ದಿನದ ಸುದ್ದಿ
ಜನಪರ ಮತ್ತು ಕ್ರಿಯಾತ್ಮಕವಾಗಿ ಪತ್ರಿಕೋದ್ಯಮ ಕಾರ್ಯ ನಿರ್ವಹಿಸಬೇಕು : ಕೆ.ವಿ.ಪ್ರಭಾಕರ್

ಸುದ್ದಿದಿನ,ಶಿವಮೊಗ್ಗ:ಜನರಿಗೆ ಏನು ಬೇಕೋ ಅಂತಹ ಸುದ್ದಿಗಳನ್ನು ನೀಡಬೇಕು. ಜನಪರವಾಗಿ ಹಾಗೂ ಕ್ರಿಯಾತ್ಮಕವಾಗಿ ಪತ್ರಿಕೋದ್ಯಮ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ಸರ್ಕಾರಿ ನೌಕರರ ಭವನದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಶಿವಮೊಗ್ಗ ಜಿಲ್ಲೆ ಕಾಗೋಡು, ಗೇಣಿ, ದಲಿತ, ಸ್ವಾತಂತ್ರö್ಯ ಮುಂತಾದ ಹೋರಾಟಗಳ ತವರು. ಜಿಲ್ಲೆಯ ಪತ್ರಕರ್ತರು ರಾಜ್ಯ ಮಟ್ಟದಲ್ಲಿ ಮಿಂಚುತ್ತಿದ್ದಾರೆ.
ಇತ್ತೀಚಿನ ದಿನಮಾನದಲ್ಲಿ ಬರವಣಿಗೆ ನಶಿಸುತ್ತಿದೆ. ಕ್ರಿಯಾತ್ಮಕತೆ ದಿನೇ ದಿನೇ ಕ್ಷೀಣಿಸುತ್ತಿದೆ. ಸುದ್ದಿಗಳಲ್ಲಿ ಸಮಾಜ ಪರತೆ ಕಡಿಮೆ ಆಗಿದೆ. ವೈಭವೀಕರಣ ಮತ್ತು ಪೀತ ಪತ್ರಿಕೋದ್ಯಮ ಹೆಚ್ಚುತ್ತಿದೆ. ಈ ಕುರಿತು ಪತ್ರಕರ್ತರು ಹಾಗೂ ವಿದ್ಯಾರ್ಥಿಗಳು ಚಿಂತನೆ ನಡೆಸಬೇಕು. ನಾವು ಯಾವ ರೀತಿಯ ಸುದ್ದಿಗಳನ್ನು ನೀಡಬೇಕೆಂದು ಆಲೋಚಿಸಿ, ಜನ ಮತ್ತು ಸಮಾಜಪರವಾಗಿ ಕೆಲಸ ಮಾಡುವ ತುರ್ತು ಇದೆ ಎಂದರು.
ಗ್ರಾಮೀಣ ಭಾಗದ ಪತ್ರಕರ್ತರ ಬಹುದಿನದ ಬೇಡಿಕೆಯಾಗಿದ್ದ ಉಚಿತ ಬಸ್ ಪಾಸ್ ಯೋಜನೆ ಶೀಘ್ರದಲ್ಲೇ ಜಾರಿಯಾಗಲಿದೆ. ಪತ್ರಕರ್ತರ ವೈದ್ಯಕೀಯ ಸಂಕಷ್ಟ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಶೀಘ್ರದಲ್ಲೇ ಆರೋಗ್ಯ ವಿಮೆ ಜಾರಿಗೆ ತರಲಿದ್ದು ಇದಕ್ಕೆ ಸುಮಾರು ರೂ.10 ಕೋಟಿ ಅವಶ್ಯಕತೆ ಇದೆ. ವಿಮೆ ಕುರಿತಾದ ಮಾರ್ಗಸೂಚಿಗಳನ್ನು ಸಿದ್ದಪಡಸಲಾಗುತ್ತಿದೆ ಎಂದ ಅವರು ಸದಾ ಸಮಾಜದ ಕುರಿತು ಚಿಂತನೆ ಮಾಡುವ ಪತ್ರಕರ್ತರು ತಮ್ಮ ಕುಟುಂಬದ ಬಗ್ಗೆಗೂ ಹೆಚ್ಚಿನ ಕಾಳಜಿ ವಹಿಸಬೇಕೆಂದು ಕಿವಿ ಮಾತು ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಮಾತನಾಡಿ, ಸಂಘ ಪತ್ರಕರ್ತರ ಸ್ನೇಹಿಯಾಗಿ ಕೆಲಸ ಮಾಡುತ್ತಿದೆ. ಸಂಕಷ್ಟದಲ್ಲಿರುವ ಪತ್ರಕರ್ತರಿಗೆ ನೆರವು ನೀಡುತ್ತಾ ಬಂದಿದೆ. ಪತ್ರಕರ್ತರ ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತಿದೆ. ನಿವೃತ್ತ ಪತ್ರಕರ್ತರಿಗೆ ಮಾಸಾಶನ ನೀಡಲಾಗುತ್ತಿದೆ. ಗ್ರಾಮೀಣ ಬಸ್ ಪಾಸ್ ಯೋಜನೆಗೆ ಅನುಮೋದನೆ ದೊರೆತಿದ್ದು, ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾಧ್ಯಮ ಸಲಹೆಗಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ.
ಪ್ರಸ್ತುತ ಪತ್ರಿಕೋದ್ಯಮದಲ್ಲಿನ ಜೊಳ್ಳು ತೆಗೆಯುವ ಸಂಕ್ರಮಣದ ಕಾಲಘಟ್ಟದಲ್ಲಿ ನಾವಿದ್ದೇವೆ. ಸಾಮಾಜಿಕ ಮಾಧ್ಯಮಗಳ ಭರಾಟೆ ಹೆಚ್ಚಿದ್ದು, ಶೇ.30 ರಷ್ಟು ಮಾತ್ರ ವಿಶ್ವಾಸಾರ್ಹತೆ ಇದು ಹೊಂದಿದೆ. ವಿದ್ಯುನ್ಮಾನ ಮಾಧ್ಯಮ ಶೇ.50 ಮತ್ತು ಮುದ್ರಣ ಮಾಧ್ಯಮ ಶೇ.63 ವಿಶ್ವಾಸಾರ್ಹತೆ ಹೊಂದಿದ್ದು, ಮುದ್ರಣ ಮಾಧ್ಯಮ ಜನರ ವಿಶ್ವಾಸಕ್ಕೆ ಪಾತ್ರವಾಗಿದ್ದ, ವಿಶ್ವಾಸಾರ್ಹತೆಯನ್ನು ಪತ್ರಕರ್ತರೇ ಉತ್ತಮ ಸುದ್ದಿಗಳನ್ನು ನೀಡುವ ಮೂಲಕ ಸಂಪಾದನೆ ಮಾಡಬೇಕೆಂದರು.
ಶಿವಮೊಗ್ಗ ಪ್ರೆಸ್ ಟ್ರಸ್ಟ್ ಅಧ್ಯಕ್ಷರಾದ ಎನ್ ಮಂಜುನಾಥ್ ಮಾತನಾಡಿ, ಆಂಧ್ರ ಪ್ರದೇಶ ಮಾದರಿಯಲ್ಲಿ ಎಲ್ಲ ಪತ್ರಕರ್ತರಿಗೆ ಆರೋಗ್ಯ ಸವಲತ್ತುಗಳು ದೊರಕುವಂತಾಗಬೇಕು. ಪತ್ರಕರ್ತರ ಕ್ಷೇಮ ನಿಧಿ ಒಂದು ಸಮಿತಿ ರಚನೆಯಾಗಬೇಕು. ನಿವೃತ್ತಿ ನಂತರ ಆರೋಗ್ಯ ವಿಮೆಯಂತಹ ಸೌಲಭ್ಯ ನೀಡಬೇಕು. ಪತ್ರಿಕೋದ್ಯಮ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು ಪತ್ರಕರ್ತರನ್ನು ಪ್ರೋತ್ಸಾಹಿಸುವ ಕೆಲಸ ಆಗಬೇಕು. ಸಣ್ಣ ಮತ್ತು ಮಧ್ಯಮ ಪತ್ರಿಕೆಗಳು ಉಳಿಯಬೇಕು ಎಂದರು.
