ದಿನದ ಸುದ್ದಿ
ಶ್ರಾವಣ ಸಂಜೆಯ ಕಾಣಿಕೆ ಕೊಡಗು – ಕೇರಳ ಸಂತ್ರಸ್ತರ ಪುನರ್ವಸತಿಗೆ ಬಳಕೆ | ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಘೋಷಣೆ

ಸುದ್ದಿದಿನ, ಅಲಬೂರು : ಶ್ರಾವಣ ಸಂಜೆಯ ಮೂವತ್ತು ದಿನಗಳ ಕಾರ್ಯಕ್ರಮದಲ್ಲಿ ಸಂಗ್ರಹವಾದ ಕಾಣಿಕೆಯನ್ನು ಕೊಡಗೂ,ಚಿಕ್ಕಮಗಳೂರು ಹಾಗೂ ಕೇರಳ ರಾಜ್ಯದಲ್ಲಿ ಉಂಟಾಗಿರುವ ಜಲ ಪ್ರಳಯದ ಸಂತ್ರಸ್ತರ ಪುನರ್ವಸತಿಗೆ ಬಳಕೆ ಮಾಡಲಾಗುವುದು ಎಂದು ತರಳಬಾಳು ಜಗದ್ಗುರು ಶಾಖಾ ಶ್ರೀ ಮಠದ ಡಾ.ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಪ್ರಕೃತಿಯ ಅವಘಡದ ಅನೇಕ ಸಂಧರ್ಭಗಳಲ್ಲಿ ಮಾನವೀಯ ನೆಲೆಯಲ್ಲಿ ಅಂತಃಕರಣದಿಂದ ತರಳಬಾಳು ಜಗದ್ಗುರು ಬೃಹನ್ಮಠ ನಾಡಿನ ಕಷ್ಟ ಪರಿಸ್ಥಿತಿಗಳಲ್ಲಿ ಮಿಡಿದಿದೆ.ಅಪಾಯಗಳಲ್ಲಿ ಸಿಲುಕಿ ನರಳಾಡುತ್ತಿರುವವ ಬಾಂಧವರು ಅಪಾರ ಪ್ರಮಾಣದ ಆಸ್ತಿ ಪಾಸ್ತಿ ವಂಚಿತರಾದ ಅವರ ಅಸಹಾಯಕತೆಯ ಆಕ್ರಂದನ ನಮ್ಮ ಮನಸ್ಸನ್ನು ಜರ್ಜರಿತಗೊಳಿಸಿದ್ದು.ಶ್ರಾವಣ ಸಂಜೆಯ ಮೂವತ್ತು ದಿನಗಳ ಕಾರ್ಯಕ್ರಮದಲ್ಲಿ ಸಂಗ್ರಹವಾದ ಹಣದ ಜೊತೆ ಇನ್ನೊಷ್ಟು ಸಂಗ್ರಹಿಸಿ ನಿರಾಶ್ರಿತರ ಕಷ್ಟದಲ್ಲಿಭಾಗಿಯಾಗುವುದಾಗಿ ತಿಳಿಸಿದರು .
ಕೊಟ್ಟೂರು ತಾಲ್ಲೂಕಿನ ಅಲಬೂರು ಗ್ರಾಮದಲ್ಲಿ ಶ್ರಾವಣ ಸಂಜೆಯ ಎಂಟನೇ ದಿನದ ಸಾನ್ನಿಧ್ಯ ವಹಿಸಿದ್ದ ಶ್ರೀಗಳು ಆಶೀರ್ವಚನ ನೀಡಿದ ಶ್ರೀಗಳು ಬಸವಣ್ಣ ಹನ್ನೆರಡನೆಯ ಶತಮಾನದ ಅಗ್ರಮಾನ್ಯರಾದ ವಿಶ್ವಖ್ಯಾತಿಯ ವಿಭೂತಿ ಪುರುಷ .ತಲತಲಾಂತರದಿಂದ ಆಚರಣೆಯಲ್ಲಿದ್ದ ಅವಿವೇಕತನದ ಸಂಪ್ರದಾಯಗಳನ್ನು ದಿಕ್ಕರಿಸಿ ಸಮ ಸಮಾಜದ ನಿರ್ಮಾತೃ ಧಾರ್ಮಿಕ ವಿಮರ್ಶೆಯ ಜೊತೆ ಸಾಮಾಜಿಕ ವಿಮರ್ಶೆ,ರಾಜಕೀಯ ವಿಮರ್ಶೆ, ಸಾಹಿತ್ಯ ವಿಮರ್ಶೆಯ ವೈಚಾರಿಕ ಕ್ರಾಂತಿಗೆ ನಾಂದಿ ಹಾಡಿ ಯಶಸ್ಸು ಗಳಿಸಿದ ಮಹಾಮಾನವತಾವಾದಿಯ ಹಾದಿಯಲ್ಲಿ ಹೆಜ್ಜೆ ಹಾಕಲು ಕರೆ ನೀಡಿದರು.
‘ಬಸವಣ್ಣನವರ ಲೋಕ ವಿಮರ್ಶೆ’ ಕುರಿತು ಉಪನ್ಯಾಸ ನೀಡಿದ ಚಿಂತಕ ಡಾ.ಎಸ್ ಆರ್ ಪುರುಷೋತ್ತಮ ವಾಟಿಗಾರ್ ಮಾತನಾಡಿ ಸಾಮಾನ್ಯ ಜನರಿಂದ ಹಿಡಿದು ಅಸಮಾನ್ಯ ಜನರ ವರೆಗೆ ನಡೆ-ನುಡಿಯ ಅಸಮನಾತೆಯ ಸಾಮರಸ್ಯ ಎದ್ದು ಕಾಣುತ್ತಿದೆ.ಆದರೆ 12 ನೆಯ ಶತಮಾನದ ವಚನಕಾರರ ನುಡಿ-ನಡೆಯಲ್ಲಿ ಯಾವುದೇ ವ್ಯತ್ಯಾಸ ಕಾಣಸಿಗುವುದಿಲ್ಲ,ಆಡುವ ಮಾತುಗಳಲ್ಲಿ ಅನುಷ್ಠಾನ ಇಲ್ಲದೇ ಹೋದರೆ ಆ ಮಾತಿನ ಮೌಲ್ಯ ಕಳೆದು ಹೋಗುತ್ತದೆ, ಹೃದಯ ವೈಶ್ಯಾಲ್ಯತೆ ಇಲ್ಲದೇ ಹೋದರೆ ಮನುಷ್ಯತ್ವ ತೆರೆಯ ಮರೆಗೆ ಸರಿಯುತ್ತದೆ.ಸುಧಾರಣೆ ತನ್ನಿಂದಲೇ ಆಗಬೇಕೆಂದು ಬಸವಣ್ಣ ತನ್ನ ಹುಟ್ಟಿನ ಶ್ರೇಷ್ಠತೆಯನ್ನು ಅಲ್ಲಗಳೆದು ; ನಾನು ಹಾರವನೆಂದರೆ ನಮ್ಮ ಶರಣರು ನಗುವರಯ್ಯ ಎಂದು ತನ್ನನ್ನು ತಾನೇ ತುಚ್ಚೀಕರಿಸಿಕೊಳ್ಳುವರು ಬಸವಣ್ಣನವರ ಸಂದೇಶಗಳು ವಿಶ್ವ ವ್ಯಾಪ್ತಿಯಲ್ಲಿ ಅಸ್ತಿತ್ವದಲ್ಲಿವೆ.ದ್ವೇಷದಿಂದ ದ್ವೇಷವನ್ನು ಯಾರೂ ಗೆಲ್ಲಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಅಣ್ಣನವರು ಹೇಳಿದ್ದು ‘ ತನಗೆ ಮುನಿದವರಿಗೆ ತಾ ಮುನಿಯಲೇಕಯ್ಯ ಎಂದು,ಬಡತನ ಮತ್ತು ಸಿರಿತನ ಮನುಷ್ಯನ ಎರಡು ಆಯಾಮಗಳನ್ನು ಸೂಚಿಸುತ್ತದೆ.ಹಾಗಾಗಿ ಬಡತನ ಬಂದರೆ ಕುಗ್ಗಿದೆ ಸಿರಿತನ ಬಂದರೆ ಹಿಗ್ಗದೇ ಬದುಕನ್ನು ಸಾರ್ಥಕ ಪಡಿಸಿಕೊಳ್ಳುವ ನಿಟ್ಟಿನಲ್ಲಿ ನಮಗೆ ದಾರಿದೀಪವಾಗುವುದು ಬಸವಣ್ಣನವರ ವಚನಗಳು ಎಂದು ಅಭಿಪ್ರಾಯ ಪಟ್ಟರು.
ಶಿವಮೊಗ್ಗೆಯ ವಿಧಾನಪರಿಷತ್ ಸದಸ್ಯರು, ಉದ್ಯಮಿಗಳಾದ ಶ್ರೀ ಎಸ್.ರುದ್ರೇಗೌಡ್ರು ಮಾತನಾಡಿ, ತರಳಬಾಳು ಜಗದ್ಗುರು ಬೃಹನ್ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರು ಗ್ರಾಮೀಣರ ಶಿಕ್ಷಣಕ್ಕೆ ಆಸರೆಯಾಗಿ ನಿಂತ ಮಹಾನ್ ಚೇತನರಾಗಿ ಹಳ್ಳಿ ಹಳ್ಳಿ ಗಳಲ್ಲಿ ನೂರಾರು ಶಾಲಾ ಕಾಲೇಜುಗಳನ್ನು ತೆರೆದು ಶಿಕ್ಷಣ ದಾಸೋಹಿಯಾಗಿ ಲಕ್ಷಾಂತರ ಜನರ ವಿಧ್ಯಾಭ್ಯಾಸಕ್ಕೆ ಕಾರಣರಾದರು. ಈಗಿನ ಜಗದ್ಗುರುವರ್ಯರಾದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು ಈ ದೇಶದ ಅಪ್ರತಿಮ ವಿದ್ವತ್ ಪಂಡಿತೋತ್ತಮರಾಗಿದ್ದರೂ ಸಹ ರೈತರ ಬಾಳಿಗೆ ಬೆಳಕಾಗುವ ಯಶಸ್ವಿ ಯೋಜನೆಗಳ ಸಾಕಾರ ಮೂರ್ತಿಯಾಗಿದ್ದು ರೈತ ಮೆಚ್ಚಿದ ,ದೇಶ ಒಪ್ಪಿದ ಗುರುವರ್ಯರಾಗಿದ್ದಾರೆ. ಅಂತೆಯೇ ಪ್ರಗತಿ ಪರ ಚಿಂತನೆಯ ಶರಣತತ್ವ ದಾಸೋಹಿಗಳಾದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಈ ನಾಡಿನ ಸಾಂಸ್ಕೃತಿಕ ಜಂಗಮರಾಗಿ ಶರಣರ ಆಶಯಗಳನ್ನು ಜನರ ಮನದಲ್ಲಿ ಬಿತ್ತುವ ಮೂಲಕ ಬದುಕಿನ ಅರ್ಥಪೂರ್ಣ ಹಸನತೆಗೆ ಕಾರಣೀಕೃತರಾಗಿದ್ದಾರೆ ಎಂದರು.ಇದೇ ಸಂದರ್ಭದಲ್ಲಿ ನೆರೆ ಸಂತ್ರಸ್ತರ ಪರಿಹಾರನಿಧಿಗೆ 10 ಸಾವಿರ ರೂಗಳ ದೇಣಿಗೆಯನ್ನು ಶ್ರೀಗಳಿಗೆ ಸಲ್ಲಿಸಿದರು.
ಸಂಜೆ ನಾಲ್ಕು ಗಂಟೆಯಿಂದಲೂ ಶ್ರೀ ಗಳ ಪಾದಯಾತ್ರೆ ಗ್ರಾಮದಲ್ಲಿ ಜರುಗಿತು.ಗ್ರಾಮವೂ ತಳಿರ ತೋರಣ ರಂಗೋಲಿಯಿಂದ ಅಲಂಕೃತಗೊಂಡು ಹಬ್ಬದ ವಾತಾವರಣವೇ ಮೈದಾಳಿತ್ತು. ವಚನ ಕಂಠಪಾಠ ಸ್ಪರ್ಧೆಯ ವಿಜೇತ ಮಕ್ಕಳಿಗೆ, ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ
ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕರಿಸಲಾಯಿತು.
ವೇದಿಕೆಯ ಮೇಲೆ ಕರ್ನಾಟಕ ಬೀಜ ನಿಗಮದ ನಿರ್ದೇಶಕರಾದ ಎಸ್.ರಾಜೇಂದ್ರ ಪ್ರಸಾದ್, ಡಾ.ಮೂಗಪ್ಪ,ವಸಂತ ಕೊಟ್ರೇಶ್,ಸಿದ್ದಲಿಂಗಪ್ಪ,ಸುಶೀಲಮ್ಮ ,ಬಿ.ಕೊಟ್ರೇಶ್ ಹಾಜರಿದ್ದರು.
ಶಿಕ್ಷಕ ಹೆಚ್ ನಾಗರಾಜ್ ಸ್ವಾಗತಿಸಿದರು,ಸಾಣೇಹಳ್ಳಿಯ ಶಿವ ಸಂಚಾರದ ತಂಡದ ಜ್ಯೋತಿ. ಕೆ,ದ್ರಾಕ್ಷಾಯಿಣಿ ಕೆ ಹಾಗೂ ನಾಗರಾಜ್ ಹೆಚ್.ಎಸ್ ಶರಣ್ ತಂಡದವರಿಂದ ವಚನ ಗಾಯನ ನಡೆಯಿತು. ಮಕ್ಕಳು ವಚನ ನೃತ್ಯ ರೂಪಕಗಳನ್ನು ಪ್ರಸ್ತುತಿ ಪಡಿಸಿದರು. ಅಧ್ಯಾಪಕ ಹೆಚ್.ಎಸ್ ಯೋಗೀಶ್ ಕಾರ್ಯಕ್ರಮ ನಿರೂಪಿಸಿದರು.
ದಿನದ ಸುದ್ದಿ
ಮಾಯಕೊಂಡ | ಹಿರೇಮದಕರಿನಾಯಕ ಜೀರ್ಣೋದ್ಧಾರ ಸಮಿತಿಯ ತಿಂಗಳ ಸಭೆ : ಸನ್ಮಾನ

ಸುದ್ದಿದಿನ, ದಾವಣಗೆರೆ : ಮಾಯಕೊಂಡದ ಹಿರೇಮದಕರಿನಾಯಕ ಜೀರ್ಣೋದ್ಧಾರ ಸಮಿತಿಯ ವತಿಯಿಂದ ಭಾನುವಾರ ತಿಂಗಳ ಸಭೆ ನಡೆಸಲಾಯಿತು.
ಈ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜೇತರಾದ ಹುಚ್ಚವನಹಳ್ಳಿ ಗ್ರಾಮದ ಕೆಜಿ ಸತೀಶ್ ಮತ್ತಿ ಪಂಚಾಯಿತಿಯ ಎನ್. ಎಂ. ಮಂಜುನಾಥ ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಎಂಎಸ್ಸಿ ಫುಡ್ ಟೆಕ್ನಾಲಜಿ ವಿಭಾಗಕ್ಕೆ ಪ್ರಥಮ ಸ್ಥಾನ ಗೋಲ್ಡ್ ಮೆಡಲ್ ಗಳೆಸಿದ ಸಮಾಜದ ಎನ್ ವಿನಯ್ ಗೆ ಸನ್ಮಾನಿಸಲಾಯಿತು.
ಸಭೆಯಲ್ಲಿ ಸುನಿಲ್ ಜಿಎಲ್ ಹುಚ್ಚವನಹಳ್ಳಿ, ಕಂಬರಾಜ್ ದೊರೆಸ್ವಾಮಿ, ದೇವರಾಜ್, ರಂಗಸ್ವಾಮಿ, ಶಿವಕುಮಾರ್, ಶ್ರೀಧರ್ , ಶಶಿಧರ್ ಹಾಗೂ ಸಮಿತಿಯ ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಡಾ. ಎಚ್ ಕೆ ನಾಗರಾಜ ಅವರಿಗೆ ‘ರಾಷ್ಟ್ರೀಯ ವೈದ್ಯ ರತ್ನ’ ಪ್ರಶಸ್ತಿ ಪ್ರದಾನ

ಸುದ್ದಿದಿನ, ಬೆಂಗಳೂರು : ಎಂ ಎಸ್ ರಾಮಯ್ಯ ಹಾಸ್ಟೆಲ್ ಯೂರೋ ಡಿಪಾರ್ಟಮೆಂಟ ಎಚ್ ಓ ಡಿ ಪ್ರೋಫೇಸರ್ ಡಾ. ಎಚ್ ಕೆ ನಾಗರಾಜ ಅವರನ್ನು ರಾಷ್ಟ್ರೀಯ ವೈದ್ಯ ರತ್ನ ಪ್ರಶಸ್ತಿಯನ್ನು ಸರ್ ಎಂ ವಿಶ್ವೇಶ್ವರಯ್ಯ ಪ್ರತಿಷ್ಠಿತ ಸಂಸ್ಥೆಯು ನೀಡಿ ಗೌರವಿಸಿತು.
ಬೆಂಗಳೂರಿನ ಸಾಂಸ್ಕೃತಿಕ ಸಾಹಿತ್ಯಕ್ಕೆ ಹೆಸರಾದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸರ್ ಎಂ ವಿಶ್ವೇಶ್ವರಯ್ಯ ಪ್ರತಿಷ್ಠಿತ ಸಂಸ್ಥೆ ಬೆಳ್ಳಿಮಹೋತ್ಸವದಲ್ಲಿ ಹಲವಾರು ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಮಾಡಲಾಯಿತು.
ಹಾಗೂ ಪ್ರೋಫೇಸರೆ ದೊಡ್ಡರಂಗೇಗೌಡರು ಹಾಗು ಐ ಎ ಎಸ್ ಅಧಿಕಾರಿ ತಿಮ್ಮೇಗೌಡರು ಉಪಸ್ಥಿತರಿದ್ದು,
ಸರ್ಕಾರ ಮಾಡುವಂತಹ ಕೆಲಸವನ್ನು ಸರ್ ಎಂ ವಿಶ್ವೇಶ್ವರಯ್ಯ ರಮೇಶ್ ಸರ್ವೇ ಅವರು ನಿರಂತರ ಇಪ್ಪತ್ತೈದು ವರ್ಷಗಳ ಲ್ಲಿ ಸಾರ್ಥಕ ಸೇವೆ ಸಲ್ಲುತ್ತಿದೆ ಎಂದು ಅಭಪ್ರಾಯಪಟ್ಟರು.
ಹಾಗೆ ಈ ಕಾರ್ಯಕ್ರಮದಲ್ಲಿ ಗಣ್ಯರು, ಸ್ವಾಮೀಜಿಗಳು ಕಾರ್ಯಕ್ರಮ ದಲ್ಲಿ ಭಾಗಿಯಾಗಿದ್ದಾರು ಎಂದು ಶ್ರೀಮತಿ ವೀಣಾ ಮಹಾಂತೇಶ ಸಂತಸವನ್ನು ಹಂಚಿಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಜನಗಣರಾಜ್ಯೋತ್ಸವದ ಸಂದೇಶಕ್ಕೆ ಕಿವಿಗೊಡೋಣ

- ನಾ ದಿವಾಕರ
ಕಳೆದ 60 ದಿನಗಳಿಂದ ದೆಹಲಿಯ ಸುತ್ತಲೂ ಬೀಡುಬಿಟ್ಟಿರುವ ದೇಶದ ರೈತ ಸಮುದಾಯದ ದಿಟ್ಟ ಹೋರಾಟಕ್ಕೆ ಕೊನೆಗೂ ಆಡಳಿತ ವ್ಯವಸ್ಥೆ ಮಣಿದಿದೆ. ಗಣರಾಜ್ಯೋತ್ಸವ ದಿನದಂದು ರೈತರು ರಾಜಧಾನಿ ದೆಹಲಿಯಲ್ಲಿ ಟ್ರಾಕ್ಟರ್ ಮೆರವಣಿಗೆಯ ಮೂಲಕ ಜನಗಣರಾಜ್ಯೋತ್ಸವ ಆಚರಿಸುವ ಕಾರ್ಯಕ್ರಮ ಹಮ್ಮಿಕೊಂಡಿರುವುದು ಇಡೀ ದೇಶದಲ್ಲಿ ಹೋರಾಟದ ಅಲೆಗಳನ್ನು ಸೃಷ್ಟಿಸಿದೆ.
ಟ್ರಾಕ್ಟರ್ ಪೆರೇಡ್ಗೆ ಅನುಮತಿ ನೀಡುವುದಿಲ್ಲ ಎಂಬ ಹಠಮಾರಿ ಧೋರಣೆಯಿಂದ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸ್ ಇಲಾಖೆ ಹಿಂದೆ ಸರಿದಿದ್ದರೆ ಅದು ಔದಾರ್ಯವೇನೂ ಅಲ್ಲ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನಾಗ್ರಹಕ್ಕೆ ಎಂತಹುದೇ ಸರ್ಕಾರವಾದರೂ ಮಣಿಯಲೇಬೇಕು ಎನ್ನುವುದನ್ನು ಕೇಂದ್ರ ಸರ್ಕಾರ ಅರ್ಥಮಾಡಿಕೊಳ್ಳಬೇಕಿದೆ. ರೈತರ ಟ್ರಾಕ್ಟರ್ ಪೆರೇಡ್ನಲ್ಲಿ ಎರಡು ಲಕ್ಷ ಟ್ರಾಕ್ಟರ್ಗಳ ಮೆರವಣಿಗೆಯೇ ರಾಷ್ಟ್ರ ಮಟ್ಟದಲ್ಲಿ ಸಂಚಲನ ಮೂಡಿಸಲಿದೆ. ಎಲ್ಲ ರಾಜ್ಯಗಳ ರಾಜಧಾನಿಗಳಲ್ಲಿ ಇದೇ ರೀತಿಯ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ ಸರ್ಕಾರವೂ ಸೇರಿದಂತೆ ಬಿಜೆಪಿ ಆಡಳಿತದ ಎಲ್ಲ ರಾಜ್ಯಗಳಲ್ಲಿ ಈ ಜನಗಣರಾಜ್ಯೋತ್ಸವಕ್ಕೆ ಅಡ್ಡಿ ಆತಂಕ ಉಂಟುಮಾಡುವ ಪ್ರಯತ್ನಗಳು ನಡೆದಿವೆ. ಉತ್ತರಪ್ರದೇಶದ ಪೆಟ್ರೋಲ್ ಬಂಕ್ ಗಳಲ್ಲಿ ಟ್ರಾಕ್ಟರ್ ಗಳಿಗೆ ಪೆಟ್ರೋಲ್/ಡೀಸೆಲ್ ನೀಡುವುದಿಲ್ಲ ಎಂಬ ಬೋರ್ಡ್ಗಳನ್ನು ನೇತುಹಾಕಲಾಗಿದೆ. ಕರ್ನಾಟಕದ ಬೆಳಗಾವಿಯಲ್ಲಿ ಬೆಂಗಳೂರಿಗೆ ಹೊರಟಿದ್ದ ರೈತರ ಟ್ರಾಕ್ಟರ್ ಗಳನ್ನು ವಶಪಡಿಸಿಕೊಳ್ಳುವ ಬೆದರಿಕೆ ಹಾಕಲಾಗಿದೆ.
ದೆಹಲಿಯ ಸುತ್ತ ನೆರೆದಿರುವ ರೈತರ ಮುಷ್ಕರವನ್ನು ಭಂಗಗೊಳಿಸಲು ಸಾಕಷ್ಟು ವಿಧ್ವಂಸಕ ಪ್ರಯತ್ನಗಳು ನಡೆದಿವೆ. ಲಕ್ಷಾಂತರ ರೈತರು ಸೇರಿರುವ ಕಡೆ ಪ್ರಕ್ಷುಬ್ಧ ವಾತಾವರಣ ಉಂಟುಮಾಡಲು, ಗಲಭೆ ಸೃಷ್ಟಿಸಲು ಸಂಚು ನಡೆಸಿದ್ದನ್ನು ರೈತರೇ ಕಂಡುಹಿಡಿದು, ಈ ಕೃತ್ಯಕ್ಕೆ ಮುಂದಾಗಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇಂತಹ ಮೂರು ನಾಲ್ಕು ಘಟನೆಗಳು ಈಗಾಗಲೇ ನಡೆದಿವೆ.
ದೆಹಲಿಯಲ್ಲಿ ನೆರೆದಿರುವುದು ರೈತರೇ ಅಲ್ಲ ಎಂದಿದ್ದಾಯಿತು, ದಲ್ಲಾಳಿಗಳು , ಕಾಂಗ್ರೆಸ್ ಏಜೆಂಟರು ಎಂದು ಹೀಗಳೆದಿದ್ದಾಯಿತು. ಇದು ವಿರೋಧ ಪಕ್ಷಗಳ ಕುಮ್ಮಕ್ಕು, ಪಿತೂರಿ ಎಂದು ಆರೋಪ ಹೊರಿಸಿದ್ದಾಯಿತು. ದೆಹಲಿಯ ಸುತ್ತ ಐದು ಗಡಿಗಳಲ್ಲಿ ರಸ್ತೆ ಕಂದಕಗಳನ್ನು ತೋಡಿ ಮಾರ್ಗ ಬಂದ್ ಮಾಡಲಾಯಿತು. ಬೃಹತ್ ಗಾತ್ರದ ಸಿಮೆಂಟ್ ಬ್ಯಾರಿಕೇಡ್, ಮುಳ್ಳು ತಂತಿ, ಜೆಸಿಬಿ ಹೀಗೆ ಕೃತಕ ಗೋಡೆಗಳನ್ನು ನಿರ್ಮಿಸುವ ಮೂಲಕ ರೈತರು ರಾಜಧಾನಿಗೆ ಪ್ರವೇಶಿಸದಂತೆ ತಡೆಹಿಡಿಯಲಾಯಿತು.
ರೈತರ ನಡುವೆ ಖಲಿಸ್ತಾನಿಗಳಿದ್ದಾರೆ, ಭಯೋತ್ಪಾದಕರಿದ್ದಾರೆ, ನಗರ ನಕ್ಸಲರಿದ್ದಾರೆ, ತುಕಡೆ ತುಕಡೆ ಗ್ಯಾಂಗ್ ಇದೆ, ಇಸ್ಲಾಮಿಕ್ ಉಗ್ರರಿದ್ದಾರೆ, ಹೀಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸುತ್ತಲೇ ದೇಶದ ಜನಸಾಮಾನ್ಯರ ದಿಕ್ಕು ತಪ್ಪಿಸಲು ಕೇಂದ್ರ ಸರ್ಕಾರ, ಗೃಹ ಸಚಿವಾಲಯ, ಆಡಳಿತಾರೂಢ ಬಿಜೆಪಿ ಮತ್ತು ಸಂಘಪರಿವಾರ ಮತ್ತು ಅವರ ಬಾಲಂಗೋಚಿ ಸಂಘಟನೆಗಳು, ಚಿಂತಕರು ಹುಯಿಲೆಬ್ಬಿಸಿದ್ದೂ ಆಯಿತು.
ಆದರೆ ಈ ಎಲ್ಲ ಆರೋಪಗಳನ್ನೂ ತಮ್ಮ ಶಾಂತಿಯುತ, ಪ್ರಜಾಸತ್ತಾತ್ಮಕ ಹೋರಾಟದ ಮೂಲಕ, ತಮ್ಮ ದಿಟ್ಟ ಛಲ, ಬದ್ಧತೆ ಮತ್ತು ಶಿಸ್ತುಬದ್ಧ ನಡವಳಿಕೆಯ ಮೂಲಕ ರೈತ ಸಮುದಾಯ ಒಮ್ಮೆಲೆ ತೊಡೆದುಹಾಕಿದೆ. ಮುಷ್ಕರವನ್ನು ಭಂಗಗೊಳಿಸಲು ನ್ಯಾಯಾಂಗವನ್ನೂ ಬಳಸಿಕೊಂಡ ಕೇಂದ್ರ ಸರ್ಕಾರ ,ನ್ಯಾಯಾಲಯದ ಮೂಲಕ ಕೃಷಿ ಮಸೂದೆಗಳ ಬಗ್ಗೆ ಚರ್ಚಿಸಲು ಏಕಪಕ್ಷೀಯ ಸಮಿತಿಯನ್ನು ರಚಿಸಲೂ ಮುಂದಾಗಿತ್ತು. ಮಹಿಳೆಯರೇಕೆ ಮುಷ್ಕರದಲ್ಲಿದ್ದಾರೆ ಎಂದು ಕೇಳುವ ಮೂಲಕ ದೇಶದ ಸರ್ವೋಚ್ಚ ನ್ಯಾಯಾಲಯ ಹೋರಾಟವನ್ನು ಭಂಗಗೊಳಿಸುವ ಮತ್ತೊಂದು ಮಾರ್ಗವನ್ನು ಅನುಸರಿಸಿತ್ತು. ಒಂದೂವರೆ ವರ್ಷದ ಕಾಲ ಮಸೂದೆಗಳನ್ನು ಅಮಾನತಿನಲ್ಲಿಡುವ ಕೇಂದ್ರ ಸರ್ಕಾರದ ಪ್ರಸ್ತಾವವನ್ನೂ ರೈತ ಸಂಘಟನೆಗಳು ತಿರಸ್ಕರಿಸಿದವು.
