ರಾಜಕೀಯ
ಎಚ್ಡಿಕೆ ಹೇಳಿಕೆಗೆ ಸಿದ್ದು ಖಡಕ್ ತಿರುಗೇಟು !
ನಾನಂತೂ ವಿಧಾನಸೌಧದಲ್ಲಿ ಭ್ರಷ್ಟಾಚಾರ ಕಂಡಿಲ್ಲ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕಂಡರೆ ಅದನ್ನು ನಿಯಂತ್ರಣ ಮಾಡಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ವಿಧಾನಸೌಧದ ಮೂರನೇ ಮಹಡಿಯಲ್ಲಿ ಭ್ರಷ್ಟಾಚಾರ ಹೆಚ್ಚಿದ್ದು, ಅದರ ನಡುವೆ ಕೆಲಸ ಮಾಡುವುದು ಕಷ್ಟವಾಗಿದೆ ಎಂದು ಸಿಎಂ ಕುಮಾರಸ್ವಾಮಿ ಈ ಹಿಂದೆ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಿದ್ದು ನಾನಂತೂ ವಿಧಾನಸೌಧದಲ್ಲಿ ಭ್ರಷ್ಟಾಚಾರ ಕಂಡಿಲ್ಲ. ಕುಮಾರಸ್ವಾಮಿ ಅವರಿಗೆ ಕಂಡರೆ ಅವರೇ ನಿಯಂತ್ರಣ ಮಾಡಿಲಿ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.