ದಿನದ ಸುದ್ದಿ
ಶ್ರಾವಣ ಸಂಜೆಯ ಕಾಣಿಕೆ ಕೊಡಗು – ಕೇರಳ ಸಂತ್ರಸ್ತರ ಪುನರ್ವಸತಿಗೆ ಬಳಕೆ | ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಘೋಷಣೆ

ಸುದ್ದಿದಿನ, ಅಲಬೂರು : ಶ್ರಾವಣ ಸಂಜೆಯ ಮೂವತ್ತು ದಿನಗಳ ಕಾರ್ಯಕ್ರಮದಲ್ಲಿ ಸಂಗ್ರಹವಾದ ಕಾಣಿಕೆಯನ್ನು ಕೊಡಗೂ,ಚಿಕ್ಕಮಗಳೂರು ಹಾಗೂ ಕೇರಳ ರಾಜ್ಯದಲ್ಲಿ ಉಂಟಾಗಿರುವ ಜಲ ಪ್ರಳಯದ ಸಂತ್ರಸ್ತರ ಪುನರ್ವಸತಿಗೆ ಬಳಕೆ ಮಾಡಲಾಗುವುದು ಎಂದು ತರಳಬಾಳು ಜಗದ್ಗುರು ಶಾಖಾ ಶ್ರೀ ಮಠದ ಡಾ.ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಪ್ರಕೃತಿಯ ಅವಘಡದ ಅನೇಕ ಸಂಧರ್ಭಗಳಲ್ಲಿ ಮಾನವೀಯ ನೆಲೆಯಲ್ಲಿ ಅಂತಃಕರಣದಿಂದ ತರಳಬಾಳು ಜಗದ್ಗುರು ಬೃಹನ್ಮಠ ನಾಡಿನ ಕಷ್ಟ ಪರಿಸ್ಥಿತಿಗಳಲ್ಲಿ ಮಿಡಿದಿದೆ.ಅಪಾಯಗಳಲ್ಲಿ ಸಿಲುಕಿ ನರಳಾಡುತ್ತಿರುವವ ಬಾಂಧವರು ಅಪಾರ ಪ್ರಮಾಣದ ಆಸ್ತಿ ಪಾಸ್ತಿ ವಂಚಿತರಾದ ಅವರ ಅಸಹಾಯಕತೆಯ ಆಕ್ರಂದನ ನಮ್ಮ ಮನಸ್ಸನ್ನು ಜರ್ಜರಿತಗೊಳಿಸಿದ್ದು.ಶ್ರಾವಣ ಸಂಜೆಯ ಮೂವತ್ತು ದಿನಗಳ ಕಾರ್ಯಕ್ರಮದಲ್ಲಿ ಸಂಗ್ರಹವಾದ ಹಣದ ಜೊತೆ ಇನ್ನೊಷ್ಟು ಸಂಗ್ರಹಿಸಿ ನಿರಾಶ್ರಿತರ ಕಷ್ಟದಲ್ಲಿಭಾಗಿಯಾಗುವುದಾಗಿ ತಿಳಿಸಿದರು .
ಕೊಟ್ಟೂರು ತಾಲ್ಲೂಕಿನ ಅಲಬೂರು ಗ್ರಾಮದಲ್ಲಿ ಶ್ರಾವಣ ಸಂಜೆಯ ಎಂಟನೇ ದಿನದ ಸಾನ್ನಿಧ್ಯ ವಹಿಸಿದ್ದ ಶ್ರೀಗಳು ಆಶೀರ್ವಚನ ನೀಡಿದ ಶ್ರೀಗಳು ಬಸವಣ್ಣ ಹನ್ನೆರಡನೆಯ ಶತಮಾನದ ಅಗ್ರಮಾನ್ಯರಾದ ವಿಶ್ವಖ್ಯಾತಿಯ ವಿಭೂತಿ ಪುರುಷ .ತಲತಲಾಂತರದಿಂದ ಆಚರಣೆಯಲ್ಲಿದ್ದ ಅವಿವೇಕತನದ ಸಂಪ್ರದಾಯಗಳನ್ನು ದಿಕ್ಕರಿಸಿ ಸಮ ಸಮಾಜದ ನಿರ್ಮಾತೃ ಧಾರ್ಮಿಕ ವಿಮರ್ಶೆಯ ಜೊತೆ ಸಾಮಾಜಿಕ ವಿಮರ್ಶೆ,ರಾಜಕೀಯ ವಿಮರ್ಶೆ, ಸಾಹಿತ್ಯ ವಿಮರ್ಶೆಯ ವೈಚಾರಿಕ ಕ್ರಾಂತಿಗೆ ನಾಂದಿ ಹಾಡಿ ಯಶಸ್ಸು ಗಳಿಸಿದ ಮಹಾಮಾನವತಾವಾದಿಯ ಹಾದಿಯಲ್ಲಿ ಹೆಜ್ಜೆ ಹಾಕಲು ಕರೆ ನೀಡಿದರು.