ಭಾರತದ ರೈತರ ಪಾಲಿಗೆ ಮತ್ತು ಜನಸಾಮಾನ್ಯರ ಪಾಲಿಗೆ ಮರಣಶಾಸನವಾಗಿರುವ ಮೂರು ಕೃಷಿ ಮಸೂದೆಗಳು ನೇಣುಗಂಬದಂತೆ ನಮ್ಮೆದುರು ನಿಂತಿವೆ. “ ಇಂದು ಗಲ್ಲಿಗೇರಿಸುವ ಬದಲು ಇನ್ನು ಎರಡು ವರ್ಷದ ನಂತರ ಗಲ್ಲಿಗೇರಿಸುತ್ತೇವೆ ” (ಖ್ಯಾತ ಚಿಂತಕ ಶಿವಸುಂದರ್ ಅವರ ಮಾತುಗಳು) ಎನ್ನುವ ಕೇಂದ್ರ ಸರ್ಕಾರದ ವಿಕೃತ ಧೋರಣೆಗೆ ರೈತ ಸಂಘಟನೆಗಳು ಜಗ್ಗದೆ ಇರುವುದೇ ಜನಪರ ಹೋರಾಟಕ್ಕೆ ಸಂದ ದಿಗ್ವಿಜಯ. ಈ ಹೋರಾಟ ದೇಶದ ಶ್ರಮಜೀವಿಗಳಿಗೆ, ಕಾರ್ಮಿಕರಿಗೆ ಮತ್ತು ಶೋಷಿತ ಜನಸಮುದಾಯಗಳಿಗೆ ಹೊಸ ಶಕ್ತಿ ನೀಡುವ ಒಂದು ಜನಾಂದೋಲನವಾಗಿ ರೂಪುಗೊಂಡಿದೆ. ಜನಗಣರಾಜ್ಯೋತ್ಸವ ಮತ್ತು ಟ್ರಾಕ್ಟರ್ ಪೆರೇಡ್ಗೆ ದೇಶಾದ್ಯಂತ ದೊರೆಯುತ್ತಿರುವ ಜನಬೆಂಬಲವೇ ಇದಕ್ಕೆ ಸಾಕ್ಷಿಯಾಗಿದೆ.
ಇಷ್ಟಾಗಿಯೂ ಈ ಮಸೂದೆಗಳು ಜನಪರವಾಗಿವೆ, ಇದನ್ನು ವಿರೋಧಿಸುವವರು ದೇಶದ್ರೋಹಿಗಳು ಎಂದು ವಾದಿಸುವ ಒಂದು ವರ್ಗ ನಮ್ಮ ನಡುವೆ ಇರುವುದು ದುರಂತ. ಒಬ್ಬ ವ್ಯಕ್ತಿಯ ಸುತ್ತ ಪ್ರಭಾವಳಿಯನ್ನು ಸೃಷ್ಟಿಸುವುದು, ವ್ಯಕ್ತಿ ಆರಾಧನೆಯನ್ನು ಪೋಷಿಸುವುದು ಮತ್ತು ಅಂಧ ಅನುಸರಣೆ ಪ್ರಜಾತಂತ್ರ ವ್ಯವಸ್ಥೆಗೆ ಮಾರಕವಾಗುತ್ತದೆ ಎಂದು ಡಾ ಬಿ ಆರ್ ಅಂಬೇಡ್ಕರ್ ಹೇಳಿದ್ದುದನ್ನು ಇಲ್ಲಿ ಸ್ಮರಿಸಬೇಕಾಗುತ್ತದೆ. ದೆಹಲಿಯ ಸುತ್ತ ನೆರೆದಿರುವ ಮುಷ್ಕರ ನಿರತರು ರೈತರೇ ಅಲ್ಲ ದಲ್ಲಾಳಿಗಳು ಎಂದು ವಾದಿಸುವ ಅಪ್ರಬುದ್ಧ ಸುಶಿಕ್ಷಿತರಿಗೆ, ಹಿತವಲಯದ ವಂದಿಮಾಗಧರಿಗೆ ಈ 26ರಂದು ನಡೆಯುವ ಪರ್ಯಾಯ ಗಣರಾಜ್ಯೋತ್ಸವ ಅಥವಾ ಜನಗಣರಾಜ್ಯೋತ್ಸವ ತಕ್ಕ ಉತ್ತರ ನೀಡಲಿದೆ.
ಇಂದು ಈ ‘ ದಲ್ಲಾಳಿಗಳಿಗೇ ’ ಸುಪ್ರೀಂಕೋರ್ಟ್ ಮನ್ನಣೆ ನೀಡಿದೆ. ಈ ‘ ದಲ್ಲಾಳಿಗಳ ’ ಆಗ್ರಹಗಳಿಗೆ ಕೇಂದ್ರ ಸರ್ಕಾರ ಮಣಿದಿದೆ. ಈ ‘ ದಲ್ಲಾಳಿಗಳ ’ ಟ್ರಾಕ್ಟರ್ ಪೆರೇಡ್ಗೆ ದೆಹಲಿ ಸರ್ಕಾರ ಮತ್ತು ಪೊಲೀಸ್ ಇಲಾಖೆ ಅನುಮತಿ ನೀಡಿದೆ. ಆತ್ಮನಿರ್ಭರ ಭಾರತದ ಭ್ರಮಾಲೋಕದಲ್ಲಿ ತೇಲಾಡುತ್ತಿರುವ ಹಿತವಲಯದ ಸುಶಿಕ್ಷಿತರು, ಇದೇ 26ರಂದು ತಾವು ಪರಿಭಾವಿಸಿರುವ ಖಲಿಸ್ತಾನಿಗಳು-ಭಯೋತ್ಪಾದಕರು-ನಗರ ನಕ್ಸಲರು- ಉಗ್ರರು-ತುಕಡೆ ತುಕಡೆ ಗುಂಪುಗಳು, ಭಾರತದ ತ್ರಿವರ್ಣ ಧ್ವಜವನ್ನು ಹೊತ್ತು ಲಕ್ಷ ಲಕ್ಷ ಸಂಖ್ಯೆಯಲ್ಲಿ ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ ದನಿ ಎತ್ತುವ ಒಂದು ಅದ್ಭುತ ಪ್ರದರ್ಶನವನ್ನು ನೋಡಲಿದ್ದಾರೆ.
ಈ ಪ್ರದರ್ಶನ ಮನರಂಜನೆಯಲ್ಲ, ದೇಶಭಕ್ತಿಯ ಉನ್ಮಾದದಲ್ಲಿ ಕುಣಿದು ಕುಪ್ಪಳಿಸುವ ಪ್ರಹಸನವಲ್ಲ, ಸೇನಾಬಲ-ಪ್ರಭುತ್ವದ ಸಾಮರ್ಥ್ಯ ಪ್ರದರ್ಶಿಸುವ ಮೆರವಣಿಗೆಯಲ್ಲ. ಇದು ಪ್ರಜಾತಂತ್ರ ವ್ಯವಸ್ಥೆಯಲ್ಲಿ, ಗಣತಂತ್ರದಲ್ಲಿ ಸಾರ್ವಭೌಮ ಪ್ರಜೆಗಳಿಗೆ ಇರುವ ಶಕ್ತಿ ಪ್ರದರ್ಶನ. ಇದು ಅಭೂತಪೂರ್ವ, ಚಾರಿತ್ರಿಕ ಮತ್ತು ಭವಿಷ್ಯದ ದೃಷ್ಟಿಯಿಂದ ಮಹತ್ತರವಾದ ಒಂದು ಘಳಿಗೆ.
ಈ ಶಕ್ತಿ ಪ್ರದರ್ಶನದ ಹಿಂದೆ ದಮನಿಸುವ ದನಿ ಇಲ್ಲ, ಕೂಡಿ ಬಾಳುವ ದನಿ ಇದೆ. ವಿಧ್ವಂಸಕ ಛಾಯೆ ಇಲ್ಲ ಸೌಹಾರ್ದತೆಯ ಧ್ವನಿ ಇದೆ. ಗುಂಡಿಟ್ಟು ಕೊಲ್ಲುವ ಮನಸುಗಳಿಲ್ಲ, ಪರಸ್ಪರ ಅಪ್ಪಿಕೊಂಡು ಬದುಕುವ ಪ್ರೀತಿ ಇದೆ. ಅನ್ಯರ ಚಿಂತನೆ ಇಲ್ಲ ಐಕ್ಯತೆಯ ಭಾವ ಇದೆ. ನಾವು-ಅವರು ಎನ್ನುವ ಭೇದ ಇಲ್ಲ. ನಾವು ಎನ್ನುವ ಉದಾತ್ತ ಭಾವನೆ ಮಾತ್ರ ಇದೆ. ಇದೇ ನಿಜವಾದ ಗಣತಂತ್ರ, ನೈಜ ಪ್ರಜಾತಂತ್ರ.
26ರಂದು ನಾವು ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡ ದಿನವನ್ನು ಆಚರಿಸುತ್ತಿದ್ದೇವೆ.. ಈ ಸಂವಿಧಾನ ನಮ್ಮನ್ನು, ಅಂದರೆ ಈ ದೇಶದ ಕಟ್ಟಕಡೆಯ ಮನುಷ್ಯನನ್ನೂ ಒಳಗೊಂಡಂತಹ ಪ್ರಜೆಗಳನ್ನು, ಸಾರ್ವಭೌಮ ಪ್ರಜೆಗಳು ಎಂದೇ ಪರಿಗಣಿಸುತ್ತದೆ. ಈ ಸಾರ್ವಭೌಮತ್ವವೇ ಪ್ರಜಾತಂತ್ರದ ಅಂತಃಸತ್ವ ಎನ್ನುವುದನ್ನು ಆಳುವ ವರ್ಗಗಳು, ಜನಪ್ರತಿನಿಧಿಗಳು, ಆಳುವವರ ಭಟ್ಟಂಗಿಗಳು, ವಂದಿಮಾಗಧರು ಮತ್ತು ತಮ್ಮ ಸ್ವಂತಿಕೆಯನ್ನೇ ಕಳೆದುಕೊಂಡಿರುವ ಮಾಧ್ಯಮಗಳು, ಸುದ್ದಿಮನೆಗಳು ಅರ್ಥಮಾಡಿಕೊಳ್ಳಬೇಕಿದೆ. ತಮ್ಮ ಜೀವನೋಪಾಯದ ಹಕ್ಕುಗಳಿಗಾಗಿ, ಬದುಕುವ ಹಕ್ಕುಗಳಿಗಾಗಿ ಹೋರಾಡುವ ಜನರಲ್ಲಿ ವಿಧ್ವಂಸಕರನ್ನು ಕಾಣುವ ವಿಕೃತ ಮನೋಭಾವದಿಂದ ಈ ವರ್ಗ ಹೊರಬರಬೇಕಿದೆ. ಇಂದು ರೈತರು, ನಾಳೆ ಕಾರ್ಮಿಕರು ಮತ್ತೊಂದು ದಿನ ಸಮಸ್ತ ಶೋಷಿತರು.
ಶೋಷಕ ವ್ಯವಸ್ಥೆಯಲ್ಲಿ ಶೋಷಣೆಯ ಬಿಂದುಗಳು ತೊಟ್ಟಿಕ್ಕುತ್ತಲೇ ಕೆಳಹಂತವನ್ನು ನಿಧಾನವಾಗಿ ತಲುಪುತ್ತವೆ. ನೆಲಮಟ್ಟದಿಂದ ಆರಂಭವಾಗುವ ಶೋಷಣೆಯ ಹೆಜ್ಜೆಗಳು ಪಾತಾಳ ತಲುಪುವವರೆಗೂ ಜೀವಂತವಾಗಿರುತ್ತವೆ. ನೆಲದ ಮೇಲಿರುವವರು ಇದರ ಬಿಸಿ ತಮಗೆ ತಟ್ಟುವುದಿಲ್ಲ ಎಂದು ಭಾವಿಸುವುದು ಮೂರ್ಖತನವಾಗುತ್ತದೆ. ಏಕೆಂದರೆ ಶೋಷಣೆಗೆ ಹಲವು ಮುಖಗಳಿವೆ, ಹಲವು ಆಯಾಮಗಳೂ ಇವೆ. ಶೋಷಕರಿಗೆ ವಿಭಿನ್ನ ಮುಖವಾಡಗಳೂ ಇರುತ್ತವೆ. ಶೋಷಣೆಗೊಳಗಾಗುವವರಿಗೆ ಇರುವುದು ಒಂದೇ ಮುಖ. ಅದು ಶೋಷಿತರದ್ದು. ರೈತ ಚಳುವಳಿ ಇದನ್ನು ಸ್ಪಷ್ಟಪಡಿಸಿದೆ. ಟ್ರಾಕ್ಟರ್ ಪೆರೇಡ್ ಇದನ್ನು ಸಾಂಕೇತಿಕವಾಗಿ ಧೃಡೀಕರಿಸುತ್ತದೆ.
26ರಂದು ನಡೆಯಲಿರುವ ಜನಗಣರಾಜ್ಯೋತ್ಸವ ಸ್ವಾವಲಂಬಿ ಭಾರತದ ನಿರ್ಮಾಣಕ್ಕೆ ಒಂದು ಹೊಸ ಆಯಾಮವನ್ನು ನೀಡುವ ಜನಾಂದೋಲನವಾಗಿ ರೂಪುಗೊಳ್ಳಲಿದೆ. ಈ ಸದಾಶಯದೊಂದಿಗೆ ಮುನ್ನಡೆಯೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಜಗಳೂರು | ಮ್ಯಾಸ ನಾಯಕ ಬುಡಕಟ್ಟು ಜನಾಂಗದ ಸಮಿತಿಯಿಂದ ದೇವರ ಎತ್ತುಗಳಿಗೆ ಮೇವು ಸಂಗ್ರಹಣೆ
-
ದಿನದ ಸುದ್ದಿ6 days ago
ಹುಬ್ಬಳ್ಳಿ- ಧಾರವಾಡ ಬೈಪಾಸ್ ರಸ್ತೆಯಲ್ಲಿ ಸಂಚಾರಿ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ನಿತೇಶ ಪಾಟೀಲ
-
ದಿನದ ಸುದ್ದಿ7 days ago
ಸಂತೇಬೆನ್ನೂರು | ರಾಷ್ಟ್ರಪತಿ ಪದಕ ಪ್ರಶಸ್ತಿ ವಿಜೇತ ನಿವೃತ್ತ ಎ.ಸಿ.ಪಿ ರುದ್ರಪ್ಪ ಎಮ್ ಎನ್. ಅವರಿಗೆ ಗ್ಯಾಲಕ್ಸಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಭಿನಂದನಾ ಕಾರ್ಯಕ್ರಮ
-
ದಿನದ ಸುದ್ದಿ6 days ago
ದಾವಣಗೆರೆ | 120 ಕೋಟಿ ವೆಚ್ಚದಲ್ಲಿ ನೂತನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ನಿರ್ಮಾಣ : ಸಂಸದ ಜಿ.ಎಂ.ಸಿದ್ದೇಶ್ವರ
-
ದಿನದ ಸುದ್ದಿ6 days ago
ಕೆಎಸ್ಆರ್ಟಿಸಿ ನೌಕರರು ಆತಂಕಕ್ಕೆ ಒಳಗಾಗುವುದು ಬೇಡ : ಸಾರಿಗೆ ಸಚಿವ ಲಕ್ಷ್ಮಣ ಸವದಿ ಭರವಸೆ
-
ದಿನದ ಸುದ್ದಿ7 days ago
ಮಹಾಜನ್ ವರದಿಯೇ ಅಂತಿಮ ; ಉದ್ಭವ್ ಠಾಕ್ರೆ ಉದ್ಧಟ ನುಡಿಗೆ ಯಡಿಯೂರಪ್ಪ ತಿರುಗೇಟು
-
ದಿನದ ಸುದ್ದಿ6 days ago
ಈ ಶೈಕ್ಷಣಿಕ ವರ್ಷದಿಂದ ಹೊಸ ಕೇಂದ್ರೀಯ ವಿದ್ಯಾಲಯ ಆರಂಭಕ್ಕೆ ಕ್ರಮ : ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ
-
ದಿನದ ಸುದ್ದಿ6 days ago
ದಾವಣಗೆರೆ | ಕೆಎಸ್ಆರ್ಟಿಸಿ ತಾತ್ಕಾಲಿಕ ಬಸ್ ನಿಲ್ದಾಣ ಉದ್ಘಾಟನೆ