Connect with us

ದಿನದ ಸುದ್ದಿ

ಶ್ರಾವಣ ಸಂಜೆಯ ಕಾಣಿಕೆ ಕೊಡಗು – ಕೇರಳ ಸಂತ್ರಸ್ತರ ಪುನರ್ವಸತಿಗೆ ಬಳಕೆ | ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಘೋಷಣೆ

Published

on

ಸುದ್ದಿದಿನ, ಅಲಬೂರು : ಶ್ರಾವಣ ಸಂಜೆಯ ಮೂವತ್ತು ದಿನಗಳ ಕಾರ್ಯಕ್ರಮದಲ್ಲಿ ಸಂಗ್ರಹವಾದ ಕಾಣಿಕೆಯನ್ನು ಕೊಡಗೂ,ಚಿಕ್ಕಮಗಳೂರು ಹಾಗೂ ಕೇರಳ ರಾಜ್ಯದಲ್ಲಿ ಉಂಟಾಗಿರುವ ಜಲ ಪ್ರಳಯದ ಸಂತ್ರಸ್ತರ ಪುನರ್ವಸತಿಗೆ ಬಳಕೆ ಮಾಡಲಾಗುವುದು ಎಂದು ತರಳಬಾಳು ಜಗದ್ಗುರು ಶಾಖಾ ಶ್ರೀ ಮಠದ ಡಾ.ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಪ್ರಕೃತಿಯ ಅವಘಡದ ಅನೇಕ ಸಂಧರ್ಭಗಳಲ್ಲಿ ಮಾನವೀಯ ನೆಲೆಯಲ್ಲಿ ಅಂತಃಕರಣದಿಂದ ತರಳಬಾಳು ಜಗದ್ಗುರು ಬೃಹನ್ಮಠ ನಾಡಿನ ಕಷ್ಟ ಪರಿಸ್ಥಿತಿಗಳಲ್ಲಿ ಮಿಡಿದಿದೆ.ಅಪಾಯಗಳಲ್ಲಿ ಸಿಲುಕಿ ನರಳಾಡುತ್ತಿರುವವ ಬಾಂಧವರು ಅಪಾರ ಪ್ರಮಾಣದ ಆಸ್ತಿ ಪಾಸ್ತಿ ವಂಚಿತರಾದ ಅವರ ಅಸಹಾಯಕತೆಯ ಆಕ್ರಂದನ ನಮ್ಮ ಮನಸ್ಸನ್ನು ಜರ್ಜರಿತಗೊಳಿಸಿದ್ದು.ಶ್ರಾವಣ ಸಂಜೆಯ ಮೂವತ್ತು ದಿನಗಳ ಕಾರ್ಯಕ್ರಮದಲ್ಲಿ ಸಂಗ್ರಹವಾದ ಹಣದ ಜೊತೆ ಇನ್ನೊಷ್ಟು ಸಂಗ್ರಹಿಸಿ ನಿರಾಶ್ರಿತರ ಕಷ್ಟದಲ್ಲಿಭಾಗಿಯಾಗುವುದಾಗಿ ತಿಳಿಸಿದರು .

ಕೊಟ್ಟೂರು ತಾಲ್ಲೂಕಿನ ಅಲಬೂರು ಗ್ರಾಮದಲ್ಲಿ ಶ್ರಾವಣ ಸಂಜೆಯ ಎಂಟನೇ ದಿನದ ಸಾನ್ನಿಧ್ಯ ವಹಿಸಿದ್ದ ಶ್ರೀಗಳು ಆಶೀರ್ವಚನ ನೀಡಿದ ಶ್ರೀಗಳು ಬಸವಣ್ಣ ಹನ್ನೆರಡನೆಯ ಶತಮಾನದ ಅಗ್ರಮಾನ್ಯರಾದ ವಿಶ್ವಖ್ಯಾತಿಯ ವಿಭೂತಿ ಪುರುಷ .ತಲತಲಾಂತರದಿಂದ ಆಚರಣೆಯಲ್ಲಿದ್ದ ಅವಿವೇಕತನದ ಸಂಪ್ರದಾಯಗಳನ್ನು ದಿಕ್ಕರಿಸಿ ಸಮ ಸಮಾಜದ ನಿರ್ಮಾತೃ ಧಾರ್ಮಿಕ ವಿಮರ್ಶೆಯ ಜೊತೆ ಸಾಮಾಜಿಕ ವಿಮರ್ಶೆ,ರಾಜಕೀಯ ವಿಮರ್ಶೆ, ಸಾಹಿತ್ಯ ವಿಮರ್ಶೆಯ ವೈಚಾರಿಕ ಕ್ರಾಂತಿಗೆ ನಾಂದಿ ಹಾಡಿ ಯಶಸ್ಸು ಗಳಿಸಿದ ಮಹಾಮಾನವತಾವಾದಿಯ ಹಾದಿಯಲ್ಲಿ ಹೆಜ್ಜೆ ಹಾಕಲು ಕರೆ ನೀಡಿದರು.