ಹಿರಿಯ ಪತ್ರಕರ್ತರಾದ ಗೋಪಾಲ್ ಎಸ್ ಯಡಗೆರೆ ಮಾತನಾಡಿ, ಇತ್ತೀಚೆಗೆ ಪತ್ರಿಕೋದ್ಯಮಿಗಳು ಹಣಕಾಸು ನಿರ್ವಹಣೆ ತಿಳಿಯದೆ ಸಂಕಷ್ಟಗಳನ್ನು ಎದುರುಸುತ್ತಿರುವುದನ್ನು ಕಾಣುತ್ತಿದ್ದೇವೆ. ನೈತಿಕ ಮೌಲ್ಯವನ್ನು ಅಳವಡಿಸಿಕೊಳ್ಳಬೇಕು. ಹಣಕಾಸು ನಿರ್ವಹಣೆ ಮತ್ತು ನೈತಿಕ ಮೌಲ್ಯಗಳ ಅಳವಡಿಕೆ ಬಗ್ಗೆ ತರಬೇತಿ ನೀಡುವಂತಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಕೆ.ವಿ.ಶಿವಕುಮಾರ್ ಮಾತನಾಡಿ, ಮಾಧ್ಯಮ ಸ್ವಾತಂತ್ರ್ಯ ಪೂರ್ವದಿಂದಲೂ ಕಾಲಕ್ಕೆ ತಕ್ಕಂತೆ ಬೆಳೆಯುತ್ತಾ ಬಂದಿದ್ದು, ಪತ್ರಿಕೋದ್ಯಮ ಅತ್ಯಂತ ಶಕ್ತಿಶಾಲಿ ಮಾಧ್ಯಮವಾಗಿದೆ. ಪ್ರಸ್ತುತ ಜನರ ವಿಶ್ವಾಸ ಕೆಳೆದುಕೊಳ್ಳುವಂತಹ ಕೆಲ ಬೆಳವಣಿಗೆ ಆಗುತ್ತಿದ್ದು, ಇದು ಬದಲಾಗಬೇಕು ಎಂದರು. ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಸೌಲಭ್ಯವನ್ನು ರಾಜ್ಯ ಮಟ್ಟಕ್ಕೆ ವಿಸ್ತರಿಸಬೇಕೆಂದು ಕೋರಿದರು.
ಇದೇ ಸಂದರ್ಭದಲ್ಲಿ ಎಸ್ಎಸ್ಎಸ್ಎಲ್ ಮತ್ತು ಪಿಯುಸಿಯಲ್ಲಿ ಶೇ.95 ಕ್ಕಿಂತ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳನ್ನು ಅಭಿನಂದಿಸಲಾಯಿತು.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿ, ಏಷ್ಯನ್ ಮೀಡಿಯಾ ಕಲ್ಚರಲ್ ಅಸೋಸಿಯೇಷನ್ನ ಭಾರತದ ಸಂಚಾಲಕ ಹೆಚ್.ಬಿ.ಮದನಗೌಡ, ಮುಖ್ಯಮಂತ್ರಿ ಮಾಧ್ಯಮ ಸಂಯೋಜಕ ಗಿರೀಶ್ ಕೋಟೆ ಮಾತನಾಡಿದರು.
ವೇದಿಕೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎನ್.ರವಿಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಮಾರುತಿ ಆರ್, ರಾಷ್ಟೀಯ ಮಂಡಳಿ ಸದಸ್ಯರಾದ ಬಂಡಿಗಡಿ ನಂಜುಂಡಪ್ಪ, ಪತ್ರಿಕರ್ತರ ಸಂಘದ ಪದಾಧಿಕಾರಿಗಳು, ಪತ್ರಕರ್ತರು, ವಿದ್ಯಾರ್ಥಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೇ 22 | ಇಂದಿನ ಅಡಿಕೆ ದರ

ಇಂದು, ಮೇ 22, 2025 ರಂದು ಕರ್ನಾಟಕದ ವಿವಿಧ ಮಾರುಕಟ್ಟೆಗಳಲ್ಲಿ ಅಡಿಕೆ ದರಗಳು ಹೀಗಿವೆ (ಪ್ರತಿ ಕ್ವಿಂಟಾಲ್ಗೆ ರೂಪಾಯಿಗಳಲ್ಲಿ):
ಶಿವಮೊಗ್ಗ ಮಾರುಕಟ್ಟೆ:
ರಾಶಿ: ₹48,169 (ಕನಿಷ್ಠ) – ₹58,099 (ಗರಿಷ್ಠ), ಮೋಡಲ್ ಬೆಲೆ: ₹55,869
ಸರಕು: ₹60,399 (ಕನಿಷ್ಠ) – ₹92,510 (ಗರಿಷ್ಠ), ಮೋಡಲ್ ಬೆಲೆ: ₹77,009
ಬೆಟ್ಟೆ: ₹51,319 (ಕನಿಷ್ಠ) – ₹58,219 (ಗರಿಷ್ಠ), ಮೋಡಲ್ ಬೆಲೆ: ₹57,989
ಗೊರಬಲು: ₹15,499 (ಕನಿಷ್ಠ) – ₹30,699 (ಗರಿಷ್ಠ), ಮೋಡಲ್ ಬೆಲೆ: ₹28,429
ಚನ್ನಗಿರಿ ಮಾರುಕಟ್ಟೆ (ದಾವಣಗೆರೆ):
ರಾಶಿ: ₹41,199 (ಕನಿಷ್ಠ) – ₹59,312 (ಗರಿಷ್ಠ), ಮೋಡಲ್ ಬೆಲೆ: ₹57,767
ಸಾಗರ ಮಾರುಕಟ್ಟೆ (ಶಿವಮೊಗ್ಗ):
ಚಾಲಿ: ₹35,699 (ಕನಿಷ್ಠ) – ₹37,141 (ಗರಿಷ್ಠ), ಮೋಡಲ್ ಬೆಲೆ: ₹36,699
ಬಿಳೆಗೋಟು: ₹21,611 (ಕನಿಷ್ಠ) – ₹25,587 (ಗರಿಷ್ಠ), ಮೋಡಲ್ ಬೆಲೆ: ₹24,111
ಕೆಂಪುಗೋಟು: ₹17,599 (ಕನಿಷ್ಠ) – ₹27,499 (ಗರಿಷ್ಠ), ಮೋಡಲ್ ಬೆಲೆ: ₹24,919
ರಾಶಿ: ₹22,899 (ಕನಿಷ್ಠ) – ₹57,470 (ಗರಿಷ್ಠ), ಮೋಡಲ್ ಬೆಲೆ: ₹56,621
ಕುಮಟಾ ಮಾರುಕಟ್ಟೆ (ಉತ್ತರ ಕನ್ನಡ):
ಚಿಪ್ಪು: ₹11,199 (ಕನಿಷ್ಠ) – ₹26,919 (ಗರಿಷ್ಠ), ಮೋಡಲ್ ಬೆಲೆ: ₹24,549
ಕೋಕಾ: ₹6,899 (ಕನಿಷ್ಠ) – ₹22,189 (ಗರಿಷ್ಠ), ಮೋಡಲ್ ಬೆಲೆ: ₹20,429
ಹಣ್ಣು: ₹32,589 (ಕನಿಷ್ಠ) – ₹42,500 (ಗರಿಷ್ಠ), ಮೋಡಲ್ ಬೆಲೆ: ₹39,729
ಚಿತ್ರದುರ್ಗ ಮಾರುಕಟ್ಟೆ:
ರಾಶಿ: ₹52,449 (ಕನಿಷ್ಠ) – ₹52,899 (ಗರಿಷ್ಠ), ಮೋಡಲ್ ಬೆಲೆ: ₹52,679
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾದಕ ವ್ಯಸನಿಗಳು ಸಮಾಜಘಾತುಕ ವ್ಯಕ್ತಿಗಳು : ಹಿರಿಯ ಸಿವಿಲ್ ನ್ಯಾಯಾಧೀಶ ಮಹಾವೀರ ಮ.ಕರೆಣ್ಣವರ

ಸುದ್ದಿದಿನ,ದಾವಣಗೆರೆ:ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವಕ – ಯುವತಿಯರೇ ಹೆಚ್ಚಿನ ಸಂಖ್ಯೆಯಲ್ಲಿ ಗಾಂಜಾ, ಹಫೀಮು, ಬೌನ್ಶುಗರ್, ಕೋಕೆನ್, ನಿಕೋಟಿನ್ನಂತಹ ಮಾದಕ ವಸ್ತುಗಳಿಗೆ ದಾಸರಾಗುತ್ತಿದ್ದಾರೆ. ಇವರೆಲ್ಲಾ ಸಮಾಜಘಾತುಕ ವ್ಯಕ್ತಿಗಳು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನೆರಳು ಬೀಡಿ ಕಾರ್ಮಿಕರ ಯೂನಿಯನ್ ಇವರ ಸಂಯುಕ್ತಶ್ರಯದಲ್ಲಿ ಗುರುವಾರ ನಗರದ ಭಾಷಾ ನಗರದಲ್ಲಿನ ನಗರ ಆರೋಗ್ಯ ಕೇಂದ್ರ (ಪ್ರಸೂತಿ ಆರೋಗ್ಯ ಕೇಂದ್ರ) ದಲ್ಲಿ ಆಯೋಜಿಸಲಾಗಿದ್ದ “ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005 ಮತ್ತು ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆ” ಕುರಿತು ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾರ್ವಜನಿಕವಾಗಿ ಮಾದಕ ವಸ್ತುಗಳ ಸೇವನೆ, ಮಾರಾಟ, ಸಾಗಾಣೆ ಇಂತಹ ಪ್ರಕರಣಗಳು ಕಂಡುಬAದಲ್ಲಿ ಆಲಸ್ಯ ಮಾಡದೇ ಸಂಬAಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು. ಮಾದಕ ವ್ಯಸನಗಳಿಗೆ ದಾಸರಾಗುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಗಾಢವಾದ ಪರಿಣಾಮ ಬೀರುತ್ತದೆ. ಅಲ್ಲದೇ ಪುರುಷತ್ವ ಮತ್ತು ಲೈಂಗಿಕತೆಯನ್ನು ಕುಂದಿಸುತ್ತದೆ. ಮಾದಕ ವ್ಯಸನಗಳಿಂದ ವಿವಿ ರೀತಿಯ ಕೃತ್ಯಗಳ್ಲಲಿ ಭಾಗಿಯಾಗಿ ಶಿಕ್ಷೆಗೆ ಗುರಿಯಾಗುವುದಲ್ಲದೇ ಕುಟುಂಬಗಳು ಬೀದಿಗೆ ಬರುತ್ತವೆ. ಆದ್ದರಿಂದ ವ್ಯಸನಮುಕ್ತರಾಗಿ ಸಮಾಜದಲ್ಲಿ ಮೌಲ್ಯಯುತವಾದ ಜೀವನ ಕಟ್ಟಿಕೊಳ್ಳಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉನ್ನತ ಮಟ್ಟದ ವ್ಯಕತಿಗಳಾಗಿ ಬಾಳಬೇಕು. ಈ ನಿಟ್ಟಿನಲ್ಲಿ ತಮ್ಮಗಳ ಸಹಕಾರ ಅತ್ಯಗತ್ಯ ಎಂದರು.
ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ 2005 ರಲ್ಲಿ ಜಾರಿ ಮಾಡಿದ್ದು, ಕೇವಲ ದೈಹಿಕ ಹಿಂಸೆಗೆ ಸೀಮಿತಗೊಳಿಸದೆ, ಲೈಂಗಿಕ, ಮೌಖಿಕ, ಭಾವನಾತ್ಮಕ, ಆರ್ಥಿಕ, ಮತ್ತು ಮಾನಸಿಕ ಹಿಂಸೆಯನ್ನು ಸಹ ಒಳಗೊಂಡಿದೆ. ವರದಕ್ಷಿಣೆಗಾಗಿ ಕಿರುಕುಳ ನೀಡುವುದು, ಮನೆಯಿಂದ ಹೊರಹಾಕುವುದು ಇವೆಲ್ಲವೂ ದೌರ್ಜನ್ಯ ತಡೆ ಕಾಯ್ದೆ ವ್ಯಾಪ್ತಿಗೆ ಬರುತ್ತವೆ. ಕಾಯ್ದೆಯ ಮೂಲಕ ಮಹಿಳೆಯರಿಗೆ ಅರ್ಥಿಕ, ಸಾಮಾಜಿಕ, ಭದ್ರತೆಯನ್ನು ಒದಗಿಸಲಾಗುತ್ತದೆ. ಮಹಿಳೆಯರಿಗೆ ಕೌಟುಂಬಿಕ ದೌರ್ಜನ್ಯಗಳಂತಹ ದೈಹಕ ಮತ್ತು ಮಾನಸಿಕ ಹಿಂಸೆ, ಕಿರುಕುಳ ನೀಡಿದಲ್ಲಿ ಹತ್ತಿರದ ಸಖಿ ಒನ್ ಸ್ಟಾಪ್ ಸೆಂಟರ್ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಪರ್ಕಿಸಿ ಸಲಹೆ ಸೂಚನೆಗಳನ್ನು ಪಡೆಯಬಹುದು. ಇದಕ್ಕೆ ಸಂಬAಧಿಸಿದAತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಕಾರದ ವತಿಯಿಂದ ಉಚಿತ ಕಾನೂನು ನರೆವು ನೀಡಲು 40 ವಕೀಲರಿದ್ದಾರೆ. ಇದನ್ನು ಪ್ರತಿಯೊಬ್ಬರು ಸದುಪಯೋಗಪಡೆದುಕೊಳ್ಳಬೇಕು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತ ಕಾನೂನು ಸೇವೆಗಳ ಕುರಿತು ಮಾಹಿತಿ ನೀಡಲು 15100 ಸಹಾಯವಾಣಿ ಸಂಖ್ಯೆ ಸ್ಥಾಪಿಸಿದ್ದು, ಕರೆ ಮಾಡಿ ಸೂಕ್ತ ಕಾನೂನು ಸಲಹೆ ಪಡೆಯಬಹುದು. ಸಮಾಜದಲ್ಲಿ ಹಿಂದುಳಿದ ಪ್ರತಿಯೊಬ್ಬರನ್ನು ಮುಖ್ಯವಾಹಿನಿಗೆ ತರಲು ಕಂಕಣಬದ್ದರಾಗಿ ಕಾರ್ಯನಿರ್ವಹಿಸಬೇಕು. ಈ ಎರಡೂ ಕಾಯ್ದೆಗಳು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಹೇಳಿದರು.
ಇದೇ ವೇಳೆ ನೆರಳು ಬೀಡಿ ಕಾರ್ಮಿಕ ಯೂನಿಯನ್ ಅಧ್ಯಕ್ಷೆ ಜಬೀನಾ ಖಾನಂ ಸಂವಿಧಾನ ಪೀಠಿಕೆ ವಾಚಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್ ಕುಮಾರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯದರ್ಶಿನಿ, ತಾಲ್ಲೂಕು ಆರೋಗ್ಯಾಧಿಕಾರಿ ದೇವರಾಜ್ ಪಟ್ಟಿಗೆ, ಸಖಿ ಕೇಂದ್ರದ ಕಾನೂನು ಸಲಹೆಗಾರರಾದ ತಂಜಿಮ್ ಕೌಸರಿ, ನಗರ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಎನ್.ರೇಖಾ, ನೆರಳು ಬೀಡಿ ಕಾರ್ಮಿಕ ಯೂನಿಯನ್ ಪ್ರಧಾನ ಕಾರ್ಯದರ್ಶಿ ಎಂ.ಕರಿಬಸಪ್ಪ, ಸದಸ್ಯೆ ಸಬ್ರಿನ್ ತಾಜ್ ಸೇರಿದಂತೆ ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಮೆಟ್ರಿಕ್ ನಂತರದ ಬಾಲಕ, ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ ಮತ್ತು ಪ.ವರ್ಗದ ಪಿ.ಯು.ಸಿ. ಐ.ಟಿ.ಐ. ಮತ್ತು ಡಿಪ್ಲೊಮೋ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು https://shp.karnataka.gov.in/bcwd ಆನ್ಲೈನ್ನಲ್ಲಿ ಜೂನ್ 20 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ https://bcwd.karnataka.gov.in ನ್ನು ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ, ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ದೂ.ಸಂ: 8050770004 ಮತ್ತು 8050770005.ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಗ್ಯಾರಂಟಿಗೆ 90 ಸಾವಿರ ಕೋಟಿ ರೂ ಖರ್ಚು, ಗ್ಯಾರಂಟಿಯಿ0ದ ಸರ್ಕಾರ ದಿವಾಳಿಯಾಗಿಲ್ಲ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ6 days ago
ನುಡಿದಂತೆ ನಡೆದ ಸರ್ಕಾರಕ್ಕೆ 2 ವರ್ಷ | ಮೇ 20 ರಂದು ಹೊಸಪೇಟೆಯಲ್ಲಿ ಸಮರ್ಪಣಾ ಸಂಕಲ್ಪ ಸಮಾವೇಶ ; 1.03 ಲಕ್ಷ ಹಕ್ಕುಪತ್ರ ವಿತರಣೆ : ಸಿಎಂ ಸಿದ್ದರಾಮಯ್ಯ
-
ಅಂಕಣ4 days ago
ಹನಿಗವಿತೆಗಳು | ಬೆಳಕಿನ ಬೆನ್ನ ಹಿಂದೆ
-
ದಿನದ ಸುದ್ದಿ3 days ago
ದಾವಣಗೆರೆ | ಕಾಂಗ್ರೆಸ್ ಸಾಧನೆಯ ಸಮರ್ಪಣೆ ಕಾರ್ಯಕ್ರಮ : ಮೇ.20 ರಂದು ಸಾರಿಗೆ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ
-
ದಿನದ ಸುದ್ದಿ4 days ago
ಹೊಸಪೇಟೆ ನಗರದ ತುಂಬೆಲ್ಲಾ ಜಾಹೀರಾತುಗಳ ಹಾವಳಿ ; ಕಣ್ಣ್ಮುಚ್ಚಿ ಕುಳಿತ ಅಧಿಕಾರಿಗಳು
-
ದಿನದ ಸುದ್ದಿ7 days ago
ಚನ್ನಗಿರಿ | ರೈತರಿಗೆ, ವ್ಯಾಪಾರಿಗಳಿಗೆ ರಿಯಾಯಿತಿ ದರದಲ್ಲಿ ಗೋದಾಮುಗಳ ಬಾಡಿಗೆ
-
ದಿನದ ಸುದ್ದಿ3 days ago
ದಾವಣಗೆರೆ | ಬ್ಯಾಂಕ್ ಆಫ್ ಬರೋಡದಲ್ಲಿ ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಮಲೇಬೆನ್ನೂರು ಪುರಸಭೆ | ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