿ ಆನಂದಿಸಬೇಕು ಎಂದುಕೊಂಡೆ. ಹಿರಿಯರು ಆಶೀರ್ವಾದಿಸಬೇಕು, ಕಿರಿಯರು ತಮ್ಮ ಪ್ರತಿಭೆಯ ಪ್ರದರ್ಶನ ಮಾಡಬೇಕು. ಈ ಎಲ್ಲಾ ಉದ್ದೇಶದಿಂದ ಭಾವ ಸಂಗಮ ಆರಂಭಿಸಲಾಗಿದೆ ಎಂದು ಭಾವಸಂಗಮದ ವಾಟ್ಸ್ಆ್ಯಪ್ ಗ್ರೂಪ್‍ನ ಸಂಚಾಲಕರಾದ ರಾಜೇಂದ್ರ ಪಾಟೀಲ ಅವರು ತಿಳಿಸುತ್ತಾರೆ.

ಇದು ಮೂಲತಃ ಸಾಮಾಜಿಕ ಜಾಲತಾಣವಾದ ಫೇಸ್ಬುಕ್‍ನಲ್ಲಿಯೇ 2009ರಲ್ಲಿ ಪ್ರಾರಂಭಿಸಲಾಗಿತ್ತು. ಆದರೆ ಆಗ ಇದರ ಕ್ರಯಾ ಚಟುವಟಿಕೆಗಳು ಅಷ್ಟೊಂದು ತಿವ್ರವಾಗಿರಲಿಲ್ಲ. ನಂತರ 2015ರ ಜುಲೈ 10ರಂದು ನನ್ನ ಕೈಗೆ ಸ್ಮಾರ್ಟ ಫೋನ್ ಬಂತು. ಆ ದಿನವೆ ನನ್ನ ಜನ್ಮದಿನವಿತ್ತು. ಅಂದೆ ನಾನು ಭಾವ ಸಂಗಮ ಎನ್ನುವ ವಾಟ್ಸಾಪ್ ಗ್ರೂಪ್ ಸೃಷ್ಟಿಸಿದೆ ಎಂದು ರಾಜೇಂದ್ರ ಪಾಟೀಲ( ಉಮಾತನಯರಾಜ) ಅವರು ಹೇಳುತ್ತಾರೆ.

ಭಾವ ಸಂಗಮದ ಸಂಪೂರ್ಣ ಪಕ್ಷಿನೋಟ ಇಲ್ಲಿದೆ

ಆಗಷ್ಟೇ ಅನೇಕರು ವಾಟ್ಸಾಪ್ ನಲ್ಲಿ ಪ್ರವೇಶ ಪಡೆದಿದ್ದರು. ಭಾವ ಸಂಗಮ ತಯಾರಿಕೆಗಾಗಿ ಮೊದಲಿಗೆ 65ಜನರು ಸಿಕ್ಕರು, ಇದೆ ವಿಷಯವಾಗಿ ಬಾದಾಮಿಯ ಗೆಳೆಯ ವೆಂಕಟೇಶ ಇನಾಮದಾರ ಹಾಗೂ ನಾವು ಚರ್ಚೆ ಮಾಡಿದೆವು, ನಾವೆಲ್ಲಾ ಸಹೃಯಗಳು ಒಂದೆಡೆಗೆ ಸೇರೋಣ, ಸಮಾವೇಶ ಮಾಡೋಣ, ನಮ್ಮ ಪ್ರತಿಭೆಗಳನ್ನು ತೋರಿಸೊಣ, ಅದೊಂದು ವಿಭಿನ್ನವಾದ ಕೌಟುಂಬಿಕ ಕಾರ್ಯಕ್ರಮ ಮಾಡೋಣ ಎನ್ನುವ ಚರ್ಚೆ ಮಾಡಲಾಯಿತು. ಈ ಚರ್ಚೆಯ ಹಿನ್ನೆಲೆಯಲ್ಲಿ 2015ರ ನ.8 ರಂದು ಬಾದಾಮಿಯ ಮಹಾಕೂಟದಲ್ಲಿ ನಿಸರ್ಗದತ್ತವಾಗಿ ನಯನ ಮನೋಹರವಾಗಿ ಮೊದಲ ಸಮಾಗಮವನ್ನು ಅನೌಪಚಾರಿಕವಾಗಿ ಅರಳಿಮರದ ಕೆಳಗೆ ಟೇಬಲ್, ಕುರ್ಚಿ, ಮೈಕ್ ಯಾವುದೇ ಸೌಲಬ್ಯಗಳಿಲ್ಲದೆ ಜಮಖಾನಿ ಹಾಸಿ ಕೂತುಕೊಂಡು ಸರಳತೆಯಿಂದ ಕಾರ್ಯಕ್ರಮವನ್ನು ನಡೆಸಿದ್ದೆವು. ಇದರಲ್ಲಿ ಕೆಲವರು, ಸಂಗೀತ ಹಾಡಿದರು, ಕವಿತೆಗಳನ್ನು ಹೇಳಿದರು, ಕವನ ವಾಚನ ಮಾಡಿದರು. ತಮ್ಮ ಅನುಭವಗಳನ್ನು ಹಂಚಿಕೊಂಡರು. ಈ ರೀತಿಯಲ್ಲಿ ‘ಭಾವ ಸಂಗಮ’ ಮೊದಲ ವರ್ಷದಲ್ಲಿ ಬುನಾದಿ ಹಾಕಿತು ಎಂದು ರಾಜೆಂದ್ರ ಪಾಟೀಲ ಸ್ಮರಿಸಿಕೊಳ್ಳುತ್ತಾರೆ.

ಈ ಕಾರ್ಯಕ್ರಮಕ್ಕೆ ಯಾವುದೇ ರಾಜಕಾರಣಿಗಳಿಗೆ ಹಾಗೂ ಉದ್ಯಮಿಗಳಿಗೆ ಆಹ್ವಾನ ನೀಡಿರಲಿಲ್ಲ. ಇದಕ್ಕೆ ಕೇವಲ ಸಾಹಿತ್ಯ ಆಸಕ್ತರು, ಕವಿಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಈ ಕಾರ್ಯಕ್ರಮದ ನೆನಪಿನ ಸ್ಮರಣಿಕೆಗಳನ್ನು ವಿತರಿಸುವಲ್ಲಿ ವೆಂಕಟೇಶ್ ಇನಾಮದಾರ ಅವರು ಸಹಾಯ ಮಾಡಿದರು. ಅದೇ ರೀತಿ ಊಟ ಜವಬ್ದಾರಿಯನ್ನು ಸಹ ಇನಾಮದಾರ ಹಾಗೂ ಅವರ ಸ್ನೇಹಿತರ ಬಳಗದವರೆ ಜವಾಬ್ದಾರಿ ವಹಿಸಿಕೊಂಡಿದ್ದರು. ಒಟ್ಟಾರೆಯಾಗಿ ಮೊದಲ ವರ್ಷದಲ್ಲಿ ಕಾರ್ಯಕ್ರಮ ಅದ್ಬುತವಾಗಿ ನಡೆಯಿತು ಎಂದು ಸಂಚಾಲಕರು ಹರ್ಷ ವ್ಯಕ್ತ ಪಡಿಸುತ್ತಾರೆ.

ನಂತರದ ವರ್ಷದಲ್ಲಿ ಭಾವ ಸಂಗಮದ ಸದಸ್ಯರ ಸಂಖ್ಯೆ ಹಾಗೂ ಆಸಕ್ತರ ಸಂಖ್ಯೆಯು ಬೆಳೆಯುತ್ತಾ ಹೋಯಿತು. ಇದರಲ್ಲಿ ಸಾಹಿತಿಗಳು, ಯುವ ಕವಿಗಳು, ಬರಹಗಾರರು ಇದ್ದಾರೆ. ಹಿರಿಯರು ಇದ್ದಾರೆ. ಹಿರಿಯರು ಕಿರಿಯರಿಗೆ ಮಾರ್ಗದರ್ಶನ ಮಾಡುತ್ತಾರೆ. 2017ರ ಆ.13ರಂದು ಧಾರವಾಡದ ಆಲೂರು ವೆಂಕಟರಾಯರ ಸಭಾಂಗಣದಲ್ಲಿ ದ್ವೀತಿಯ ವರ್ಷರದ ಸಮಾಗಮ ನಡೆಯಿತು. ಇದಕ್ಕೆ ಸುನಿಲ್ ಕುಲಕರ್ಣಿ ಮತ್ತು ಅವರ ಸಾಕಾರ ತಂಡದ ಸದಸ್ಯರು ತುಂಬಾ ಸಹಕಾರ ನೀಡಿದರು. ಆಗ ಸದಸ್ಯರ ಸಂಖ್ಯೆ 165. ನನ್ನ ನೀರಿಕ್ಷೆಗೂ ಮೀರಿ ಭಾವ ಸಂಗಮದಲ್ಲಿ ಕಾರ್ಯಕ್ರಮಗಳು ನಡೆದವು ಎಂದು ರಾಜೇಂದ್ರ ಪಾಟೀಲರು ( ರಾಪಾ) ನೆನಪಿಸಿಕೊಂಡರು.

2018 ಆಗಷ್ಟ್.26ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ತೃತೀಯ ವರ್ಷದ ಭಾವ ಸಂಗಮದ ಸಮಾಗಮವನ್ನು ಆಯೋಜನೆಯನ್ನು ಮಾಡಲಾಗಿತ್ತು.ಬೆಂಗಳೂರಿನವರಾದ ಸಾಹಿತಿಗಳು ಹಾಗೂ ಸಂಗಮದ ಸದಸ್ಯರಾದ ವಿಜಯಲಕ್ಷ್ಮೀ ಸತ್ಯಮೂರ್ತಿ, ಶ್ರೀಕಾಂತ ಪತ್ರೆಮರ, ರಾ.ಸು.ವೆಂಕಟೇಶ, ಮಾನಸಾ ಕೆ.ಕೆ, ಜಯಶ್ರೀ ಗುಡಿ, ಹಾಗೂ ಶಂಕರ ಹೂಗಾರ ಹೀಗೆ ಬೆಂಗಳೂರಿನ ಅನೇಕ ಸದಸ್ಯರು ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಗಾರ ಅವರು ಅಂದಿನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು, ಜೊತೆಗೆ ಕನ್ನಡ ಹೋರಾಟಗಾರ ಮಾಯಣ್ಣ , ಚಂದ್ರಶೇಖರ ಪಾಟೀಲ, ಎಂ.ತಿಮ್ಮಯ್ಯ, ಕನ್ನಡ ಪ್ರಾಧಿಕಾರದ ಅಧ್ಯಕ್ಷೆ ವಸುಂಧರಾ ಭೂಪತಿ ಅವರು ಉಪಸ್ಥಿತರಿದ್ದು ಭಾವ ಸಂಗಮ ಸಮಾಗಮಕ್ಕೆ ವಿಶೇಷ ಮೆರುಗನ್ನು ತಂದರು. ಅನೇಕ ಬರಹಗಾರರು, ಕಲಾವಿದರು, ಸಂಗೀತಗಾರರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ 185ಕ್ಕೂ ಹೆಚ್ಚು ಜನ ಸದಸ್ಯರಿದ್ದರು ಎಂದು ಅವರು ಮಹಿಳಾ ವಿವಿಯ ಮಹಿಳಾ ಧ್ವನಿ ಪ್ರಾಯೋಗಿಕ ಪತ್ರಿಕೆಯ ವರದಿಗಾರರಿಗೆ ರಾಪಾ ಅವರು ತಿಳಿಸಿದರು.

ಭಾವ ಸಂಗಮಕ್ಕಿಗ ನಾಲ್ಕನೇ ವಸಂತ ತುಂಬಿದೆ. ಈ ಸಂಗಮದ ಸಮಾಗಮ ಎಲ್ಲಿ ಎಂಬ ಪ್ರಶ್ನೆ ಮೂಡಿದಾಗ ಶಿವಮೊಗ್ಗದಲ್ಲಿ ಎನ್ನುವ ಉತ್ತರ ದೊರೆಯಿತು. ಸಂಪೂರ್ಣ ಉಸ್ತುವಾರಿಯನ್ನು ವಿಜಯ ಆರ್ ಬಾಯರಿ, ಹರೀಶ ಬೇದ್ರೆ, ಶೀಲಾ ಸುರೇಶ, ವೆಂಕಟೇಶ ಇನಾಮದಾರ ಅವರು ವಹಿಸಿಕೊಂಡಿದ್ದರು. ಡಾ.ಜಿ.ಎಸ್.ಸರೋಜಾ‌, ಏಕನಾಥ‌ ಬೊಂಗಾಳೆ, ಸರಸ್ವತಿ ಟಿ‌ಎನ್‌, ಸಹನಾ‌ಚೇತನ, ರಂಜಿನಿ ದತ್ತಾತ್ರಿ, ಕೈಜೋಡಿಸಿದರು. ವ ಶಿವಮೊಗ್ಗದ ಕನ್ನಡ ಸಭಾಂಗಣದಲ್ಲಿ ಭಾನುವಾರ ಆ.18ರಂದು ನಡೆಯಿತು.

ಈ ನಾಲ್ಕನೇ ವಾರ್ಷಿಕೋತ್ಸವದ ಸಮಾಗಮದ ಕಾರ್ಯಕ್ರಮವನ್ನು ಕರ್ನಾಟಕ ಸಂಘದ ಪ್ರಥಮ ಮಹಿಳಾ ಅಧ್ಯಕ್ಷೆ ವಿಜಯಾ. ಶ್ರೀಧರ ಅವರು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಸುಮಾ ಕಳಸಾಪೂರ ಹಾಗೂ ನೂರಸಮದ್ ಅಬ್ಬಲಗೆರೆ ಅವರು ಮಾತನಾಡಿದರು. ಕಾರ್ಯಕ್ರದ ಅತಿಥಿಗಳನ್ನು ಹರೀಶ ಬೇದ್ರೆ ಅವರು ಸ್ವಾಗತಿಸಿದರು. ರಾಜೇಂದ್ರ ಪಾಟೀಲ್ ಅವರು ಕಾರ್ಯಕ್ರಮದ ಅಧ್ಯಕ್ಷೀಯ ನುಡಿಗಳನ್ನು ಹೇಳಿದರು. 50 ಕವಿಗಳು ಪಾಲ್ಗೊಂಡಿದ್ದ ಕವಿಗೋಷ್ಠಿಯನ್ನು ಎ.ಎನ್.ರಮೇಶ್ ನಿರೂಪಿಸಿದರು. ಡಾ.ಪ್ರಕಾಶ ಕಾಡೆಯವರ ಅಧ್ಯಕ್ಷತೆಯಲ್ಲಿ ನಡೆದ ಕವಿಗೋಷ್ಠಿಗೆ ಎಲ್.ಎಸ್‌.ಶಾಸ್ತ್ರಿ ಮುಖ್ಯ ಅತಿಥಿಗಳಾಗಿದ್ದರು. ಅನನ್ಯ ಐತಾಳ ಮತ್ತು ಗೆಳತಿಯರ ಪ್ರಾರ್ಥನೆ, ಸಹನಾಚೇತನ ತಂಡದವರ ಸ್ವಾಗತ ನೃತ್ಯ ಕಣ್ಮನ ಸೆಳೆಯಿತು.

ಅಂಕಣದ ಹುಟ್ಟು ಗುಟ್ಟು

ನಾವು ದಿನಪತ್ರಿಕೆಗಳಲ್ಲಿ ಅನೇಕ ಸಾಹಿತಿಗಳ ಅಂಕಣಗಳನ್ನು ಓದುತ್ತೇವೆ. ಅದೇರೀತಿ ನಾವೇಕೆ ಈ ಸಾಮಾಜಿಕ ಜಾಲತಾಣದಲ್ಲಿ ಅಂಕಣ ಬರವಣಿಗೆಯನ್ನು ಜಾರಿ ಮಾಡಬಹುದಲ್ಲಾ ಎಂದು ಯೋಚಿಸಿ ಸದಸ್ಯರ ಜೊತೆಗೆ ಚರ್ಚೆ ಮಾಡಲಾಯಿತು. ಅದೇ ವರ್ಷದಲ್ಲಿ ಅಂದರೆ 2018ರ ಜುಲೈ 10ರಂದು ‘ವಸುಧೈವ ಕುಟುಂಬಕಂ’ ಎನ್ನುವ ಶೀರ್ಷಿಕೆಯ ಅಡಿಯಲ್ಲಿ ‘ಮಾಲತಿ ಮುದುಕವಿ’ಯವರು ಅಂಕಣ ಬರೆದುವುದರ ಜೊತೆಗೆ ಹೊಸಕಲ್ಪನೆಯೊಂದಿಗೆ ಅಡಿಗಲ್ಲು ಹಾಕಿದರು. ಇವರ ನಂತರ ‘ವಿಜಯಲಕ್ಷ್ಮಿ ಸತ್ಯಮೂರ್ತಿ’ ಅವರು ‘ಸಂಚಯ’ ಎಂಬ ಶೀರ್ಷಿಕೆಯ ಅಂಕಣ ಬರೆದರು. ಇವರಂತು ಸಂಪೂರ್ಣವಾಗಿ ಒಂದು ವರ್ಷಗಳ ಕಾಲ (53ವಾರ) ನಿರಂತರವಾಗಿ ಸಂಚಿಕೆಗಳ ಅಂಕಣ ಬರೆದರು. ಇದುವರೆಗೂ ಸುಮಾರು 25ಜನ ಲೇಖಕ, ಲೇಖಕಿಯರು ಅಂಕಣಗಳನ್ನು ಬರೆಯುತ್ತಿದ್ದಾರೆ.

ಸದ್ಯದ ದಿನಗಳಲ್ಲಿ ಭಾವ ಸಂಗಮದ ಸದಸ್ಯರೆಲ್ಲರಲ್ಲಿಯು ಕಿರಣ ಹಿರಿಸಾವೆ ಅವರು ಬರೆಯುವ ಮಂಗಳವಾರದ ‘ಚಚ್ಚೌಕದ ಬಾವಿ’ ಎನ್ನುವ ಅಂಕಣದ ಬಗ್ಗೆ ಚರ್ಚೆ ನಡೆಯುತ್ತಿದೆ. ಅದರೊಂದಿಗೆ ಶನಿವಾರ ಜಯಂತಿ ಚಂದ್ರಶೇಖರ ಅವರ ಮಂಗಳಾಕ್ಷತೆ ಅಂಕಣ ಗಮನ ಸೆಳೆಯುತ್ತಿದೆ. ಸೋಮವಾರದ ಯದ್ಭಾವಂ ತದ್ಭವತಿ, ಬುಧವಾರದ ತುಂಗೆ ತಪ್ಪಲಿನ ತಂಬೆಲರು, ಗುರುವಾರದ ಪರಿಕ್ರಮ, ಶುಕ್ರವಾರದ ನೆಲದ ಸುಗಂಧ ಅಂಕಣಗಳು ಭಾವ ಸಂಗಮದ‌ ಮೆರುಗು ಹೆಚ್ಚಿಸಿವೆ. ಪ್ರತಿದಿನಾಲೂ ಮಧ್ಯಾಹ್ನ ಮೂರರಿಂದ ಸಂಜೆ ಆರರ ವರೆಗೆ ಅಂಕಣದ ಸಮಯ ಈ ಸಮಯದಲ್ಲಿ ಬೇರೆ ವಿಷಯಗಳ ಚರ್ಚೆಗೆ ಅವಕಾಶ ಇಲ್ಲ ಎನ್ನುತ್ತಾರೆ ರಾಪಾ ಸರ್ ಅವರು.

ವಿಭಿನ್ನ ಅನುಭವ

ಅಬ್ಬ ಭಾವ ಸಂಗಮಕ್ಕೆ ಪ್ರತಿದಿನ ಹೊಸ ಸದಸ್ಯರ ಆಗಮನ. ಕೆಲವು ಸದಸ್ಯರು ತಮ್ಮ ಪ್ರತ್ಯೇಕವಾಗಿರುವ ಜೀವನದಲ್ಲಿ ನಡೆಯುವ ವಿಶೇಷ ಘಟನೆಗಳನ್ನು ಹಂಚಿಕೊಳ್ಳುವುದು, ಪೋಟೋಗಳನ್ನು ಹಾಕುವುದು, ಪ್ರತಿದಿನ ಬೆಳಗ್ಗಿನ ಜಾವ ಸುಮಾರು ನಾಲ್ಕು ಗಂಟೆಗೆ ಶುಭನುಡಿಯೊಂದಿಗೆ ಸಂಗಮದ ಭಾಗಿಲು ತೆಗೆಯುವುದು. ಈ ಶುಭನುಡಿಯ ಬೆನ್ನಲ್ಲೆ ಒಂದಾದ ಒಂದರಂತೆ ಉತ್ತರ ಕನ್ನಡ ಜಿಲ್ಲೆಯವರು ಪಕೃತಿಯ ಸುಂದರ ದೃಶ್ಯವನ್ನು ಸೆರೆಹಿಡಿಯುತ್ತಾ ಅದಕ್ಕೆ ತಕ್ಕಂತೆ ಒಂದು ಸಾಲಿನಲ್ಲಿಯೆ ಕವಿತೆ, ಕವನಗಳು, ಗಜಲ್‍ಗಳನ್ನು ಹಾಕುವುದು. ಓದುಗರು ಎಲ್ಲದಕ್ಕೂ ಪದಗಳ ಗುಂಪಿನ ವಿಮರ್ಶೆ ಮಾಡುವುದೆ ಚೆಂದ. ಇದರ ಜೊತೆಗೆ ವೆಂಕಟೇಶ ಇನಾಮದಾರ ಅವರ ವ್ಯಂಗ್ಯಚಿತ್ರಗಳ ಪ್ರಭಾವ ಅದಕ್ಕೆ ತಕ್ಕಂತೆ ನಗೆ ಚುಟುಕುಗಳನ್ನು ಹಾರಿಸುವುದು. ಮಧ್ಯಾಹ್ನ ಮೂರರಿಂದ ಆರರ ನಡುವೆ ಅಂಕಣ ಅಂಕಣಕಾರು ಓದುಗರ ಅಭಿಪ್ರಾಯಕ್ಕೆ ಕಾಯುವುದು. ಕೆಲವು ಅಂಕಣಕಾರರ ಅಂಕಣಕ್ಕಾಗಿ ಕಾಯುವುದು. ಆ ಅಂಕಣಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸುವುದು ನಿಜಕ್ಕೂ ವಿಶೇಷ‌.

ಇಂಡಿ ತಾಲ್ಲೂಕಿನ ಅಥರ್ಗಾದಿಂದ ಶಿವಮೊಗ್ಗದತ್ತ ವಿಜಯಪುರ ಸಾಹಿತಿಗಳೊಂದಿಗೆ ಒಂದು ಸುತ್ತು

ಇಂಡಿ ತಾಲ್ಲೂಕಿನ ಅಥರ್ಗಾ ಗ್ರಾಮದ ನಾನು ಕಾಂಚನಾ. ಬಸವರಾಜ. ಪೂಜಾರಿ. ಕರ್ನಾಟಕ ರಾಜ್ಯದ ಅಕ್ಕಮಹಾದೇವಿ ಮಹಿಳಾ ವಿವಿಯ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದ ದ್ವೀತಿಯ ವರ್ಷದಲ್ಲಿ ಓದುತ್ತಿದ್ದೆನೆ. ನನ್ನ ಒಂದು ಲೇಖನಿಯಿಂದ ಸಂಚಾಲಕರು ಈ ಭಾವ ಸಂಗಮಕ್ಕೆ ಸೇರಿಸಿದರು. ಮೊದಲು ಸ್ವಲ್ಪ ದಿನಗಳ ಕಾಲ ನಾನು ಭಾವಸಂಗಮದ ಕಾರ್ಯ ಚಟುವಟಿಕೆಗಳನ್ನು ಗಮನಿಸಿದೆ. ಕೆಲವು ವಿಷಯಗಳ ಕುರಿತು ನೇರವಾಗಿ ಸಂಚಾಲಕರ ಜೊತೆಗೆ ಮಾತನಾಡಿ ನನ್ನ ಅನುಮಾನಗಳನ್ನು ಬಗೆಹರಿಸಿಕೊಂಡೆ. ನಂತರದಲ್ಲಿ ನಾನು ಕ್ರಮೆಣವಾಗಿ ಕವಿತೆ, ಕವನ, ಅಂಕಣಗಳಿಗೆ ನನ್ನ ಅಭಿಪ್ರಾಯಗಳನ್ನು ತಿಳಿಸಲು ಆರಂಭ ಮಾಡಿದೆ. ಇದರ ಜೊತೆಗೆ ನಾನು ಬರೆದ ಲೇಖನಿಗಳು ಈಗಾಗಲೆ ಪತ್ರಿಕೆಗಳಲ್ಲಿ ಪ್ರಕಟವಾಗಿರುವುದನ್ನು ಮತ್ತೊಮ್ಮೆ ಎಲ್ಲವನ್ನು ಸಂಗಮದಲ್ಲಿ ಹಾಕಿದೆ. ಮೊದಲಿಗೆ ಯಾರು ಪ್ರತಿಕ್ರಿಯೆ ನೀಡಲಿಲ್ಲ. ಆಗ ನನಗೆ ಕೊಂಚ ಅಳುಕು ಉಂಟಾಯಿತು. ಎರಡು ದಿನಗಳ ನಂತರದಲ್ಲಿ ಸದಸ್ಯರೊಬ್ಬರು ನನ್ನ ಲೇಖನ ಚೆನ್ನಾಗಿದೆ ಒಳ್ಳೆಯದಾಗಲಿ ಎಂದು ಶುಭ ಕೋರಿದ್ದರು. ಅದನ್ನು ಓದಿದ ನನಗೆ ಸ್ವಲ್ಪ ಸಮಾಧಾನವಾಯಿತು.

