ದಿನದ ಸುದ್ದಿ
ಶೋಷಿತ ಸಮುದಾಯಗಳ ಆರ್ಥಿಕಾಭಿವೃದ್ದಿಯಿಂದ ದೇಶಾಭಿವೃದ್ದಿ ಸಾಧ್ಯ: ಜಿಲ್ಲಾಧಿಕಾರಿ ಶಿವಾನಂದ ಕಾಪಾಶಿ
ಸುದ್ದಿದಿನ,ದಾವಣಗೆರೆ : ದೇವರಾಜ್ ಅರಸುರವರು (D.Devaraj Urs – Former Chief minister of Karnataka ) ಹಾಕಿಕೊಟ್ಟ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ಎಲ್ಲಾ ಸಮುದಾಯಗಳು ( Communities) ಅಭಿವೃದ್ದಿ ( Development ) ಹೋದುವ ಮೂಲಕ ಅವಕಾಶ ವಂಚಿತ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ( Shivananda Kapashi ) ಹೇಳಿದರು.
ಶನಿವಾರ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ್ ಅರಸ್ ಅವರ 107ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ | ಹದಡಿ | ದರೋಡೆಗೆ ಹೊಂಚು ಹಾಕಿದ್ದ ಓರ್ವ ಆರೋಪಿ ಸೆರೆ : ಮಾರಕಾಸ್ತ್ರಗಳು ವಶಕ್ಕೆ
ಪರಿಶಿಷ್ಟ ಸಮುದಾಯಗಳನ್ನು ಒಳಗೊಂಡಂತೆ ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಆರ್ಥಿಕವಾಗಿ ಅಭಿವೃದ್ಧಿ ಹೊಂದಿದರೆ ಇಡೀ ರಾಷ್ಟ್ರ ಬಲಿಷ್ಠವಾಗುತ್ತದೆ. ಆದ್ದರಿಂದ ಕುಲ-ಕಸಬುಗಳನ್ನು ಆಸರೆಯಾಗಿಸಿಕೊಂಡು ಬದುಕುತ್ತಿರುವ ಶೋಷಿತ ಮತ್ತು ಹಿಂದುಳಿದ ಸಮುದಾಯಗಳ ಜನರ ಕಲ್ಯಾಣಕ್ಕಾಗಿ ಸರ್ಕಾರ ನಿಗಮಗಳನ್ನು ಸ್ಥಾಪಿಸಿ, ಅವುಗಳಿಗೆ ಪೆÇ್ರೀತ್ಸಾಹ ಕೊಡುವ ಮೂಲಕ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲಗೊಳಿಸಿ ಮುಖ್ಯವಾಹಿನಿಗೆ ತರಲು ಅನೇಕ ಯೋಜನೆಗಳನ್ನು ರೂಪಿಸಿದೆ ಎಂದರು.
ಈ ಹಿಂದೆ ಒಂದು ದಿನ ಮಾತ್ರ ದೇವರಾಜ್ ಅರಸು ಅವರ ಜನ್ಮದಿನಾಚರಣೆಯನ್ನು ಆಚರಿಸಲಾಗುತ್ತಿತ್ತು. ಪ್ರಸಕ್ತ ವರ್ಷದಲ್ಲಿ ಸರ್ಕಾರದ ನಿರ್ದೇಶನದಂತೆ ಒಟ್ಟು ಮೂರು ದಿನಗಳ ಕಾಲ ಅರಸು ಜನ್ಮದಿನಾಚರಣೆಯನ್ನು ವೈವಿಧ್ಯಮಯವಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು..
ದಾದಾಪೀರ್ ನವಿಲೇಹಾಳ್ ಮಾತನಾಡಿ, ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಭೂ ಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದು, ಸಾವಿರಾರು ಎಕರೆ ಭೂಮಿಯನ್ನು ಭೂ ರಹಿತ ಕುಟುಂಬಗಳಿಗೆ ಒದಗಿಸಿ ಆತ್ಮಾಭಿಮಾನ ತುಂಬಿದ ಕೀರ್ತಿ ದೇವರಾಜ್ ಅರಸು ಅವರಿಗೆ ಸಲ್ಲುತ್ತದೆ. ಸಂವಿಧಾನದ ಅಧಿಕಾರದ ಸವಿಯನ್ನೆ ಕಾಣದ ಜನಾಂಗಗಳ ವ್ಯಕ್ತಿಗಳನ್ನು ಗುರುತಿಸಿ ರಾಜಕೀಯಕ್ಕೆ ತಂದು ಅವಕಾಶ ವಂಚಿತ ಸಮುದಾಯಗಳಿಗೆ ಪ್ರಾತಿನಿಧ್ಯ ದೊರಕಿಸಿಕೊಟ್ಟ ಮಹಾನ್ ನಾಯಕರಾಗಿದ್ದರು.
ಸ್ವಾತಂತ್ರ್ಯ ನಂತರದ ದಿನಗಳಲ್ಲಿ ಕೂಡ ದೇಶದಲ್ಲಿ ಜೀತ ಪದ್ದತಿ ಮತ್ತು ಮಲ ಹೊರುವ ಪದ್ಧತಿಯಂತಹ ಅನೇಕ ಅನಿಷ್ಟ ಆಚರಣೆಗಳಿದ್ದವು, ಅಂತಹ ಅನಿಷ್ಟ ಆಚರಣೆಗಳನ್ನು ಕಾನೂನಿನ ಮೂಲಕ ಅರಸುರವರು ನಿಷೇಧ ಮಾಡಿದರು. ರಾಜ್ಯಾದ್ಯಂತ ವಸತಿ ನಿಲಯಗಳನ್ನು ಸ್ಥಾಪಿಸಿ ಬಡವರ, ಶೋಷಿತರ ಮಕ್ಕಳಿಗೆ ಶಿಕ್ಷಣ ಒದಗಿಸುವ ಕ್ರಾಂತಿಕಾರಕ ಬದಲಾವಣೆಯ ಹೆಜ್ಜೆಯನ್ನು ಇಟ್ಟವರು ದೇವರಾಜ ಅರಸು ಅವರು ಎಂದು ಸ್ಮರಿಸಿದರು.
1973ರ ನವೆಂಬರ್ 01 ರಂದು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿದರು. ರಾಜ್ಯದ ಎಲ್ಲಾ ಗುಡಿಸಲುಗಳಿಗೆ ಉಚಿತ ವಿದ್ಯುತ್ ಪೂರೈಸುವ ಭಾಗ್ಯಜ್ಯೋತಿ ಯೋಜನೆ ಸೇರಿದಂತೆ ಪದವೀಧರರಿಗೆ ನಿರುದ್ಯೋಗ ಭತ್ಯೆ, ಗಂಡನನ್ನು ಕಳೆದುಕೊಂಡ ಮಹಿಳೆಯರಿಗೆ ವಿಧವಾ ವೇತನದಂತಹ ಪಿಂಚಣಿ ಯೋಜನೆಗಳನ್ನು ಜಾರಿಗೊಳಿಸಿ ಲಕ್ಷಾಂತರ ಕುಟುಂಬಗಳಿಗೆ ಬೆಳಕಾದ ಪ್ರಬುದ್ದ ರಾಜಕಾರಣಿ ಅರಸು ಎಂದು ಬಣ್ಣಿಸಿದರು.
ಪ್ರಸ್ತುತ ಸಾಲಿನಿಂದ ಜಾರಿಗೆ ತಂದಿರುವ “ದೇವರಾಜ್ ಅರಸ್ ಪ್ರಶಸ್ತಿ”ಯನ್ನು ಜಿಲ್ಲೆಯ ಗೊಲ್ಲರ ಯಾದವ ಸಂಘಕ್ಕೆ ವಿತರಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿದ ಬಳಿಕ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ.ಎಸ್ ಮಾತನಾಡಿ, ಅನೇಕ ಹಳ್ಳಿಗಳಲ್ಲಿ ಮೂಢನಂಬಿಕೆ, ಕಂದಾಚಾರಗಳು ಇನ್ನೂ ಜಾರಿಯಲ್ಲಿವೆ. ಮುಟ್ಟಾದ ಮಹಿಳೆಯರನ್ನು ಹಟ್ಟಿಯಿಂದ ದೂರವಿರಿಸುವ ಅನಿಷ್ಟ ಪದ್ದತಿಯನ್ನು ತೊಲಗಿಸಲು ನಿರಂತರವಾಗಿ ಶ್ರಮಿಸುತ್ತಿದ್ದೇವೆ. ನಮ್ಮ ಕಾರ್ಯವನ್ನು ಗುರುತಿಸಿ ದೇವರಾಜ್ ಅರಸ್ ಅವರ ಹೆಸರಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದು ಇನ್ನಷ್ಟು ಸಮಾಜಮುಖಿ ಬದಲಾವಣೆ ಕಾರ್ಯಗಳನ್ನು ಮಾಡಲು ಸ್ಫೂರ್ತಿ ನೀಡಿದಂತಾಗಿದೆ ಎಂದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಸಂಗೊಳ್ಳಿ ರಾಯಣ್ಣ ಮೇಲ್ಸೆತುವೆ ಬಳಿ ಇರುವ ಡಿ.ದೇವರಾಜ್ ಅರಸ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಸಂಗೊಳ್ಳಿ ರಾಯಣ್ಣ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ವೀರಗಾಸೆ, ಡೊಳ್ಳುಕುಣಿತ, ಪೂರ್ಣಕುಂಭ, ಹಗಲುವೇಷ ಹಾಗೂ ಇನ್ನಿತರೆ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಲಾಯಿತು. ತುಂಗಭದ್ರಾ ಸಭಾಂಗಣದ ಬಳಿ ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಜಿ. ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎ.ಚನ್ನಪ್ಪ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ ರಿಷ್ಯಂತ್, ದೂಡಾ ಅಧ್ಯಕ್ಷ ಸುರೇಶ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರಮೇಶ್.ಆರ್ ಮದರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮೆ ಕೌಸರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜನಾಯ್ಕ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ರಮೇಶ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ-ಸಂಸ್ಥೆಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