ದಿನದ ಸುದ್ದಿ
ಶಿವಮೊಗ್ಗ ಜಿಲ್ಲೆಯಲ್ಲಿ 208ಕೋಟಿ ರೂ. ಸಾಲಮನ್ನಾ ; ಅರ್ಹ ಪಿಂಚಣಿದಾರರಿಗೆ ಪಿಂಚಣಿ ಒದಗಿಸಲು ಕ್ರಮ: ಐವನ್ ಡಿಸೋಜಾ
ಸುದ್ದಿದಿನ,ಶಿವಮೊಗ್ಗ: ಜಿಲ್ಲೆಯಲ್ಲಿ ತಾಂತ್ರಿಕ ಕಾರಣಗಳಿಂದಾಗಿ ಪಿಂಚಣಿ ಸೌಲಭ್ಯ ಪಡೆಯಲು ಸಾಧ್ಯವಾಗದಿರುವ 1483 ಪಿಂಚಣಿದಾರರಿಗೆ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವಿಕರಿಸಿ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.ಜಿಲ್ಲೆಯಲ್ಲಿ ಒಟ್ಟು 2,19,631 ಫಲಾನುಭವಿಗಳು ವಿವಿಧ ಯೋಜನೆಗಳ ಅಡಿ ಪಿಂಚಣಿ ಸೌಲಭ್ಯ ಪಡೆಯುತ್ತಿದ್ದಾರೆ. ಮಂಜೂರಾತಿಗೆ 300ಅರ್ಜಿಗಳು ಬಾಕಿ ಇವೆ. ಕೆ2 ತಾಂತ್ರಿಕ ಸಮಸ್ಯೆಯಿಂದಾಗಿ 1483 ಮಂದಿಗೆ ಪಿಂಚಣಿ ನೀಡಲು ಸಾಧ್ಯವಾಗುತ್ತಿಲ್ಲ. ಪಿಂಚಣಿಯನ್ನೆ ಅವಲಂಬಿಸಿರುವ ಇಂತಹ ಫಲಾನುಭವಿಗಳಿಗೆ ಆದಷ್ಟು ಬೇಗನೆ ಸೌಲಭ್ಯ ಒದಗಿಸಲು ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವಂತೆ ಅವರು ತಿಳಿಸಿದರು.
ಅಂತ್ಯಸಂಸ್ಕಾರ ಯೋಜನೆ ಅಡಿ ಅನುದಾನ ಕೊರತೆಯಿಂದ ಸಕಾಲದಲ್ಲಿ ಸೌಲಭ್ಯ ಒದಗಿಸಲು ಸಾಧ್ಯವಾಗದೇ 4591 ಅರ್ಜಿಗಳು ಜಿಲ್ಲೆಯಲ್ಲಿ ಬಾಕಿ ಇದೆ. ಇದನ್ನು ಆದಷ್ಟು ಬೇಗನೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಸಕಾಲ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆ ನಿರಂತರವಾಗಿ ಪ್ರಥಮ ಸ್ಥಾನ ಉಳಿಸಿಕೊಂಡು ಬಂದಿದೆ. ನಿಗದಿತ ವೇಳೆಯಲ್ಲಿ ಸರ್ಕಾರಿ ಸೇವೆ ಒದಗಿಸಲಾಗುತ್ತಿರುವುದಕ್ಕೆ ಇದು ಸಾಕ್ಷಿ. ಇದನ್ನು ಉಳಿಸಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಸಂಧ್ಯಾ ಸುರಕ್ಷಾ ಯೋಜನೆಯಡಿ 73960 ಫಲಾನುಭವಿಗಳಿಗೆ, ವೃದ್ಧಾಪ್ಯ ವೇತನ ಯೋಜನೆಯಡಿ 20864, ಅಂಗವಿಕಲ ಯೋಜನೆಯಡಿ 28333, ವಿಧವಾ ವೇತನ ಯೋಜನೆಯಡಿ 51794, ಮನಸ್ವಿನಿ ಯೋಜನೆಯಡಿ 3504, ಮೈತ್ರಿ ಯೋಜನೆಯಡಿ 22, ರಾಷ್ಟಿಯ ಕುಟುಂಬ ನೆರವು ಯೋಜನೆಯಡಿ 10744, ಅಂತ್ಯಸಂಸ್ಕಾರ ಯೋಜನೆಯಡಿ 30259, ಆದರ್ಶ ವಿವಾಹ ಯೋಜನೆಯಡಿ 314 ಮಂದಿಗೆ ನೆರವು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ತಿಳಿಸಿದರು.
