ದಿನದ ಸುದ್ದಿ
ಶಿವಮೊಗ್ಗ | ಅಲೆಮಾರಿಗಳಿಗೆ ಶಾಶ್ವತ ಸೂರು ಒದಗಿಸಲು ಹೋರಾಟ
ಸುದ್ದಿದಿನ ಡೆಸ್ಕ್ : ನಗರದ ಸಹ್ಯಾದ್ರಿ ಕಾಲೇಜು ಬಳಿಯಲ್ಲಿ ಟೆಂಟ್ಗಳಲ್ಲಿ ವಾಸ ಮಾಡುತ್ತಿರುವ ಅಲೆಮಾರಿಗಳಿಗೆ ಶಾಶ್ವತ ಸೂರು ಒದಗಿಸಲು ಸಂಘಟನಾತ್ಮಕ ಮತ್ತು ಕಾನೂನಾತ್ಮಕ ಹೋರಾಟ ನಡೆಸಲು ತೀರ್ಮಾನ ಮಾಡಲಾಯಿತು.
ಶಿವಮೊಗ್ಗ ನಿರಂತರ ಸಂಘಟನೆಯ ಸಹಯೋಗದಲ್ಲಿ ನಗರವು ಸೇರಿದಂತೆ ವಿವಿದೆಡೆಯಿಂದ ಬಂದ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ಚಳವಳಿಗಾರರ ಅಲೆಮಾರಿಗಳ ಟೆಂಟ್ ಬಳಿ ನಡೆಸಿದ ಸಭೆಯಲ್ಲಿ ಅಲೆಮಾರಿಗಳಿಗೆ ಸೂರು ಒದಗಿಸಲು ಸಂಬಂಧ ಸರ್ಕಾರದ ಮಟ್ಟದಲ್ಲಿ ಕೈಗೊಳ್ಳಬಹುದಾದ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿದರು.
ಕಳೆದ ಹಲವು ವರ್ಷಗಳಿಂದ ನಿರಂತರ ಗೆಳೆಯರ ನೇತೃತ್ವದಲ್ಲಿ ಅಲೆಮಾರಿಗಳಿಗೆ ಸೌಲಭ್ಯ ಕೊಡಿಸಲು ನಡೆಸಿದ ವಿವರಗಳ ಕುರಿತು, ಪಡೆದ ಸೌಲಭ್ಯಗಳ ಕುರಿತ ನೂತನ ಜಿಲ್ಲಾಧಿಕಾರಿಗಳಿಗೆ ಈ ತಕ್ಷಣ ಮನವರಿಕೆ ಮಾಡಿಕೊಡವುದಲ್ಲದೆ ಅಲೆಮಾರಿಗಳಿಗೆ ಜಾತಿ ಪ್ರಮಾಣ ಕೊಡಿಸಿ ಕೋಡುವ ಬಗ್ಗೆ ಡಿಸಿಯವರೊಂದಿಗೆ ಚರ್ಚಿಸಲು ತೀರ್ಮಾನಿಸಲಾಯಿತು.
ರಾಜ್ಯ ಸರ್ಕಾರ ರಚನೆ ಮಾಡಿರುವ ರಾಜ್ಯ ಅಲೆಮಾರಿ ಕೋಶ ಮತ್ತು ಜಿಲ್ಲಾ ಅನುಷ್ಟಾನ ಸಮಿತಿಗೆ ಇಲ್ಲಿನ ಅಲೆಮಾರಿಗಳ ಸ್ಥಿತಿಗತಿಗಳ ಕುರಿತು ವರದಿ ನೀಡಲು ಮತ್ತು ವಾಸ್ತವ ಸ್ಥಿತಿ ಅಧ್ಯಯನಕ್ಕೆ ಸ್ಥಳ ಸಮೀಕ್ಷೆ ನಡೆಸಲು ರಾಜ್ಯ ಅಲೆಮಾರಿ ಕೋಶದ ಅಧಿಕಾರಿಗಳಿಗೆ ಅವರನ್ನು ಸಂಪರ್ಕಿಸಿ ಆಹ್ವಾನ ನೀಡಲು ತೀರ್ಮಾನ ಮಾಡಲಾಯಿತು.
