ದಿನದ ಸುದ್ದಿ
ಶಿವಮೊಗ್ಗ | ಅಲೆಮಾರಿಗಳಿಗೆ ಶಾಶ್ವತ ಸೂರು ಒದಗಿಸಲು ಹೋರಾಟ
![](https://suddidina.com/wp-content/uploads/2018/08/Shimoga-suddidina2.jpg)
ಸುದ್ದಿದಿನ ಡೆಸ್ಕ್ : ನಗರದ ಸಹ್ಯಾದ್ರಿ ಕಾಲೇಜು ಬಳಿಯಲ್ಲಿ ಟೆಂಟ್ಗಳಲ್ಲಿ ವಾಸ ಮಾಡುತ್ತಿರುವ ಅಲೆಮಾರಿಗಳಿಗೆ ಶಾಶ್ವತ ಸೂರು ಒದಗಿಸಲು ಸಂಘಟನಾತ್ಮಕ ಮತ್ತು ಕಾನೂನಾತ್ಮಕ ಹೋರಾಟ ನಡೆಸಲು ತೀರ್ಮಾನ ಮಾಡಲಾಯಿತು.
ಶಿವಮೊಗ್ಗ ನಿರಂತರ ಸಂಘಟನೆಯ ಸಹಯೋಗದಲ್ಲಿ ನಗರವು ಸೇರಿದಂತೆ ವಿವಿದೆಡೆಯಿಂದ ಬಂದ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ಚಳವಳಿಗಾರರ ಅಲೆಮಾರಿಗಳ ಟೆಂಟ್ ಬಳಿ ನಡೆಸಿದ ಸಭೆಯಲ್ಲಿ ಅಲೆಮಾರಿಗಳಿಗೆ ಸೂರು ಒದಗಿಸಲು ಸಂಬಂಧ ಸರ್ಕಾರದ ಮಟ್ಟದಲ್ಲಿ ಕೈಗೊಳ್ಳಬಹುದಾದ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿದರು.
ಕಳೆದ ಹಲವು ವರ್ಷಗಳಿಂದ ನಿರಂತರ ಗೆಳೆಯರ ನೇತೃತ್ವದಲ್ಲಿ ಅಲೆಮಾರಿಗಳಿಗೆ ಸೌಲಭ್ಯ ಕೊಡಿಸಲು ನಡೆಸಿದ ವಿವರಗಳ ಕುರಿತು, ಪಡೆದ ಸೌಲಭ್ಯಗಳ ಕುರಿತ ನೂತನ ಜಿಲ್ಲಾಧಿಕಾರಿಗಳಿಗೆ ಈ ತಕ್ಷಣ ಮನವರಿಕೆ ಮಾಡಿಕೊಡವುದಲ್ಲದೆ ಅಲೆಮಾರಿಗಳಿಗೆ ಜಾತಿ ಪ್ರಮಾಣ ಕೊಡಿಸಿ ಕೋಡುವ ಬಗ್ಗೆ ಡಿಸಿಯವರೊಂದಿಗೆ ಚರ್ಚಿಸಲು ತೀರ್ಮಾನಿಸಲಾಯಿತು.
ರಾಜ್ಯ ಸರ್ಕಾರ ರಚನೆ ಮಾಡಿರುವ ರಾಜ್ಯ ಅಲೆಮಾರಿ ಕೋಶ ಮತ್ತು ಜಿಲ್ಲಾ ಅನುಷ್ಟಾನ ಸಮಿತಿಗೆ ಇಲ್ಲಿನ ಅಲೆಮಾರಿಗಳ ಸ್ಥಿತಿಗತಿಗಳ ಕುರಿತು ವರದಿ ನೀಡಲು ಮತ್ತು ವಾಸ್ತವ ಸ್ಥಿತಿ ಅಧ್ಯಯನಕ್ಕೆ ಸ್ಥಳ ಸಮೀಕ್ಷೆ ನಡೆಸಲು ರಾಜ್ಯ ಅಲೆಮಾರಿ ಕೋಶದ ಅಧಿಕಾರಿಗಳಿಗೆ ಅವರನ್ನು ಸಂಪರ್ಕಿಸಿ ಆಹ್ವಾನ ನೀಡಲು ತೀರ್ಮಾನ ಮಾಡಲಾಯಿತು.
ಅಲೆಮಾರಿ ಸಮುದಾಯದ ಸುನೀತಮ್ಮ ಮಾತನಾಡಿ ನಮಗೆ ಮನೆ ಕಟ್ಟಿಸಿಕೊಡುವುದೇ ಬೇಡ ನಮಗೆ ಟೆಂಟ್ ನಿರ್ಮಿಸಲು ಶಾಶ್ವತವಾದ ಜಾಗ ಸಿಕ್ಕರೆ ಸಾಕು. ನಮಗೆ ಈ ಅಭದ್ರತೆಯ ಜೀವನ ಸಾಕಾಗಿದೆಎಂದು ಬಂದವರಲ್ಲಿ ಮನವಿ ಮಾಡಿದ್ದು ಅಲೆಮಾರಿಗಳ ಅಸಾಹಾಯಕ ಸ್ಥಿತಿಯನ್ನು ತೆರೆದಿಟ್ಟಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ಅನಿಲ್ ಕುಮಾರ್ ಹಲವು ವರ್ಷಗಳಿಂದ ನಿರಂತರ ಗೆಳೆಯರ ಅಲೆಮಾರಿಗಳ ಪರ ಹೋರಾಟ ಮಾಡಿದ್ದಾರೆ ಆದರೆ ಇಂದು ಹಲವು ಚಿರಪರಿಚಿತ ಸಂಗಮವಾಗಿದೆ, ಅದು ನಮ್ಮ ಚಳವಳಿಯ ಯಶಸ್ಸು ಎಂದು ಬಾವಿಸುವೆ. ಕಳೆದ ೨೦ವರ್ಷಗಳಲ್ಲಿ ಈ ಟೆಂಟ್ಗಳಲ್ಲಿ ಮಕ್ಕಳ ಕಳ್ಳತನವಾಗಿದೆ. ಮಕ್ಕಳು, ಬಾಣಂತಿಯರು ಮೃತರಾಗಿದ್ದಾರೆ. ಇವರಿಗೆ ನಾಗರೀಕ ಸೌಲಭ್ಯ ಸಿಗದಿರುವುದು ನಾಗರೀಕ ಸಮಾಜ ತಲೆ ತಗ್ಗಿಸಬೇಕಾದ ಸಂಗತಿ. ಆದರೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸದಿರುವುದು ವಿಷಾದನೀಯ. ಈಗ ನಾವೆಲ್ಲ ಸೇರಿದ್ದೇವೆ. ಇವರಿಗೆ ಕನಿಷ್ಠ ಸೂರು ಒದಗಿಸಲು ನಮ್ಮೊಂದಿಗೆ ಕೈ ಜೋಡಿಸಿ ಎಂದು ಮನವಿ ಮಾಡಿದರು.
ಶೃಂಗೇಶ್ ಮಾತನಾಡಿ ಅಧಿಕಾರಿಗಳನ್ನು ಇದೇ ಸ್ಥಳದಲ್ಲಿ ಕರೆಸಿ ಸಭೆ ನಡೆಸಿದರೆ ಅವರಿಗೆ ವಾಸ್ತವ ಚಿತ್ರಣ ಅರಿವಾಗಲಿದೆ. ಆ ನಿಟ್ಟಿನಲ್ಲಿ ಎಲ್ಲರು ಕಾರ್ಯನ್ಮುಖರಾಗೋಣ ಎಂದರು.
