ದಿನದ ಸುದ್ದಿ
ಬೆಣ್ಣೆ ನಗರಿಯಲ್ಲೊಂದು ರಾಯಲ್ ರುಚಿ ‘ಶ್ರೀಮಂಜುನಾಥ ಫಾಸ್ಟ್ ಫುಡ್’ ಹೋಟೆಲ್ ಶುಭಾರಂಭ : ಮಿಸ್ ಮಾಡ್ದೆ ಭೇಟಿ ಕೊಡಿ..!
ಸುದ್ದಿದಿನ, ದಾವಣಗೆರೆ : ಕಡಿಮೆ ಬೆಲೆಗೆ ಉತ್ತಮ ಗುಣಮಟ್ಟದ ಉಪಹಾರ ಮತ್ತು ಊಟ ದೊರೆಯುವ ‘ಶ್ರೀ ಮಂಜುನಾಥ ಪಾಸ್ಟ್ ಫುಡ್’ ಹೋಟೆಲ್ ದಾವಣಗೆರೆಯ ಎಂಸಿಸಿ ಬಿ ಬ್ಲಾಕ್ ನಲ್ಲಿ ಶುಭಾರಂಭ ಮಾಡಿದೆ.
ಕೇವಲ ಒಂದು ತಿಂಗಳ ಹಿಂದೆಯಷ್ಟೇ ಆರಂಭವಾದ ಈ ಹೋಟೆಲ್ ಶುಚಿ-ರುಚಿ-ಗುಣಮಟ್ಟಕ್ಕೆ ಹೆಸರಾಗಿದೆ. ಗ್ರಾಹಕರು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹೋಟೆಲ್ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ. ಒಮ್ಮೆ ಹೋಟೆಲ್ ಅಡುಗೆಯ ರುಚಿ ನೋಡಿದವರು ಮತ್ತೊಮ್ಮೆ ಬಂದು ಸೇವಿಸುವಂತಹ ವಾತಾರಣ ಸೃಷ್ಟಿಸಿದ್ದಾರೆ.
ಹೋಟೆಲ್ ಉದ್ಯಮದಲ್ಲಿ ಯಶಸ್ಸು ಕಂಡಿರುವ
ಮಾಲೀಕರಾದ ಅಂಜು ಬಣಕಾರ್ ಅವರು,
ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಹೋಟೆಲ್ ಇದ್ದು ದಿನಕ್ಕೆ ಎರಡು ಸಾವಿರ ಜನರಿಗೆ ಉಪಹಾರ-ಊಟ ಪೂರೈಕೆ ಮಾಡುತ್ತಾರೆ. ಈಗ ದಾವಣಗೆರೆಯ ಜನತೆಗೆ ತಮ್ಮ ಹೋಟೆಲ್ ಮೂಲಕ ಕ್ಯಾಟರಿಂಗ್, ಫ್ರೀ ಹೋಂ ಡಿಲೆವರಿ ವ್ಯವಸ್ಥೆಗೆ ತಯಾರಾಗಿದ್ದಾರೆ.
ಬಗೆ-ಬಗೆಯ ಉಪಹಾರ
ಹೋಟೆಲ್ ನಲ್ಲಿ ಬಗೆ-ಬಗೆಯ ಉಪಹಾರವನ್ನು ದಿನಕ್ಕೊಂದು ಮೆನುವಿನ ಪ್ರಕಾರ ಮಾಡಲಾಗುತ್ತದೆ.
ಶಾವಿಗೆ ಬಾತ್, ಚೌ ಚೌ ಬಾತ್, ಬಿಸಿಬೇಳೆ ಬಾತ್, ತಟ್ಟೆ ಇಡ್ಲಿ, ಇಡ್ಲಿ-ವಡಾ, ಖಾರಾ ಪೊಂಗಲ್, ಮಂಗಳೂರು ಬನ್ಸ್ , ಬೋಂಡಾ ಸೂಪ್,ಪಾಲಕ್ ಪೂರ, ಲೆಮೆನ್ ರೈಸ್, ಪಲಾವ್, ಚಿತ್ರಾನ್ನ, ದೋಸೆ, ಮಸಾಲ ಅವಲಕ್ಕಿ, ಪುಳಿಯೋಗರೆ ಇನ್ನೂ ಹಲವು ವಿಶೇಷ ಉಪಹಾರದ ರುಚಿಯನ್ನು ಗ್ರಾಹಕರಿಗೆ ಉಣಬಡಿಸಲು ತಯಾರಿದ್ದಾರೆ.
40 ರೂಪಾಯಿಗೆ ಊಟ
ಮಧ್ಯಾಹ್ನ ಮತ್ತು ರಾತ್ರಿ ಊಟ ದೊರೆಯುತ್ತದೆ. ಕೇವಲ ನಲವತ್ತು (40) ರೂಪಾಯಿ ರೂಪಾಯಿಗೆ ಎರಡು ತೆರನಾದ ಪಲ್ಯ, ಉಪ್ಪಿನ ಕಾಯಿ, ಮೊಸರು, ಚಪಾತಿ, ಅನ್ನ, ಹಪ್ಪಳ ಕೊಡಲಾಗುತ್ತೆ.
ರೋಟಿ – ಪರೋಟ ಊಟ, ಫೂರಿ ಊಟ ಲಭ್ಯವಿದ್ದು “ಗ್ರಾಹಕರ ತೃಪ್ತಿಗೆ ನಮ್ಮ ಮೊದಲ ಆದ್ಯತೆ” ಎನ್ನುತ್ತಾರೆ ಹೋಟೆಲ್ ನ ಮಾಲೀಕರಾದ ಅಂಜು ಬಣಕಾರ್ ಹೇಳುತ್ತಾರೆ.
ಸಂಜೆ ಸ್ನಾಕ್ಸ್
ಗೋಬಿ ಮಂಚೂರಿ, ಗೋಬಿ ರೈಸ್, ಮಶ್ರೂಮ್, ನೂಡಲ್ಸ್, ವೆಜ್ ಫ್ರೈಡ್ ರೈಸ್, ಪನ್ನೀರ್ ಸ್ನಾಕ್ಸ್ಗಳನ್ನು ಗ್ರಾಹಕರು ಸವಿಯ ಬಹುದು.
ಕ್ಯಾಟರಿಂಗ್ ವ್ಯವಸ್ಥೆ
ಮದುವೆ, ನಾಮಕರಣ, ನಿಶ್ಚಿತಾರ್ಥ, ಸಾರ್ವಜನಿಕ ಕಾರ್ಯಕ್ರಮಗಳು ಹಾಗು ಇತರೆ ಶುಭ-ಸಮಾರಂಭಗಳಿಗೆ ಕ್ಯಾಟರಿಂಗ್ ಮಾಡುವ ವ್ಯವಸ್ಥೆಯೂ ಶ್ರೀ ಮಂಜುನಾಥ ಪಾಸ್ಟ್ ಫುಡ್ ಸೆಂಟರ್ ನಲ್ಲಿ ಲಭ್ಯವಿದೆ. ನಿಗಧಿ ಪಡಿಸಿದ ಸ್ಥಳಕ್ಕೆ ಸರಿಯಾದ ಸಮಯಕ್ಕೆ ಉಪಹಾರ-ಊಟ ವನ್ನು ತಲುಪಿಸುವುದರ ಜೊತೆಗೆ, ಬಡಿಸುವ ವ್ಯವಸ್ಥೆಯನ್ನೂ ಸಹ ಮಾಡಿಕೊಡಲಾಗುತ್ತದೆ.
ಫ್ರೀ ಹೋಂ ಡಿಲೆವರಿ
ನೀವು ಆರ್ಡರ್ ಮಾಡಿದ ಉಪಾಹಾರ-ಊಟಕ್ಕೆ ಹಣ ಪಾವತಿಸಿದರೆ ಸಾಕು, ಡಿಲೆವರಿ ಬಾಯ್ ಉಚಿತವಾಗಿ ಗ್ರಾಹಕರು ಸೂಚಿಸಿದ ಸ್ಥಳಕ್ಕೆ ಬಂದು ತಲುಪಿಸುತ್ತಾರೆ.
ಕರೆಮಾಡಿ, ಆರ್ಡರ್ ಮಾಡಿ : 7760262693
- ಕೆಲವು ದಿನಗಳಿಂದ ಮಂಜುನಾಥ ಹೋಟೆಲ್ ನಲ್ಲಿ ಉಪಹಾರ ಸೇವಿಸುತ್ತಿದ್ದೇನೆ. ಕ್ಯಾಲಿಟಿ ಮತ್ತು ಕ್ವಾಂಟಿಟಿ ತುಂಬಾ ಚನ್ನಾಗಿದೆ.
| ಸುರೇಶ, ಗ್ರಾಹಕರು
- ಕೇವಲ ನಲವತ್ತು ರೂಪಾಯಿಗೆ ಊಟ ಕೊಡ್ತಾರೆ, ಬೇರೆ ಹೋಟೆಲ್ ನಲ್ಲಾಗಿದ್ರೆ ಇನ್ನೂ ಹೆಚ್ಚು ಬೆಲೆ ನಿಗಧಿ ಪಡಿಸುತ್ತಿದ್ದರು. ಕಡಿಮೆ ಬೆಲೆಯ ಊಟ ಆದ್ರೂ ಹೊಟ್ಟೆ ತುಂಬ ಕೊಡ್ತಾರೆ.
| ನವೀನ್, ವಿದ್ಯಾರ್ಥಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243