ಅದಾದ ನಂತರದಲ್ಲಿ ನಾನು ಆಗೊಂದು ಈಗೊಂದು ಲೇಖನಗಳನ್ನು ಬರೆದು ಹಾಕಲು ಪ್ರಾರಂಭ ಮಾಡಿದೆ. ಹಾಗೂ ಅಂಕಣಗಳನ್ನು ಗಮನಿಸುತ್ತಾ ಹೋದೆ. ಇದರಲ್ಲಿ ಬರುವ ಅಂಕಣಗಳನ್ನು ಓದಲು ಸಮಯ ಹೊಂದಿಸಿಕೊಳ್ಳುತ್ತಿದ್ದೆ. ಅದಕ್ಕೆ ತಕ್ಕನಾಗಿ ವಿಮರ್ಶೆಯನ್ನು ಸಹ ಮಾಡುವೆ.
ನನಗೆ ತಿಳಿದಿರುವ ಪ್ರಕಾರ ಭಾವ ಸಂಗಮ ನಾಲ್ಕನೇ ಸಮಾಗಮ ಕಾರ್ಯಕ್ರಮದ ಕುರಿತಾಗಿ ಮೂರು ತಿಂಗಳುಗಳಿಂದನೆ ಮುಂಚಿತವಾಗಿ ತಯಾರಿ ನಡೆಯುತ್ತಿತ್ತು. ಈ ಕಾರ್ಯಕ್ರಮಕ್ಕೆ ಯಾರು ಬರುತ್ತಾರೆ, ಅಥವಾ ಬರುವುದಿಲ್ಲ ಎನ್ನುವುದರ ಕುರಿತು ಸ್ವಲ್ಪ ದೊಡ್ಡ ಮಟ್ಟದಲ್ಲಿಯೆ ಚರ್ಚೆಗಳು ನಡೆದವು. ನನಗಂತು ಅನೇಕರು ಕಾರ್ಯಕ್ರಮಕ್ಕೆ ಬರುವಂತೆ ಒತ್ತಾಯ ಮಾಡಿದರು.ರಾಪಾ ಅವರು ಗುಂಪಿನಲ್ಲಿಯೇ ಪ್ರೀತಿಯಿಂದ ಬೈದರು. ಟಿ. ಎನ್. ಶಿವಕುಮಾರಅವರು ವೈಯಕ್ತಿಕವಾಗಿ ಕರೆ ಮಾಡಿ ಮಾತನಾಡಿದರು. ಆಗ ನಾನು ನೋಡಿದರಾಯಿತು ಎಂದುಕೊಂಡೆ. ಆದರೆ ಸಂಗಮದಲ್ಲಿ ನಡೆಯುವ ಸಂಭಾಷಣೆ ನೋಡಿದಾಗ ನನ್ನಲ್ಲೆ ಗೊಂದಲಗಳು ಶುರುವಾದವು. ಒಂದು ದಿನ ರಾಪಾ ಅವರು ನನ್ನ ಅಪ್ಪನ ಜೊತೆಗೆ ಮತನಾಡಿದರು.

ಅಲ್ಲಿಯವರೆಗೂ ನಾನು ಈ ಕಾರ್ಯಕ್ರಮದ ಬಗ್ಗೆ ಹೇಳಿರಲಿಲ್ಲ. ಅದಾದ ಮೇಲೆ ಮನೆಯಲ್ಲಿ ಹೇಳಿದೆ. ಅಪ್ಪನು ಏನು ಹೇಳಲಿಲ್ಲ ಸುಮ್ಮನಿದ್ದರು. ನಾನು ಸುಮ್ಮನಾದೆ. ಕಾರ್ಯಕ್ರಮಕ್ಕೆ ಇನ್ನೇನು ಒಂದು ವಾರ ಉಳಿದಿತ್ತು. ಆಗ ನಾನು ಕೂಡಾ ಶಿವಮೊಗ್ಗಕ್ಕೆ ಬರುತ್ತೇನೆ ಎಂದು ಸಂದೇಶ ಹಾಕಿದಾಗ ಸಂಚಾಲಕರು ಸಂತಸ ಪಟ್ಟರು. ನಂತರ ಮುರುಗೇಶ ಸಂಗಮ ಅವರು ಕರೆ ಮಾಡಿ ಬರುತ್ತಿರಾ ಎಂದು ವಿಚಾರಿಸಿದರು. ಆಗಲೂ ಸಹ ಗೊಂದಲದಲ್ಲಿಯೇ ಒಪ್ಪಿಗೆ ಸೂಚಿಸಿದೆ.

2019 ಆ. 17 ರಂದು ಸಂಜೆ ಸುಮಾರು ಸಂಜೆ 7 ಕ್ಕೆ ಬಸವನಬಾಗೇವಾಡಿಯ ಸಾಹಿತಿ ಡಾ. ಮುರುಗೇಶ ಸಂಗಮ ಅವರ ಬಳಗದೊಂದಿಗೆ ವಿಜಯಪುರದಿಂದ ಪಯಣ ಬೆಳೆಸಿದೆ. ಬಳಗದವರನ್ನು ನೋಡಿದ ನನಗೆ ಮನಸಿನ ಒಂದು ಮುಲೆಯಲ್ಲಿ ಮತ್ತಷ್ಟು ಅಳಕು ಶುರುವಾಯಿತು. ಇದೇನಪ್ಪ ಎಲ್ಲರೂ ಹಿರಿಯರಿದ್ದಾರೆ. ನಾನು ಹೇಗೆ ಇವರ ಜೊತೆಗೆ ಹೊಂದಿಕೊಳ್ಳೊದು? ಏನು ಮಾತಾಡೊದು? ಅಂತ ಯೋಚಿಸುತ್ತದೆ. ಅಷ್ಟರಲ್ಲಿ ಮುರುಗೇಶ ಅವರು ಎಲ್ಲರ ಪರಿಚಯ ಮಾಡಿಸಿದರು. ಸ್ವಲ್ಪ ಮುಜುಗರ ತೋರೆದು ಪರಸ್ಪರ ಮಾತನಾಡಲು ಆರಂಬಿಸಿದೆವು. ನಂತರ ರಸ್ತೆಯ ಮಧ್ಯೆದಲ್ಲಿ ಒಂದು ಕಡೆಗೆ ಎಲ್ಲರೂ ಸೇಲ್ಫಿಗೆ ಫೋಸ್ ಕೊಟ್ಟೆವು. ಅದನ್ನು ಸಂಗಮದಲ್ಲಿಯೂ ಹಾಕಿದೆವು.

ರಾತ್ರಿ ಸುಮಾರು 10 ಗಂಟೆಯಷ್ಟೊತ್ತಿಗೆ ಎಲ್ಲರ ಹೊಟ್ಟೆ ತಾಳ ಹಾಕುತ್ತಿತ್ತು. ರಾತ್ರಿ ವೇಳೆಯಾಗಿದ್ದರಿಂದ ಒಂದು ಪೇಟ್ರೋಲ್ ಬಂಕ್ ಹತ್ತಿರ ಹೋಟೆಲ್ ನಲ್ಲಿ ಊಟಕ್ಕೆ ಗಾಡಿಯನ್ನು ನಿಲ್ಲಿಸಿದೆವು. ನಾನು ಸುಮಾರು 10ಗಂಟೆಗಳ ಕಾಲ ಮಾತಿನ ಮಲುಕು, ಹಳೆ ಹಾಡುಗಳನ್ನು ಗೊನಗುವುದು, ಚಲಿಸುವ ಗಾಡಿಯಲ್ಲಿಯೇ ನನ್ನದೊಂದಿಷ್ಟು ತುಂಟಾಟದ ವಿಡಿಯೋಗಳನ್ನು ಮಾಡುವುದು. ಕಿಡಕಿಯ ಪಕ್ಕದಲ್ಲಿ ಕುಳಿತು ತಣ್ಣನೆಯ ತಂಪಾದ ಗಾಳಿಯಲ್ಲಿ ರಸ್ತೆಯ ಉದ್ದಕ್ಕೂ ಬರೆದಿರುವ ಫಲಕಗಳನ್ನು ಓದುತ್ತಾ ಹೋಗುವುದೆ ಖುಷಿಯ ವಿಚಾರ. ಇದರ ಮಧ್ಯ ನಾನು ಸಂಗಾತಿಯನ್ನು ಸಹ ಕರೆದುಕೊಂಡು ಹೋಗಿದ್ದೆ. ಇದ್ಯಾರಪ್ಪ! ಇವರ ಮತ್ತೊಬ್ಬ ಸಂಗಾತಿ ಅಂತಿರಾ? ಅದು ಮತ್ಯಾರು ಅಲ್ಲಾ, ನನ್ನ ಲ್ಯಾಪ್‍ಟಾಪ್ ಹಾಗೂ ಪುಸ್ತಕಗಳೆ ನನ್ನ ಸಂಗಾತಿಗಳು. ರಾತ್ರಿಯಿಡಿ ಮಲಗಲಿಲ್ಲ.

ಸುಮಾರು ಬೆಳಗಿನ ಜಾವ ಚುಮುಚುಮು ಚಳಿಗೆ ಟೀ ಕುಡಿವ ಆಸೆ ನನ್ನಲ್ಲಿ ಹೆಚ್ಚಾಗುತ್ತಿತ್ತು. ಇದರ ಜೊತೆಗೆ ಮಲೆನಾಡಿನ ಸೌಂದರ್ಯವನ್ನು ಸವಿಯುತ್ತಿದೆ. ಮೊದಲೆ ನಾವು ಉತ್ತರ ಕರ್ನಾಟಕದವರು ನೋಡಿ ನಮಗೆಲ್ಲ ನಿಸರ್ಗದ ಸೌಂದರ್ಯ ಎಲ್ಲಾವು ಅಪರೂಪಕ್ಕೆ ಸಿಗುತ್ತೆ. ಅಂಥಹುದರಲ್ಲಿ ಸೌಂದರ್ಯದ ಸವಿ ಸವಿಯದೆ ಹೋದರೆ ತಪ್ಪಾಗುತ್ತದೆ. ಇದೆ ರೀತಿಯಲ್ಲಿ ನೈಸರ್ಗದ ಸೌಂದರ್ಯವನ್ನು ಸವಿತ್ತಾ, ಮಾತು, ಹರಟೆ, ಮಾಡುತ್ತಾ ಸುಮಾರು 10ಗಂಟೆಗಳ ಕಾಲ ಪ್ರಯಾಣ ಮಾಡಲಾಯಿತು. ಬೆಳಗಿನ ಜಾವ ಐದುವರೆಗೆ ಶ್ರೀಕಾಂತ .ಪತ್ರೆಮರ ಅವರ ಸೋದರಿಯ ಮನೆ ತಲುಪಿದವು. ಅಲ್ಲಿಯೇ ನಮ್ಮ ಬೆಳಗಿನ ಕಾರ್ಯಕ್ರಮಗಳನ್ನು ಮುಗಿಸಿಕೊಂಡೆವು, ನಂತರ ಅವರ ತಂಗಿಯವರು ಮಾಡಿದ ಉಪ್ಪಿಟ್ಟು ಚಹಾ ಸೂಪರ್ ಆಗಿತ್ತು. ನಂತರ ಎಲ್ಲರೂ ಸೇರಿ ಸಭಾಂಗಣಕ್ಕೆ ತೆರಳಿದವು. ಅನೇಕರು ಎಲ್ಲಿ ನಮ್ಮನ್ನು ಸ್ವಾಗತಿಕೊಂಡರು. ಕಲವರು ಮಾತನಾಡಿಸಿದರು. ನನ್ನಗೆ ತುಂಬಾ ಸಂತೋಷವಾಯಿತು, ಆದರು ಸಹ ನಾನು ಮೊದಲೆ ಹೇಳಿದ ಹಾಗೆ ಕೊಚ ಅಳುಕು ಮುಂದುವರೆದೆ ಇತ್ತು. ಇದೇ ಕಾರಣದಿಂದಾಗಿ ನಾನು ಸ್ವಲ್ಪ ದೂರದಲ್ಲಿಯೆ ಇದ್ದು ಹಾಡು ಕೇಳುತ್ತಾ ಅಲ್ಲಿರುವ ಹೂಗಳ ಚಿತ್ರಿಕರಣ ಮಾಡುತ್ತಿದ್ದೆ.

ಅಷ್ಟರಲ್ಲಿಯೇ ರಾಜೇಂದ್ರ ಪಾಟೀಲ‌ ಸರ್ ಆಗಮನವಾಯಿತು. ನಂತರದಲ್ಲಿ ವಿಜಯಮ್ಮ, ರಾಸು ವೆಂಕಟೇಶ, ಜಯಂತಿ ಅಮ್ಮ, ತ.ನಾ.ಶಿ ಹೀಗೆ ಅನೇಕರ ದಂಡು ತಂಡೋಪ ತಂಡದಲ್ಲಿ ಬಂದರು. ಇವರಲ್ಲ ನನ್ನನ್ನು ಮಾತನಾಡಿಸಿ ನನ್ನಲ್ಲಿದ ಭಯವನ್ನು ಹೋಗಲಾಡಿಸಿದರು. ಎಲ್ಲರೂ ಸೇರಿ ತಿಂಡಿ ಮಾಡಿದವು. ನಂತರ ವಿಜಯಮ್ಮಾ ನಡಗೆರೆ, ಶ್ರೀವಲ್ಲಭ, ವೆಂಕಟೇಶ ಇನಾಮದಾರ, ತ.ನಾ.ಶಿ ಅನೇಕ ಜೊತೆಗೆ ಸ್ವಲ್ಪ ತರಲೆ, ತುಂಟಾಟ ಮಾಡುತ್ತಾ, ಸ್ವಲ್ಪ ಕಾಲು ಏಳೆದು ಏಳೆಸಿಕೊಂಡೆ. ಇವರೆಲ್ಲರೂ ಸಾಹಿತ್ಯ, ಪತ್ರಿಕೋದ್ಯಮ, ಶಿಕ್ಷಣದ ಹೀಗೆ ಅನೇಕ ವಿಷಯಗಳ ಬಗ್ಗೆ ತಮ್ಮ ಅನುಭಮಗಳನ್ನು ಹಂಚಿಕೊಂಡು ಸಲಹೆಗಳನ್ನು ನೀಡಿದರು. ಈ ಸುಂದರ ಕ್ಷಣವನ್ನು ನಾನು ಎಂದಿಗೂ ಮರೆಯುವುದಿಲ್ಲ. ಈ ಸುಂದರ ಸಮಾಗಮ ಮುಗಿಸಿಕೊಂಡೆ ಮನೆಗೆ ಬಂದಿದ್ದು ಮರುದಿನ
ಬೆಳಗಿನ ಜಾವ ಆರು ಗಂಟೆಗೆ.
ಧನ್ಯವಾದಗಳು.

ಕಾಂಚನಾ ಪೂಜಾರಿ
86609 89900

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂತರಂಗ

ಭೀಮಾ ಕೋರೆಗಾಂವ ; ಮಹರ್ ಸೈನಿಕರ ವೀರಗಾಥೆ

Published

on

~ ಡಾ. ಸುಜಾತಾ ಚಲವಾದಿ

ಭಾರತದ ಇತಿಹಾಸದಲ್ಲಿ ಅನೇಕ ಕ್ರೂರ ವ್ಯಂಗ್ಯಗಳಿವೆ. ಅವುಗಳಲ್ಲಿ ಪೇಶ್ವಾಶಾಹಿ ಆಡಳಿತವು ಒಂದು. ಅವರ ಆಡಳಿತ ಸಂದರ್ಭದಲ್ಲಿ ಅಸ್ಪೃಶ್ಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಬದುಕುವ ಸ್ಥಿತಿಯಿತ್ತು. ಜಾತಿ ವ್ಯವಸ್ಥೆ ವಿಜೃಂಭಿಸುತ್ತಿದ್ದ ಕಾಲವದು.

ದೌರ್ಜನ್ಯ, ಅನ್ಯಾಯಕ್ಕೆ ಒಳಗಾಗಿ ಸದಾ ನೋವಿನ ಬದುಕು ಅಸ್ಪೃಶ್ಯರದ್ದಾಗಿತ್ತು. ಕಿತ್ತುತಿನ್ನುವ ಬಡತನ, ಹಸಿವು, ದಾರಿದ್ರö್ಯ, ಅಶಿಕ್ಷಿತರಾದ ಅಸ್ಪಶ್ಯರು ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ಕನಸಿನ ಮಾತಾಗಿತ್ತು. ಇವರ ಬಲಹೀನತೆಯನ್ನು ಬಳಸಿಕೊಂಡು ‘ಪ್ರಾಣಿಗಿಂತ ಕೀಳಾಗಿ’ ನಡೆಸಿಕೊಳ್ಳುತ್ತಿದ್ದ ಪೇಶ್ವಾ ಆಡಳಿತವು ಶೂದ್ರರ, ನಿಮ್ನರ ಮೇಲೆ ತಮ್ಮ ಅಟ್ಟಹಾಸವನ್ನು ಮೆರೆಯುತ್ತಿದ್ದರು.

ಅನ್ಯಾಯಕ್ಕೆ ಒಳಗಾದ ಕೆಳಜಾತಿಯ ಮಹಾರರು, ಮಾಂಗರು, ಚಮ್ಮಾರರು ಮತ್ತು ಮಹಿಳೆಯರು ತತ್ತರಿಸಿ ಹೋಗಿದ್ದರು. ಮಹಾರಾಷ್ಟçದ ಪೇಶ್ವಾಶಾಹಿ ಕಾಲಘಟ್ಟದಲ್ಲಿ ನಡೆದ ಭೀಮಾ ಕೋರೆಗಾಂವ ಚಳವಳಿಯನ್ನು ಬರಹದ ರೂಪದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ನಮ್ಮ ಮುಂದೆ ಇರಿಸಿದ್ದಾರೆ.
1ನೇ ಜನವರಿ 1818ರಲ್ಲಿ ಅಂದರೆ ಇಂದಿಗೆ 207 ವರ್ಷಗಳ ಹಿಂದೆ 28,000 ಸಾವಿರ ಸಂಖ್ಯೆಯ ಪೇಶ್ವಾಸೈನ್ಯದ ಎದುರು ಐದುನೂರು ಮಹಾರ ಜನಾಂಗದವರು ಹೋರಾಡಿ ವಿಜಯ ಸಾಧಿಸಿದ ದಿನ ಕೋರೆಗಾಂವ್ ಯುದ್ಧ ‘ನ್ಯಾಯದ ಯುದ್ಧ’, ಇಡೀ ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಸಂಕೇತವಾಗಿ ಪರಿಣಮಿಸಿದೆ.

ಈ ದಿನವನ್ನು ಯಾವ ಮಹಾರರೂ ಮರೆಯುವ ಹಾಗಿಲ್ಲ. ಬಾಬಾಸಾಹೇಬರು ಈ ದಿನದ ಸ್ಮರಣೆಯನ್ನು “ದಲಿತರ ಪರಾಕ್ರಮ ದಿನ”ವೆಂದು ತಿಳಿದು ಕೋರೆಗಾಂವನಲ್ಲಿ ನಿರ್ಮಿಸಿದ ವಿಜಯಸ್ತಂಭ ಸ್ಮಾರಕಕ್ಕೆ ವಂದಿಸಲು ಪ್ರತೀ ವರ್ಷ ಜನವರಿ 1 ರಂದು ತಪ್ಪದೇ ಹೋಗಿ ಬರುತ್ತಿದ್ದರು. ಜಾತಿಪದ್ಧತಿಯೇ ಪ್ರಧಾನವಾದ ಕಾಲದಲ್ಲಿ ಅಸ್ಪಶ್ಯರ ಸ್ಥಿತಿ ತುಂಬಾ ಹದಗೆಟ್ಟು ಹೋಗಿತ್ತು. ಮೇಲು-ಕೀಳು ಎಂಬ ಭಾವನೆ ಏರುಮುಖದಲ್ಲಿದ್ದ ಕಾಲ.

ಮನುಸ್ಮೃತಿಯನ್ನು ಚಾಚೂ ತಪ್ಪದೇ ಮುನ್ನಡೆಸಿಕೊಂಡು ಬರುವ ಮೇಲ್ವರ್ಗದವರು ಅಸ್ಪೃ್ಪಶ್ಯರನ್ನು ಕಂಡರೆ ಅನೇಕ ಬಗೆಯ ಶಿಕ್ಷೆಗೆ ಒಳಗು ಮಾಡುತ್ತಿದ್ದರು. ಅಸ್ಪೃಶ್ಯರನ್ನು ಕಂಡರೆ ಮೈಲಿಗೆಯಾಗುತ್ತದೆ ಎನ್ನುವ ಮನಸ್ಥಿತಿ ಅವರದ್ದು, ಅಸ್ಪೃಶ್ಯ ರಸ್ತೆಗೆ ಇಳಿಯಕೂಡದು, ಒಳ್ಳೆ ಬಟ್ಟೆ ಹಾಕಿಕೊಳ್ಳುವ ಹಾಗಿಲ್ಲ, ಒಳ್ಳೆಯ ಆಹಾರ ಸೇವನೆಯಂತೂ ಕನಸಿನ ಮಾತಾಗಿತ್ತು. ಊರ ಪ್ರವೇಶಕ್ಕೆ ಸಮಯ ನಿಗದಿ ಮಾಡಿದ್ದರು.

ಸೂರ್ಯೋದಯ, ಸೂರ್ಯಾಸ್ತದ ಸಂದರ್ಭದಲ್ಲಿ ಅಸ್ಪೃಶ್ಯ ವ್ಯಕ್ತಿ ಊರಲ್ಲಿ ಬರುವಂತಿರಲಿಲ್ಲ. ಸೂರ್ಯ ನೆತ್ತಿಯ ಮೇಲಿದ್ದಾಗ ಮಾತ್ರ ಊರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಬೀದಿಯಲ್ಲಿ ಹೋಗಬೇಕಾದರೆ ಕೊರಳಿಗೆ ಮಣ್ಣಿನ ಸಣ್ಣ ಕುಡಿಕೆಯನ್ನು ಹಾಕಿಕೊಂಡು ಹೋಗಬೇಕು, ಉಗುಳುವ ಸಂದರ್ಭ ಬಂದರೆ, ಅದೇ ಕುಡಿಕೆಯಲ್ಲಿಯೇ ಉಗುಳಿಕೊಳ್ಳಬೇಕು. ಕಾರಣ ರಸ್ತೆಯಲ್ಲಿ ಅಸ್ಪೃಶ್ಯರು ಉಗುಳಿದರೆ ಅವನ ಹೇಸಿಗೆಯನ್ನು ಸವರ್ಣೀಯರು ತುಳಿಯಬಾರದು.

ತುಳಿದರೆ ಮೈಲಿಗೆಯಾಗುತ್ತಿತ್ತು. ರಸ್ತೆಯಲ್ಲಿ ನಡೆಯುವಾಗ ಆತನ ನೆರಳು ಅವನ ಕಾಲಲ್ಲಿಯೇ ಉಳಿಯುವ ಹಾಗೇ ಮಧ್ಯಾಹ್ನದ ನೆತ್ತಿ ಸುಡುವ ಬಿಸಿಲಿನಲ್ಲಿ ಮಾತ್ರ ಊರಲ್ಲಿ ಬರಬೇಕು. ನಡೆದುಕೊಂಡು ಹೋಗುವಾಗ ಹೆಜ್ಜೆ ಗುರುತುಗಳು ಕಾಣದಿರಲಿ ಎಂದು ಬೆನ್ನಿಗೆ ಮುಳ್ಳಿನ ಪೊರಕೆಯನ್ನು ಕಟ್ಟಿಕೊಂಡು ಸಾಗಬೇಕಾದ ಸ್ಥಿತಿ ಅವರದಾಗಿತ್ತು. ಹಾಗೇ ಅಸ್ಪೃಶ್ಯನೊಬ್ಬ ಬರುವುದನ್ನು ‘ಸಂಭೋಳಿ ಸಂಭೋಳಿ ಮಾಯ್ ಬಾಪ್ ಹೊಲೆಯ ಬರುತ್ತಿದ್ದೇನೆ’ ಅಂತಾ ಕೂಗಿ ಹೇಳಬೇಕು. ಇಲ್ಲ, ಕೈಯಲ್ಲಿ ಗೆಜ್ಜೆಕಟ್ಟಿದ ಕೋಲನ್ನು ಹಿಡಿದುಕೊಂಡು ನೆಲಕ್ಕೆ ಕುಕ್ಕಿಸಿಕೊಂಡು ಸದ್ದು ಮಾಡುತ್ತ ಹೋಗಬೇಕು.

ಇದಲ್ಲದೆ ಅಸ್ಪೃಶ್ಯ ಊರ ಪ್ರವೇಶ ಮಾಡಿದಾಗ ಯಾರಾದರೂ ಎದುರು ಬಂದರೆ ಸುಡುವ ಬಿಸಿಲಲ್ಲಿ ಓಡಿ ಹೋಗಿ ಭೂಮಿಯನ್ನು ಅಪ್ಪಿಕೊಳ್ಳಬೇಕು. ಸವರ್ಣೀಯರಿಗೆ ಅವನ ನೆರಳೂ ಸ್ಪರ್ಶ ಮಾಡುವಂಗಿರಲಿಲ್ಲ. ಇಂತಹ ಅಮಾನವೀಯ ನಿಯಮಗಳನ್ನು ಹೊರಡಿಸಿದ ಕಾಲಘಟ್ಟವದು. ಇಷ್ಟೆಲ್ಲಾ ನಿಯಮಗಳನ್ನು ಅಸ್ಪಶ್ಯರ ಮೇಲೆ ಹೇರಿದರೂ ಕೂಡಾ ಮಹಾರ್ ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ಮೊಗಲರ ಬೃಹತ್ ಸೈನ್ಯದ ವಿರುದ್ಧ ಹೋರಾಡಿ ಪೇಶ್ವೆಗಳ ಪರವಾಗಿ ಯುದ್ಧಕ್ಕೆ ಸನ್ನದ್ಧರಾಗಿದ್ದರು. ಮಹಾರ್ ಸೈನಿಕರ ಶೌರ್ಯದಿಂದಲೇ ಪೇಶ್ವೆಗಳ ಆಡಳಿತ ಸುಗಮವಾಗಿ ನಡೆಯುತ್ತಿತ್ತು. ಆದರೆ ಪೇಶ್ವಗಳು ಮತ್ತು ಸವರ್ಣೀಯರು ಮಹಾರ್‌ಸೈನಿಕರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದ್ದರು.

1758 ರಲ್ಲಿ ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿಯನ್ನು ಸ್ಥಾಪಿಸಿದ ನಂತರ ಮಹಾರ್ ಜನರನ್ನು ಸೈನಿಕರಾಗಿ ನೇಮಕ ಮಾಡಿಕೊಳ್ಳಲು ಪ್ರಾರಂಭಿಸಿದರು. ಭಾರತೀಯ ಮಹಾರ್ ಸೈನಿಕರಿಗೆ ಶಿಕ್ಷಣದ ಅವಕಾಶವನ್ನು ಮಾಡಿಕೊಟ್ಟಿದ್ದರ ಪರಿಣಾಮ ಸ್ವಲ್ಪ ಮಟ್ಟಿಗೆ ತಿಳಿವಳಿಕೆ ಮೂಡಲು ಸಹಾಯವಾಯಿತು. ತಮ್ಮ ಹಕ್ಕು-ಬಾಧ್ಯತೆಗಳನ್ನು ತಿಳಿಯುವಂತಾಯಿತು. ಬ್ರಿಟಿಷರಲ್ಲಿ ಇರದ ಜಾತಿವ್ಯವಸ್ಥೆ ನಮ್ಮ ದೇಶದಲ್ಲಿ ಕಂಡ ಮಹಾರ್ ಸೈನಿಕರು ಬ್ರಿಟಿಷರಿಗೆ ತಮ್ಮ ಬೆಂಬಲವನ್ನು ನೀಡುವಂತಾಯಿತು. ಅವಮಾನ, ಅನ್ಯಾಯ, ದೌರ್ಜನ್ಯಕ್ಕೆ ಒಳಗಾದ ಮಹಾರ್ ಜನಾಂಗದವರು, ಈ ಎಲ್ಲದರಿಂದ ಮುಕ್ತಿ ಕಾಣಲು ಬ್ರಿಟಿಷರ ಪರವಾಗಿ ಯುದ್ಧಗಳಲ್ಲಿ ಹೋರಾಡಲು ಪ್ರಾರಂಭಿಸಿದರು.

ಎರಡನೆಯ ಬಾಜೀರಾವ್ ಪೇಶ್ವೆಯ ರಾಜ್ಯಾಡಳಿತವಿದ್ದ ಸಂದರ್ಭದಲ್ಲಿ 31 ನೇ ಡಿಸೆಂಬರ್ 1817 ರ ರಾತ್ರಿ ಬ್ರಿಟಿಷರ ಸೇನಾಪತಿ ಕ್ಯಾಪ್ಟನ್ ಫ್ರಾನ್ಸಿಸ್ ಸ್ಟಂಡನ್ ಮುಂದಾಳತ್ವದಲ್ಲಿ ಸೇನೆ ಪೇಶ್ವೆಗಳ ಮೇಲೆ ದಾಳಿ ಮಾಡಲು ಸಿದ್ಧಗೊಂಡಿತು. ಇದನ್ನು ತಿಳಿದ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕ ಮಾರುವೇಷದಲ್ಲಿ ಪೇಶ್ವೆಯನ್ನು ಕಾಣುತ್ತಾನೆ. ಆಗ ಪೇಶ್ವೆ ಮಹಾರ್ ಬೆಟಾಲಿಯನ್ನಿನ ನಾಯಕ ಸಿದ್ಧನಾಕನನ್ನು ಒಳಗೆ ಬಿಟ್ಟವನನ್ನು ಕೊಲ್ಲಿಸುತ್ತಾನೆ. ಇಂಗ್ಲಿಷರು ನಿಮ್ಮ ಮೇಲೆ ಯುದ್ಧ ಮಾಡುವರಿದ್ದಾರೆ, ನೀವು ನಮ್ಮ ಹಕ್ಕುಗಳನ್ನು ನಮಗೆ ನೀಡುವುದಾದರೆ ನಿಮ್ಮ ಪರವಾಗಿ ಅವರ ವಿರುದ್ಧ ನಾವು ಹೋರಾಡುತ್ತೇವೆ ಎನ್ನುತ್ತಾನೆ. “ನಿಮ್ಮ ಹಕ್ಕುಗಳು ಯಾವವು? ನೀನು ಇನ್ನೊಂದು ಘಳಿಗೆ ಇಲ್ಲಿ ನಿಂತರೆ ನಿನ್ನ ಶಿರಚ್ಛೇದನ ಮಾಡುತ್ತೇನೆ” ಎಂದು ಗದರುತ್ತಾನೆ. ಸಿದ್ಧನಾಕ ಮರಳಿ ಬಂದು ಅಲ್ಲಿ ನಡೆದ ಎಲ್ಲ ವಿವರ ಸಂಗಾತಿಗಳಿಗೆ ನೀಡುತ್ತಾನೆ. ಅಂತಿಮವಾಗಿ ಇಂಗ್ಲಿಷರ ಪರವಾಗಿ ಮಹಾರ್ ಬೆಟಾಲಿಯನ್ ಹೋರಾಡಲು ಸಿದ್ಧವಾಗುತ್ತದೆ. ಪೇಶ್ವೆಗಳ ಸೈನ್ಯ ಕೋರೆಗಾಂವ್ ಪ್ರದೇಶದ ಭೀಮಾನದಿಯ ಬಲದಂಡೆಯ ಮೇಲೆ ಯುದ್ಧಕ್ಕೆ ಸಜ್ಜಾಗಿ ಸುತ್ತುವರೆದು ನಿಂತುಕೊಂಡಿತು. ಮಹಾರ್ ರೆಜಿಮೆಂಟ್ ಸೈನ್ಯ ಬ್ರಿಟಿಷರ ಪರವಾಗಿ ಯುದ್ಧಕ್ಕೆ ಸಜ್ಜಾಗಿದ್ದರು.

ಪೇಶ್ವೆಗಳ ಸೇನೆಯು 25,000 ಕುದುರೆ ಸವಾರರು ಮತ್ತು 3,000 ಕ್ಕಿಂತಲೂ ಹೆಚ್ಚು ಸಂಖ್ಯೆಯಲ್ಲಿದ್ದ ಯೋಧರಿಂದ ತುಂಬಿ ತುಳುಕುತ್ತಿತ್ತು. ಎರಡೂ ಸೇನೆಗಳ ನಡುವೆ ಘನಘೋರ ಯುದ್ಧ ಪ್ರಾರಂಭವಾಗುತ್ತದೆ. ಬೃಹತ್ ಸೇನೆಯ ವಿರುದ್ಧ ಬ್ರಿಟಿಷ್ ಸೇನಾಪತಿ ಕ್ಯಾಪ್ಟನ್ ಪ್ರಾನ್ಸಿಸ್ ಸ್ಟಂಡನ್ ತಾನು ಸೋಲುತ್ತೇನೆ ಎಂದುಕೊAಡು ನಿರಾಶೆಯನ್ನು ತಳೆದಿದ್ದ. ಆದರೂ ಎದುರಾಳಿಯ ಜೊತೆ ಯುದ್ಧದಲ್ಲಿ ಮುನ್ನುಗ್ಗುವುದು ಆತನ ವಿಚಾರವಾಗಿತ್ತು. “ಮಹಾರ್ ಸೈನಿಕರು ವೀರಾವೇಶದಿಂದ ಹೋರಾಡಿ ಪೇಶ್ವೆಗಳು ಪಲಾಯನ ಗೈಯ್ಯಲು ಕಾರಣರಾದರು. ಈ ಯುದ್ಧದಲ್ಲಿ ಎರಡನೆಯ ಬಾಜಿರಾವ್ ಪೇಶ್ವೆಯು ಪಲಾಯನ ಮಾಡುವುದರಲ್ಲಿ ಮೊದಲಿಗ”ನೆಂದು ಬಾಬಾಸಾಹೇಬರು ತಮ್ಮ ಬರಹದಲ್ಲಿ ದಾಖಲಿಸಿದ್ದಾರೆ.

ಬೆಳಿಗ್ಗೆ ಆರು ಗಂಟೆಗೆ ಪ್ರಾರಂಭವಾದ ಯುದ್ಧ ರಾತ್ರಿ ಆರು ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಸಂಖ್ಯೆಯಲ್ಲಿ ಅಲ್ಪವಾಗಿದ್ದರೂ ಅತ್ಯಂತ ಕೆಚ್ಚಿನಿಂದ ಕಲಿತನ ಪ್ರದರ್ಶಿಸಿದ ಮಹಾರ್ ಯೋಧರು, ತಮ್ಮ ಮೇಲೆ ಅಮಾನವೀಯವಾದ ಅಸ್ಪೃಶ್ಯತೆಯನ್ನು ಹೇರಿದ್ದ ಪೇಶ್ವೆ ಆಡಳಿತವನ್ನು ಯುದ್ಧದಲ್ಲಿ ಮಣ್ಣು ಮುಕ್ಕಿಸಿದರು. ಮಹಾರ್ ಸೈನಿಕರ ಅಭೂತಪೂರ್ವ ಕಲಿತನದ ಕಾರಣದಿಂದಲೇ ಬ್ರಿಟಿಷರು ಕೋರೆಗಾಂವ್ ಯುದ್ಧವನ್ನು ಗೆಲ್ಲಲು ಸಾಧ್ಯವಾಯಿತು. ಗೆಲುವಿಗೆ ಕಾರಣರಾದ, ಕದನದಲ್ಲಿ ಹುತಾತ್ಮರಾದ ಯೋಧರನ್ನು ಸದಾಕಾಲ ಸ್ಮರಿಸುವಂತೆ ಕೋರೆಗಾಂವನ ಭೀಮಾನದಿ ತೀರದ ಪ್ರಶಸ್ತವಾದ ಮೈದಾನ, ಕದನದ ಕಿಡಿ ಮೊಟ್ಟ ಮೊದಲು ಹೊತ್ತಿದ ಸ್ಥಳದಲ್ಲಿ ಬ್ರಿಟಿಷರು ಸ್ಮರಣ ಸ್ತಂಭವನ್ನು ಸ್ಥಾಪಿಸಿದರು.

26 ನೆಯ ಮಾರ್ಚ್ 1821 ರಲ್ಲಿ ಈ ಭವ್ಯ ವಿಜಯಸ್ತಂಭಕ್ಕೆ ಅಡಿಗಲ್ಲು ಹಾಕಿದಾಗ ಬಂದೂಕು ಮತ್ತು ತೋಪುಗಳ ಮೂಲಕ ಹುತಾತ್ಮರಿಗೆ ರಾಜಮರ್ಯಾದೆಯ ಶ್ರದ್ಧಾಂಜಲಿ ಸಲ್ಲಿಸಲಾಯಿತು. 63 ಅಡಿ ಎತ್ತರ ಇರುವ ಈ ವಿಜಯಸ್ತಂಭವು 1822 ರಲ್ಲಿ ಪೂರ್ಣವಾಗಿ ನಿರ್ಮಾಣವಾಯಿತು. ಮೊದಲಿಗೆ ಈ ಸ್ತಂಭವನ್ನು ಮಹಾರ್ ಸ್ತಂಭವೆAದು ಕರೆಯಲಾಗುತ್ತಿತ್ತು. ನಂತರದಲ್ಲಿ ವಿಜಯಸ್ತಂಭವೆಂದು ಹೆಸರಿಸಲಾಯಿತು.

ವಿಜಯಸ್ತಂಭದ ಮೇಲೆ 20 ಮಹಾರ್ ಸೈನಿಕರ ಹೆಸರುಗಳನ್ನು ಕೆತ್ತಿಸಲಾಗಿದೆ. ಪ್ರತಿವರ್ಷ ಜನೆವರಿ 1 ರಂದು ಬಾಬಾಸಾಹೇಬರು ಕೋರೆಗಾಂವ್ ವಿಜಯಸ್ತಂಭಕ್ಕೆ ಭೇಟಿ ಕೊಟ್ಟು ನಮನವನ್ನು ಸಲ್ಲಿಸುತ್ತಿದ್ದರು. ಇಂತಹ ಐತಿಹಾಸಿಕ ವಿಜಯದ ಸಂಕೇತವಾದ ಕೋರೆಗಾಂವ ಚಳವಳಿಯನ್ನು ಮತ್ತೆ ಮತ್ತೆ ನೆನೆಯುವುದು ಇಂದಿನ ಅನಿವಾರ್ಯವೂ ಹೌದು. ಏಕೆಂದರೆ ಬಾಬಾಸಾಹೇಬರೇ ಹೇಳಿದ ಹಾಗೆ “ಇತಿಹಾಸವನ್ನು ತಿಳಿಯದವನು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಾಗದು” ಎಂದಿದ್ದಲ್ಲದೆ ದಲಿತರಾರೂ ಕುರಿಗಳಲ್ಲ, ಅವರು ಹುಲಿಗಳು’ ಎಂದು ಹೇಳಿರುವುದನ್ನು ಮತ್ತೆ ಮತ್ತೆ ಮನನಿಸಬೇಕಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ಕುವೆಂಪು ಅವರಿಗೆ ಲಂಕೇಶರ ಎಂಟು ಪ್ರಶ್ನೆಗಳು

Published

on

ಕುವೆಂಪು ಅವರನ್ನು ನಾನು ಅಂದು ನೋಡಿದ್ದು ಎರಡನೆ ಸಲ. ನಾನು ನೋಡಲು ಬಂದಿರುವ ವಿಷಯ ತಿಳಿದು ಕೈಯಲ್ಲಿ ನನ್ನ ಪ್ರಶ್ನೆ ಮತ್ತು ತಮ್ಮ ಉತ್ತರಗಳಿಂದ ಕೂಡಿದ ಟೈಪ್ ಮಾಡಿದ ಹಾಳೆಗಳನ್ನು ಹಿಡಿದುಕೊಂಡು ಬಂದರು. ನಾನು ಮತ್ತು ಮಿತ್ರ ನೆಲಮನೆ ದೇವೇಗೌಡರು ನಮಸ್ಕರಿಸಿದೊಡನೆ ಕೂತು ಪ್ರಶ್ನೆ ಮತ್ತು ಉತ್ತರಗಳನ್ನು ಓದುತ್ತ ವಿವರಿಸತೊಡಗಿದರು.

ತಮಗೆ ಯಾವುದೇ ಜಾತಿಯ ಬಗ್ಗೆ ಒಣ ಅಭಿಮಾನವಾಗಲಿ ಅನಗತ್ಯ ಪೂರ್ವಗ್ರಹವಾಗಲಿ ಇಲ್ಲವೆಂದು ಸ್ಪಷ್ಟಪಡಿಸಿದರು. ಅವರ ಮಾತಿನಲ್ಲಿ ತಮ್ಮ ಉತ್ತರಗಳು ಜನಕ್ಕೆಲ್ಲಿ ತಿಳಿಯುವುದಿಲ್ಲವೋ ಎಂಬ ಆತಂಕವಿದ್ದಂತಿತ್ತು. ಆದ್ದರಿಂದ ತಮ್ಮ ಕೃತಿಗಳಿಂದ ಉದಾಹರಣೆ ಎತ್ತಿಕೊಂಡು ಮಾತಾಡಿದರು. ನಾನು ಅವೆಲ್ಲವನ್ನೂ ಓದಿದ್ದೆನಾದ್ದರಿಂದ ಆ ವಿವರಣೆ ಅನಗತ್ಯವಾಗಿತ್ತು. ಆದರೆ ಕುವೆಂಪು ಅವರಿಗೆ ಅದಮ್ಯ ಉತ್ಸಾಹವಿದೆ; ಈ ಸಮಾಜದ ಕೆಡಕುಗಳ ಬಗ್ಗೆ ಕೋಪವಿದೆ. ತಾವು ಎಷ್ಟೇ ಬರೆದರೂ ಮಾತಾಡಿದರೂ ಈ ಜನತೆ ಸರಿಹೋಗುತ್ತದೋ ಇಲ್ಲವೋ ಎಂಬ ಸಂದೇಹವಿದೆ. ಆದ್ದರಿಂದಲೇ ಹಲವೊಮ್ಮೆ ವ್ಯಗ್ರವಾಗಿ ಮಾತಾಡುತ್ತಾರೆ. ಅವರು ನನ್ನ ಪ್ರಶ್ನೆಗಳಿಗೆ ಉತ್ತರ ಹೇಳುತ್ತ ಹೊಸ ಸಾಹಿತ್ಯದ ಬಗ್ಗೆ ಮಾತಾಡಿರುವುದನ್ನೂ ಈ ಅರ್ಥದಲ್ಲೇ ತೆಗೆದುಕೊಳ್ಳಬೇಕೆಂದು ಕಾಣುತ್ತದೆ.

ಕಿರಿಯ ಲೇಖಕರು ಯಾರಿಗೂ ಅರ್ಥವಾಗದ ಗೊಂದಲಗಳಲ್ಲಿ ಸಿಲುಕಿಕೊಂಡು ತಮ್ಮನ್ನು ತಾವು ಮೋಸಗೊಳಿಸಿಕೊಳ್ಳುವ ಬದಲು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಳ್ಳಬೇಕೆಂದೂ ಸಮಾಜದ ಅನಿಷ್ಟಗಳನ್ನು ಸರಿಪಡಿಸಬೇಕೆಂದೂ ಅವರು ಸೂಚಿಸುತ್ತಾರೆ. ಇದು ಕಿರಿಯ ಬರಹಗಾರರು ಅನುಭವ ಪಡೆಯುವ ಬಗ್ಗೆ ಉತ್ತಮ ಹಿತವಚನ. ಇನ್ನೊಂದು ಬಗೆಯಲ್ಲಿ ಇದು ನೀತಿ ಪಾಠ. ಇವೆರಡೂ ಕುವೆಂಪು ಮಾತುಗಳಲ್ಲಿರುವುದು ಎಂಥವರಿಗೂ ಕಂಡು ಬರುತ್ತದೆ.

ಆವೊತ್ತು ಮಾತಾಡುವ ಮೂಡಲ್ಲಿದ್ದರು ಕುವೆಂಪು ನಾವಿಬ್ಬರೂ ಕೆಲಸದ ಮೂಡಿನಲ್ಲಿದ್ದೆವು. ಅವರು ತಮ್ಮ ‘ರಾಮಾಯಣ ದರ್ಶನಂ’ನಿಂದ ಓದಿ ತೋರಿಸುವುದಾಗಿ ಸೂಚಿಸಿ ಬೇರೊಂದು ವಿಷಯ ಎತ್ತಿಕೊಂಡು ವಿವರಿಸತೊಡಗಿದರು. ‘ಪಾಂಚಾಲಿ’ ವಿವಿಧ ತೊಡಕುಗಳಲ್ಲಿ ಸಿಲುಕಿದ್ದ ನಾನು ಮತ್ತು ದೇವೇಗೌಡರು ನಮಸ್ಕಾರ ಹೇಳಿ ಹೊರಬಿದ್ದೆವು.

ಕುವೆಂಪು ಒಂದು ಸಂಸ್ಥೆ ಅಥವಾ ದೇವತೆಯಾಗಿ ಹುಂಬರ ಮನಸ್ಸಿನಲ್ಲಿ ಬೆಳೆಯುತ್ತಿದ್ದ ವೇಳೆಗೆ ಸರಿಯಾಗಿ ಅವರು ಮೈಕೊಡವಿಕೊಂಡು ಹೊರಬಂದು ಮನುಷ್ಯರೂ ವಿಚಾರವಾದಿಗಳೂ ಆಗಿ ಮಾತಾಡುತ್ತಿದ್ದುದು ನನಗೆ ಸಂತಸ ಉಂಟುಮಾಡಿತ್ತು.

——————————————————————-

ಲಂಕೇಶ್: ಸಾಮಾನ್ಯವಾಗಿ ಸಾರ್ವಜನಿಕ ಸಭೆಗಳಲ್ಲಿ ಮತ್ತು ವಾದವಿವಾದಗಳಲ್ಲಿ ಭಾಗವಹಿಸದ ತಾವು ಈಚೆಗೆ ಹೀಗೆ ಭಾಗವಹಿಸುವ ಮೂಲಕ ತಮ್ಮ ವಿಶಿಷ್ಟ ಬಗೆಯ ಕೀರ್ತಿಗೆ ಕಳಂಕ ತಂದುಕೊಳ್ಳುತ್ತಿರಬಹುದೇ ಎಂಬ ಅಳುಕು ತಮ್ಮ ಅಭಿಮಾನಿಗಳಲ್ಲಿ ಕೆಲವರಿಗಿದೆ. ಈ ಬಗ್ಗೆ ತಮ್ಮ ಅಭಿಪ್ರಾಯವೇನು?

ಕುವೆಂಪು: ಕೀರ್ತಿಗಿಂತಲೂ ನನಗೆ ಹೆಚ್ಚು ಪ್ರಿಯವಾದದ್ದು ಸತ್ಯ. ಸತ್ಯ ಹೇಳಿದರೆ ಕಲುಷಿತವಾಗುವ ಕೀರ್ತಿ ಭ್ರಷ್ಟಾಚಾರದ ವಸ್ತುವಾಗುತ್ತದೆ. ಅಲ್ಲದೆ ‘ಕೀರ್ತಿಶನಿ’ ಎಂಬ ನನ್ನ ಸಾನೆಟ್ಟಿನಲ್ಲಿ ಅನೇಕ ವರ್ಷಗಳ ಹಿಂದೆಯೇ ನಾನು ಅದನ್ನು ‘ತೊಲಗಾಚೆ’ ಎಂದು ತೊಲಗಿಸಿದ್ದೇನೆ. ಆದರೂ, ಶ್ರೀ ಎ.ಆರ್. ಕೃಷ್ಣಶಾಸ್ತ್ರಿಗಳು ಹೇಳಿದಂತೆ, ಶನಿ ಒಮ್ಮೆ ಬೆನ್ನು ಹತ್ತಿದರೆ ಬಿಡುವುದಿಲ್ಲವಂತೆ. ನನ್ನ ಮತ್ತೊಂದು ಸಾನೆಟ್ ‘ಯಶೋಲಕ್ಷ್ಮಿ’ ಈ ವಿಚಾರವಾಗಿ ನನ್ನ ಭಾವನೆ ಏನು ಎಂಬುದನ್ನು ತಿಳಿಸುತ್ತದೆ. ಕೀರ್ತಿ ಕಲುಷಿತವಾಗುವುದಿರಲಿ ಅಪಕೀರ್ತಿಯೆ ಬಂದರು ಸತ್ಯ ಹೇಳುವುದನ್ನು ಬಿಡುವುದಿಲ್ಲ.

ಲಂಕೇಶ್: ಕೆಟ್ಟಿರಲಿ, ಕೆಡದಿರಲಿ ಭಾರತೀಯ ಸಂಸ್ಕೃತಿಯೆಂದರೆ ವೈದಿಕ ಸಂಸ್ಕೃತಿಯೇ ಎಂಬ ಅಭಿಪ್ರಾಯದ ಬಗ್ಗೆ ನಿಮಗೇನೆನ್ನಿಸುತ್ತದೆ?

ಕುವೆಂಪು: ಇದೊಂದು ತಪ್ಪು ಅಭಿಪ್ರಾಯ. ಭಾರತೀಯ ಸಂಸ್ಕೃತಿ ಬರಿಯ ವೈದಿಕವಲ್ಲ. ಅವೈದಿಕವೂ ಅದರ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಬೌದ್ಧ, ಜೈನಗಳಲ್ಲದೆ ನ್ಯಾಯ, ವೈಶ್ಲೇಷಿಕ, ಸಾಂಖ್ಯ, ಯೋಗ ದರ್ಶನಗಳೂ ವೇದದ ಪರಮ ಪ್ರಾಮಾಣ್ಯವನ್ನು ಅವಿಚಾರಕವಾಗಿ ಒಪ್ಪಬೇಕು ಅನ್ನುವುದಿಲ್ಲ. ನನ್ನದು ವಿಶ್ವಸಂಸ್ಕೃತಿ. ಅಭಾರತೀಯವೂ ಅದರಲ್ಲಿ ಸೇರಿದೆ. ಸನಾತನವೂ (ಪುರಾತನ ಅಲ್ಲ.) ಶಾಶ್ವತವೂ ಆಧ್ಯಾತ್ಮಿಕವೂ ವಿಚಾರ ಮತ್ತು ವಿಜ್ಞಾನಗಳಿಗೆ ಅವಿರುದ್ಧವೂ ಆಗಿರುವ ಸತ್ಯ ಎಲ್ಲಿಯೇ ಇರಲಿ ಅದನ್ನು ನಾನು ಸ್ವೀಕರಿಸಿದ್ದೇನೆ.

ಲಂಕೇಶ್: ಬ್ರಾಹ್ಮಣ ಜಾತಿಯಲ್ಲಿ ಹಲವು ಒಳಪಂಗಡಗಳಿದ್ದರೂ ಕೇವಲ ಒಂದು ಪಂಗಡವನ್ನು ನೀವು ಟೀಕಿಸಿದ್ದು ಕೇವಲ ಉದಾಹರಣೆಗೋ ಅಥವಾ ಆ ಪಂಗಡ ತೀರಾ ಮಲಿನಗೊಂಡಿದೆ ಎಂಬ ಕಾರಣಕ್ಕೋ?

ಕುವೆಂಪು: ನನ್ನ ಭಾಷಣ ಬ್ರಾಹ್ಮಣರಿಗಾಗಲಿ, ಮಾಧ್ವರಿಗಾಗಲೀ ನಿರ್ದೆಶಿಸಿದ್ದಲ್ಲ; ಒಕ್ಕೂಟದವರಿಗಾಗಿ ಮಾತ್ರ. ಜಗತ್ತಿನ ಪುರೋಹಿತಶಾಹಿ ಅವೈಚಾರಿಕ ಮತ್ತು ಅವೈಜ್ಞಾನಿಕ ಮೂಢ ಭಾವನೆಗಳ ಆಶ್ರಯದಲ್ಲಿ ಶ್ರೀ ಸಾಮಾನ್ಯರನ್ನು ಹೇಗೆ ವಂಚಿಸುತ್ತಾ ಬಂದಿದೆ ಎನ್ನುವುದನ್ನು ಕುರಿತು ವಿಚಾರವಾದಿಗಳಾಗಿ ಬಾಳನ್ನು ನಡೆಸಬೇಕು ಎನ್ನುವ ತರುಣರಿಗೆ ತಿಳಿಸುತ್ತಿದ್ದೆ. ಪ್ರಾಸಂಗಿಕವಾಗಿ, ನಾನು ಕೆಲವೇ ದಿನಗಳ ಹಿಂದೆ ಆ ಪುಸ್ತಕಗಳನ್ನು ಓದುತ್ತಿದ್ದು ಸಂಗತಿ ಮನಸ್ಸಿನಲ್ಲಿ ಹೊಚ್ಚ ಹೊಸದಾಗಿ ಇದ್ದುದರಿಂದ ಮಧ್ವ-ಜಯತೀರ್ಥರ ನಿದರ್ಶನಗಳನ್ನು ಕೊಟ್ಟೆನಷ್ಟೆ; ಆಮೇಲೆ ಗುಲ್ಲೆದ್ದ ಮತಭ್ರಾಂತರ ಗಲಾಟೆಯಿಂದಲೇ ಗೊತ್ತಾದದ್ದು ನಾನು ಎಂತಹ ಹೇಸಿಗೆಯ ಹೊಂಡಕ್ಕೆ ಕಲ್ಲು ಎಸೆದಿದ್ದೇನೆ ಎಂದು.

ಲಂಕೇಶ್: ತಮ್ಮ ಕಾವ್ಯದ ಮತ್ತು ಮುಖ್ಯ ಕಥಾಸಾಹಿತ್ಯದ (fiction) ಕೇಂದ್ರ ನಿಲುವು ವೈದಿಕ, ಆದರ್ಶಮಯ, ಅವಾಸ್ತವ ಎಂದು ಹಲವರು ಟೀಕಿಸುತ್ತಾರೆ. ಇದಕ್ಕೆ ತಮ್ಮ ಉತ್ತರವೇನು?

ಕುವೆಂಪು: ಅವರ ತಲೆ; ನನ್ನದು ವಿಶ್ವಪ್ರಜ್ಞೆ. ನಾನು ಭಾರತೀಯನಾಗಿ ಅದರಲ್ಲೂ ಕನ್ನಡಿಗನಾಗಿ ಹುಟ್ಟಿದ್ದರಿಂದ ಆ ಸಂಸ್ಕೃತಿಯ ಮತ್ತು ಆ ಭಾಷೆಯ ಪರಿಭಾಷೆಯನ್ನು ಅನಿವಾರ್ಯವಾಗಿ ಉಪಯೋಗಿಸುತ್ತೇನಷ್ಟೆ. ಸತ್ಯ ವೈದಿಕವಾಗಿ ಪ್ರಕಟವಾದ ಮಾತ್ರಕ್ಕೆ ಅಸತ್ಯವಾಗುವುದಿಲ್ಲ. ಆದರ್ಶಮಯವಾದ ಮಾತ್ರಕ್ಕೆ ಅವಾಸ್ತವವಾಗುವುದಿಲ್ಲ. ನನ್ನ ಭಾಷಣದ ಉದ್ದೇಶವೆ ಒಕ್ಕೂಟದ ಹುಡುಗರನ್ನು ಅಂತಹ ತಪ್ಪುದಾರಿಗೆ ಹೋಗದಿರುವಂತೆ ತಡೆಯಬೇಕು ಎಂಬುದಾಗಿತ್ತು. ಚಿನ್ನದ ಒಡವೆಯನ್ನು ಅಕ್ಕಸಾಲಿ ಮಾಡಿದ ಮಾತ್ರಕ್ಕೆ ಚಿನ್ನ ಅಸತ್ಯವಾಗುತ್ತದೆಯೇ? ಗ್ರಾವಿಟೇಶನ್ ಸಿದ್ಧಾಂತವನ್ನು ನ್ಯೂಟನ್ ಕಂಡುಹಿಡಿದ ಮಾತ್ರಕ್ಕೆ ಅದು ಕ್ರೈಸ್ತವಾಗುತ್ತದೆಯೇ? ವೇದದ ಋಷಿ ಸನಾತನ ಶಾಶ್ವತ ಸತ್ಯವನ್ನು ಸಾಕ್ಷಾತ್ಕರಿಸಿಕೊಂಡು ಅದಕ್ಕೆ ‘ಬ್ರಹ್ಮನ್’ ಎಂದು ಹೆಸರು ಕೊಟ್ಟ ಮಾತ್ರಕ್ಕೆ ಆ ಸತ್ಯ ಆ ಋಷಿಯ ಸೃಷ್ಠಿಯಾಗುತ್ತದೆಯೇ? ಆ ಸತ್ಯ ಋಷಿಗೆ ಪೂರ್ವದಲ್ಲಿಯೇ ಇದ್ದುದು; ಆ ಋಷಿ ಮಾತ್ರವಲ್ಲ ಮನುಷ್ಯರೆಲ್ಲ ಮುಗಿದ ಮೇಲೆಯೂ ಆ ಸತ್ಯಕ್ಕೆ ಚ್ಯುತಿ ಬರುವುದಿಲ್ಲ. ಗುರುತ್ವಾಕರ್ಷಣ ಶಕ್ತಿ ನ್ಯೂಟನ್ನಿಗೆ ಪೂರ್ವದಲ್ಲಿಯೂ ಇತ್ತು, ಮನುಷ್ಯ ಕುಲವೇ ನಾಶವಾದ ಮೇಲೆಯೂ ಇರುತ್ತದೆ.

ಅಂತಹ ಸತ್ಯವನ್ನು ನಿತ್ಯ, ಸನಾತನ ಶಾಶ್ವತ ಎನ್ನುತ್ತೇವೆ. ಬೇರೆ ಬೇರೆ ದೇಶಗಳು, ಬೇರೆ ಬೇರೆ ಭಾಷೆಗಳೂ ಬೇರೆ ಬೇರೆ ಹೆಸರು ಕೊಡಬಹುದಷ್ಟೆ. ನನ್ನ ಜೀವನ ದರ್ಶನ ಅಂತಹ ಅಚ್ಯುತ ಸತ್ಯದ ಮೇಲೆ ನಿಂತಿದೆ. ನನ್ನ ಸಾಹಿತ್ಯವೂ ಅದನ್ನೆ ಅಭಿವ್ಯಕ್ತಗೊಳಿಸುತ್ತದೆ. ಅದನ್ನು ‘ನಿಮ್ಮಲ್ಲಿ’ ಕೆಲವರು ‘ವೈದಿಕ’ ಎಂದು ನಿಂದಿಸುವಂತೆ ‘ಅವರಲ್ಲಿ’ ಕೆಲವರು ‘ಅವೈದಿಕ’ ಎಂದೂ ತಿರಸ್ಕರಿಸುತ್ತಾರೆ. ಆದರೆ ನನ್ನ ಸಾಹಿತ್ಯ ಉದ್ಭವಿಸುವುದು ಬದುಕಿನಿಂದ, ಬದುಕಿಗಾಗಿ; ಮತ್ತು ಬದುಕಿನಾಚೆಯ ಬದುಕಿಗಾಗಿ.

ಲಂಕೇಶ್: ಈಚೆಗೊಬ್ಬರು ತಮ್ಮ ಸಾಮಾಜಿಕ ವಿಮರ್ಶೆಯನ್ನು ಕುರಿತು ಹೇಳುತ್ತಾ ‘ಕುವೆಂಪು ಅವರ ಮಾತಿನಲ್ಲಿ ಬ್ರಾಹ್ಮಣ ವಿರೋಧಿ ಧ್ವನಿ ಕೇಳಿ ಬರುತ್ತಿದ್ದರೆ ಅದಕ್ಕೆ ಕಾರಣವನ್ನು ಅವರ ವೈಯಕ್ತಿಕ ಅನುಭವದಲ್ಲಿ ಹುಡುಕಬೇಕು’ ಎಂದಿದ್ದಾರೆ. ಇದಕ್ಕೆ ತಮ್ಮ ಪ್ರತಿಕ್ರಿಯೆ?

ಕುವೆಂಪು: ಶುದ್ಧ ಅಪಾರ್ಥ! ಮೊದಲನೆಯದಾಗಿ ಅದು ಬ್ರಾಹ್ಮಣ ವಿರೋಧಿ ಧ್ವನಿಯಲ್ಲ. ಅಂದರೆ ಬೌದ್ಧ, ಜೈನ, ಕ್ರೈಸ್ತ, ಇಸ್ಲಾಂ ಮತ್ತು ಲಿಂಗಾಯಿತ ಪುರೋಹಿತಶಾಹಿಯನ್ನೂ ಒಳಗೊಂಡಿದೆ. ನನ್ನ ಪುರೋಹಿತಶಾಹಿ ಖಂಡನೆಗೆ ಕಾರಣವನ್ನು ನನಗಿರಬಹುದಾದ ವೈಯಕ್ತಿಕ ಅನುಭವದಲ್ಲಿ ಹುಡುಕುವುದು ಅತ್ಯಂತ ಹಾಸ್ಯಾಸ್ಪದ. ನನ್ನ ಮೂವತ್ತು ನಲವತ್ತು ವರ್ಷದ ಹಿಂದಿನ ಬರಹವನ್ನು ಯಾರೋ ಒಬ್ಬರು ಅಂದು ಟೀಕಿಸಿದುದಕ್ಕಾಗಿ ಇಂದು ನಾನು ನಲವತ್ತು ವರ್ಷಗಳ ಮೇಲೆ ರೊಚ್ಚು ತೀರಿಸಿಕೊಳ್ಳುವುದಕ್ಕೆ ಹಾಗೆ ಮಾತನಾಡಿದೆನೆಂದು ಹೇಳುವುದು ನನ್ನ ವ್ಯಕ್ತಿತ್ವಕ್ಕೆ ಅತ್ಯಂತ ‘ಅಲ್ಪತನ’ ಆರೋಪಿಸಿದಂತಾಗುತ್ತದೆ. ನಾನು ಅಷ್ಟು ‘ಸಣ್ಣ’ವನಲ್ಲ. ನಲವತ್ತು ಐವತ್ತು ವರ್ಷಗಳಿಂದಲೂ ನಾನು ಗದ್ಯ, ಪದ್ಯ, ನಾಟಕ ಎಲ್ಲದರಲ್ಲಿಯೂ ಹೇಳುತ್ತಾ ಬಂದಿರುವುದನ್ನೆ ಮೊನ್ನೆಯು ಹೇಳಿದ್ದೇನೆ ಅಷ್ಟೆ. ಆದರೆ ಇವರು ಯಾರೂ ನೀವೂ ಸೇರಿ, ನನ್ನ ಬರಹಗಳನ್ನು ಅಷ್ಟು ಆಸ್ಥೆಯಿಂದ ಓದಿಯೇ ಇಲ್ಲ ಎಂಬುದು ನನ್ನ ಗುಮಾನಿ. ಇಡೀ ರಾಮಾಯಣದರ್ಶನವೆ ನನ್ನ ‘ದರ್ಶನ’ಕ್ಕೆ ಒಡ್ಡಿದ ಮಹಾ ಪ್ರತಿಮೆಯಾಗಿದೆ. (ನಿಮ್ಮ ಎರಡನೆಯ ಪ್ರಶ್ನೆಗೆ ಕೊಟ್ಟಿರುವ ಉತ್ತರವನ್ನೂ ನೋಡಬಹುದು.)

ಲಂಕೇಶ್: ‘ಬ್ರಾಹ್ಮಣ’ ‘ಶೂದ್ರ’ ‘ಮಣ್ಣಿನ ವಾಸನೆ’ ಇತ್ಯಾದಿ ಮಾತು ಬಹಳವಾಗಿ ಕೇಳಿಬರುತ್ತಿರುವ ಈ ಕಾಲದಲ್ಲಿ ಬ್ರಾಹ್ಮಣ, ಶೂದ್ರರ ಭಾಷೆ, ಅನುಭವ ದೃಷ್ಟಿಯನ್ನು ಕುರಿತ ತಮ್ಮ ವಿಶ್ಲೇಷಣೆ ಏನು?

ಕುವೆಂಪು: ಈ ಮಾತುಗಳೆಲ್ಲ ಮತ್ತೆ ಪುರೋಹಿತಶಾಹಿಯ ಪಿತೂರಿಯ ಟಂಕಸಾಲೆಯ ನಾಣ್ಯಗಳೆ. ನಿಮ್ಮನ್ನು ದಿಕ್ಕು ತಪ್ಪಿಸಿ ಬದುಕಿನ ಋಜುಮಾರ್ಗದಿಂದ ಕಟಂಕಿತ ಮಾರ್ಗಕ್ಕೆ ತಳ್ಳುವ ಉಪಾಯದಿಂದಲೆ ಅವರು ಅವನ್ನು ಹುಟ್ಟಿಸಿದ್ದಾರೆ. ನೀವೂ ಹಿಂದಿನಂತೆಯೇ ಇಂದು ಬೆಪ್ಪುಗಳಾಗಿ ಅದಕ್ಕೆ ವಶರಾಗಿ, ಜನರ ಬದುಕನ್ನು ಮತಮೌಢ್ಯದಿಂದ ಪಾರು ಮಾಡಿ ಅವರನ್ನು ವೈಚಾರಿಕ ಬುದ್ಧಿ ಮತ್ತು ವೈಜ್ಞಾನಿಕ ದೃಷ್ಟಿ ಸಂಪನ್ನರಾಗಿ ಪರಿವರ್ತಿಸಿ ಅವರ ಮನಸ್ಸು ಮತ್ತು ಹೃದಯಗಳನ್ನು ಬೆಳಗುವ, ಅವರ ಸೋತ ಹೃದಯಗಳನ್ನು ಹುರಿದುಂಬಿಸುವ, ಮತ್ತು ವರ್ಣ, ಜಾತಿ ಭೇದಭಾವನೆಗಳನ್ನೆಲ್ಲ ಕಸದ ಬುಟ್ಟಿಗೆ ತೂರಿ ಅವರನ್ನು ಸಮಾನತಾವಾದಿಗಳನ್ನಾಗಿ ಪರಿವರ್ತಿಸುವ ಸಾಹಿತ್ಯ ಸೃಷ್ಟಿ ಮಾಡುವ ಬದಲು, ಗುಂಪುಗಾರಿಕೆಗಲ್ಲದೆ ಮತ್ತೆ ಯಾರಿಗೂ ಬೇಡದ ಮತ್ತು ಯಾರಿಗೂ ಅರ್ಥವಾಗದ ‘ನವ್ಯ’ ನಾಮಕ ವಿಕಾರ ಸೃಷ್ಟಿಗೆ ಮರುಳಾಗಿ ಹೋಗಿದ್ದೀರಿ. ಅಂತಹ ಕೃತಕ ಅನುಕರಣೀಯ ಪಂಥಗಳನ್ನೆಲ್ಲ ನಿಮ್ಮ ಹೃದಯದಿಂದ ಕಿತ್ತೊಗೆದು, ನಿಮ್ಮವರ ಬದುಕನ್ನು ನೇರವಾಗಿ ನೋಡಿ ಅದರಿಂದ ಉದ್ಭವಿಸುವ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ಮೇಲಕ್ಕೆತ್ತುವ ಧೀರಭಾವಗಳನ್ನೂ ಕ್ರಿಯಾಶೀಲ ಆದರ್ಶಗಳನ್ನೂ ನಿಮ್ಮ ಬರವಣಿಗೆಗಳಲ್ಲಿ ನೀಡಬೇಕಾಗಿರುವುದು ಸದ್ಯದ ನಿಮ್ಮ ಆದ್ಯ ಕರ್ತವ್ಯ. ಪುರೋಹಿತಶಾಹಿಯ ಮೆಚ್ಚುಗೆಗೂ ಹೊಗಳಿಕೆಗೂ ಹಾತೊರೆದು ಬಾಯಿ ಬಿಟ್ಟು ನಿಮ್ಮ ಪೌರುಷ ತೇಜಸ್ಸುಗಳಿಗೆ ಅಪಮಾನ ಮಡಿಕೊಳ್ಳುವುದನ್ನು ಒಡನೆಯೇ ನಿಲ್ಲಿಸಿಬಿಡಿ. (ಮಾನಸ ಗಂಗೋತ್ರಿಯಲ್ಲಿ ಏರ್ಪಡಿಸಿದ್ದ ಲೇಖಕರ ಗೋಷ್ಠಿಯನ್ನು ಉದ್ಘಾಟಿಸುತ್ತಾ ನಾನು ಮಾಡಿದ ಭಾಷಣವನ್ನು ಗಮನವಿಟ್ಟು ಓದಿ ನೋಡಿದರೆ ನನ್ನ ಅಭಿಪ್ರಾಯಗಳು ಸ್ಪಷ್ಟಗೊಳ್ಳುತ್ತವೆ.)

ಲಂಕೇಶ್: ಕನ್ನಡ ಸಾಹಿತಿಗಳು ಬಹುಕಾಲದಿಂದ ಈ ನಾಡ ಹೆಸರಿನ ಬದಲಾವಣೆ, ಕನ್ನಡ ಮಾಧ್ಯಮ ಕುರಿತು ಮಾತನ್ನಾಡುತಿದ್ದರೂ ಕೇವಲ ಹೆಸರಿನ ಬದಲಾವಣೆ ಮಾತ್ರ ಆಗಿ ಮಾಧ್ಯಮದ ಪ್ರಶ್ನೆ ಹಾಗೇ ಉಳಿದಿದೆ. ಇದು ಸಾಹಿತಿಯ ಪ್ರಭಾವದ ದೌರ್ಬಲ್ಯ ತೋರುತ್ತದೆಯೆ?

ಕುವೆಂಪು: ಹಾಗೇನಿಲ್ಲ, ಈಗಾಗಲೆ ತಕ್ಕಷ್ಟು ಕಾರ್ಯ ನಡೆದಿದೆ. ನಡೆಯುತ್ತಲೂ ಇದೆ. ಜನತೆ, ಸರಕಾರ, ಸಾಹಿತ್ಯ ಪರಿಷತ್ತು ಮತ್ತು ವಿಶ್ವವಿದ್ಯಾಲಯಗಳು ಎಲ್ಲವೂ ಕನ್ನಡ ಮಾಧ್ಯಮ ತತ್ವವನೊಪ್ಪಿ ಕ್ರಿಯಾಶೀಲವಾಗಿ ಮುಂದುವರೆಯುತ್ತಿವೆ. ಅದು ಪೂರ್ತಿ ಕೈಗೂಡಲು ತುಸು ಸಮಯ ಬೇಕಾಗಬಹುದು ಅಷ್ಟೆ.

ಲಂಕೇಶ್: ಈ ನಾಡ ತರುಣರಿಗೆ ತಮ್ಮ ಹಿತವಚನವೇನು?

ಕುವೆಂಪು: ನನ್ನ ಸಾಹಿತ್ಯದಲ್ಲಿ- ಕತೆ, ಕಾದಂಬರಿ, ಭಾವಗೀತೆ, ಕಾವ್ಯ, ಮಹಾಕಾವ್ಯ, ಜೀವನ ಚರಿತ್ರೆ, ಭಾಷಣ, ವಿಮರ್ಶೆ ಇತ್ಯಾದಿ- ನಾನು ಹೇಳಬೇಕಾದ್ದೆಲ್ಲವನ್ನೂ ಹೇಳಿದ್ದೇನೆ. ಇಷ್ಟವಿರುವ ತರುಣರು ಅವುಗಳನ್ನು ಮನಸ್ಸಿಟ್ಟು ಓದಲಿ. ವಿಶೇಷವಾಗಿ, ಅದರ ಮುನ್ನುಡಿ ಸಹಿತ ‘ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ’ ಎಂಬ ಪುಸ್ತಕದ ನಾಲ್ಕು ಭಾಷಣಗಳನ್ನಾದರೂ ಓದಲಿ. ಆದರೆ ನಾಲ್ಕನ್ನೂ ಸಮಗ್ರವಾಗಿ ತೆಗೆದುಕೊಳ್ಳಬೇಕು, ಅಷ್ಟೆ.- ಸರ್ವೋದಯ, ಸಮನ್ವಯ ಮತ್ತು ಪೂರ್ಣದೃಷ್ಟಿ ಇವುಗಳೇ ಎಲ್ಲರ ಧ್ಯೇಯಮಂತ್ರಗಳಾಗಲಿ.

ಕೃಪೆ: -‘ಪಾಂಚಾಲಿ’ (ದೀಪಾವಳಿ-ರಾಜ್ಯೋತ್ಸವ ವಿಶೇಷ ಸಂಚಿಕೆ, ಪುಟ: 11-14, 1974)
ಸಂಪಾದಕರು: ಪಿ. ಲಂಕೇಶ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ...

ದಿನದ ಸುದ್ದಿ3 days ago

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ...

ದಿನದ ಸುದ್ದಿ2 weeks ago

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ...

ದಿನದ ಸುದ್ದಿ2 weeks ago

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು...

ದಿನದ ಸುದ್ದಿ2 weeks ago

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ...

ದಿನದ ಸುದ್ದಿ3 weeks ago

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್...

ದಿನದ ಸುದ್ದಿ1 month ago

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಸೋಮವಾರ(ಫೆ.23) ರಂದು ನಗರದ...

ದಿನದ ಸುದ್ದಿ1 month ago

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ,...

ದಿನದ ಸುದ್ದಿ1 month ago

ಜನರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸುವುದು ಅಧಿಕಾರಿಗಳ ಕರ್ತವ್ಯ : ಡಾ.ಹೆಚ್.ಕೃಷ್ಣ

ಸುದ್ದಿದಿನ,ದಾವಣಗೆರೆ:ಆಹಾರ ಪಡೆಯುವುದು ಜನರ ಹಕ್ಕು, ಅದನ್ನು ಅನುಷ್ಠಾನಗೊಳಿಸುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯ. ಅದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ಸಹ ನಮ್ಮೆಲ್ಲರ ಜವಾಬ್ದಾರಿ. ಜನರಿಗೆ ಕೇವಲ ಆಹಾರ ಧಾನ್ಯಗಳನ್ನು...

ದಿನದ ಸುದ್ದಿ1 month ago

ದಾವಣಗೆರೆ | ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ...

Trending