Connect with us

ದಿನದ ಸುದ್ದಿ

ಭಾರತ ಹಿಂದೂ ರಾಷ್ಟ್ರವಲ್ಲ ; ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಭಾರತ ಹಿಂದೂ ರಾಷ್ಟ್ರವಲ್ಲ, ಎಲ್ಲರಿಗೂ ಸೇರಿದ ರಾಷ್ಟ್ರವೆಂಬುದಕ್ಕೆ ಲೋಕಸಭಾ ಚುನಾವಣೆಯ ಫಲಿತಾಂಶ ಸಾಕ್ಷಿ ಎಂದು ನೋಬೆಲ್ ಪ್ರಶಸ್ತಿ ಪುರಸ್ಕ್ರತ ಅಮಾರ್ತ್ಯ ಸೇನ್ ಅವರು ಹೇಳಿರುವುದು ಸರಿಯಿದೆ. ನಾವೂ ಅದನ್ನೇ ಮೊದಲಿನಿಂದಲೂ ಪ್ರತಿಪಾದಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹೇಳಿದ್ದಾರೆ.

ಭಾರತ ಬಹುತ್ವದ ದೇಶ, ಯಾವುದೇ ಒಂದು ಸೀಮಿತ ಧರ್ಮಕ್ಕೆ ಸೇರಿದ ರಾಷ್ಟ್ರವಾಗಲು ಸಾಧ್ಯವಿಲ್ಲ. ಹಲವು ಜಾತಿ, ಧರ್ಮ, ಭಾಷೆಯವರು ಇದ್ದು, ಬಹುತ್ವದ ಸಂಸ್ಕೃತಿ ಇರುವ ರಾಷ್ಟವಾಗಿದೆ ಬಂದಿದ್ದಾರೆ.

https://x.com/siddaramaiah/status/1806541235936710672?t=ZkvvqaUNKnoC-p3Ig3X2aA&s=19

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗ್ಯಾಸ್ ಸಿಲಿಂಡರ್‌ಗಳ ಬೆಲೆ ಇಳಿಕೆ

Published

on

ಸುದ್ದಿದಿನಡೆಸ್ಕ್:ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 30 ರೂಪಾಯಿ ಕಡಿತಗೊಳಿಸಿವೆ. 19 ಕಿಲೋಗ್ರಾಂ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಬದಲಾವಣೆ ಇಂದಿನಿಂದ ಜಾರಿಗೆ ಬರಲಿದೆ.

ಎನ್ ಟಿ ಎ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ – ಎನ್‌ಟಿಎ ಇಂದು 1ಸಾವಿರದ 563ಅಭ್ಯರ್ಥಿಗಳ ಪರಿಷ್ಕೃತ ಫಲಿತಾಂಶವನ್ನು ಮತ್ತು ಮರು-ಪರೀಕ್ಷೆಯ ನಂತರ ನೀಟ್ ಪರೀಕ್ಷೆಯ ಎಲ್ಲಾ ಅಭ್ಯರ್ಥಿಗಳ ಶ್ರೇಣಿಯನ್ನು ಪ್ರಕಟಿಸಿದೆ. ಎಲ್ಲಾ ಅಭ್ಯರ್ಥಿಗಳ ಪರಿಷ್ಕೃತ ಸ್ಕೋರ್ ಕಾರ್ಡ್‌ಗಳು ತಮ್ಮ ವೆಬ್‌ಸೈಟ್‌ನಲ್ಲಿ ಲಭ್ಯವಿದೆ ಎಂದು ಎನ್‌ಟಿಎ ಪ್ರಕಟಣೆಯಲ್ಲಿ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹೊಸ ಮೂರು ಅಪರಾಧ ಕಾಯ್ದೆಗಳು ಇಂದಿನಿಂದ ಜಾರಿ : ಇಲ್ಲಿದೆ ಸಂಪೂರ್ಣ ಮಾಹಿತಿ ; ಮಿಸ್ ಮಾಡ್ದೆ ಓದಿ

Published

on

ಸುದ್ದಿದಿನಡೆಸ್ಕ್:ಹೊಸ ಮೂರು ಅಪರಾಧ ಕಾಯ್ದೆಗಳು ಇಂದಿನಿಂದ ಜಾರಿಗೆ ಬರಲಿದೆ. ಭಾರತೀಯ ನ್ಯಾಯ ಸಂಹಿತಾ-2023, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ-2023, ಭಾರತೀಯ ಸಾಕ್ಷ್ಯ ಅಧಿನಿಯಮ-2023 ಇಂದಿನಿಂದ ಜಾರಿಗೆ ಬರಲಿದೆ.

ಕಳೆದ ವರ್ಷ ಚಳಿಗಾಲದ ಅಧಿವೇಶನದಲ್ಲಿ ಈ ಮಸೂದೆಗಳನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಗಿತ್ತು. ಹೊಸ ಕ್ರಿಮಿನಲ್ ಕಾನೂನುಗಳು ಭಾರತೀಯ ನಾಗರಿಕರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಈ ಕಾನೂನುಗಳು ಎಲ್ಲರಿಗೂ ಹೆಚ್ಚು ಬೆಂಬಲ ನೀಡುವ ಮತ್ತು ಸಮರ್ಥ ನ್ಯಾಯ ವ್ಯವಸ್ಥೆಯನ್ನು ರಚಿಸುವ ಗುರಿಯನ್ನು ಹೊಂದಿವೆ. ಹೊಸ ಕ್ರಿಮಿನಲ್ ಕಾನೂನುಗಳ ಪ್ರಮುಖ ಘಟನೆಗಳನ್ನು ಆನ್‌ಲೈನ್‌ನಲ್ಲಿ ವರದಿ ಮಾಡುವುದು, ಯಾವುದೇ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸುವುದು ಮತ್ತು ಸಂತ್ರಸ್ತರು ಎಫ್‌ಐಆರ್‌ನ ಉಚಿತ ನಕಲನ್ನು ಪಡೆಯಬಹುದಾಗಿದೆ. ಬಂಧನದ ಸಂದರ್ಭದಲ್ಲಿ, ವ್ಯಕ್ತಿಯು ತನ್ನ ಆಯ್ಕೆಯ ವ್ಯಕ್ತಿಗೆ ಅವರ ಪರಿಸ್ಥಿತಿಯ ಬಗ್ಗೆ ತಿಳಿಸುವ ಹಕ್ಕನ್ನು ಹೊಂದಿರುತ್ತಾನೆ. ಹೊಸ ಕಾನೂನುಗಳು ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಅಪರಾಧಗಳ ತನಿಖೆಗೆ ಆದ್ಯತೆ ನೀಡಿವೆ, ಮಾಹಿತಿಯನ್ನು ದಾಖಲಿಸಿದ ಎರಡು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಿದೆ.

ಹೊಸ ಕ್ರಿಮಿನಲ್ ಕಾನೂನುಗಳಲ್ಲಿ, ಫೋರೆನ್ಸಿಕ್ ತಜ್ಞರು ಗಂಭೀರ ಅಪರಾಧಗಳಿಗೆ ಅಪರಾಧದ ಸ್ಥಳಗಳಿಗೆ ಭೇಟಿ ನೀಡುವುದು ಮತ್ತು ಸಾಕ್ಷ್ಯವನ್ನು ಸಂಗ್ರಹಿಸುವುದು ಕಡ್ಡಾಯವಾಗಿದೆ. ಸಮನ್ಸ್ ಅನ್ನು ಈಗ ವಿದ್ಯುನ್ಮಾನವಾಗಿ ಸಲ್ಲಿಸಬಹುದು, ಕಾನೂನು ಪ್ರಕ್ರಿಯೆಗಳನ್ನು ತ್ವರಿತಗೊಳಿಸಬಹುದು, ದಾಖಲೆಗಳನ್ನು ಕಡಿಮೆ ಮಾಡಬಹುದು ಮತ್ತು ಸಮರ್ಥ ಸಂವಹನಕ್ಕೆ ಆದ್ಯತೆ ನೀಡಲಾಗಿದೆ. ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರಲು, ವ್ಯವಸ್ಥೆಯಲ್ಲಿ ಸುಗಮ ಪರಿವರ್ತನೆಗಾಗಿ ಪೊಲೀಸ್ ಮತ್ತು ತನಿಖಾ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ.

ದೂರದರ್ಶನ ಮತ್ತು ಆಕಾಶವಾಣಿಯ ಸುದ್ದಿ ಬುಲೆಟಿನ್‌ಗಳು, ಕಾರ್ಯಕ್ರಮಗಳು ಮತ್ತು ಚರ್ಚೆಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಚರ್ಚೆಗಳು ಮತ್ತು ಆಳವಾದ ವಿಶ್ಲೇಷಣೆ ಪ್ರಸಾರ ಮಾಡಲಾಗುತ್ತಿದೆ. ಸಾರ್ವಜನಿಕ ಜಾಗೃತಿ, ಸಂವಾದ ಕಾರ್ಯಕ್ರಮಗಳು, ಮಾಹಿತಿ ವೆಬ್‌ಸೈಟ್‌ಗಳು, ಸಚಿವರ ಮಟ್ಟದ ವೆಬ್‌ನಾರ್‌ಗಳನ್ನು ಸಹ ನಡೆಸಲಾಗಿದೆ. ಹೆಚ್ಚುವರಿಯಾಗಿ, ಶಾಲೆ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕೋರ್ಸ್ ಮಾಡ್ಯೂಲ್‌ಗಳನ್ನು ಕಡ್ಡಾಯವಾಗಿ ಸೇರಿಸುವುದು ಸೇರಿದಂತೆ ಹಲವು ಉಪ ಕ್ರಮಗಳನ್ನು ಕೈಗೊಳ್ಳಲಾಗಿದೆ.