ರಂಗಕರ್ಮಿ ಎಂ ವಿ ಪ್ರತಿಭಾ ಮಾತನಾಡಿ ಇಲ್ಲಿನ ಜನರ ಪರಿಸ್ಥಿತಿ ನೋಡಿದರೆ ನಾಗರೀಕ ಸಮಾಜ ತಲೆ ತಗ್ಗಿಸಬೇಕು. ಎರೆಡೆರಡು ಅಟೆಚ್ಡ್ ಬಾತ್ ರೂಂ ಹೊಂದಿರುವ ಈ ಕಾಲದಲ್ಲಿ ಇಲ್ಲಿನ ಹೆಣ್ಣು ಮಕ್ಕಳ ಶೌಚಾಲಯವಿಲ್ಲ , ಋತು ಚಕ್ರದ ಸಂದರ್ಭವನ್ನು ಹೇಗೆ ನಿಭಾಯಿಸುತ್ತಾರೆ. ಬಸುರಿ ಭಾಣಂತೀಯರ ಹೇಗಿರುತ್ತಾರೆಂದು ಯೋಚಿಸಲು ಸಾಧ್ಯವಾಗದು. ಇವರಿಗೆ ನಾಗರೀಕ ಸೌಲಭ್ಯ ಸಿಗುವವರೆಗೂ ಸಂಘಟನೆ ಪ್ರಯತ್ನ ಮುಂದುವರಿಸೋಣ ಎಂದರು.
ಪ್ರಗತಿಪರ ಹೋರಾಟಗಾರ , ಪತ್ರಕರ್ತ ಹರ್ಷಕುಮಾರ್ ಕುಗ್ವೆ ಅಲೆಮಾರಿಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿ ಸಂಘಟನಾತ್ಮಕ ಹೋರಾಟ ಮಾಡಿ ಈ ಅಲೆಮಾರಿ ಜನಾಂಗದವರಿಗೆ ಮನೆ ಮತ್ತಿತರ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಬೆಕಿದೆ.ಸರ್ಕಾರ ಪ್ರತಿವರ್ಷ ಹಣ ತೆಗೆದಿರಿಸಿದರು ಕ್ರಿಯಾಯೋಜನೆ ಮಾಡಿರಲಿಲ್ಲ. ಇತ್ತೀಚೆಗೆ ಅಲೆಮಾರಿ ಕೋಶದ ಮೂಲಕ ಸೌಲಭ್ಯ ಸಿಗುತ್ತಿವೆ. ಸರ್ಕಾರಗಳೂ ಸ್ಪಂದಿಸಿವೆ. ಆದರೆ ಅಧಿಕಾರಿಗಳ ಮೇಲೆ ಒತ್ತಡ ತರಬೇಕಿದೆ. ಈ ಮೂಲಕ ಅಲೆಮಾರಿಗಳು ಒಳ್ಳೆಯ ಬದುಕು ಕಾಣಲು ನಾಗರಿಕ ಸಮಾಜ ಸಹಕರಿಸಬೇಕಿದೆ ಎಂದರು
ವೃತ್ತಿ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವೈ.ಕೆ. ಸೂರ್ಯನಾರಾಯಣ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಉಪನ್ಯಾಸಕ ಗಾಜನೂರು ಕಿರಣ್, ಭಾಸ್ಕರ ಸಮುದಾಯದ ಕೆ.ಎಲ್.ರಾವ್, ಕುಮುದ, ಕವಯತ್ರಿ ಅಕ್ಷತ, ಇಂದ್ರಾನಾಯಕ್, ವಕೀಲರಾದ ಗೀತಾಬಾಯಿ, ಪೂರ್ಣಿಮ , ಮುಖಂಡರಾದ ಗೌಸ್ ಪೀರ್, ಅಜಿತ್ , ಪ್ರಕಾಶ್ ಮಂಡಘಟ್ಟ, ಧರ್ಮ ಪ್ರಭು, ಮೊದಲಾದವರಿದ್ದರು.
ಉಪನ್ಯಾಸಕ ಮಂಜುನಾಥ್ಸ್ವಾಗತಿಸಿ, ಅನನ್ಯ ಶಿವುವಂದಿಸಿ, ಸುನಿಲ್ಕುಮಾರ್ಶಿರನಲ್ಲಿ ಕಾರ್ಯಕ್ರಮ ನಿರೂಪಿಸಿದರು. ಅಲೆಮಾರಿ ಮಕ್ಕಳು ಭಾವೈಕ್ಯತಾ ಗೀತೆ ಹಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!