‘ಬಸವಣ್ಣನವರ ಲೋಕ ವಿಮರ್ಶೆ’ ಕುರಿತು ಉಪನ್ಯಾಸ ನೀಡಿದ ಚಿಂತಕ ಡಾ.ಎಸ್ ಆರ್ ಪುರುಷೋತ್ತಮ ವಾಟಿಗಾರ್ ಮಾತನಾಡಿ ಸಾಮಾನ್ಯ ಜನರಿಂದ ಹಿಡಿದು ಅಸಮಾನ್ಯ ಜನರ ವರೆಗೆ ನಡೆ-ನುಡಿಯ ಅಸಮನಾತೆಯ ಸಾಮರಸ್ಯ ಎದ್ದು ಕಾಣುತ್ತಿದೆ.ಆದರೆ 12 ನೆಯ ಶತಮಾನದ ವಚನಕಾರರ ನುಡಿ-ನಡೆಯಲ್ಲಿ ಯಾವುದೇ ವ್ಯತ್ಯಾಸ ಕಾಣಸಿಗುವುದಿಲ್ಲ,ಆಡುವ ಮಾತುಗಳಲ್ಲಿ ಅನುಷ್ಠಾನ ಇಲ್ಲದೇ ಹೋದರೆ ಆ ಮಾತಿನ ಮೌಲ್ಯ ಕಳೆದು ಹೋಗುತ್ತದೆ, ಹೃದಯ ವೈಶ್ಯಾಲ್ಯತೆ ಇಲ್ಲದೇ ಹೋದರೆ ಮನುಷ್ಯತ್ವ ತೆರೆಯ ಮರೆಗೆ ಸರಿಯುತ್ತದೆ.ಸುಧಾರಣೆ ತನ್ನಿಂದಲೇ ಆಗಬೇಕೆಂದು ಬಸವಣ್ಣ ತನ್ನ ಹುಟ್ಟಿನ ಶ್ರೇಷ್ಠತೆಯನ್ನು ಅಲ್ಲಗಳೆದು ; ನಾನು ಹಾರವನೆಂದರೆ ನಮ್ಮ ಶರಣರು ನಗುವರಯ್ಯ ಎಂದು ತನ್ನನ್ನು ತಾನೇ ತುಚ್ಚೀಕರಿಸಿಕೊಳ್ಳುವರು ಬಸವಣ್ಣನವರ ಸಂದೇಶಗಳು ವಿಶ್ವ ವ್ಯಾಪ್ತಿಯಲ್ಲಿ ಅಸ್ತಿತ್ವದಲ್ಲಿವೆ.ದ್ವೇಷದಿಂದ ದ್ವೇಷವನ್ನು ಯಾರೂ ಗೆಲ್ಲಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಅಣ್ಣನವರು ಹೇಳಿದ್ದು ‘ ತನಗೆ ಮುನಿದವರಿಗೆ ತಾ ಮುನಿಯಲೇಕಯ್ಯ ಎಂದು,ಬಡತನ ಮತ್ತು ಸಿರಿತನ ಮನುಷ್ಯನ ಎರಡು ಆಯಾಮಗಳನ್ನು ಸೂಚಿಸುತ್ತದೆ.ಹಾಗಾಗಿ ಬಡತನ ಬಂದರೆ ಕುಗ್ಗಿದೆ ಸಿರಿತನ ಬಂದರೆ ಹಿಗ್ಗದೇ ಬದುಕನ್ನು ಸಾರ್ಥಕ ಪಡಿಸಿಕೊಳ್ಳುವ ನಿಟ್ಟಿನಲ್ಲಿ ನಮಗೆ ದಾರಿದೀಪವಾಗುವುದು ಬಸವಣ್ಣನವರ ವಚನಗಳು ಎಂದು ಅಭಿಪ್ರಾಯ ಪಟ್ಟರು.