ಅಲೆಮಾರಿ ಸಮುದಾಯದ ಸುನೀತಮ್ಮ ಮಾತನಾಡಿ ನಮಗೆ ಮನೆ ಕಟ್ಟಿಸಿಕೊಡುವುದೇ ಬೇಡ ನಮಗೆ ಟೆಂಟ್ ನಿರ್ಮಿಸಲು ಶಾಶ್ವತವಾದ ಜಾಗ ಸಿಕ್ಕರೆ ಸಾಕು. ನಮಗೆ ಈ ಅಭದ್ರತೆಯ ಜೀವನ ಸಾಕಾಗಿದೆಎಂದು ಬಂದವರಲ್ಲಿ ಮನವಿ ಮಾಡಿದ್ದು ಅಲೆಮಾರಿಗಳ ಅಸಾಹಾಯಕ ಸ್ಥಿತಿಯನ್ನು ತೆರೆದಿಟ್ಟಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ಅನಿಲ್ ಕುಮಾರ್ ಹಲವು ವರ್ಷಗಳಿಂದ ನಿರಂತರ ಗೆಳೆಯರ ಅಲೆಮಾರಿಗಳ ಪರ ಹೋರಾಟ ಮಾಡಿದ್ದಾರೆ ಆದರೆ ಇಂದು ಹಲವು ಚಿರಪರಿಚಿತ ಸಂಗಮವಾಗಿದೆ, ಅದು ನಮ್ಮ ಚಳವಳಿಯ ಯಶಸ್ಸು ಎಂದು ಬಾವಿಸುವೆ. ಕಳೆದ ೨೦ವರ್ಷಗಳಲ್ಲಿ ಈ ಟೆಂಟ್ಗಳಲ್ಲಿ ಮಕ್ಕಳ ಕಳ್ಳತನವಾಗಿದೆ. ಮಕ್ಕಳು, ಬಾಣಂತಿಯರು ಮೃತರಾಗಿದ್ದಾರೆ. ಇವರಿಗೆ ನಾಗರೀಕ ಸೌಲಭ್ಯ ಸಿಗದಿರುವುದು ನಾಗರೀಕ ಸಮಾಜ ತಲೆ ತಗ್ಗಿಸಬೇಕಾದ ಸಂಗತಿ. ಆದರೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸದಿರುವುದು ವಿಷಾದನೀಯ. ಈಗ ನಾವೆಲ್ಲ ಸೇರಿದ್ದೇವೆ. ಇವರಿಗೆ ಕನಿಷ್ಠ ಸೂರು ಒದಗಿಸಲು ನಮ್ಮೊಂದಿಗೆ ಕೈ ಜೋಡಿಸಿ ಎಂದು ಮನವಿ ಮಾಡಿದರು.
ಶೃಂಗೇಶ್ ಮಾತನಾಡಿ ಅಧಿಕಾರಿಗಳನ್ನು ಇದೇ ಸ್ಥಳದಲ್ಲಿ ಕರೆಸಿ ಸಭೆ ನಡೆಸಿದರೆ ಅವರಿಗೆ ವಾಸ್ತವ ಚಿತ್ರಣ ಅರಿವಾಗಲಿದೆ. ಆ ನಿಟ್ಟಿನಲ್ಲಿ ಎಲ್ಲರು ಕಾರ್ಯನ್ಮುಖರಾಗೋಣ ಎಂದರು.
ರಂಗಕರ್ಮಿ ಎಂ ವಿ ಪ್ರತಿಭಾ ಮಾತನಾಡಿ ಇಲ್ಲಿನ ಜನರ ಪರಿಸ್ಥಿತಿ ನೋಡಿದರೆ ನಾಗರೀಕ ಸಮಾಜ ತಲೆ ತಗ್ಗಿಸಬೇಕು. ಎರೆಡೆರಡು ಅಟೆಚ್ಡ್ ಬಾತ್ ರೂಂ ಹೊಂದಿರುವ ಈ ಕಾಲದಲ್ಲಿ ಇಲ್ಲಿನ ಹೆಣ್ಣು ಮಕ್ಕಳ ಶೌಚಾಲಯವಿಲ್ಲ , ಋತು ಚಕ್ರದ ಸಂದರ್ಭವನ್ನು ಹೇಗೆ ನಿಭಾಯಿಸುತ್ತಾರೆ. ಬಸುರಿ ಭಾಣಂತೀಯರ ಹೇಗಿರುತ್ತಾರೆಂದು ಯೋಚಿಸಲು ಸಾಧ್ಯವಾಗದು. ಇವರಿಗೆ ನಾಗರೀಕ ಸೌಲಭ್ಯ ಸಿಗುವವರೆಗೂ ಸಂಘಟನೆ ಪ್ರಯತ್ನ ಮುಂದುವರಿಸೋಣ ಎಂದರು.
ಪ್ರಗತಿಪರ ಹೋರಾಟಗಾರ , ಪತ್ರಕರ್ತ ಹರ್ಷಕುಮಾರ್ ಕುಗ್ವೆ ಅಲೆಮಾರಿಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿ ಸಂಘಟನಾತ್ಮಕ ಹೋರಾಟ ಮಾಡಿ ಈ ಅಲೆಮಾರಿ ಜನಾಂಗದವರಿಗೆ ಮನೆ ಮತ್ತಿತರ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಬೆಕಿದೆ.ಸರ್ಕಾರ ಪ್ರತಿವರ್ಷ ಹಣ ತೆಗೆದಿರಿಸಿದರು ಕ್ರಿಯಾಯೋಜನೆ ಮಾಡಿರಲಿಲ್ಲ. ಇತ್ತೀಚೆಗೆ ಅಲೆಮಾರಿ ಕೋಶದ ಮೂಲಕ ಸೌಲಭ್ಯ ಸಿಗುತ್ತಿವೆ. ಸರ್ಕಾರಗಳೂ ಸ್ಪಂದಿಸಿವೆ. ಆದರೆ ಅಧಿಕಾರಿಗಳ ಮೇಲೆ ಒತ್ತಡ ತರಬೇಕಿದೆ. ಈ ಮೂಲಕ ಅಲೆಮಾರಿಗಳು ಒಳ್ಳೆಯ ಬದುಕು ಕಾಣಲು ನಾಗರಿಕ ಸಮಾಜ ಸಹಕರಿಸಬೇಕಿದೆ ಎಂದರು
ವೃತ್ತಿ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವೈ.ಕೆ. ಸೂರ್ಯನಾರಾಯಣ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಉಪನ್ಯಾಸಕ ಗಾಜನೂರು ಕಿರಣ್, ಭಾಸ್ಕರ ಸಮುದಾಯದ ಕೆ.ಎಲ್.ರಾವ್, ಕುಮುದ, ಕವಯತ್ರಿ ಅಕ್ಷತ, ಇಂದ್ರಾನಾಯಕ್, ವಕೀಲರಾದ ಗೀತಾಬಾಯಿ, ಪೂರ್ಣಿಮ , ಮುಖಂಡರಾದ ಗೌಸ್ ಪೀರ್, ಅಜಿತ್ , ಪ್ರಕಾಶ್ ಮಂಡಘಟ್ಟ, ಧರ್ಮ ಪ್ರಭು, ಮೊದಲಾದವರಿದ್ದರು.
ಉಪನ್ಯಾಸಕ ಮಂಜುನಾಥ್ಸ್ವಾಗತಿಸಿ, ಅನನ್ಯ ಶಿವುವಂದಿಸಿ, ಸುನಿಲ್ಕುಮಾರ್ಶಿರನಲ್ಲಿ ಕಾರ್ಯಕ್ರಮ ನಿರೂಪಿಸಿದರು. ಅಲೆಮಾರಿ ಮಕ್ಕಳು ಭಾವೈಕ್ಯತಾ ಗೀತೆ ಹಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ7 days agoಕವಿತೆ | ದೇವರ ಹೂವು
-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

