Connect with us

ದಿನದ ಸುದ್ದಿ

ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್, ಭೂತಾನ್ ನಿಂದ ವಲಸೆ ಬಂದವರನ್ನು ಸಿ ಎ ಎ ಯಿಂದ ಹೊರಗಿಡಲು ಕಾರಣವೇನು? : ಸಿದ್ದರಾಮಯ್ಯ ಪ್ರಶ್ನೆ

Published

on

ಸುದ್ದಿದಿನ, ಬೆಂಗಳೂರು : ಸಿಎಎ ಇಂದ ದೇಶದ ಯಾವೊಬ್ಬ ಪ್ರಜೆಗೂ ತೊಂದರೆ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಸಿಎಎ, ಎನ್‌ಆರ್‌ಸಿ ಹಾಗೂ ಎನ್‌ಪಿಆರ್ ಇವು ಒಂದಕ್ಕೊಂದು ಸಂಬಂಧ ಹೊಂದಿವೆ. ಇವು ಒಂದು ಸಮುದಾಯದ ಜನರನ್ನು ಮಾತ್ರ ಗುರಿಯಾಗಿರಿಸಿಕೊಂಡು ಜಾರಿಗೆ ತರಲಾಗುತ್ತಿದೆ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕೆಂಡಾಮಂಡಲವಾದರು.

ಗುರುವಾರ ಕೆಪಿಸಿಸಿ ಕಛೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊರದೇಶಗಳಲ್ಲಿ ದೌರ್ಜನ್ಯಕ್ಕೊಳಗಾದ ಜನರಿಗೆ ಭಾರತದ ಪೌರತ್ವ ಕೊಡುವುದಕ್ಕಾಗಲೀ, ಇಲ್ಲಿನ ಅಕ್ರಮ ವಲಸಿಗರಿಗೆ ಪೌರತ್ವ ನೀಡಿ ಅವರನ್ನು ಈ ದೇಶದ ಪ್ರಜೆಗಳಾಗಿಸುವುದಕ್ಕಾಗಲೀ‌ ನಮ್ಮ ವಿರೋಧವಿಲ್ಲ.

ಹೀಗೆ ಪೌರತ್ವ ನೀಡುವುದರಲ್ಲಿ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟು ನಿಯಮ ಜಾರಿಗೊಳಿಸಲು ಹೊರಟಿರುವುದಕ್ಕಷ್ಟೇ ನಮ್ಮ ವಿರೋಧ. 2014 ಡಿಸೆಂಬರ್ 31ರ ಮುಂಚೆ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಆಫ್ಘಾನಿಸ್ತಾನದಿಂದ ಬಂದ ಮುಸ್ಲಿಂ ಹೊರತಾದ ಧರ್ಮಗಳ ಜನರಿಗೆ ಪೌರತ್ವ ನೀಡುವುದೇನೋ‌ ಸರಿ, ಆದರೆ ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್, ಭೂತಾನ್ ಈ ದೇಶಗಳಿಂದ ಭಾರತಕ್ಕೆ ವಲಸೆ ಬಂದವರನ್ನು ಈ ಕಾಯ್ದೆಯಿಂದ ಹೊರಗಿಡಲು ಕಾರಣವೇನು? ಎಂದು ಪ್ರಶ್ನಿಸಿದರು.

ಸಂವಿಧಾನ ರಚನಾ ಸಮಿತಿಯ 289 ಜನ ಸದಸ್ಯರಲ್ಲಿ ಆರ್‌ಎಸ್‌ಎಸ್ ಸಂಘಪರಿವಾರದವರು ಇದ್ದರು. ಮನುಸ್ಮೃತಿ ಆಧಾರದ ಮೇಲೆ ಸಂವಿಧಾನ ರಚನೆಯಾಗಬೇಕೆಂಬುದು ಅವರ ಆಲೋಚನೆಯಾಗಿತ್ತು, ಅಂದು ಈ ಆಲೋಚನೆಗೆ ಅವಕಾಶ ಸಿಗಲಿಲ್ಲ ಹಾಗಾಗಿ ಇಂದು ಅದನ್ನು ಕಾಯ್ದೆ ರೂಪದಲ್ಲಿ ಜಾರಿಮಾಡಲು ಹೊರಟಿದ್ದಾರೆ.

ಒಂದು ಕಾಯ್ದೆ ಸಂಸತ್ತಿನ ಬಹುಮತ ಗಳಿಸಿ ಕಾನೂನಾಗಿ ಜಾರಿಗೆ ಬರಲು ಸಿದ್ಧವಾದರೂ, ಆ ಕಾನೂನು ನ್ಯಾಯಸಮ್ಮತವಲ್ಲ ಎಂದೆನಿದರೆ ಜೈಲಿಗೆ ಹೋದರೂ ಪರವಾಗಿಲ್ಲ ಅದಕ್ಕೆ ಅಸಹಕಾರ ತೋರಿ ಎಂದು ಮಹಾತ್ಮ ಗಾಂಧಿಯವರೇ ಹೇಳಿದ್ದರು.

ರವೀಂದ್ರನಾಥ್ ಠಾಗೋರ್ ಅವರು ಭಾರತ ಸರ್ವಧರ್ಮ ಸಹಿಷ್ಣು ದೇಶವಾಗಬೇಕು, ಮುಕ್ತವಾದ ಶಿಕ್ಷಣ ಮತ್ತು ಅಭಿವ್ಯಕ್ತಿಗೆ ಅವಕಾಶಗಳಿರಬೇಕು, ಇಲ್ಲಿನ ಪ್ರತಿ ಪ್ರಜೆ ಧೈರ್ಯದಿಂದ, ಸ್ವಾಭಿಮಾನದ ಬದುಕು ಬಾಳಬೇಕು ಎಂದು ಹೇಳಿದ್ದರು, ಆದರೆ ಬಿಜೆಪಿ ಹಿಂದೂ ರಾಷ್ಟ್ರ ನಿರ್ಮಾಣದ ಹುನ್ನಾರದೊಂದಿಗೆ ಕಾಯ್ದೆ ಜಾರಿಗೆ ಮುಂದಾಗಿದೆ ಎಂದು ಕಿಡಿಕಾರಿದರು.

ಕಾಯ್ದೆಯ ವಿರುದ್ಧ ದೇಶವ್ಯಾಪಿ ಜನರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಅವರಲ್ಲಿ ಬರೀ ಮುಸ್ಲಿಂರಷ್ಟೇ ಅಲ್ಲ, ವಿದ್ಯಾರ್ಥಿಗಳು, ಕಾರ್ಮಿಕರು, ಪ್ರಗತಿಪರರು, ಮಹಿಳೆಯರು ಹೀಗೆ ಎಲ್ಲ ವರ್ಗದ ಜನರು ಇದ್ದಾರೆ. ಕಾಯ್ದೆ ಜಾರಿಯಿಂದ ಮುಸ್ಲಿಂಮರಿಗೆ ಮಾತ್ರವಲ್ಲ, ಆದಿವಾಸಿಗಳು, ಬುಡಕಟ್ಟು ಜನಾಂಗದವರಿಗೂ ತೊಂದರೆ ತಪ್ಪಿದ್ದಲ್ಲ ಎಂದು ಎಚ್ಚರಿಕೆ ನೀಡಿದರು.

ಮನುಸ್ಮೃತಿಯನ್ನು ಬೆಂಬಲಿಸುತ್ತಾ,ದಲಿತರು, ಹಿಂದುಳಿದವರನ್ನು ಅಸ್ಪೃಶ್ಯರನ್ನಾಗಿ ಮಾಡಿ, ಸಮಾಜದಿಂದ ದೂರ ಇಟ್ಟು, ನಮ್ಮದು ಅಖಂಡ ಹಿಂದುತ್ವ, ‘ಸರ್ವೇ ಜನಾಃ ಸುಖಿನೋ ಭವಂತು’ ಅಂದುಬಿಟ್ರೆ ಅದನ್ನು ನಂಬುವಷ್ಟು ಜನ ಮೂರ್ಖರಲ್ಲ. ಸರ್ಕಾರ ಮೊದಲು ಈಗಿರುವ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲಿ, ಮತ್ತೆ ಉಳಿದದ್ದು ನೋಡೋಣ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending