ದಿನದ ಸುದ್ದಿ
ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್, ಭೂತಾನ್ ನಿಂದ ವಲಸೆ ಬಂದವರನ್ನು ಸಿ ಎ ಎ ಯಿಂದ ಹೊರಗಿಡಲು ಕಾರಣವೇನು? : ಸಿದ್ದರಾಮಯ್ಯ ಪ್ರಶ್ನೆ
ಸುದ್ದಿದಿನ, ಬೆಂಗಳೂರು : ಸಿಎಎ ಇಂದ ದೇಶದ ಯಾವೊಬ್ಬ ಪ್ರಜೆಗೂ ತೊಂದರೆ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿದ್ದಾರೆ. ಸಿಎಎ, ಎನ್ಆರ್ಸಿ ಹಾಗೂ ಎನ್ಪಿಆರ್ ಇವು ಒಂದಕ್ಕೊಂದು ಸಂಬಂಧ ಹೊಂದಿವೆ. ಇವು ಒಂದು ಸಮುದಾಯದ ಜನರನ್ನು ಮಾತ್ರ ಗುರಿಯಾಗಿರಿಸಿಕೊಂಡು ಜಾರಿಗೆ ತರಲಾಗುತ್ತಿದೆ ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕೆಂಡಾಮಂಡಲವಾದರು.
ಗುರುವಾರ ಕೆಪಿಸಿಸಿ ಕಛೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊರದೇಶಗಳಲ್ಲಿ ದೌರ್ಜನ್ಯಕ್ಕೊಳಗಾದ ಜನರಿಗೆ ಭಾರತದ ಪೌರತ್ವ ಕೊಡುವುದಕ್ಕಾಗಲೀ, ಇಲ್ಲಿನ ಅಕ್ರಮ ವಲಸಿಗರಿಗೆ ಪೌರತ್ವ ನೀಡಿ ಅವರನ್ನು ಈ ದೇಶದ ಪ್ರಜೆಗಳಾಗಿಸುವುದಕ್ಕಾಗಲೀ ನಮ್ಮ ವಿರೋಧವಿಲ್ಲ.
ಹೀಗೆ ಪೌರತ್ವ ನೀಡುವುದರಲ್ಲಿ ಮುಸ್ಲಿಂ ಸಮುದಾಯವನ್ನು ಹೊರಗಿಟ್ಟು ನಿಯಮ ಜಾರಿಗೊಳಿಸಲು ಹೊರಟಿರುವುದಕ್ಕಷ್ಟೇ ನಮ್ಮ ವಿರೋಧ. 2014 ಡಿಸೆಂಬರ್ 31ರ ಮುಂಚೆ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಆಫ್ಘಾನಿಸ್ತಾನದಿಂದ ಬಂದ ಮುಸ್ಲಿಂ ಹೊರತಾದ ಧರ್ಮಗಳ ಜನರಿಗೆ ಪೌರತ್ವ ನೀಡುವುದೇನೋ ಸರಿ, ಆದರೆ ಶ್ರೀಲಂಕಾ, ನೇಪಾಳ, ಮ್ಯಾನ್ಮಾರ್, ಭೂತಾನ್ ಈ ದೇಶಗಳಿಂದ ಭಾರತಕ್ಕೆ ವಲಸೆ ಬಂದವರನ್ನು ಈ ಕಾಯ್ದೆಯಿಂದ ಹೊರಗಿಡಲು ಕಾರಣವೇನು? ಎಂದು ಪ್ರಶ್ನಿಸಿದರು.
ಸಂವಿಧಾನ ರಚನಾ ಸಮಿತಿಯ 289 ಜನ ಸದಸ್ಯರಲ್ಲಿ ಆರ್ಎಸ್ಎಸ್ ಸಂಘಪರಿವಾರದವರು ಇದ್ದರು. ಮನುಸ್ಮೃತಿ ಆಧಾರದ ಮೇಲೆ ಸಂವಿಧಾನ ರಚನೆಯಾಗಬೇಕೆಂಬುದು ಅವರ ಆಲೋಚನೆಯಾಗಿತ್ತು, ಅಂದು ಈ ಆಲೋಚನೆಗೆ ಅವಕಾಶ ಸಿಗಲಿಲ್ಲ ಹಾಗಾಗಿ ಇಂದು ಅದನ್ನು ಕಾಯ್ದೆ ರೂಪದಲ್ಲಿ ಜಾರಿಮಾಡಲು ಹೊರಟಿದ್ದಾರೆ.
ಒಂದು ಕಾಯ್ದೆ ಸಂಸತ್ತಿನ ಬಹುಮತ ಗಳಿಸಿ ಕಾನೂನಾಗಿ ಜಾರಿಗೆ ಬರಲು ಸಿದ್ಧವಾದರೂ, ಆ ಕಾನೂನು ನ್ಯಾಯಸಮ್ಮತವಲ್ಲ ಎಂದೆನಿದರೆ ಜೈಲಿಗೆ ಹೋದರೂ ಪರವಾಗಿಲ್ಲ ಅದಕ್ಕೆ ಅಸಹಕಾರ ತೋರಿ ಎಂದು ಮಹಾತ್ಮ ಗಾಂಧಿಯವರೇ ಹೇಳಿದ್ದರು.
ರವೀಂದ್ರನಾಥ್ ಠಾಗೋರ್ ಅವರು ಭಾರತ ಸರ್ವಧರ್ಮ ಸಹಿಷ್ಣು ದೇಶವಾಗಬೇಕು, ಮುಕ್ತವಾದ ಶಿಕ್ಷಣ ಮತ್ತು ಅಭಿವ್ಯಕ್ತಿಗೆ ಅವಕಾಶಗಳಿರಬೇಕು, ಇಲ್ಲಿನ ಪ್ರತಿ ಪ್ರಜೆ ಧೈರ್ಯದಿಂದ, ಸ್ವಾಭಿಮಾನದ ಬದುಕು ಬಾಳಬೇಕು ಎಂದು ಹೇಳಿದ್ದರು, ಆದರೆ ಬಿಜೆಪಿ ಹಿಂದೂ ರಾಷ್ಟ್ರ ನಿರ್ಮಾಣದ ಹುನ್ನಾರದೊಂದಿಗೆ ಕಾಯ್ದೆ ಜಾರಿಗೆ ಮುಂದಾಗಿದೆ ಎಂದು ಕಿಡಿಕಾರಿದರು.
ಕಾಯ್ದೆಯ ವಿರುದ್ಧ ದೇಶವ್ಯಾಪಿ ಜನರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ. ಅವರಲ್ಲಿ ಬರೀ ಮುಸ್ಲಿಂರಷ್ಟೇ ಅಲ್ಲ, ವಿದ್ಯಾರ್ಥಿಗಳು, ಕಾರ್ಮಿಕರು, ಪ್ರಗತಿಪರರು, ಮಹಿಳೆಯರು ಹೀಗೆ ಎಲ್ಲ ವರ್ಗದ ಜನರು ಇದ್ದಾರೆ. ಕಾಯ್ದೆ ಜಾರಿಯಿಂದ ಮುಸ್ಲಿಂಮರಿಗೆ ಮಾತ್ರವಲ್ಲ, ಆದಿವಾಸಿಗಳು, ಬುಡಕಟ್ಟು ಜನಾಂಗದವರಿಗೂ ತೊಂದರೆ ತಪ್ಪಿದ್ದಲ್ಲ ಎಂದು ಎಚ್ಚರಿಕೆ ನೀಡಿದರು.
ಮನುಸ್ಮೃತಿಯನ್ನು ಬೆಂಬಲಿಸುತ್ತಾ,ದಲಿತರು, ಹಿಂದುಳಿದವರನ್ನು ಅಸ್ಪೃಶ್ಯರನ್ನಾಗಿ ಮಾಡಿ, ಸಮಾಜದಿಂದ ದೂರ ಇಟ್ಟು, ನಮ್ಮದು ಅಖಂಡ ಹಿಂದುತ್ವ, ‘ಸರ್ವೇ ಜನಾಃ ಸುಖಿನೋ ಭವಂತು’ ಅಂದುಬಿಟ್ರೆ ಅದನ್ನು ನಂಬುವಷ್ಟು ಜನ ಮೂರ್ಖರಲ್ಲ. ಸರ್ಕಾರ ಮೊದಲು ಈಗಿರುವ ಸಾಮಾಜಿಕ, ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲಿ, ಮತ್ತೆ ಉಳಿದದ್ದು ನೋಡೋಣ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು