Connect with us

ದಿನದ ಸುದ್ದಿ

ಶಿವಮೊಗ್ಗ | ಅಲೆಮಾರಿಗಳಿಗೆ ಶಾಶ್ವತ ಸೂರು ಒದಗಿಸಲು ಹೋರಾಟ

Published

on

ಸುದ್ದಿದಿನ ಡೆಸ್ಕ್ : ನಗರದ ಸಹ್ಯಾದ್ರಿ ಕಾಲೇಜು ಬಳಿಯಲ್ಲಿ ಟೆಂಟ್‌ಗಳಲ್ಲಿ ವಾಸ ಮಾಡುತ್ತಿರುವ ಅಲೆಮಾರಿಗಳಿಗೆ ಶಾಶ್ವತ ಸೂರು ಒದಗಿಸಲು ಸಂಘಟನಾತ್ಮಕ ಮತ್ತು ಕಾನೂನಾತ್ಮಕ ಹೋರಾಟ ನಡೆಸಲು ತೀರ್ಮಾನ ಮಾಡಲಾಯಿತು.

ಶಿವಮೊಗ್ಗ ನಿರಂತರ ಸಂಘಟನೆಯ ಸಹಯೋಗದಲ್ಲಿ ನಗರವು ಸೇರಿದಂತೆ ವಿವಿದೆಡೆಯಿಂದ ಬಂದ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ಚಳವಳಿಗಾರರ ಅಲೆಮಾರಿಗಳ ಟೆಂಟ್ ಬಳಿ ನಡೆಸಿದ ಸಭೆಯಲ್ಲಿ ಅಲೆಮಾರಿಗಳಿಗೆ ಸೂರು ಒದಗಿಸಲು ಸಂಬಂಧ ಸರ್ಕಾರದ ಮಟ್ಟದಲ್ಲಿ ಕೈಗೊಳ್ಳಬಹುದಾದ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸಿದರು.

ಕಳೆದ ಹಲವು ವರ್ಷಗಳಿಂದ ನಿರಂತರ ಗೆಳೆಯರ ನೇತೃತ್ವದಲ್ಲಿ ಅಲೆಮಾರಿಗಳಿಗೆ ಸೌಲಭ್ಯ ಕೊಡಿಸಲು ನಡೆಸಿದ ವಿವರಗಳ ಕುರಿತು, ಪಡೆದ ಸೌಲಭ್ಯಗಳ ಕುರಿತ ನೂತನ ಜಿಲ್ಲಾಧಿಕಾರಿಗಳಿಗೆ ಈ ತಕ್ಷಣ ಮನವರಿಕೆ ಮಾಡಿಕೊಡವುದಲ್ಲದೆ ಅಲೆಮಾರಿಗಳಿಗೆ ಜಾತಿ ಪ್ರಮಾಣ ಕೊಡಿಸಿ ಕೋಡುವ ಬಗ್ಗೆ ಡಿಸಿಯವರೊಂದಿಗೆ ಚರ್ಚಿಸಲು ತೀರ್ಮಾನಿಸಲಾಯಿತು.

ರಾಜ್ಯ ಸರ್ಕಾರ ರಚನೆ ಮಾಡಿರುವ ರಾಜ್ಯ ಅಲೆಮಾರಿ ಕೋಶ ಮತ್ತು ಜಿಲ್ಲಾ ಅನುಷ್ಟಾನ ಸಮಿತಿಗೆ ಇಲ್ಲಿನ ಅಲೆಮಾರಿಗಳ ಸ್ಥಿತಿಗತಿಗಳ ಕುರಿತು ವರದಿ ನೀಡಲು ಮತ್ತು ವಾಸ್ತವ ಸ್ಥಿತಿ ಅಧ್ಯಯನಕ್ಕೆ ಸ್ಥಳ ಸಮೀಕ್ಷೆ ನಡೆಸಲು ರಾಜ್ಯ ಅಲೆಮಾರಿ ಕೋಶದ ಅಧಿಕಾರಿಗಳಿಗೆ ಅವರನ್ನು ಸಂಪರ್ಕಿಸಿ ಆಹ್ವಾನ ನೀಡಲು ತೀರ್ಮಾನ ಮಾಡಲಾಯಿತು.

ಅಲೆಮಾರಿ ಸಮುದಾಯದ ಸುನೀತಮ್ಮ ಮಾತನಾಡಿ ನಮಗೆ ಮನೆ ಕಟ್ಟಿಸಿಕೊಡುವುದೇ ಬೇಡ ನಮಗೆ ಟೆಂಟ್ ನಿರ್ಮಿಸಲು ಶಾಶ್ವತವಾದ ಜಾಗ ಸಿಕ್ಕರೆ ಸಾಕು. ನಮಗೆ ಈ ಅಭದ್ರತೆಯ ಜೀವನ ಸಾಕಾಗಿದೆಎಂದು ಬಂದವರಲ್ಲಿ ಮನವಿ ಮಾಡಿದ್ದು ಅಲೆಮಾರಿಗಳ ಅಸಾಹಾಯಕ ಸ್ಥಿತಿಯನ್ನು ತೆರೆದಿಟ್ಟಿತು.

ಪ್ರಾಸ್ತಾವಿಕವಾಗಿ ಮಾತನಾಡಿದ ಅನಿಲ್ ಕುಮಾರ್ ಹಲವು ವರ್ಷಗಳಿಂದ ನಿರಂತರ ಗೆಳೆಯರ ಅಲೆಮಾರಿಗಳ ಪರ ಹೋರಾಟ ಮಾಡಿದ್ದಾರೆ ಆದರೆ ಇಂದು ಹಲವು ಚಿರಪರಿಚಿತ ಸಂಗಮವಾಗಿದೆ, ಅದು ನಮ್ಮ ಚಳವಳಿಯ ಯಶಸ್ಸು ಎಂದು ಬಾವಿಸುವೆ. ಕಳೆದ ೨೦ವರ್ಷಗಳಲ್ಲಿ ಈ ಟೆಂಟ್‌ಗಳಲ್ಲಿ ಮಕ್ಕಳ ಕಳ್ಳತನವಾಗಿದೆ. ಮಕ್ಕಳು, ಬಾಣಂತಿಯರು ಮೃತರಾಗಿದ್ದಾರೆ. ಇವರಿಗೆ ನಾಗರೀಕ ಸೌಲಭ್ಯ ಸಿಗದಿರುವುದು ನಾಗರೀಕ ಸಮಾಜ ತಲೆ ತಗ್ಗಿಸಬೇಕಾದ ಸಂಗತಿ. ಆದರೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸದಿರುವುದು ವಿಷಾದನೀಯ. ಈಗ ನಾವೆಲ್ಲ ಸೇರಿದ್ದೇವೆ. ಇವರಿಗೆ ಕನಿಷ್ಠ ಸೂರು ಒದಗಿಸಲು ನಮ್ಮೊಂದಿಗೆ ಕೈ ಜೋಡಿಸಿ ಎಂದು ಮನವಿ ಮಾಡಿದರು.

ಶೃಂಗೇಶ್ ಮಾತನಾಡಿ ಅಧಿಕಾರಿಗಳನ್ನು ಇದೇ ಸ್ಥಳದಲ್ಲಿ ಕರೆಸಿ ಸಭೆ ನಡೆಸಿದರೆ ಅವರಿಗೆ ವಾಸ್ತವ ಚಿತ್ರಣ ಅರಿವಾಗಲಿದೆ. ಆ ನಿಟ್ಟಿನಲ್ಲಿ ಎಲ್ಲರು ಕಾರ್ಯನ್ಮುಖರಾಗೋಣ ಎಂದರು.

ರಂಗಕರ್ಮಿ ಎಂ ವಿ ಪ್ರತಿಭಾ ಮಾತನಾಡಿ ಇಲ್ಲಿನ ಜನರ ಪರಿಸ್ಥಿತಿ ನೋಡಿದರೆ ನಾಗರೀಕ ಸಮಾಜ ತಲೆ ತಗ್ಗಿಸಬೇಕು. ಎರೆಡೆರಡು ಅಟೆಚ್ಡ್ ಬಾತ್ ರೂಂ ಹೊಂದಿರುವ ಈ ಕಾಲದಲ್ಲಿ ಇಲ್ಲಿನ ಹೆಣ್ಣು ಮಕ್ಕಳ ಶೌಚಾಲಯವಿಲ್ಲ , ಋತು ಚಕ್ರದ ಸಂದರ್ಭವನ್ನು ಹೇಗೆ ನಿಭಾಯಿಸುತ್ತಾರೆ. ಬಸುರಿ ಭಾಣಂತೀಯರ ಹೇಗಿರುತ್ತಾರೆಂದು ಯೋಚಿಸಲು ಸಾಧ್ಯವಾಗದು. ಇವರಿಗೆ ನಾಗರೀಕ ಸೌಲಭ್ಯ ಸಿಗುವವರೆಗೂ ಸಂಘಟನೆ ಪ್ರಯತ್ನ ಮುಂದುವರಿಸೋಣ ಎಂದರು.

ಪ್ರಗತಿಪರ ಹೋರಾಟಗಾರ , ಪತ್ರಕರ್ತ ಹರ್ಷಕುಮಾರ್ ಕುಗ್ವೆ ಅಲೆಮಾರಿಗಳಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿ ಸಂಘಟನಾತ್ಮಕ ಹೋರಾಟ ಮಾಡಿ ಈ ಅಲೆಮಾರಿ ಜನಾಂಗದವರಿಗೆ ಮನೆ ಮತ್ತಿತರ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಬೆಕಿದೆ.ಸರ್ಕಾರ ಪ್ರತಿವರ್ಷ ಹಣ ತೆಗೆದಿರಿಸಿದರು ಕ್ರಿಯಾಯೋಜನೆ ಮಾಡಿರಲಿಲ್ಲ. ಇತ್ತೀಚೆಗೆ ಅಲೆಮಾರಿ ಕೋಶದ ಮೂಲಕ ಸೌಲಭ್ಯ ಸಿಗುತ್ತಿವೆ. ಸರ್ಕಾರಗಳೂ ಸ್ಪಂದಿಸಿವೆ. ಆದರೆ ಅಧಿಕಾರಿಗಳ ಮೇಲೆ ಒತ್ತಡ ತರಬೇಕಿದೆ. ಈ ಮೂಲಕ ಅಲೆಮಾರಿಗಳು ಒಳ್ಳೆಯ ಬದುಕು ಕಾಣಲು ನಾಗರಿಕ ಸಮಾಜ ಸಹಕರಿಸಬೇಕಿದೆ ಎಂದರು

ವೃತ್ತಿ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವೈ.ಕೆ. ಸೂರ್ಯನಾರಾಯಣ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಉಪನ್ಯಾಸಕ ಗಾಜನೂರು ಕಿರಣ್, ಭಾಸ್ಕರ ಸಮುದಾಯದ ಕೆ.ಎಲ್.ರಾವ್, ಕುಮುದ, ಕವಯತ್ರಿ ಅಕ್ಷತ, ಇಂದ್ರಾನಾಯಕ್, ವಕೀಲರಾದ ಗೀತಾಬಾಯಿ, ಪೂರ್ಣಿಮ , ಮುಖಂಡರಾದ ಗೌಸ್ ಪೀರ್, ಅಜಿತ್ , ಪ್ರಕಾಶ್ ಮಂಡಘಟ್ಟ, ಧರ್ಮ ಪ್ರಭು, ಮೊದಲಾದವರಿದ್ದರು.

ಉಪನ್ಯಾಸಕ ಮಂಜುನಾಥ್‌ಸ್ವಾಗತಿಸಿ, ಅನನ್ಯ ಶಿವುವಂದಿಸಿ, ಸುನಿಲ್‌ಕುಮಾರ್‌ಶಿರನಲ್ಲಿ ಕಾರ್ಯಕ್ರಮ ನಿರೂಪಿಸಿದರು. ಅಲೆಮಾರಿ ಮಕ್ಕಳು ಭಾವೈಕ್ಯತಾ ಗೀತೆ ಹಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

Published

on

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.

ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್‌ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

Published

on

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ7 days ago

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ...

ದಿನದ ಸುದ್ದಿ1 week ago

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ...

ದಿನದ ಸುದ್ದಿ1 week ago

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ...

ದಿನದ ಸುದ್ದಿ1 week ago

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್

ಸುದ್ದಿದಿನ, ಬೆಂಗಳೂರು : ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡ ಹಾಗೂ ವಿವಿಧ ರೈತಪರ ಸಂಘಟನೆಗಳು ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಬಂದ್‌ಗೆ ಕರೆಕೊಟ್ಟಿವೆ....

ದಿನದ ಸುದ್ದಿ3 weeks ago

ಪರಿಸರ ಗಣೇಶ ಚತುರ್ಥಿ ಆಚರಣೆ | ಪಿಓಪಿ ಮೂರ್ತಿ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಡಾ. ವೆಂಕಟೇಶ್

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು ಮಣ್ಣಿನಲ್ಲಿ ಮಾಡಿದ ಹಾಗೂ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡುವ ಮೂಲಕ ಪರಿಸರ...

ದಿನದ ಸುದ್ದಿ3 weeks ago

ಸೆ. 14 ರಿಂದ 21 ರವರೆಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಜಿಲ್ಲೆಯ ಆರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಆಯೋಜಿಸಲಾಗಿದೆ. ಸೆಪ್ಟೆಂಬರ್ 14 ರಂದು ಹರಿಹರ ತಾಲ್ಲೂಕಿಗೆ ಸಂಬಂಧಿಸಿದಂತೆ ರಾಜನಹಳ್ಳಿಯ ಶ್ರೀ...

ದಿನದ ಸುದ್ದಿ3 weeks ago

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ...

ದಿನದ ಸುದ್ದಿ4 weeks ago

ರೈತರಿಗೆ ಬಾಕಿ ಇದ್ದ ಪರಿಹಾರ ಹಣ ಬಿಡುಗಡೆ

ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ...

ದಿನದ ಸುದ್ದಿ4 weeks ago

ನಾಡಿನ ಹಲವು ಕ್ಷೇತ್ರಗಳಿಗೆ ತರಳಬಾಳು ಹಿರಿಯ ಶ್ರೀಗಳ ಕೊಡುಗೆ ಅಪಾರ: ಡಾ. ನಾ ಲೋಕೇಶ ಒಡೆಯರ್

ಸುದ್ದಿದಿನ,ದಾವಣಗೆರೆ : ಹಿರಿಯ ಶ್ರೀ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳುವರು ಕಟ್ಟಿ ಬೆಳಸಿದ ಸಂಸ್ಥೆ ಮತ್ತು ತಮ್ಮ ಆದರ್ಶ ವ್ಯಕ್ತಿತ್ವದ ಮೂಲಕ ಪೂಜ್ಯರು ಇಂದಿಗೂ ಎಂದೆಂದಿಗೂ...

ದಿನದ ಸುದ್ದಿ4 weeks ago

ಪರಿಶಿಷ್ಟ ಸಮುದಾಯಗಳ ಮೇಲೆ ಜಾತಿ ದೌರ್ಜನ್ಯ ಪ್ರಕರಣ; ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಸುದ್ದಿದಿನ,ಬೆಂಗಳೂರು : ಪರಿಶಿಷ್ಟ ಸಮುದಾಯಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ತಗ್ಗಿಸುವುದರ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್, ಕಾನೂನು, ಸಮಾಜ ಕಲ್ಯಾಣ ಸೇರಿದಂತೆ...

Trending