ಪಿಂಚಣಿ ಅದಾಲತ್
ಮುಂದಿನ ತಿಂಗಳು ಜಿಲ್ಲಾ ಮಟ್ಟದ ಪಿಂಚಣಿ ಅದಾಲತ್ ಆಯೋಜಿಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ 442ಕಂದಾಯ ಅದಾಲತ್ಗಳನ್ನು ಮಾಡಲಾಗಿದ್ದು, 54910 ಅರ್ಜಿಗಳ ಪೈಕಿ 54818 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಕಂದಾಯ ಅದಾಲತ್ಗಳನ್ನು ನಿರಂತರವಾಗಿ ಆಯೋಜಿಸಲು ಸೂಚಿಸಲಾಗಿದೆ ಎಂದು ಅವರು ಬಳಿಕ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ರೈತರ ಸಾಲಮನ್ನಾ
ಜಿಲ್ಲೆಯಲ್ಲಿ ರೈತರ ಸಾಲಮನ್ನಾ ಯೋಜನೆಯಡಿ ವಾಣಿಜ್ಯ ಬ್ಯಾಂಕುಗಳಲ್ಲಿ ಬೆಳೆಸಾಲ ಪಡೆದ 55171 ರೈತರ 943.49ಕೋಟಿ ರೂ. ಸಾಲದ ಪೈಕಿ ಈಗಾಗಲೇ 130.31ಕೋಟಿ ರೂ. ಸಾಲಮನ್ನಾ ಮಾಡಲಾಗಿದೆ. ಇನ್ನು 812.83ಕೋಟಿ ರೂ. ಬಿಡುಗಡೆಗೆ ಬಾಕಿಯಿದ್ದು, ಪಾವತಿಗೆ ಕ್ರಮ ಕೈಗೊಳ್ಳಲಾಗುವುದು.
ಸಹಕಾರ ವಲಯದಲ್ಲಿ 33947 ರೈತರ 139.39ಕೋಟಿ ರೂ. ಸಾಲದ ಪೈಕಿ 77.56ಕೋಟಿ ರೂ. ಸಾಲಮನ್ನಾ ಮಾಡಲಾಗಿದ್ದು, 61.83ಕೋಟಿ ರೂ. ಬಿಡುಗಡೆಗೆ ಬಾಕಿಯಿದೆ ಎಂದು ಅವರು ಹೇಳಿದರು.
ಬಗರ್ಹುಕುಂ ಭೂಮಿ ಮಂಜೂರು: ಜಿಲ್ಲೆಯಲ್ಲಿ ಬಗರ್ಹುಕುಂ ಯೋಜನೆಯಡಿ ರಿಯಾಯಿತಿ ದರದಲ್ಲಿ ಅರ್ಹರಿಗೆ 4.38 ಎಕ್ರೆವರೆಗೆ ಒಟ್ಟು 78ಸಾವಿರ ಎಕ್ರೆ ಭೂಮಿ ಮಂಜೂರು ಮಾಡಿರುವುದು ದಾಖಲೆಯಾಗಿದೆ. ಅರಣ್ಯ ಭೂಮಿ ಸಮಸ್ಯೆಯಿಂದಾಗಿ 942 ಗ್ರಾಮಗಳಲ್ಲಿ ಸ್ಮಶಾನ ಭೂಮಿ ಇಲ್ಲದಿರುವುದು ಗಮನಕ್ಕೆ ಬಂದಿದ್ದು, ಇದನ್ನು ಬಗೆಹರಿಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಜಾರಿಯಲ್ಲಿರುವ ಪ್ರಾಪರ್ಟಿ ಕಾರ್ಡ್ ಯೋಜನೆಯಿಂದ ಸಮಸ್ಯೆಗಳು ಉಂಟಾಗಿದ್ದು, ಈ ಯೋಜನೆಯನ್ನು ಕಡ್ಡಾಯಗೊಳಿಸದಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.
ಅಪರ ಜಿಲ್ಲಾಧಿಕಾರಿ ಕೆ.ಅನುರಾಧ, ಶಿವಮೊಗ್ಗ ಎಸಿ ಪ್ರಕಾಶ್, ಸಾಗರ ಎಸಿ ದರ್ಶನ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ ಯೋಜನೆಯಡಿ ಅರ್ಹ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದು ಘಟಕಗಳನ್ನು ಸ್ಥಾಪಿಸಿರುವ ಅರ್ಹ ಉದ್ದಿಮೆದಾರರು ಹಾಗೂ ಬ್ಯಾಂಕ ಸಾಲ ಪಡೆದು ಉದ್ದಿಮೆ ಸ್ಥಾಪಿಸಲು ಇಚ್ಚಿಸಿರುವ ಉದ್ದಿಮೆದಾರರು ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಪಿ.ಬಿ ರಸ್ತೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

-
ದಿನದ ಸುದ್ದಿ7 days agoಅಪರೂಪದ ಲಿವರ್ ಗಡ್ಡೆ | ಎಸ್ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್ನಲ್ಲಿ ಮಹಿಳೆಗೆ ಯಶಸ್ವಿ ಶಸ್ತ್ರಚಿಕಿತ್ಸೆ
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ18 hours agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ21 hours agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ22 hours agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ18 hours agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ18 hours agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