ಶಿವಮೊಗ್ಗೆಯ ವಿಧಾನಪರಿಷತ್ ಸದಸ್ಯರು, ಉದ್ಯಮಿಗಳಾದ ಶ್ರೀ ಎಸ್.ರುದ್ರೇಗೌಡ್ರು ಮಾತನಾಡಿ, ತರಳಬಾಳು ಜಗದ್ಗುರು ಬೃಹನ್ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರು ಗ್ರಾಮೀಣರ ಶಿಕ್ಷಣಕ್ಕೆ ಆಸರೆಯಾಗಿ ನಿಂತ ಮಹಾನ್ ಚೇತನರಾಗಿ ಹಳ್ಳಿ ಹಳ್ಳಿ ಗಳಲ್ಲಿ ನೂರಾರು ಶಾಲಾ ಕಾಲೇಜುಗಳನ್ನು ತೆರೆದು ಶಿಕ್ಷಣ ದಾಸೋಹಿಯಾಗಿ ಲಕ್ಷಾಂತರ ಜನರ ವಿಧ್ಯಾಭ್ಯಾಸಕ್ಕೆ ಕಾರಣರಾದರು. ಈಗಿನ ಜಗದ್ಗುರುವರ್ಯರಾದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು ಈ ದೇಶದ ಅಪ್ರತಿಮ ವಿದ್ವತ್ ಪಂಡಿತೋತ್ತಮರಾಗಿದ್ದರೂ ಸಹ ರೈತರ ಬಾಳಿಗೆ ಬೆಳಕಾಗುವ ಯಶಸ್ವಿ ಯೋಜನೆಗಳ ಸಾಕಾರ ಮೂರ್ತಿಯಾಗಿದ್ದು ರೈತ ಮೆಚ್ಚಿದ ,ದೇಶ ಒಪ್ಪಿದ ಗುರುವರ್ಯರಾಗಿದ್ದಾರೆ. ಅಂತೆಯೇ ಪ್ರಗತಿ ಪರ ಚಿಂತನೆಯ ಶರಣತತ್ವ ದಾಸೋಹಿಗಳಾದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಈ ನಾಡಿನ ಸಾಂಸ್ಕೃತಿಕ ಜಂಗಮರಾಗಿ ಶರಣರ ಆಶಯಗಳನ್ನು ಜನರ ಮನದಲ್ಲಿ ಬಿತ್ತುವ ಮೂಲಕ ಬದುಕಿನ ಅರ್ಥಪೂರ್ಣ ಹಸನತೆಗೆ ಕಾರಣೀಕೃತರಾಗಿದ್ದಾರೆ ಎಂದರು.ಇದೇ ಸಂದರ್ಭದಲ್ಲಿ ನೆರೆ ಸಂತ್ರಸ್ತರ ಪರಿಹಾರನಿಧಿಗೆ 10 ಸಾವಿರ ರೂಗಳ ದೇಣಿಗೆಯನ್ನು ಶ್ರೀಗಳಿಗೆ ಸಲ್ಲಿಸಿದರು.
ಸಂಜೆ ನಾಲ್ಕು ಗಂಟೆಯಿಂದಲೂ ಶ್ರೀ ಗಳ ಪಾದಯಾತ್ರೆ ಗ್ರಾಮದಲ್ಲಿ ಜರುಗಿತು.ಗ್ರಾಮವೂ ತಳಿರ ತೋರಣ ರಂಗೋಲಿಯಿಂದ ಅಲಂಕೃತಗೊಂಡು ಹಬ್ಬದ ವಾತಾವರಣವೇ ಮೈದಾಳಿತ್ತು. ವಚನ ಕಂಠಪಾಠ ಸ್ಪರ್ಧೆಯ ವಿಜೇತ ಮಕ್ಕಳಿಗೆ, ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ
ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕರಿಸಲಾಯಿತು.
ವೇದಿಕೆಯ ಮೇಲೆ ಕರ್ನಾಟಕ ಬೀಜ ನಿಗಮದ ನಿರ್ದೇಶಕರಾದ ಎಸ್.ರಾಜೇಂದ್ರ ಪ್ರಸಾದ್, ಡಾ.ಮೂಗಪ್ಪ,ವಸಂತ ಕೊಟ್ರೇಶ್,ಸಿದ್ದಲಿಂಗಪ್ಪ,ಸುಶೀಲಮ್ಮ ,ಬಿ.ಕೊಟ್ರೇಶ್ ಹಾಜರಿದ್ದರು.
ಶಿಕ್ಷಕ ಹೆಚ್ ನಾಗರಾಜ್ ಸ್ವಾಗತಿಸಿದರು,ಸಾಣೇಹಳ್ಳಿಯ ಶಿವ ಸಂಚಾರದ ತಂಡದ ಜ್ಯೋತಿ. ಕೆ,ದ್ರಾಕ್ಷಾಯಿಣಿ ಕೆ ಹಾಗೂ ನಾಗರಾಜ್ ಹೆಚ್.ಎಸ್ ಶರಣ್ ತಂಡದವರಿಂದ ವಚನ ಗಾಯನ ನಡೆಯಿತು. ಮಕ್ಕಳು ವಚನ ನೃತ್ಯ ರೂಪಕಗಳನ್ನು ಪ್ರಸ್ತುತಿ ಪಡಿಸಿದರು. ಅಧ್ಯಾಪಕ ಹೆಚ್.ಎಸ್ ಯೋಗೀಶ್ ಕಾರ್ಯಕ್ರಮ ನಿರೂಪಿಸಿದರು.

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ:ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಏಪ್ರಿಲ್ 24 ಮತ್ತು 25 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತಿಗೆ ಮಾತ್ರ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಸ್ತಿ ಕಲಹವೇ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆಗೆ ಕಾರಣವಾಯ್ತಾ..?

ಸುದ್ದಿದಿನಡೆಸ್ಕ್:ಭಾನುವಾರ ಹತ್ಯೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಹಿಂದೆ ಆಸ್ತಿ ಕಲಹವಿರಬಹುದು ಎಂಬ ಆರೋಪಗಳು ಕೇಳಿ ಬರುತ್ತಿವೆ.
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕೋಟ್ಯಂತರ ಮೌಲ್ಯದ ಭೂಮಿಯನ್ನು ಖರೀದಿ ಮಾಡಿದ್ದ ಅವರು ಅದನ್ನು ತಮ್ಮ ಸಹೋದರಿಯರ ಹೆಸರಿನಲ್ಲಿ ನೋಂದಾಯಿಸಿದ್ದರು. ಇದಕ್ಕೆ ಪತ್ನಿ ಪಲ್ಲವಿಯವರ ಆಕ್ಷೇಪ ಇತ್ತು ಎನ್ನಲಾಗುತ್ತಿದೆ.
ಆದರೆ ಆಸ್ತಿ ವಿವಾದವೇ ಎಲ್ಲದಕ್ಕೂ ಕಾರಣವಾಯ್ತಾ? ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಓಂ ಪ್ರಕಾಶ್ ಅವರು 2017 ರಲ್ಲಿ ನಿವೃತ್ತಿಗೊಂಡಿದ್ದರು. ನಿವೃತ್ತಿಗೂ ಮೊದಲು ಹಾಗೂ ನಂತರದಲ್ಲಿ ಅವರು ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆಸ್ತಿ ಖರೀದಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಳ್ಳಾರಿ ಪೊಲೀಸ್ ಅಧಿಕಾರಿಗಳ ಪಡಿತರ ಅಕ್ಕಿ ಕಳ್ಳಾಟ : ಠಾಣೆ ಮುಂದೆ ಇದ್ದ ಲಾರಿ ಮಾಯ ; ಈ ಸ್ಟೋರಿ ಓದಿ..!

- ಗಿರೀಶ್ ಕುಮಾರ್ ಗೌಡ,ಬಳ್ಳಾರಿ
ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಅಕ್ರಮ ಪಡಿತರ ಅಕ್ಕಿ ರಾತ್ರಿ ವೇಳೆ ಜಿಲ್ಲೆಯಿಂದ ಬೇರೆ ಬೇರೆ ರಾಜ್ಯಗಳಿಗೆ ಲಾರಿಗಳಲ್ಲಿ ಕಳ್ಳತನದ ಮೂಲಕ ಸಾಗಾಟ ಮಾಡುತ್ತಿರುವ ಅಂಶಗಳು ಬೆಳಕಿಗೆ ಬಂದಿವೆ.
ಅದರಲ್ಲಿ 10 ಲಕ್ಷ ಮೌಲ್ಯದ ಅನುಮಾನ ಪಡಿತರ ಅಕ್ಕಿ ಲಾರಿ, ಮದ್ಯ ರಾತ್ರಿಯಿಂದ ಬೆಳಿಗ್ಗೆ 9ಗಂಟೆವರೆಗೆ ಇದ್ದ ಲಾರಿ ನಂತರ ಇಲ್ಲದೆ ಇರೋದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಬಳ್ಳಾರಿ ನಗರದಲ್ಲಿ ಕೆಲ ದಿನಗಳ ಹಿಂದೆ ( ರಾತ್ರಿ 2.30 ಗಂಟೆ) ಸಮಯದಲ್ಲಿ 10 ಲಕ್ಷ ರೂಪಾಯಿ ಮೌಲ್ಯದ ಪಡಿತರ ಅಕ್ಕಿ ವಾಹನವನ್ನು ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆಯ ಪೊಲೀಸ ಅಧಿಕಾರಿಗಳು ತಪಾಸಣೆ ಮಾಡಿ ಠಾಣೆಗೆ ತಂದು ನಿಲ್ಲಿಸಿಕೊಂಡಿದ್ದರು.
ರಾಯಚೂರುನಿಂದ ಛತ್ತೀಸ್ಗಢದ ವರೆಗೆ ಪಡಿತರ ಅಕ್ಕಿ ಸಾಗಾಟ
ರಾಯಚೂರದಿಂದ ಛತ್ತೀಸ್ಗಢಕ್ಕೆ ಸಾಗಣೆಯ ಮಾಡುತ್ತಿದ್ದ ವಾಹನವಾಗಿತ್ತು ವಾಹನಕ್ಕೆ ಆರ್.ಕೆ ಎಂಟರ್ಪ್ರೈಸಸ್ ರಾಯಚೂರು,ಬಳ್ಳಾರಿ ಎಂದು ಬಿಲ್ ಹಾಕಿ ರಾಯಚೂರುದಿಂದ ಛತ್ತೀಸ್ ಗಡಿಗೆ ಅಕ್ಕಿ ಸರಬರಾಜು ಮಾಡುತ್ತಿದ್ದ ಮತ್ತೊಂದು ಬಿಲ್ ಹಾಕಿ ಕಳಿಸಲಾಗಿತ್ತು. ಈ ವಾಹನಕ್ಕೆ ಬಳ್ಳಾರಿಯ ಹವಂಬಾವಿ ಪ್ರದೇಶದಲ್ಲಿ ಕಳಸಾಗಣಿಕೆ ಪಡಿತರ ಅಕ್ಕಿಯನ್ನು ತುಂಬಿದ್ದಾರೆ. ಇದಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಕೆಲ ಸಿಬ್ಬಂದಿಗಳು ಮಾತ್ರ ಇದೆ ಎನ್ನುವ ಆರೋಪ ಇದೆ.
ಮಧ್ಯರಾತ್ರಿದಿಂದ ಬೆಳಿಗ್ಗೆ 9 ಗಂಟೆಗೆ ಠಾಣೆಯಲ್ಲಿ ಲಾರಿ ವಾಹನವನ್ನು ಇಟ್ಟುಕೊಂಡು ಎಲ್ಲವೂ ಸರಿ ಇದ್ದಾವೆ ಎಂದು ಗಾಡಿಯನ್ನು ಬಿಟ್ಟು ಕಳಿಸಿರುವುದು ಎಷ್ಟರ ಮಟ್ಟಿಗೆ ಸರಿ ಎನ್ನುವ ಸಾರ್ವಜನಿಕ ಪ್ರಶ್ನೆ.
