Connect with us

ದಿನದ ಸುದ್ದಿ

‘ಧರ್ಮಕ್ಕಾಗಿ ಕೊಲ್ಲು’ ಎಂಬ ದುಷ್ಟ ವ್ಯಾಖ್ಯಾನ ಮಾಡಿ ಶೂದ್ರ, ದಲಿತ ಮಕ್ಕಳನ್ನು ಹಾದಿ ತಪ್ಪಿಸಲಾಗುತ್ತಿದೆ‌ : ಸಿದ್ದರಾಮಯ್ಯ ಆತಂಕ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಪ್ರೀತಿಯ ಯುವ ಬಂಧುಗಳೆ, ರಾಜ್ಯದಲ್ಲಿ, ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳು ನನ್ನನ್ನು ಆತಂಕಿತಗೊಳಿಸಿವೆ, ನೋವಿನಲ್ಲಿ ಮುಳುಗಿಸಿವೆ. ಬಾಳಿ ಬದುಕಬೇಕಾದ ಯುವಕರು ಕ್ಷುಲ್ಲಕ ಕಾರಣಗಳಿಗಾಗಿ, ಕೆಲವೊಮ್ಮೆ ಕಾರಣಗಳೆ ಇಲ್ಲದೆ (Murders) ಹತ್ಯೆಗೀಡಾಗುತ್ತಿರುವುದನ್ನು ಕನ್ನಡ ನಾಡಿನ ಆತ್ಮಸಾಕ್ಷಿ ಸಹಿಸಬಾರದು. ದುಡಿಯುವ ಜಾತಿ, ಪಂಗಡ, ಧರ್ಮಗಳಿಗೆ ಸೇರಿದ ಮಕ್ಕಳು ವಿನಾ ಕಾರಣ ಹತ್ಯೆಯಾಗುತ್ತಿರುವುದನ್ನು ಯಾವ ನಾಗರಿಕ ಸಮಾಜವೂ ಸಹಿಸಲಾಗದು. ಸಹಿಸಬಾರದು. ಶಾಂತಿ, ಸೌಹಾರ್ದತೆಗೆ ಹೆಸರಾದ ಕರ್ನಾಟಕವನ್ನು ವಿನಾ ಕಾರಣ ಅಶಾಂತಿಯ ಕಡಲಲ್ಲಿ ಮುಳುಗಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ( Siddaramaiah) ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ (Social media) ಅಭಿಪ್ರಾಯ ಹಂಚಿಕೊಂಡಿರುವ ಅವರು, ನಾಡಿನ ಆತ್ಮಸಾಕ್ಷಿಯಂತಿದ್ದ ಪೂರ್ಣಚಂದ್ರ ತೇಜಸ್ವಿಯವರು ಒಮ್ಮೆ ‘ಕೊಂದು ಉಳಿಸಿಕೊಳ್ಳುವ ಧರ್ಮವಿದ್ದರೆ ಅದನ್ನು ಧರ್ಮವೆನ್ನಲಾಗುತ್ತದೆಯೇ’ ಎಂದು ಪ್ರಶ್ನಿಸಿದ್ದರು. ಬಸವಣ್ಣನವರು ‘ಕೊಂದವರುಳಿದರೆ ಕೂಡಲ ಸಂಗಮದೇವಾ’ ಎಂದು ಆರ್ತವಾಗಿ ಕೇಳಿದ್ದರು. ಧರ್ಮಕ್ಕಾಗಿ ಕೊಲೆ ಮಾಡಿದ್ದೇವೆ ಎನ್ನುವವರನ್ನು ಯಾವ ದೇವರೂ ಕ್ಷಮಿಸುವುದಿಲ್ಲ ಎಂಬ ಮಾತುಗಳನ್ನು ಗುರು ಹಿರಿಯರು ಹೇಳುತ್ತಲೇ ಬಂದಿದ್ದಾರೆ.

ಧರ್ಮವನ್ನು ನೀನು ರಕ್ಷಿಸಿದರೆ ಅದೆ ಧರ್ಮವು ನಿನ್ನನ್ನು ರಕ್ಷಿಸುತ್ತದೆ ಎಂಬ ಮಹಾಭಾರತದ ಮಾತುಗಳನ್ನು ಕೆಲವು ಮತಾಂಧರು ಹಾಗೂ ನಿರ್ಧಿಷ್ಟ ಹಿತಾಸಕ್ತಿಯುಳ್ಳ ಜನರು ಅದರ ಅರ್ಥವನ್ನೆ ಕುಗ್ಗಿಸಿದ್ದಾರೆ. ದಯೆ, ಕರುಣೆ, ಅಸಹಾಯಕರ ರಕ್ಷಣೆ ಮುಂತಾದ ಉದಾತ್ತವಾದ ವಿಶ್ವ ಆದರ್ಶದ ಮಾತುಗಳನ್ನು ತಿರುಚಿ ಧರ್ಮಕ್ಕಾಗಿ ಕೊಲ್ಲು ಎಂಬ ದುಷ್ಟ ವ್ಯಾಖ್ಯಾನ ಮಾಡಿ ಶೂದ್ರ, ದಲಿತ ಮಕ್ಕಳನ್ನು ಹಾದಿ ತಪ್ಪಿಸಲಾಗುತ್ತಿದೆ.

ಇಸ್ಲಾಮಿನ ಉದಾತ್ತ ತತ್ವಗಳನ್ನು ಮತ್ತು ಶಾಂತಿ, ಸತ್ಯಗಳನ್ನು ಮುಂದು ಮಾಡುವ ಬದಲು ಅಪವ್ಯಾಖ್ಯಾನ ಮಾಡುವ ದುಷ್ಟರಿಂದಾಗಿ ಮುಸ್ಲಿಂ ಬಡ ಯುವಕರ ಮೆದುಳೂ ಹಾಳಾಗುತ್ತಿದೆ. ಹಿಂದುವಿನ ಕೊಲೆಗೆ ಪ್ರತೀಕಾರವಾಗಿ ಕೈಗೆ ಸಿಕ್ಕ ಯಾರಾದರೂ ಮುಸ್ಲಿಮನನ್ನು ಕೊಲ್ಲು, ಮುಸ್ಲಿಮನ ಕೊಲೆಗೆ ಪ್ರತೀಕಾರವಾಗಿ ಕೈಗೆ ಸಿಕ್ಕ ಯಾರಾದರೂ ಹಿಂದುವನ್ನು ಕೊಲ್ಲು ಎಂಬ ಕ್ರೌರ್ಯವನ್ನು ಈ ಮಕ್ಕಳ ತಲೆಗೆ ತುಂಬಿದವರು ಯಾರು? ಅಂಥ ಕ್ರೌರ್ಯವನ್ನು ವ್ಯವಸ್ಥಿತವಾಗಿ ತುಂಬಿದವರನ್ನು ಅಪರಾಧಿಗಳನ್ನಾಗಿ ಮಾಡುವ ಕಾನೂನಿನ ಅವಶ್ಯಕತೆ ಎಲ್ಲಕ್ಕಿಂತ ಹೆಚ್ಚಾಗಿದೆ.

ಇದನ್ನೂ ಓದಿ | ನಮ್ಮ ಸರ್ಕಾರದ ಕಾಲದಲ್ಲಿ ನಡೆದ ಕೋಮುಹಿಂಸಾಚಾರ ಮತ್ತು ಕೈಗೊಂಡ ಕ್ರಮಗಳ ಪುಸ್ತಕವನ್ನೇ ಪ್ರಕಟಿಸಿದ್ದೇವೆ, ಓದಿಕೊಳ್ಳಿ : ಸಿದ್ದರಾಮಯ್ಯ

ದುಷ್ಟರ ತಾಳಕ್ಕೆ ತಕ್ಕಂತೆ ಈ ಬೇಜವಾಬ್ಧಾರಿ ಸರ್ಕಾರವೂ ಕುಣಿಯುತ್ತಿದೆ ಅಥವಾ ಸರ್ಕಾರದ ಕ್ರೂರವಾದ, ಪಕ್ಷಪಾತಿಯಾದ ಕ್ರೂರ ದೊರೆ ಹಮ್ಮುರಾಬಿ ಕಾಲದ ನಿಲುವುಗಳೆ ಅಮಾಯಕ ಮಕ್ಕಳ ಕೊಲೆಗಳಿಗೆ ಕಾರಣವಾಗುತ್ತಿವೆ ಎಂಬ ಅನುಮಾನ ಕೂಡ ಬರುತ್ತಿದೆ. ಬ್ಯಾಬಿಲೋನಿಯಾದಲ್ಲಿ ಸುಮಾರು 3800 ವರ್ಷಗಳ ಹಿಂದೆ ಹಮ್ಮುರಾಬಿ ಎಂಬ ರಾಜನಿದ್ದ, ಆತ ಕಾನೂನೊಂದನ್ನು ಜಾರಿಗೆ ತಂದಿದ್ದ. ಯಾರಾದರೂ ಇನ್ನೊಬ್ಬರ ಕಣ್ಣಿಗೆ ಹಾನಿ ಮಾಡಿದರೆ ಹಾನಿ ಮಾಡಿದವನ ಕಣ್ಣುಗಳನ್ನು ಕಿತ್ತು ಹಾಕುವ, ಕೊಲೆ ಮಾಡಿದರೆ ಕೊಲೆ ಮಾಡುವ, ಕೈ ಕಾಲು ಊನವಾದರೆ, ಊನ ಮಾಡಿದವನ ಅಂಗಾಂಗಗಳನ್ನು ಊನ ಮಾಡುವ ಬರ್ಬರ ಕಾನೂನುಗಳನ್ನು ಜಾರಿಗೆ ತಂದಿದ್ದ.

ಹಮ್ಮುರಾಬಿಯನ್ನು ಜಗತ್ತಿನ ಕ್ರೂರ ದೊರೆ ಎನ್ನಲಾಗುತ್ತದೆ. ನಮ್ಮ ರಾಜ್ಯದ ಬೇಜವಾಬ್ಧಾರಿಯುತ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಕರಾವಳಿಯಲ್ಲಿ ಹೇಳಿದ “ಕ್ರಿಯೆಗೆ ಪ್ರತಿಕ್ರಿಯೆ” ಎಂಬ ಮಾತುಗಳು ಥೇಟ್ ಹಮ್ಮುರಾಬಿಯ ಬರ್ಬರವಾದ, ಅನಾಗರಿಕವಾದ ಕಾನೂನನ್ನೆ ನೆನಪಿಸುತ್ತದೆ. ಕರ್ನಾಟಕದ ಇತಿಹಾಸದಲ್ಲಿ ಬೊಮ್ಮಾಯಿಯವರು 21ನೆ ಶತಮಾನದ ಹಮ್ಮುರಾಬಿ ಎಂದು ಕುಖ್ಯಾತವಾಗುತ್ತಾರೆ.

ನಮ್ಮ ಮಹಾಕಾವ್ಯವಾದ ಮಹಾಭಾರತದಲ್ಲಿ ಕೊಲೆಯನ್ನು ಖಂಡಿಸುವ ಮಾತುಗಳು ಅನೇಕ ಕಡೆ ಬರುತ್ತವೆ. ಮಹಾ ಭಾರತದ ಮೂಲ ಆಶಯವು ಭಗವದ್ಗೀತೆ ಹೇಳುವುದಕ್ಕೆ ಸಂಪೂರ್ಣ ಭಿನ್ನವಾದ ಹಾಗೆ ಕಾಣುತ್ತದೆ. ಈ ಮಹಾಕಾವ್ಯದಲ್ಲಿ ಪಾಂಡವರಿಗೆ ಅಧಿಕಾರ ತಪ್ಪಿಸಿದ ಕೌರವರ ಬಗ್ಗೆ ಅಲ್ಲಿನ ಜನರು ಶಾಪ ಹಾಕುತ್ತಾರೆ. ಆದರೆ ಯುದ್ಧ ಮುಗಿಯುತ್ತದೆ. ಎರಡೂ ಕಡೆಯ ಅಸಂಖ್ಯಾತ ಜನ ಮರಣ ಹೊಂದುತ್ತಾರೆ. ನಾಡಿನ ತುಂಬೆಲ್ಲ ವಿಧವೆಯರು, ತಬ್ಬಲಿಗಳಾದ ಮಕ್ಕಳು, ತಬ್ಬಲಿಗಳಾದ ತಂದೆ ತಾಯಿಗಳ ಕಣ್ಣೀರು ಒರೆಸುವುದಕ್ಕೂ ಜನ ಇರುವುದಿಲ್ಲ. ಇಂಥ ಸಂದರ್ಭದಲ್ಲಿ ಧರ್ಮರಾಯನ ನೇತೃತ್ವದಲ್ಲಿ ಪಾಂಡವರು ಊರೊಳಗೆ ಪ್ರವೇಶಿಸುತ್ತಾರೆ. ಆಗ ಊರ ಜನ ಪಾಂಡವರನ್ನು ಅತ್ಯಂತ ಕಠಿಣ ಭಾಷೆಯಲ್ಲಿ ನಿಂದಿಸುತ್ತಾರೆ. ಅಧಿಕಾರಕ್ಕಾಗಿ ತಂದೆ ಸಮಾನರನ್ನು, ಗುರುಗಳನ್ನು, ಸೋದರರನ್ನು, ಬಂಧುಗಳನ್ನು, ಅಮಾಯಕರನ್ನು ಕೊಂದ ಕ್ರೂರ ಪಾಂಡವರೆ, ನಿಮ್ಮ ಅಧಿಕಾರ ಜನರ ಸಮಾಧಿಗಳ ಮೇಲಷ್ಟೆ ಎಂದು ಶಾಪ ಹಾಕುತ್ತಾರೆ. ಮಹಾಕವಿ ವ್ಯಾಸಮುನಿಗಳು ಕೊಲೆಗೆ ಕೊಲೆ ಎಂಬ, ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂಬ ಅನಾಗರಿಕವಾದ, ಬರ್ಬರವಾದ ತತ್ವವನ್ನು ಹೇಸಿಗೆಯೆಂಬಂತೆ ವ್ಯಾಖ್ಯಾನಿಸುತ್ತಾರೆ. ಹಾಗಾಗಿ ಮಹಾಭಾರತ ಕಾವ್ಯ ಜನರ ಕಾವ್ಯವಾಗಿದೆ.

ಕರಾವಳಿಯಲ್ಲಿ ಅಮಾಯಕ ಯುವಕರು ವಿನಾಕಾರಣ ದುರಂತ ಸಾವನ್ನಪ್ಪುತ್ತಿದ್ದಾರೆ. ಕರಾವಳಿ ಜಿಲ್ಲೆಗಳ ದುಡಿಯುವ ಸಮುದಾಯಗಳು ಅತಿ ಜರೂರಾಗಿ ಜಾಗೃತಗೊಳ್ಳಬೇಕು. ಕರಾವಳಿಯ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶೇ.99 ರಷ್ಟು ಅತ್ಯಂತ ಬಡ ಹುಡುಗರು ಹಾಗೂ ಎರಡೆ ಸಮುದಾಯಗಳವರು. ಕೊಲೆಯಾಗುತ್ತಿರುವ ಎರಡೂ ಕಡೆಯ ಹುಡುಗರು ದುಡಿದು, ಕೂಲಿ ಮಾಡಿ ಬದುಕುತ್ತಿರುವವರು. ಈ ಎರಡೂ ಕಡೆಯ ಹುಡುಗರ ಮೆದುಳಿಗೆ ವಿಷ ಹಾಕುತ್ತಿರುವವರು ಮಕ್ಕಳು ಮಾತ್ರ ಬೆಂಗಳೂರು, ಮುಂಬೈ ನಗರಗಳಲ್ಲಿ ಹಾಗೂ ಕೊಲ್ಲಿ ಯುರೋಪು, ಅಮೆರಿಕ ಮುಂತಾದ ದೇಶಗಳಲ್ಲಿ ಲಕ್ಷ, ಕೋಟಿಗಳ ಹೆಸರಲ್ಲಿ ಸಂಬಳ ದುಡಿಯುತ್ತಾ ವಾರದ ಕೊನೆಯಲ್ಲಿ ಲಕ್ಷಾಂತರ ಖರ್ಚು ಮಾಡಿ ಪಾರ್ಟಿ ಮಾಡುತ್ತಾ ಮೋಜು ಮಾಡುತ್ತಿದ್ದಾರೆ. ಜೊತೆಗೆ ಬಹುಪಾಲು ಜನ ಸೋಷಿಯಲ್ ಮೀಡಿಯಾಗಳಲ್ಲಿ ಉಚಿತವಾಗಿ ಧರ್ಮ ಉಳಿಸುವ ಕುರಿತು ಸಲಹೆಗಳನ್ನು ನೀಡುವ ಕ್ರೌರ್ಯವನ್ನು ಮೆರೆಯುತ್ತಿದ್ದಾರೆ. ಬಡವರ ಮಕ್ಕಳನ್ನು ಬೆಂಕಿಗೆ, ಜೈಲಿಗೆ ತಳ್ಳಿ ತಮ್ಮ ಮಕ್ಕಳ ಏಳಿಗೆಗೆ ಸ್ಪರ್ಧೆ ಬರದ ಹಾಗೆ ನೋಡಿಕೊಳ್ಳುತ್ತಿದ್ದಾರೆ. ಈ ಕುತಂತ್ರವನ್ನು ದುಡಿದು ಬದುಕುವ ಎಲ್ಲ ಸಮುದಾಯಗಳ ಯುವಕರು ಅರ್ಥ ಮಾಡಿಕೊಳ್ಳಬೇಕು. ಒಳ್ಳೆಯ ಶಿಕ್ಷಣ, ಒಳ್ಳೆಯ ಉದ್ಯೋಗ, ಉದಾತ್ತವಾದ ಆಲೋಚನೆ, ಶಾಂತಿ, ಸಹಬಾಳ್ವೆಗಳು ಮಾತ್ರ ಯುವಜನರನ್ನು ಏಳಿಗೆಯತ್ತ ಕೊಂಡೊಯ್ಯಲು ಸಾಧ್ಯ. ಕರಾವಳಿಯ ಯುವಜನತೆಗೆ ಇದೆಲ್ಲವನ್ನೂ ವ್ಯವಸ್ಥಿತವಾಗಿ ತಪ್ಪಿಸಲಾಗುತ್ತಿದೆ.

ಕರಾವಳಿಯ ಯುವಜನತೆಯಲ್ಲಿ ಕೈ ಮುಗಿದು ವಿನಂತಿಸುತ್ತೇನೆ. ದಯಮಾಡಿ ಸಾಕು ಮಾಡಿ. ಧರ್ಮ, ಕೋಮು ದ್ವೇಷವನ್ನು ದೂರ ಮಾಡಿ. 30 ವರ್ಷಗಳ ಹಿಂದಿದ್ದ ಕರಾವಳಿಯನ್ನು ಮತ್ತೆ ನಿರ್ಮಾಣ ಮಾಡಿ. ವೃದ್ಧಾಪ್ಯದಲ್ಲಿ ಮಕ್ಕಳನ್ನು ಕಳೆದುಕೊಂಡ ತಂದೆ ತಾಯಿಗಳನ್ನು, ಎಳೆ ವಯಸ್ಸಿನಲ್ಲಿ ಅಣ್ಣ ತಮ್ಮಂದಿರನ್ನು, ಗಂಡಂದಿರನ್ನು ಕಳೆದುಕೊಂಡವರ ಹೃದಯದ ಬೆಂಕಿಯನ್ನೊಮ್ಮೆ ಅರ್ಥ ಮಾಡಿಕೊಳ್ಳಿ. ಅನಾಥರಾದ ಎಳೆಯ ಮಕ್ಕಳಿಗೆ ಎಷ್ಟು ಹಣ ಕೊಟ್ಟರೆ ತಾನೆ ಅಪ್ಪಂದಿರನ್ನು ತಂದುಕೊಡಲು ಸಾಧ್ಯವೆ? ಬದುಕಿದ್ದು ಶಾಶ್ವತ ಜೈಲಿಗೆ ಹೋದವರ ಕುಟುಂಬಗಳ ಕಷ್ಟ ದುಃಖಗಳನ್ನು ಒಮ್ಮೆ ನೆನೆಯಿರಿ, ವಕೀಲರುಗಳಿಗೆ ಫೀಸು ಕೊಡಲು ಮನೆ ಮಠ ಮಾರಿ ಬೀದಿಗೆ ಬಿದ್ದವರ ಸಂಕಷ್ಟಗಳು ನಿಮ್ಮ ಕಣ್ಮುಂದೆ ಬರಲಿ. ನಿಮ್ಮದೆ ಸ್ಕೂಲಿನಲ್ಲಿ, ನಿಮ್ಮ ಜೊತೆಯೆ ಕಲಿತ ಗೆಳೆಯ ಗೆಳತಿಯರು ಉತ್ತಮ ಉದ್ಯೋಗ ಮಾಡಿ ನೆಮ್ಮದಿಯ ಬದುಕು ಕಟ್ಟಿಕೊಳ್ಳುತ್ತಿರುವಾಗ, ನಿಮ್ಮ ಬದುಕನ್ನು ಯಾರು ಕಿತ್ತುಕೊಂಡರು ಎಂದು ಯೋಚಿಸಿ. ದೇವರಂತೂ ಖಂಡಿತ ನಿಮ್ಮ ಬದುಕನ್ನು ಹಾಳು ಮಾಡುವುದಿಲ್ಲ. ನೀವೆ, ನೀವೆ ಕೈಯಾರೆ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದೀರಿ.

ಕರಾವಳಿಯಲ್ಲಿ ಮಾದಕದ್ರವ್ಯಗಳ ಮಾಫಿಯಾ ಅಟ್ಟ ಹಾಸ ಮಾಡುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮೋದಿ ಸರ್ಕಾರ ಅದಾನಿಗಳಿಗೆ ಎಲ್ಲ ಬಂದರುಗಳನ್ನು ಬಿಟ್ಟುಕೊಡುತ್ತಿದೆ. ಗುಜರಾತಿನ ಮುಂದ್ರಾ ಬಂದರಿನಲ್ಲಿ ಒಂದೆ ದಿನ 21000 ಕೋಟಿ ಮೌಲ್ಯದ ಡ್ರಗ್ಸ್ ಸೀಝ್ ಆಯಿತು. ಆದರೆ ದೇಶದ ಒಳಗೆ ಲಕ್ಷಾಂತರ ಕೋಟಿ ಮೌಲ್ಯದ ಮಾದಕ ಪದಾರ್ಥಗಳು ಬಂದಿವೆ ಎಂದು ಹೇಳಲಾಗುತ್ತಿದೆ. ಈ ಮಾದಕ ಪದಾರ್ಥಗಳು ನಮ್ಮ ಮಕ್ಕಳ ಭವಿಷ್ಯವನ್ನು ಹಾಳು ಮಾಡುತ್ತಿವೆ. ಈ ಕೆಟ್ಟ ಸರ್ಕಾರದಿಂದ ಯವ ನ್ಯಾಯವನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಸರ್ಕಾರದ ವರ್ತನೆ ಇನ್ನಷ್ಟು ಹಿಂಸೆ ಸೃಷ್ಟಿಸುವಂತೆ ಇದೆಯೆ ಹೊರತು, ಶಾಂತಿ ಸ್ಥಾಪಿಸುವ ಕಡೆಗೆ ಇಲ್ಲ. ಇನ್ನಷ್ಟು ಅಮಾಯಕರ ಹೆಣ ಬಿದ್ದರೆ ಮಾತ್ರ ತಮ್ಮ ರಾಜಕೀಯ ನಡೆಯುತ್ತದೆ ಎಂದು ಈ ದುಷ್ಟರು ಭಾವಿಸಿದ್ದಾರೆ. 2018 ರ ಬಿಜೆಪಿಯ ಪ್ರಣಾಳಿಕೆಯಲ್ಲಿ ಎನ್ ಐ ಎ ಸ್ಥಾಪಿಸುತ್ತೇವೆ ಎಂದು ಆಶ್ವಾಸನೆ ಕೊಟ್ಟಿದ್ದರು. ಈಗ ಅದನ್ನು ಮರೆತವರಂತೆ ವರ್ತಿಸುತ್ತಿದ್ದಾರೆ. ಇಷ್ಟೊಂದು ದುರ್ಬಲವಾದ ಹಾಗೂ ಕ್ರೂರ ಮನಸ್ಥಿತಿಯ ಮುಖ್ಯಮಂತ್ರಿ, ಬೇಜವಾಬ್ಧಾರಿ ನಡವಳಿಕೆಯ ಗೃಹಮಂತ್ರಿಯನ್ನು ರಾಜ್ಯ ಕಂಡಿರಲಿಲ್ಲ.

ಆದ್ದರಿಂದ ಮತ್ತೊಮ್ಮೆ ತಮ್ಮನ್ನು ವಿನಂತಿಸುತ್ತೇನೆ. ಕೆಟ್ಟ ಕಾರಣಕ್ಕಾಗಿ ಕರಾವಳಿಯು ರಾಜ್ಯಕ್ಕೆ ಮಾದರಿಯಾಗುವುದು ಬೇಡ. 30 ವರ್ಷಗಳ ಹಿಂದೆ ಕರಾವಳಿಯನ್ನು ರಾಜ್ಯ- ದೇಶಗಳ ಜನರು ಪ್ರೀತಿ, ಗೌರವ ಮತ್ತು ಹೆಮ್ಮೆಯ ಭಾವನೆಗಳಿಂದ ನೋಡುತ್ತಿದ್ದರಲ್ಲ, ಅಂಥ ಕರಾವಳಿಯನ್ನು ದಯಮಾಡಿ ನಿರ್ಮಾಣ ಮಾಡಿ. ದ್ವೇಷ ಹುಟ್ಟಿಸುವ, ಕೊಲೆಗೆ, ಹಿಂಸೆಗೆ ಪ್ರೇರೇಪಿಸುವ ಎಲ್ಲ ರಾಕ್ಷಸರನ್ನು ದೂರ ಮಾಡಿ ಇದರ ವಿರುದ್ಧ ಧೈರ್ಯವಾಗಿ ನಿಲ್ಲಿ, ಸೌಹಾರ್ದ ಸಭೆಗಳನ್ನು ಪ್ರಾರಂಭಿಸಿ, ಮನೆಯ ಸದಸ್ಯರನ್ನು ಕಳೆದುಕೊಂಡ ಕುಟುಂಬದ ಸದಸ್ಯರುಗಳೆಲ್ಲರೂ ಧರ್ಮಾತೀತವಾಗಿ ಒಂದಾಗಿ ವೇದಿಕೆ ರಚಿಸಿಕೊಂಡು ಶಾಂತಿ ಸೌಹಾರ್ದದ ಕರಾವಳಿ ನಿರ್ಮಿಸಲು ಮುಂದಾಗಿ, ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ. ಮುಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಈ ಸಭೆಗಳನ್ನು ಅಧಿಕೃತಗೊಳಿಸುತ್ತೇವೆ ಎಂದು ತಿಳಿಸಬಯಸುತ್ತೇನೆ. ಈಗ ನಾಡಿನಲ್ಲಿ ಅತ್ಯಂತ ತುರ್ತಾಗಿ ಶಾಂತಿಯುತವಾದ ವಾತಾವರಣ ನಿರ್ಮಾಣವಾಗಬೇಕಾಗಿದೆ ಅದನ್ನು ಸರ್ವರೂ ಸೇರಿ ಈಡೇರಿಸಬೇಕೆಂದು ತಮ್ಮನ್ನು ಕೈ ಮುಗಿದು ವಿನಂತಿಸುತ್ತೇನೆ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending