ದಿನದ ಸುದ್ದಿ
ಶಾಕಿಂಗ್ ನ್ಯೂಸ್: ಎರಡು ಲಕ್ಷ ಮಕ್ಕಳು ನಾಪತ್ತೆ

ಸುದ್ದಿದಿನ ಡೆಸ್ಕ್: ಸುಪ್ರೀಂ ಕೋರ್ಟ್ಗೆ ಎರಡು ಸರ್ಕಾರಗಳ ಸಲ್ಲಿರುವ ಸಮೀಕ್ಷಾ ವರದಿಯಲ್ಲಿ ಶಾಕಿಂಕ್ ನ್ಯೂಸ್ ಹೊರಬಿದ್ದಿದ್ದು, ದೇಶಾದ್ಯಂತ ಇರುವ ಸರ್ಕಾರಿ ನಿಲಯಗಳಲ್ಲಿ ಒಂದು ವರ್ಷದ ಅವಧಿಯಲ್ಲಿ ಎರಡು ಲಕ್ಷಕ್ಕೂ ಅಧಿಕ ಮಕ್ಕಳು ನಾಪತ್ತೆಯಾಗಿರುವ ಆತಂಕಕಾರಿ ವಿಷಯ ಬಹಿರಂಗವಾಗಿದೆ. ಈಚೆಗಷ್ಟೇ ಉತ್ತರಪ್ರದೇಶದ ಬಾಲಕಿಯರ ನಿಲಯದಲ್ಲಿ ಅತ್ಯಾಚಾರ ಎಸಗಿ ಹೂತು ಹಾಕಿದ್ದ ಘಟನೆಯ ಬೆನ್ನಲ್ಲೇ ದೇಶವೇ ಶಾಂಕ್ ಆಗುವ ಮಾಹಿತಿ ಬಹಿರಂಗವಾಗಿದೆ.
ಕೇಂದ್ರ ಮಹಿಳಾ ಮಕ್ಕಳಾಭಿವೃದ್ಧಿ ಸಚಿವಾಲಯ 2016-17ನೇ ಸಾಲಿನಲ್ಲಿ ದೇಶಾದ್ಯಂತ ಇರುವ ಸರ್ಕಾರಿ ಮಕ್ಕಳ ನಿಲಯಗಳಲ್ಲಿ ಮಕ್ಕಳ ಬಗ್ಗೆ ಸಮೀಕ್ಷೆ ನಡೆಸಿದೆ. ಈ ವರದಿಯ ಪ್ರಕಾರ 4.73 ಮಕ್ಕಳು ಸರ್ಕಾರಿ ನಿಲಯಗಳಲ್ಲಿ ವಾಸಿಸುತ್ತಿರುವುದಾಗಿ ದಾಖಲಾಗಿದೆ. ಆದರೆ, ಸುಪ್ರೀಂ ಕೋರ್ಟ್ಗೆ ಮಾರ್ಚ್ನಲ್ಲಿ ಕೇಂದ್ರ ಸಲ್ಲಿಸಿದ ವರದಿಯಲ್ಲಿ 2.61 ಮಕ್ಕಳು ಕಡಿಮೆಯಾಗಿರುವ ಅಂಶ ಬೆಳಕಿಗೆ ಬಂದಿದೆ. ಈ ಮಾಹಿತಿಯನ್ನು ಕೇಂದ್ರವು ರಾಜ್ಯ ಸರ್ಕಾರಗಳಿಂದ ಪಡೆದುಕೊಂಡಿದೆ.
ನ್ಯಾಯಮೂರ್ತಿಗಳಾದ ಮದನ್ ಬಿ. ಲೋಕೂರ್, ಎಸ್. ಅಬ್ದುಲ್ ನಜೀರ್, ಮತ್ತು ದೀಪಕ್ ಗುಪ್ತಾ ಅವರನ್ನೊಳಗೊಂಡ ಪೀಠ, ಬಹಳ ಗೊಂದಲಕ್ಕೀಡಾಗಿದ್ದು, ಮಕ್ಕಳು ಕೇವಲ ಅಂಕಿಗಳಲ್ಲ, ವರದಿಯಲ್ಲಿ ಅಂಶಗಳು ಸಮಸ್ಯೆಯ ಗಂಭೀರತೆಯನ್ನು ತೋರಿಸುತ್ತದೆ. ಮಕ್ಕಳನ್ನು ಕೇವಲ ಅಂಕಿಗಳಂತೆ ಪರಿಗಣಿಸಿರುವುದು ನಮಗೆ ನೋವು ತಂದಿದೆ. ಅವರಿಗೂ ಹೃದಯವಿದೆ, ಅವರಿಗೂ ಮನಸ್ಸಿದೆ ಎಂದು ಹೇಳಿ ತಾರತಮ್ಯವನ್ನು ಎತ್ತಿಹಿಡಿದಿದೆ.
ಹಣದಾಸೆಗಾಗಿ ನಿಲಯಗಳು ಸುಳ್ಳು ಮಾಹಿತಿ ನೀಡಿವೆಯೋ ಅಥವಾ ಏನು ಮಾಡಿವೆಯೋ ನಮಗೆ ತಿಳಿಯುತ್ತಿಲ್ಲ.
ನ್ಯಾಯಮೂರ್ತಿ ಲೋಕೂರ್
ದೇಶದಲ್ಲಿ ಇರುವ 9,589 ಶಿಶುಪಾಲನಾ ಸಂಸ್ಥೆಗಳಿವೆ. 1,596 ಶಿಶುಪಾಲನಾ ಸಂಸ್ಥೆಗಳಲ್ಲಿ ಮಕ್ಕಳ ಸಂಖ್ಯೆ ಮೀತಿ ಮೀರಿದೆ. 97 ಜಿಲ್ಲೆಗಳಲ್ಲಿ ಶಿಶುಪಾಲನಾ ಸಂಸ್ಥೆಗಳಿಲ್ಲ. ಈ ನಿಲಯಗಳಲ್ಲಿ ಎಷ್ಟು ಮಕ್ಕಳ ಮೇಲೆ ದೈಹಿಕ ಹಲ್ಲೆ ಸೇರಿ ಇತರ ರೀತಿಯಲ್ಲಿ ಶಿಕ್ಷೆ ನೀಡಲಾಗುತ್ತಿದೆ. ಈ ಎರಡು ಲಕ್ಷ ಮಕ್ಕಳನ್ನು ಹೊರತುಪಡಿಸಿ ದೇಶದಲ್ಲಿ ಇನ್ನು ಎಷ್ಟು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಮಾಹಿತಿ ನೀಡುವಂತೆ ಸರ್ಕಾರಿ ಅಧಕಾರಿಗಳನ್ನು ಸುಪ್ರೀಂ ಕೋರ್ಟ್ ಸಮಜಾಷಿಸಿದೆ.
ಶಿಶುಪಾಲನಾ ಮಂದಿರಗಳ ಮೇಲೆ ನಿಗಾ ಇಡಲು ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಸಮಿತಿ ರಚನೆ ಕುರಿತು ನ್ಯಾಯಪೀಠ ಪ್ರಸ್ತಾಪ ಮಾಡಿದ್ದು, ಕೇಂದ್ರದ ಸಲಹೆ, ಸೂಚನೆಗಳನ್ನು ಪಡೆಯಲು ಸಮಯ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಡಿಎಸ್ಟಿ/ಪಿಹೆಚ್ಡಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆ /ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ) 2018-19ನೇ ಸಾಲಿನಿಂದ ಕರ್ನಾಟಕ ಡಿ.ಎಸ್.ಟಿ-ಪಿಹೆಚ್ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸಿದ್ದು, ಅರ್ಜಿಯನ್ನು ಆನ್ಲೈನ್ http://ksteps.karnataka.gov.in ಮುಖಾಂತರ ಫೆಬ್ರವರಿ 10, 2021 ರೊಳಗಾಗಿ ಸಲ್ಲಿಸಬೆಕೆಂದು ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಪ.ಜಾತಿ/ಪ.ಪಂಗಡಕ್ಕೆ ಸಹಾಯಧನ ಮತ್ತು ಕ್ರೀಡಾಗಂಟಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳಿಗೆ ನೋಂದಾವಣೆ ಮಾಡಲು ಸಹಾಯಧನ ಮತ್ತು ಕ್ರೀಡಾಗಂಟನ್ನು ನೀಡುವ ಹೊಸ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ತಾಲ್ಲೂಕಿನಲ್ಲಿ 02 ಪರಿಶಿಷ್ಟ ಜಾತಿ ಮತ್ತು 01 ಪರಿಶಿಷ್ಟ ಪಂಗಡದ ಯುವಜನ ಸಂಘವನ್ನು ನೋಂದಾಯಿಸಲು ಸಹಾಯಧನ ಹಾಗೂ ಕ್ರೀಡಾಗಂಟನ್ನು ನೀಡಲಾಗುವುದು. ಜಿಲ್ಲೆಯ 15 ರಿಂದ 35 ವರ್ಷ ವಯೋಮಾನದೊಳಗಿನ ಪ.ಜಾತಿ/ಪ.ಪಂಗಡಕ್ಕೆ ಸೇರಿರುವ ಯುವಕ/ಯುವತಿಯರು ಯುವಜನ ಸಂಘವನ್ನು ರಚಿಸಿಕೊಳ್ಳಲು ಸದವಕಾಶವಿರುವದರಿಂದ ಕರ್ನಾಟಕ ರಾಜ್ಯ ಸಂಘ ಸಂಸ್ಥೆಗಳ ನೋಂದಾವಣೆ ಕಾಯಿದೆ 1960 ರ ಅಡಿಯಲ್ಲಿ ಯುವಜನ ಸಂಘಗಳ ನೋಂದಣಿ ಮಾಡಿಸಿ, ಜ.28 ರೊಳಗಾಗಿ ಮಾನ್ಯತೆಗಾಗಿ ಈ ಕಚೇರಿಗೆ ಸಲ್ಲಿಸಲು ಕೋರಿದೆ. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಚೇರಿ ವೇಳೆಯಲ್ಲಿ ಮೊ.ಸಂ: 9620796970 ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಬಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರೈತರು- ಕೇಂದ್ರ ಸರ್ಕಾರದ ನಡುವಿನ 10ನೇ ಸುತ್ತಿನ ಮಾತುಕತೆ ನಾಳೆಗೆ ಮುಂದೂಡಿಕೆ

ಸುದ್ದಿದಿನ,ನವದೆಹಲಿ : ಇಂದು ನಡೆಯಬೇಕಾಗಿದ್ದ ರೈತ ಮುಖಂಡರು ಮತ್ತು ಕೇಂದ್ರದ ಮಂತ್ರಿಗಳ ನಡುವಿನ 10ನೇ ಸುತ್ತಿನ ಮಾತುಕತೆ ಜ. 20ರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.
ಕೃಷಿ ಸಚಿವ ನರೇಂದ್ರ ಸಿಂಗ್ ತಡರಾತ್ರಿ ರೈತ ಮುಖಂಡರಿಗೆ ಬರೆದಿರುವ ಪತ್ರದಲ್ಲಿ, ತಳ್ಳಿ ಹಾಕಲಾದ ಕಾರಣಗಳಿಂದಾಗಿ ಇಂದು ಸಭೆ ನಡೆಸಲಾಗುತ್ತಿಲ್ಲ ಎಂದು,’ ಜ. 20ರಂದು ಮಧ್ಯಾಹ್ನ 2 ಗಂಟೆಗೆ ವಿಜ್ಞಾನ್ ಭವನದಲ್ಲಿ ಸಭೆ ನಡೆಸಲಾಗುವುದು” ಎಂದು ತಿಳಿಸಲಾಗಿದೆ.
ಮಧ್ಯಪ್ರದೇಶದ ತಮ್ಮ ಕ್ಷೇತ್ರದ ವೀಕ್ಷಣೆಗೆ ತೆರಳಿದ್ದ ಕೃಷಿ ಸಚಿವ ನರೇಂದ್ರ ಸಿಮಗ್ ತೋಮರ್ ಸೋಮವಾರ ತಡರಾತ್ರಿ ದೆಹಲಿಗೆ ಮರಳಿದರು. ಗ್ವಾಲಿಯರ್ನಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ರೈತ ಸಂಘಟನೆಗಳು ಕಾಯ್ದೆಗಳಲ್ಲಿರುವ ನಿರ್ದಿಷ್ಟ ರಿಯಾಯಿತಿಗಳ ಕುರಿತು ಚರ್ಚಿಸುವುದಕ್ಕೆ ಮನಸ್ಸು ಮಾಡುತ್ತಿಲ್ಲ. ಪಟ್ಟು ಸಡಿಸಲು ಸಿದ್ಧರೇ ಇಲ್ಲ. ನಾಳೆ ಸಭೆ ಇದೆ. ಅಲ್ಲಿ ರೈತ ಸಂಘಟನೆಗಳು ಪರ್ಯಾಯ ಸಾಧ್ಯತೆಗಳ ಕುರಿತು ಚರ್ಚಿಸುವ ನಂಬಿಕೆ ಇದೆ. ಹಾಗಾದರೆ ನಾವು ಪರಿಹಾರ ಕಂಡುಕೊಳ್ಳಲು ಸಾಧ್ಯ” ಎಂದಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು, ಸಂಜೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ್ರು ನಾಗೇಶ್..!
-
ದಿನದ ಸುದ್ದಿ6 days ago
ಕೋವಿದ್ ಪ್ರಭಾವಳಿಯಲ್ಲಿ ಪ್ರಭುತ್ವದ ಕ್ರೌರ್ಯ
-
ಲೈಫ್ ಸ್ಟೈಲ್6 days ago
ಪಕ್ಷಿ ಪರಿಚಯ | ಬೆಳ್ಗಣ್ಣ
-
ದಿನದ ಸುದ್ದಿ6 days ago
“ನೀನು ಅಪ್ಪನಿಗೆ ಹುಟ್ಟಿದಿಯಾ ಅನ್ನೋದಕ್ಕೆ ಸಾಕ್ಷಿ ಏನು..?” : ಸಚಿವ ಈಶ್ವರಪ್ಪ
-
ದಿನದ ಸುದ್ದಿ7 days ago
ಸಚಿವ ಸಂಪುಟ ವಿಸ್ತರಣೆ : ಏಳು ಹೊಸ ಸಚಿವರ ಹೆಸರು ಫೈನಲ್ ಗೊಳಿಸಿದ ಯಡಿಯೂರಪ್ಪ
-
ಲೈಫ್ ಸ್ಟೈಲ್6 days ago
ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಪರಿಹಾರ ; ಮಿಸ್ ಮಾಡ್ದೆ ಓದಿ..!
-
ದಿನದ ಸುದ್ದಿ6 days ago
ದಲಿತರಿಗೆ ಪರ್ಯಾಯ ಸಂಸ್ಕೃತಿ ಇಲ್ಲವೆ..?
-
ದಿನದ ಸುದ್ದಿ6 days ago
ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್ ಮಷಿನ್ಗಳು..!