ಈ ಠಾಣೆಗೆ ನೂತನವಾಗಿ ಬಂದಿರುವ ಪೊಲೀಸ್ ಅಧಿಕಾರಿ ತೋರಣಗಲ್ಲು, ಸಂಡೂರು, ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸಿ ಬಳ್ಳಾರಿ ಎಪಿಎಂಸಿ ಠಾಣಿಗೆ ವರ್ಗಾವಣೆ ಆಗಿರುವ ರಫೀಕ್ ಅವರ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ ಸಾರ್ವಜನಿಕರು.
ಈಗಾಗಲೇ ಪಡಿತರ ಕಳಸಾಗಾಣಿಕೆ ದಂದೆ ನಡೆಯುತ್ತಿದ್ದು ಕಣ್ಣಿಗೆ ಕಂಡು ಕಾಣದಂತೆ ನಡೆಯುತ್ತದೆ ಇಂತಹ ಸಂದರ್ಭದಲ್ಲಿ ರಾಯಚೂರಿನಿಂದ ಛತ್ತೀಸ್ಗಢ ಗೆ ಬಿಲ್, ಬಳ್ಳಾರಿಯಲ್ಲಿ ಅಕ್ಕಿ, ಪೊಲೀಸ್ ಠಾಣೆಯಲ್ಲಿ ಗಾಡಿ,ಯಾವುದೇ ಪ್ರಕರಣ ಇಲ್ಲದೆ ಬಿಟ್ಟು ಕಳಿಸಿರುವುದು ಆಶ್ಚರ್ಯವಾಗಿದೆ. ಇನ್ನು ಈ ವಿಚಾರವಾಗಿ ಅಧಿಕಾರಿಗಳಿಗೆ ಕೇಳಿದರೆ ಇಲ್ಲ ನಮಗೆ ಗೊತ್ತಿಲ್ಲ ಎನ್ನುವ ಬೇಜವಾಬ್ದಾರಿ ಮಾತನಾಡುತ್ತಾರೆ.
ಲಾರಿ ಬಿಲ್ ಚೆಕ್ ಮಾಡಿದ್ದು ಯಾರು ?
ಗಣಿನಾಡು ಬಳ್ಳಾರಿ ನಗರದಲ್ಲಿ ಪೊಲೀಸರು ಲಾರಿ ಬಿಲ್ ಗಳು ಮದ್ಯರಾತ್ರಿ ಚೆಕ್ ಮಾಡಿದ್ದು ಯಾರು, ಸಾಧಾರಣ ಟೈಮ್ ನಲ್ಲಿ ಬಂದು ನೋಡಲು ಬರದೇ ಇರುವ ಅಧಿಕಾರಿಗಳು ಮದ್ಯ ರಾತ್ರಿ ಬಂದು ನೋಡಿರಬಹುದಾ. ಈಗಲೇ ರಫೀಕ್ ಅವರ ಮೇಲೆ ಕೆಲ ಸಿಬ್ಬಂದಿ ಮೇಲೆ ಆರೋಪ ಇವೆ. ಅಕ್ರಮ ಚಟವಟೆಕೆಗಳಿಗೆ ನಿರ್ದೇಶಕ ಕೀರ್ತಿ ಇದೇ ಲೋಕಾಯುಕ್ತ ಸಮಯದಲ್ಲಿ ಬಹುತೇಕ ಬಹಳ ಸಮಸ್ಯೆಗಳನ್ನು ಮಾಡಿದ್ದನ್ನು ನೊಂದವರು ತಿಳಿಸಿದ್ದಾರೆ.
“ಸಚಿವ ಸಂತೋಷ ಲಾಡ್ ಹೆಸರು ಹೇಳುವ ರಫೀಕ್”
ಠಾಣೆಯ ಅಧಿಕಾರಿ ರಫೀಕ್ ಪದೇ ಪದೇ ಸಚಿವ ಸಂತೋಷ್ ಲಾಡ್ ಹೆಸರು ಹೇಳಿಕೊಂಡು ಬಂದಿದ್ದಾನೆ ಎನ್ನುವ ಆರೋಪ ಸಹ ಇದೆ. ಈ ಅಕ್ರಮ ಅಕ್ಕಿ ಪಡಿತರದಲ್ಲಿ ಪೊಲೀಸ್ ಠಾಣೆಗೆ ಮಾಮೂಲು ಸಹ ಇದೆ ಎನ್ನುವ ಮಾಹಿತಿ ಸಹ ಇದೆ.
ಎಸ್ಪಿ ಅವರ ಕ್ರಮ ಯಾವಾಗ ?
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೋಭಾರಾಣಿ ಅವರು ಯಾವ ? ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಜಿಲ್ಲೆಗೆ ಬಳ್ಳಾರಿ ಪೊಲೀಸ್ ವರಿಷ್ಟಾಧಿಕಾರಿ ಅಧಿಕಾರ ಸ್ವೀಕರಿದ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆವೇ ಎನ್ನುವ ಅನುಮಾನ ಸಹ ಇದೆ ಎನ್ನುವ ಮಾತು ಸಾರ್ವಜನಿಕರಲ್ಲಿ ಕೇಳಿ ಬರುತ್ತಿದೆ.
ಒಟ್ಟಾರೆಯಾಗಿ ಸಿಎಂ ಸಿದ್ದರಾಮಯ್ಯ ಬಡವರಿಗೆ ನೀಡುವ ಪಡಿತರ ಅಕ್ಕಿ ಕಳ್ಳರ ಪಾಲಾಗುತ್ತಿದೆ, ಇನ್ನು ಪಡಿತರ ಅಕ್ಕಿಯ ವಿತರಕರು 1 ಕಿಲೋಗ್ರಾಂ ಗೆ 10 ರಿಂದ 12 ರೂಪಾಯಿ ಕೊಂಡುಕೊಳ್ಳುತ್ತಾರೆ ಎನ್ನುವ ಮಾಹಿತಿ ಸಹ ಇದೆ. ಇವರ ವಿರುದ್ಧ ಹಾಗೂ ಪಡಿತರ ಅಕ್ಕಿ ಮಾರಾಟ ಮಾಡುವ ಸಾರ್ವಜನಿಕರ ಮೇಲೆ ಕ್ರಮ ತೆಗೆದುಕೊಳ್ಳಬೇಕಿದೆ.
ಒಟ್ಟಾರೆಯಾಗಿ ಬಳ್ಳಾರಿ ಜಿಲ್ಲೆಯ ವಿವಿಧ ಠಾಣೆ ವ್ಯಾಪ್ತಿ ಅಧಿಕಾರಿಗಳಿಗೆ ಎಸ್ಪಿ ಅವರು ಯಾವ ರೀತಿ ಕ್ರಮ ತೆಗೆದುಕೊಳ್ಳುವರು ಕಾದು ನೋಡೊಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಸುದ್ದಿದಿನ.ಕಾಂ ಫಲಶೃತಿ | ಕಬ್ಬಿಣ ಬಿಸಾಡಿ ಓಡಿ ಹೋದ ಶಾಸಕರ ಆಪ್ತರು ; ಗೇಟ್ ಗೆ ಡಿಕ್ಕಿ, ಕ್ಯಾಮರಾಗಳಲ್ಲಿ ಸೆರೆ
-
ದಿನದ ಸುದ್ದಿ6 days ago
ವಕ್ಫ್ ತಿದ್ದುಪಡಿ ಕಾಯ್ದೆ- 2025 | ಇಂದು ಸುಪ್ರೀಂ ವಿಚಾರಣೆ
-
ರಾಜಕೀಯ4 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಕಾನೂನು ಮೂಲಕ ಪರಿಹಾರ ಕಂಡುಕೊಳ್ಳಿ : ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ
-
ದಿನದ ಸುದ್ದಿ5 days ago
ಅಂಬೇಡ್ಕರ್ ಸ್ಮರಣೆಯಿಂದ ದೇಶ ಪ್ರಗತಿಪರವಾಗಲು ಸಾಧ್ಯ : ಸಹಾಯಕ ಪ್ರಾಧ್ಯಾಪಕ ಷಣ್ಮುಖಪ್ಪ ಕೆ.ಎಚ್
-
ದಿನದ ಸುದ್ದಿ6 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಆರು ಮಂದಿ ಬಂಧನ
-
ದಿನದ ಸುದ್ದಿ4 days ago
ದಾವಣಗೆರೆ | ಮೊಬೈಲ್ ಕ್ಯಾಟೀನ್ ; ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ದಾವಣಗೆರೆ | ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