‘ಬಸವಣ್ಣನವರ ಲೋಕ ವಿಮರ್ಶೆ’ ಕುರಿತು ಉಪನ್ಯಾಸ ನೀಡಿದ ಚಿಂತಕ ಡಾ.ಎಸ್ ಆರ್ ಪುರುಷೋತ್ತಮ ವಾಟಿಗಾರ್ ಮಾತನಾಡಿ ಸಾಮಾನ್ಯ ಜನರಿಂದ ಹಿಡಿದು ಅಸಮಾನ್ಯ ಜನರ ವರೆಗೆ ನಡೆ-ನುಡಿಯ ಅಸಮನಾತೆಯ ಸಾಮರಸ್ಯ ಎದ್ದು ಕಾಣುತ್ತಿದೆ.ಆದರೆ 12 ನೆಯ ಶತಮಾನದ ವಚನಕಾರರ ನುಡಿ-ನಡೆಯಲ್ಲಿ ಯಾವುದೇ ವ್ಯತ್ಯಾಸ ಕಾಣಸಿಗುವುದಿಲ್ಲ,ಆಡುವ ಮಾತುಗಳಲ್ಲಿ ಅನುಷ್ಠಾನ ಇಲ್ಲದೇ ಹೋದರೆ ಆ ಮಾತಿನ ಮೌಲ್ಯ ಕಳೆದು ಹೋಗುತ್ತದೆ, ಹೃದಯ ವೈಶ್ಯಾಲ್ಯತೆ ಇಲ್ಲದೇ ಹೋದರೆ ಮನುಷ್ಯತ್ವ ತೆರೆಯ ಮರೆಗೆ ಸರಿಯುತ್ತದೆ.ಸುಧಾರಣೆ ತನ್ನಿಂದಲೇ ಆಗಬೇಕೆಂದು ಬಸವಣ್ಣ ತನ್ನ ಹುಟ್ಟಿನ ಶ್ರೇಷ್ಠತೆಯನ್ನು ಅಲ್ಲಗಳೆದು ; ನಾನು ಹಾರವನೆಂದರೆ ನಮ್ಮ ಶರಣರು ನಗುವರಯ್ಯ ಎಂದು ತನ್ನನ್ನು ತಾನೇ ತುಚ್ಚೀಕರಿಸಿಕೊಳ್ಳುವರು ಬಸವಣ್ಣನವರ ಸಂದೇಶಗಳು ವಿಶ್ವ ವ್ಯಾಪ್ತಿಯಲ್ಲಿ ಅಸ್ತಿತ್ವದಲ್ಲಿವೆ.ದ್ವೇಷದಿಂದ ದ್ವೇಷವನ್ನು ಯಾರೂ ಗೆಲ್ಲಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಅಣ್ಣನವರು ಹೇಳಿದ್ದು ‘ ತನಗೆ ಮುನಿದವರಿಗೆ ತಾ ಮುನಿಯಲೇಕಯ್ಯ ಎಂದು,ಬಡತನ ಮತ್ತು ಸಿರಿತನ ಮನುಷ್ಯನ ಎರಡು ಆಯಾಮಗಳನ್ನು ಸೂಚಿಸುತ್ತದೆ.ಹಾಗಾಗಿ ಬಡತನ ಬಂದರೆ ಕುಗ್ಗಿದೆ ಸಿರಿತನ ಬಂದರೆ ಹಿಗ್ಗದೇ ಬದುಕನ್ನು ಸಾರ್ಥಕ ಪಡಿಸಿಕೊಳ್ಳುವ ನಿಟ್ಟಿನಲ್ಲಿ ನಮಗೆ ದಾರಿದೀಪವಾಗುವುದು ಬಸವಣ್ಣನವರ ವಚನಗಳು ಎಂದು ಅಭಿಪ್ರಾಯ ಪಟ್ಟರು.

ಶಿವಮೊಗ್ಗೆಯ ವಿಧಾನಪರಿಷತ್ ಸದಸ್ಯರು, ಉದ್ಯಮಿಗಳಾದ ಶ್ರೀ ಎಸ್.ರುದ್ರೇಗೌಡ್ರು ಮಾತನಾಡಿ, ತರಳಬಾಳು ಜಗದ್ಗುರು ಬೃಹನ್ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರು ಗ್ರಾಮೀಣರ ಶಿಕ್ಷಣಕ್ಕೆ ಆಸರೆಯಾಗಿ ನಿಂತ ಮಹಾನ್ ಚೇತನರಾಗಿ ಹಳ್ಳಿ ಹಳ್ಳಿ ಗಳಲ್ಲಿ ನೂರಾರು ಶಾಲಾ ಕಾಲೇಜುಗಳನ್ನು ತೆರೆದು ಶಿಕ್ಷಣ ದಾಸೋಹಿಯಾಗಿ ಲಕ್ಷಾಂತರ ಜನರ ವಿಧ್ಯಾಭ್ಯಾಸಕ್ಕೆ ಕಾರಣರಾದರು. ಈಗಿನ ಜಗದ್ಗುರುವರ್ಯರಾದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು ಈ ದೇಶದ ಅಪ್ರತಿಮ ವಿದ್ವತ್ ಪಂಡಿತೋತ್ತಮರಾಗಿದ್ದರೂ ಸಹ ರೈತರ ಬಾಳಿಗೆ ಬೆಳಕಾಗುವ ಯಶಸ್ವಿ ಯೋಜನೆಗಳ ಸಾಕಾರ ಮೂರ್ತಿಯಾಗಿದ್ದು ರೈತ ಮೆಚ್ಚಿದ ,ದೇಶ ಒಪ್ಪಿದ ಗುರುವರ್ಯರಾಗಿದ್ದಾರೆ. ಅಂತೆಯೇ ಪ್ರಗತಿ ಪರ ಚಿಂತನೆಯ ಶರಣತತ್ವ ದಾಸೋಹಿಗಳಾದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಈ ನಾಡಿನ ಸಾಂಸ್ಕೃತಿಕ ಜಂಗಮರಾಗಿ ಶರಣರ ಆಶಯಗಳನ್ನು ಜನರ ಮನದಲ್ಲಿ ಬಿತ್ತುವ ಮೂಲಕ ಬದುಕಿನ ಅರ್ಥಪೂರ್ಣ ಹಸನತೆಗೆ ಕಾರಣೀಕೃತರಾಗಿದ್ದಾರೆ ಎಂದರು.ಇದೇ ಸಂದರ್ಭದಲ್ಲಿ ನೆರೆ ಸಂತ್ರಸ್ತರ ಪರಿಹಾರನಿಧಿಗೆ 10 ಸಾವಿರ ರೂಗಳ ದೇಣಿಗೆಯನ್ನು ಶ್ರೀಗಳಿಗೆ ಸಲ್ಲಿಸಿದರು.

ಸಂಜೆ ನಾಲ್ಕು ಗಂಟೆಯಿಂದಲೂ ಶ್ರೀ ಗಳ ಪಾದಯಾತ್ರೆ ಗ್ರಾಮದಲ್ಲಿ ಜರುಗಿತು.ಗ್ರಾಮವೂ ತಳಿರ ತೋರಣ ರಂಗೋಲಿಯಿಂದ ಅಲಂಕೃತಗೊಂಡು ಹಬ್ಬದ ವಾತಾವರಣವೇ ಮೈದಾಳಿತ್ತು. ವಚನ ಕಂಠಪಾಠ ಸ್ಪರ್ಧೆಯ ವಿಜೇತ ಮಕ್ಕಳಿಗೆ, ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ
ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕರಿಸಲಾಯಿತು.

ವೇದಿಕೆಯ ಮೇಲೆ ಕರ್ನಾಟಕ ಬೀಜ ನಿಗಮದ ನಿರ್ದೇಶಕರಾದ ಎಸ್.ರಾಜೇಂದ್ರ ಪ್ರಸಾದ್, ಡಾ.ಮೂಗಪ್ಪ,ವಸಂತ ಕೊಟ್ರೇಶ್,ಸಿದ್ದಲಿಂಗಪ್ಪ,ಸುಶೀಲಮ್ಮ ,ಬಿ.ಕೊಟ್ರೇಶ್ ಹಾಜರಿದ್ದರು.

ಶಿಕ್ಷಕ ಹೆಚ್ ನಾಗರಾಜ್ ಸ್ವಾಗತಿಸಿದರು,ಸಾಣೇಹಳ್ಳಿಯ ಶಿವ ಸಂಚಾರದ ತಂಡದ ಜ್ಯೋತಿ. ಕೆ,ದ್ರಾಕ್ಷಾಯಿಣಿ ಕೆ ಹಾಗೂ ನಾಗರಾಜ್ ಹೆಚ್.ಎಸ್ ಶರಣ್ ತಂಡದವರಿಂದ ವಚನ ಗಾಯನ ನಡೆಯಿತು. ಮಕ್ಕಳು ವಚನ ನೃತ್ಯ ರೂಪಕಗಳನ್ನು ಪ್ರಸ್ತುತಿ ಪಡಿಸಿದರು. ಅಧ್ಯಾಪಕ ಹೆಚ್.ಎಸ್ ಯೋಗೀಶ್ ಕಾರ್ಯಕ್ರಮ ನಿರೂಪಿಸಿದರು.

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ19 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ20 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ20 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ20 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ21 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ22 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ22 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending