ರಾಜಕೀಯ
ರಾಜ್ಯ ರಾಜಕಾರಣದಲ್ಲಿ ಕೋಲಾಹಲ : ನಾಳೆ ದೆಹಲಿಗೆ ಸಿದ್ದು ಭೇಟಿ
ಸುದ್ದಿದಿನ ಡೆಸ್ಕ್ : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಿನ್ನಮತದ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನ ಕೆಲವು ಶಾಸಕರು ರಾಜೀನಾಮೆ ಕೊಡುವ ತೀರ್ಮಾನಕ್ಕೆ ಬಂದಿರುವ ವಿದ್ಯಾಮಾನ ತಿಂಗಳಿಂದ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.
ಜಾರಕಿಹೊಳಿ ಬ್ರದರ್ಸ್ ರಿಂದ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ ಉಂಟಾಗಿರುವ ಹಿನ್ನೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರೊಂದಿಗೆ ಸುಧೀರ್ಘ ಚರ್ಚೆಯನ್ನು ನಾಳೆ 11 ಗಂಟೆಗೆ ನಡೆಲಿದ್ದಾರೆ. ಜತೆಗೆ ಎಂ.ಎಲ್.ಸಿ ಚುನಾವಣೆಯ ಬಗ್ಗೆಯೂ ಚರ್ಚಿಸಲಿದ್ದು, ರಾಜ್ಯದ ಮೈತ್ರಿ ಸರ್ಕಾರದ ವಿದ್ಯಮಾನಗಳನ್ನು ರಾಹುಲ್ ಗಾಂಧಿಯವರಿಗೆ ತಿಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401