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಮತ್ತು ಸಿಎಫ್‌ಐಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಒಂದು ದಿನದ ಚಟುವಟಿಕೆ ಆಯೋಜಿಸಲಾಗಿದೆ. ಇದರಲ್ಲಿ ಗುಂಪು ಚರ್ಚೆಗಳು, ಕಾರ್ಯಾಗಾರಗಳು, ಪ್ರಶ್ನೋತ್ತರ ಅವಧಿಗಳು, ವಿವಿಧ ವಿಷಯಗಳ ಕುರಿತು ರಸಪ್ರಶ್ನೆಗಳು ಸೇರಿವೆ ಎಂದು ಮೂಲಗಳು ತಿಳಿಸಿವೆ. ಹೊಸ ಕ್ರಿಮಿನಲ್ ಕಾನೂನುಗಳ ನಿಬಂಧನೆಗಳು. ಈ ಮೂರು ಕ್ರಿಮಿನಲ್ ಕಾನೂನುಗಳ ಪ್ರಾರಂಭದೊಂದಿಗೆ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರತಿ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿಯಿಂದ ಹೊಸ ಕ್ರಿಮಿನಲ್ ಕಾನೂನುಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಹೊಸ ಕಾನೂನು ಬಗ್ಗೆ ಮಾತನಾಡಿದ ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ಸಚಿವ ಅರ್ಜುನ್ ರಾಮ್ ಮೇಘ್ವಾಲ್, ಇದರಲ್ಲಿ ನ್ಯಾಯದಾನಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಮುಂಬೈನಲ್ಲಿ ಅಪರಾಧ ನ್ಯಾಯ ವ್ಯವಸ್ಥೆಯ ನಿರ್ವಹಣೆಯಲ್ಲಿ ಭಾರತದ ಪ್ರಗತಿಪರ ಪಥ ಕುರಿತಂತೆ ಏರ್ಪಡಿಸಲಾಗಿದ್ದ ಸಮಾವೇಶದಲ್ಲಿ ಮಾತನಾಡಿದರು. ಹಳೆಯ ಕಾನೂನುಗಳು ಶಿಕ್ಷೆ ಬಗ್ಗೆ ಹೆಚ್ಚು ಕೇಂದ್ರೀಕೃತವಾಗಿದ್ದವು. ಇದಕ್ಕೆ ವ್ಯತಿರಿಕ್ತವಾಗಿ ಹೊಸ ಕಾನೂನಿನಲ್ಲಿ ನ್ಯಾಯಕ್ಕೆ ಪ್ರಾಧಾನ್ಯತೆ ನೀಡಲಾಗಿದೆ.

ಭಾರತೀಯ ನ್ಯಾಯ ಸಂಹಿತಾ-2023, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ-2023, ಭಾರತೀಯ ಸಾಕ್ಷ್ಯ ಅಧಿನಿಯಮ-2023, ಈ ಮೂರು ಕಾನೂನುಗಳ ಬಗ್ಗೆ ಅರಿವು ಮೂಡಿಸುವ ವಿಶೇಷ ಸಮಾವೇಶಗಳನ್ನು ಮುಂದಿನ ದಿನಗಳಲ್ಲಿಯೂ ಆಯೋಜಿಸುವ ಚಿಂತನೆ ಇದೇ ಎಂದು ಸಚಿವ ಅರ್ಜುನ್ ರಾಮ್ ಮೇಘ್ವಾಲ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಸ್ಕಿ | ಸರ್ಕಾರಿ ಸೇವೆಯ ಜೊತೆಗೆ ಸಮಾಜ ಸೇವೆಗೂ ನಿಂತ ತಹಶೀಲ್ದಾರ್ ಅರಮನೆ ಸುಧಾ

Published

on

ಸುದ್ದಿದಿನ,ಮಸ್ಕಿ:ಕಳೆದ 3 ವರ್ಷದಿಂದ ನಡೆದುಕೊಂಡು ಬರುತ್ತಿರುವ ಅನಾಥ, ವಿಕಲಚೇತನ ಹಾಗೂ ಬಡ ಮಕ್ಕಳ ಆಶ್ರಮ ಆಗಿರುವಂತಹ ಅಭಿನಂದನ್ ಸ್ಫೂರ್ತಿ ಧಾಮದಲ್ಲಿ ಪ್ರಸ್ತುತ 40 ಕ್ಕೂ ಹೆಚ್ಚು ಮಕ್ಕಳನ್ನು ಸಲಹುತ್ತಾ ಅವರಿಗೆ ಉಚಿತ ಊಟ ವಸತಿ ಸಹಿತ ಶಿಕ್ಷಣ ನೀಡಲಾಗುತ್ತಿದೆ.

ಈ ಆಶ್ರಮದ ಮಕ್ಕಳ ವಾಸಕ್ಕಾಗಿ ಇರುವಂತಹ ಕಟ್ಟಡ ಪ್ರಸ್ತುತ ಇರುವಂತ ಸಂಖ್ಯೆಯ ಮಕ್ಕಳ ವಾಸಕ್ಕೆ ಚಿಕ್ಕದಾಗಿದೆ. ಅದಕ್ಕಾಗಿ ಅನ್ನ ಪ್ರಸಾದ ಭವನದ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ನಡೆದ ಭೂಮಿ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದ ಮಸ್ಕಿ ತಹಶೀಲ್ದಾರ್ ಸುಧಾ ಅರಮನೆ ಅವರು ಮಸ್ಕಿಯ ಶೈಕ್ಷಣಿಕ ಕ್ರಾಂತಿಗೆ ಕಾರಣಗಳಲ್ಲಿ ಅಭಿನಂದನ್ ಸಂಸ್ಥೆಯು ಒಂದಾಗಿದೆ.

ಸಾಮಾಜಿಕ, ಶೈಕ್ಷಣಿಕ, ಪರಸರ ಮತ್ತು ಸ್ವಚ್ಛತೆಯ ಕಾರ್ಯಗಳಲ್ಲಿ ಅವರು ಕೈಗೊಂಡ ಸೇವೆಗಳು ಅಮೋಘವಾಗಿವೆ. ಅವರು ಮಾಡುತ್ತಿರುವ ಈ ಮಕ್ಕಳ ಸೇವೆಗೆ ಮತ್ತೊಂದು ವಿಶೇಷ ಸೇವೆ ಆಗಿರುವ ಅಭಿನಂದನ್ ಸ್ಫೂರ್ತಿ ಧಾಮವು ನಮ್ಮ ಮಸ್ಕಿ ನಗರಕ್ಕೆ ಹೆಮ್ಮೆಯಾಗಿದೆ.

ಇಂತಹ ಸಂಸ್ಥೆಯು ನಿರ್ಮಾಣ ಮಾಡಲು ಮುಂದಾಗಿರುವ ಅನ್ನ ಪ್ರಸಾದ ಭವನದ ಕಾರ್ಯಗಳಿಗೆ ಯಾವುದೇ ತೊಂದರೆ ಉಂಟಾಗದೆ ಯಶಸ್ವಿಯಾಗಿ ಮುಗಿಯಲಿ ಮಕ್ಕಳಿಗೆ ಒಳ್ಳೆಯದನ್ನು ಮಾಡುವ ಇವರ ಎಲ್ಲಾ ಕಾರ್ಯಗಳು ಯಶಸ್ವಿಯಾಗಲಿ ಅವರಿಗೆ ನಮ್ಮಿಂದ ಆದಷ್ಟು ಸಹಕಾರ ನೀಡುತ್ತೇವೆ ಎಂದರು.

ಈ ಸಂಧರ್ಭದಲ್ಲಿ ಅಮರಪ್ಪ ಗುಡದೂರ, ಯಲ್ಲಪ್ಪ ಮಾಸ್ಟರ್ ,ಶರಣಬಸವ ವಕೀಲರು, ಬಸವರಾಜ್ ಮಿಟ್ಟಿಮನಿ, ಡಾಕ್ಟರ್ ನಾಗನಗೌಡ, ಶಿವಶಂಕರಪ್ಪ ಹಳ್ಳಿ , ಮಲ್ಲಿಕಾರ್ಜುನ ಕುಚ್ಚಾ, ಅಭಿನಂದನ್ ಸಂಸ್ಥೆಯ ಸಂಸ್ಥಾಪಕ ರಾಮಣ್ಣ ಹಂಪರಗುಂದಿ,ಕಳಕಪ್ಪ ಹಾದಿಮನಿ, ಮಹಾಂತೇಶ ಜಾಫರಮಿಯಾ, ಅರುಣಕುಮಾರ ಶ್ರೇಷಿ, ಮಲ್ಲಿಕಾರ್ಜುನ ಬಡಿಗೇರ್ ಹಾಗೂ ಅಭಿನಂದನಾ ಸಂಸ್ಥೆಯ ಸ್ವಯಂ ಸೇವಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending