ದಿನದ ಸುದ್ದಿ
‘ಧರ್ಮಕ್ಕಾಗಿ ಕೊಲ್ಲು’ ಎಂಬ ದುಷ್ಟ ವ್ಯಾಖ್ಯಾನ ಮಾಡಿ ಶೂದ್ರ, ದಲಿತ ಮಕ್ಕಳನ್ನು ಹಾದಿ ತಪ್ಪಿಸಲಾಗುತ್ತಿದೆ : ಸಿದ್ದರಾಮಯ್ಯ ಆತಂಕ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2022/04/siddaramaiah_suddidina-017369.jpg&description=‘ಧರ್ಮಕ್ಕಾಗಿ ಕೊಲ್ಲು’ ಎಂಬ ದುಷ್ಟ ವ್ಯಾಖ್ಯಾನ ಮಾಡಿ ಶೂದ್ರ, ದಲಿತ ಮಕ್ಕಳನ್ನು ಹಾದಿ ತಪ್ಪಿಸಲಾಗುತ್ತಿದೆ : ಸಿದ್ದರಾಮಯ್ಯ ಆತಂಕ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2022/04/siddaramaiah_suddidina-017369.jpg&description=‘ಧರ್ಮಕ್ಕಾಗಿ ಕೊಲ್ಲು’ ಎಂಬ ದುಷ್ಟ ವ್ಯಾಖ್ಯಾನ ಮಾಡಿ ಶೂದ್ರ, ದಲಿತ ಮಕ್ಕಳನ್ನು ಹಾದಿ ತಪ್ಪಿಸಲಾಗುತ್ತಿದೆ : ಸಿದ್ದರಾಮಯ್ಯ ಆತಂಕ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ ಡೆಸ್ಕ್ : ಪ್ರೀತಿಯ ಯುವ ಬಂಧುಗಳೆ, ರಾಜ್ಯದಲ್ಲಿ, ಮುಖ್ಯವಾಗಿ ಕರಾವಳಿ ಜಿಲ್ಲೆಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳು ನನ್ನನ್ನು ಆತಂಕಿತಗೊಳಿಸಿವೆ, ನೋವಿನಲ್ಲಿ ಮುಳುಗಿಸಿವೆ. ಬಾಳಿ ಬದುಕಬೇಕಾದ ಯುವಕರು ಕ್ಷುಲ್ಲಕ ಕಾರಣಗಳಿಗಾಗಿ, ಕೆಲವೊಮ್ಮೆ ಕಾರಣಗಳೆ ಇಲ್ಲದೆ (Murders) ಹತ್ಯೆಗೀಡಾಗುತ್ತಿರುವುದನ್ನು ಕನ್ನಡ ನಾಡಿನ ಆತ್ಮಸಾಕ್ಷಿ ಸಹಿಸಬಾರದು. ದುಡಿಯುವ ಜಾತಿ, ಪಂಗಡ, ಧರ್ಮಗಳಿಗೆ ಸೇರಿದ ಮಕ್ಕಳು ವಿನಾ ಕಾರಣ ಹತ್ಯೆಯಾಗುತ್ತಿರುವುದನ್ನು ಯಾವ ನಾಗರಿಕ ಸಮಾಜವೂ ಸಹಿಸಲಾಗದು. ಸಹಿಸಬಾರದು. ಶಾಂತಿ, ಸೌಹಾರ್ದತೆಗೆ ಹೆಸರಾದ ಕರ್ನಾಟಕವನ್ನು ವಿನಾ ಕಾರಣ ಅಶಾಂತಿಯ ಕಡಲಲ್ಲಿ ಮುಳುಗಿಸಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ( Siddaramaiah) ಆತಂಕ ವ್ಯಕ್ತಪಡಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ (Social media) ಅಭಿಪ್ರಾಯ ಹಂಚಿಕೊಂಡಿರುವ ಅವರು, ನಾಡಿನ ಆತ್ಮಸಾಕ್ಷಿಯಂತಿದ್ದ ಪೂರ್ಣಚಂದ್ರ ತೇಜಸ್ವಿಯವರು ಒಮ್ಮೆ ‘ಕೊಂದು ಉಳಿಸಿಕೊಳ್ಳುವ ಧರ್ಮವಿದ್ದರೆ ಅದನ್ನು ಧರ್ಮವೆನ್ನಲಾಗುತ್ತದೆಯೇ’ ಎಂದು ಪ್ರಶ್ನಿಸಿದ್ದರು. ಬಸವಣ್ಣನವರು ‘ಕೊಂದವರುಳಿದರೆ ಕೂಡಲ ಸಂಗಮದೇವಾ’ ಎಂದು ಆರ್ತವಾಗಿ ಕೇಳಿದ್ದರು. ಧರ್ಮಕ್ಕಾಗಿ ಕೊಲೆ ಮಾಡಿದ್ದೇವೆ ಎನ್ನುವವರನ್ನು ಯಾವ ದೇವರೂ ಕ್ಷಮಿಸುವುದಿಲ್ಲ ಎಂಬ ಮಾತುಗಳನ್ನು ಗುರು ಹಿರಿಯರು ಹೇಳುತ್ತಲೇ ಬಂದಿದ್ದಾರೆ.
ಧರ್ಮವನ್ನು ನೀನು ರಕ್ಷಿಸಿದರೆ ಅದೆ ಧರ್ಮವು ನಿನ್ನನ್ನು ರಕ್ಷಿಸುತ್ತದೆ ಎಂಬ ಮಹಾಭಾರತದ ಮಾತುಗಳನ್ನು ಕೆಲವು ಮತಾಂಧರು ಹಾಗೂ ನಿರ್ಧಿಷ್ಟ ಹಿತಾಸಕ್ತಿಯುಳ್ಳ ಜನರು ಅದರ ಅರ್ಥವನ್ನೆ ಕುಗ್ಗಿಸಿದ್ದಾರೆ. ದಯೆ, ಕರುಣೆ, ಅಸಹಾಯಕರ ರಕ್ಷಣೆ ಮುಂತಾದ ಉದಾತ್ತವಾದ ವಿಶ್ವ ಆದರ್ಶದ ಮಾತುಗಳನ್ನು ತಿರುಚಿ ಧರ್ಮಕ್ಕಾಗಿ ಕೊಲ್ಲು ಎಂಬ ದುಷ್ಟ ವ್ಯಾಖ್ಯಾನ ಮಾಡಿ ಶೂದ್ರ, ದಲಿತ ಮಕ್ಕಳನ್ನು ಹಾದಿ ತಪ್ಪಿಸಲಾಗುತ್ತಿದೆ.
ಇಸ್ಲಾಮಿನ ಉದಾತ್ತ ತತ್ವಗಳನ್ನು ಮತ್ತು ಶಾಂತಿ, ಸತ್ಯಗಳನ್ನು ಮುಂದು ಮಾಡುವ ಬದಲು ಅಪವ್ಯಾಖ್ಯಾನ ಮಾಡುವ ದುಷ್ಟರಿಂದಾಗಿ ಮುಸ್ಲಿಂ ಬಡ ಯುವಕರ ಮೆದುಳೂ ಹಾಳಾಗುತ್ತಿದೆ. ಹಿಂದುವಿನ ಕೊಲೆಗೆ ಪ್ರತೀಕಾರವಾಗಿ ಕೈಗೆ ಸಿಕ್ಕ ಯಾರಾದರೂ ಮುಸ್ಲಿಮನನ್ನು ಕೊಲ್ಲು, ಮುಸ್ಲಿಮನ ಕೊಲೆಗೆ ಪ್ರತೀಕಾರವಾಗಿ ಕೈಗೆ ಸಿಕ್ಕ ಯಾರಾದರೂ ಹಿಂದುವನ್ನು ಕೊಲ್ಲು ಎಂಬ ಕ್ರೌರ್ಯವನ್ನು ಈ ಮಕ್ಕಳ ತಲೆಗೆ ತುಂಬಿದವರು ಯಾರು? ಅಂಥ ಕ್ರೌರ್ಯವನ್ನು ವ್ಯವಸ್ಥಿತವಾಗಿ ತುಂಬಿದವರನ್ನು ಅಪರಾಧಿಗಳನ್ನಾಗಿ ಮಾಡುವ ಕಾನೂನಿನ ಅವಶ್ಯಕತೆ ಎಲ್ಲಕ್ಕಿಂತ ಹೆಚ್ಚಾಗಿದೆ.
ಇದನ್ನೂ ಓದಿ | ನಮ್ಮ ಸರ್ಕಾರದ ಕಾಲದಲ್ಲಿ ನಡೆದ ಕೋಮುಹಿಂಸಾಚಾರ ಮತ್ತು ಕೈಗೊಂಡ ಕ್ರಮಗಳ ಪುಸ್ತಕವನ್ನೇ ಪ್ರಕಟಿಸಿದ್ದೇವೆ, ಓದಿಕೊಳ್ಳಿ : ಸಿದ್ದರಾಮಯ್ಯ
ದುಷ್ಟರ ತಾಳಕ್ಕೆ ತಕ್ಕಂತೆ ಈ ಬೇಜವಾಬ್ಧಾರಿ ಸರ್ಕಾರವೂ ಕುಣಿಯುತ್ತಿದೆ ಅಥವಾ ಸರ್ಕಾರದ ಕ್ರೂರವಾದ, ಪಕ್ಷಪಾತಿಯಾದ ಕ್ರೂರ ದೊರೆ ಹಮ್ಮುರಾಬಿ ಕಾಲದ ನಿಲುವುಗಳೆ ಅಮಾಯಕ ಮಕ್ಕಳ ಕೊಲೆಗಳಿಗೆ ಕಾರಣವಾಗುತ್ತಿವೆ ಎಂಬ ಅನುಮಾನ ಕೂಡ ಬರುತ್ತಿದೆ. ಬ್ಯಾಬಿಲೋನಿಯಾದಲ್ಲಿ ಸುಮಾರು 3800 ವರ್ಷಗಳ ಹಿಂದೆ ಹಮ್ಮುರಾಬಿ ಎಂಬ ರಾಜನಿದ್ದ, ಆತ ಕಾನೂನೊಂದನ್ನು ಜಾರಿಗೆ ತಂದಿದ್ದ. ಯಾರಾದರೂ ಇನ್ನೊಬ್ಬರ ಕಣ್ಣಿಗೆ ಹಾನಿ ಮಾಡಿದರೆ ಹಾನಿ ಮಾಡಿದವನ ಕಣ್ಣುಗಳನ್ನು ಕಿತ್ತು ಹಾಕುವ, ಕೊಲೆ ಮಾಡಿದರೆ ಕೊಲೆ ಮಾಡುವ, ಕೈ ಕಾಲು ಊನವಾದರೆ, ಊನ ಮಾಡಿದವನ ಅಂಗಾಂಗಗಳನ್ನು ಊನ ಮಾಡುವ ಬರ್ಬರ ಕಾನೂನುಗಳನ್ನು ಜಾರಿಗೆ ತಂದಿದ್ದ.
ಹಮ್ಮುರಾಬಿಯನ್ನು ಜಗತ್ತಿನ ಕ್ರೂರ ದೊರೆ ಎನ್ನಲಾಗುತ್ತದೆ. ನಮ್ಮ ರಾಜ್ಯದ ಬೇಜವಾಬ್ಧಾರಿಯುತ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಕರಾವಳಿಯಲ್ಲಿ ಹೇಳಿದ “ಕ್ರಿಯೆಗೆ ಪ್ರತಿಕ್ರಿಯೆ” ಎಂಬ ಮಾತುಗಳು ಥೇಟ್ ಹಮ್ಮುರಾಬಿಯ ಬರ್ಬರವಾದ, ಅನಾಗರಿಕವಾದ ಕಾನೂನನ್ನೆ ನೆನಪಿಸುತ್ತದೆ. ಕರ್ನಾಟಕದ ಇತಿಹಾಸದಲ್ಲಿ ಬೊಮ್ಮಾಯಿಯವರು 21ನೆ ಶತಮಾನದ ಹಮ್ಮುರಾಬಿ ಎಂದು ಕುಖ್ಯಾತವಾಗುತ್ತಾರೆ.
ನಮ್ಮ ಮಹಾಕಾವ್ಯವಾದ ಮಹಾಭಾರತದಲ್ಲಿ ಕೊಲೆಯನ್ನು ಖಂಡಿಸುವ ಮಾತುಗಳು ಅನೇಕ ಕಡೆ ಬರುತ್ತವೆ. ಮಹಾ ಭಾರತದ ಮೂಲ ಆಶಯವು ಭಗವದ್ಗೀತೆ ಹೇಳುವುದಕ್ಕೆ ಸಂಪೂರ್ಣ ಭಿನ್ನವಾದ ಹಾಗೆ ಕಾಣುತ್ತದೆ. ಈ ಮಹಾಕಾವ್ಯದಲ್ಲಿ ಪಾಂಡವರಿಗೆ ಅಧಿಕಾರ ತಪ್ಪಿಸಿದ ಕೌರವರ ಬಗ್ಗೆ ಅಲ್ಲಿನ ಜನರು ಶಾಪ ಹಾಕುತ್ತಾರೆ. ಆದರೆ ಯುದ್ಧ ಮುಗಿಯುತ್ತದೆ. ಎರಡೂ ಕಡೆಯ ಅಸಂಖ್ಯಾತ ಜನ ಮರಣ ಹೊಂದುತ್ತಾರೆ. ನಾಡಿನ ತುಂಬೆಲ್ಲ ವಿಧವೆಯರು, ತಬ್ಬಲಿಗಳಾದ ಮಕ್ಕಳು, ತಬ್ಬಲಿಗಳಾದ ತಂದೆ ತಾಯಿಗಳ ಕಣ್ಣೀರು ಒರೆಸುವುದಕ್ಕೂ ಜನ ಇರುವುದಿಲ್ಲ. ಇಂಥ ಸಂದರ್ಭದಲ್ಲಿ ಧರ್ಮರಾಯನ ನೇತೃತ್ವದಲ್ಲಿ ಪಾಂಡವರು ಊರೊಳಗೆ ಪ್ರವೇಶಿಸುತ್ತಾರೆ. ಆಗ ಊರ ಜನ ಪಾಂಡವರನ್ನು ಅತ್ಯಂತ ಕಠಿಣ ಭಾಷೆಯಲ್ಲಿ ನಿಂದಿಸುತ್ತಾರೆ. ಅಧಿಕಾರಕ್ಕಾಗಿ ತಂದೆ ಸಮಾನರನ್ನು, ಗುರುಗಳನ್ನು, ಸೋದರರನ್ನು, ಬಂಧುಗಳನ್ನು, ಅಮಾಯಕರನ್ನು ಕೊಂದ ಕ್ರೂರ ಪಾಂಡವರೆ, ನಿಮ್ಮ ಅಧಿಕಾರ ಜನರ ಸಮಾಧಿಗಳ ಮೇಲಷ್ಟೆ ಎಂದು ಶಾಪ ಹಾಕುತ್ತಾರೆ. ಮಹಾಕವಿ ವ್ಯಾಸಮುನಿಗಳು ಕೊಲೆಗೆ ಕೊಲೆ ಎಂಬ, ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂಬ ಅನಾಗರಿಕವಾದ, ಬರ್ಬರವಾದ ತತ್ವವನ್ನು ಹೇಸಿಗೆಯೆಂಬಂತೆ ವ್ಯಾಖ್ಯಾನಿಸುತ್ತಾರೆ. ಹಾಗಾಗಿ ಮಹಾಭಾರತ ಕಾವ್ಯ ಜನರ ಕಾವ್ಯವಾಗಿದೆ.
ಕರಾವಳಿಯಲ್ಲಿ ಅಮಾಯಕ ಯುವಕರು ವಿನಾಕಾರಣ ದುರಂತ ಸಾವನ್ನಪ್ಪುತ್ತಿದ್ದಾರೆ. ಕರಾವಳಿ ಜಿಲ್ಲೆಗಳ ದುಡಿಯುವ ಸಮುದಾಯಗಳು ಅತಿ ಜರೂರಾಗಿ ಜಾಗೃತಗೊಳ್ಳಬೇಕು. ಕರಾವಳಿಯ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶೇ.99 ರಷ್ಟು ಅತ್ಯಂತ ಬಡ ಹುಡುಗರು ಹಾಗೂ ಎರಡೆ ಸಮುದಾಯಗಳವರು. ಕೊಲೆಯಾಗುತ್ತಿರುವ ಎರಡೂ ಕಡೆಯ ಹುಡುಗರು ದುಡಿದು, ಕೂಲಿ ಮಾಡಿ ಬದುಕುತ್ತಿರುವವರು. ಈ ಎರಡೂ ಕಡೆಯ ಹುಡುಗರ ಮೆದುಳಿಗೆ ವಿಷ ಹಾಕುತ್ತಿರುವವರು ಮಕ್ಕಳು ಮಾತ್ರ ಬೆಂಗಳೂರು, ಮುಂಬೈ ನಗರಗಳಲ್ಲಿ ಹಾಗೂ ಕೊಲ್ಲಿ ಯುರೋಪು, ಅಮೆರಿಕ ಮುಂತಾದ ದೇಶಗಳಲ್ಲಿ ಲಕ್ಷ, ಕೋಟಿಗಳ ಹೆಸರಲ್ಲಿ ಸಂಬಳ ದುಡಿಯುತ್ತಾ ವಾರದ ಕೊನೆಯಲ್ಲಿ ಲಕ್ಷಾಂತರ ಖರ್ಚು ಮಾಡಿ ಪಾರ್ಟಿ ಮಾಡುತ್ತಾ ಮೋಜು ಮಾಡುತ್ತಿದ್ದಾರೆ. ಜೊತೆಗೆ ಬಹುಪಾಲು ಜನ ಸೋಷಿಯಲ್ ಮೀಡಿಯಾಗಳಲ್ಲಿ ಉಚಿತವಾಗಿ ಧರ್ಮ ಉಳಿಸುವ ಕುರಿತು ಸಲಹೆಗಳನ್ನು ನೀಡುವ ಕ್ರೌರ್ಯವನ್ನು ಮೆರೆಯುತ್ತಿದ್ದಾರೆ. ಬಡವರ ಮಕ್ಕಳನ್ನು ಬೆಂಕಿಗೆ, ಜೈಲಿಗೆ ತಳ್ಳಿ ತಮ್ಮ ಮಕ್ಕಳ ಏಳಿಗೆಗೆ ಸ್ಪರ್ಧೆ ಬರದ ಹಾಗೆ ನೋಡಿಕೊಳ್ಳುತ್ತಿದ್ದಾರೆ. ಈ ಕುತಂತ್ರವನ್ನು ದುಡಿದು ಬದುಕುವ ಎಲ್ಲ ಸಮುದಾಯಗಳ ಯುವಕರು ಅರ್ಥ ಮಾಡಿಕೊಳ್ಳಬೇಕು. ಒಳ್ಳೆಯ ಶಿಕ್ಷಣ, ಒಳ್ಳೆಯ ಉದ್ಯೋಗ, ಉದಾತ್ತವಾದ ಆಲೋಚನೆ, ಶಾಂತಿ, ಸಹಬಾಳ್ವೆಗಳು ಮಾತ್ರ ಯುವಜನರನ್ನು ಏಳಿಗೆಯತ್ತ ಕೊಂಡೊಯ್ಯಲು ಸಾಧ್ಯ. ಕರಾವಳಿಯ ಯುವಜನತೆಗೆ ಇದೆಲ್ಲವನ್ನೂ ವ್ಯವಸ್ಥಿತವಾಗಿ ತಪ್ಪಿಸಲಾಗುತ್ತಿದೆ.
ಕರಾವಳಿಯ ಯುವಜನತೆಯಲ್ಲಿ ಕೈ ಮುಗಿದು ವಿನಂತಿಸುತ್ತೇನೆ. ದಯಮಾಡಿ ಸಾಕು ಮಾಡಿ. ಧರ್ಮ, ಕೋಮು ದ್ವೇಷವನ್ನು ದೂರ ಮಾಡಿ. 30 ವರ್ಷಗಳ ಹಿಂದಿದ್ದ ಕರಾವಳಿಯನ್ನು ಮತ್ತೆ ನಿರ್ಮಾಣ ಮಾಡಿ. ವೃದ್ಧಾಪ್ಯದಲ್ಲಿ ಮಕ್ಕಳನ್ನು ಕಳೆದುಕೊಂಡ ತಂದೆ ತಾಯಿಗಳನ್ನು, ಎಳೆ ವಯಸ್ಸಿನಲ್ಲಿ ಅಣ್ಣ ತಮ್ಮಂದಿರನ್ನು, ಗಂಡಂದಿರನ್ನು ಕಳೆದುಕೊಂಡವರ ಹೃದಯದ ಬೆಂಕಿಯನ್ನೊಮ್ಮೆ ಅರ್ಥ ಮಾಡಿಕೊಳ್ಳಿ. ಅನಾಥರಾದ ಎಳೆಯ ಮಕ್ಕಳಿಗೆ ಎಷ್ಟು ಹಣ ಕೊಟ್ಟರೆ ತಾನೆ ಅಪ್ಪಂದಿರನ್ನು ತಂದುಕೊಡಲು ಸಾಧ್ಯವೆ? ಬದುಕಿದ್ದು ಶಾಶ್ವತ ಜೈಲಿಗೆ ಹೋದವರ ಕುಟುಂಬಗಳ ಕಷ್ಟ ದುಃಖಗಳನ್ನು ಒಮ್ಮೆ ನೆನೆಯಿರಿ, ವಕೀಲರುಗಳಿಗೆ ಫೀಸು ಕೊಡಲು ಮನೆ ಮಠ ಮಾರಿ ಬೀದಿಗೆ ಬಿದ್ದವರ ಸಂಕಷ್ಟಗಳು ನಿಮ್ಮ ಕಣ್ಮುಂದೆ ಬರಲಿ. ನಿಮ್ಮದೆ ಸ್ಕೂಲಿನಲ್ಲಿ, ನಿಮ್ಮ ಜೊತೆಯೆ ಕಲಿತ ಗೆಳೆಯ ಗೆಳತಿಯರು ಉತ್ತಮ ಉದ್ಯೋಗ ಮಾಡಿ ನೆಮ್ಮದಿಯ ಬದುಕು ಕಟ್ಟಿಕೊಳ್ಳುತ್ತಿರುವಾಗ, ನಿಮ್ಮ ಬದುಕನ್ನು ಯಾರು ಕಿತ್ತುಕೊಂಡರು ಎಂದು ಯೋಚಿಸಿ. ದೇವರಂತೂ ಖಂಡಿತ ನಿಮ್ಮ ಬದುಕನ್ನು ಹಾಳು ಮಾಡುವುದಿಲ್ಲ. ನೀವೆ, ನೀವೆ ಕೈಯಾರೆ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದೀರಿ.
ಕರಾವಳಿಯಲ್ಲಿ ಮಾದಕದ್ರವ್ಯಗಳ ಮಾಫಿಯಾ ಅಟ್ಟ ಹಾಸ ಮಾಡುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮೋದಿ ಸರ್ಕಾರ ಅದಾನಿಗಳಿಗೆ ಎಲ್ಲ ಬಂದರುಗಳನ್ನು ಬಿಟ್ಟುಕೊಡುತ್ತಿದೆ. ಗುಜರಾತಿನ ಮುಂದ್ರಾ ಬಂದರಿನಲ್ಲಿ ಒಂದೆ ದಿನ 21000 ಕೋಟಿ ಮೌಲ್ಯದ ಡ್ರಗ್ಸ್ ಸೀಝ್ ಆಯಿತು. ಆದರೆ ದೇಶದ ಒಳಗೆ ಲಕ್ಷಾಂತರ ಕೋಟಿ ಮೌಲ್ಯದ ಮಾದಕ ಪದಾರ್ಥಗಳು ಬಂದಿವೆ ಎಂದು ಹೇಳಲಾಗುತ್ತಿದೆ. ಈ ಮಾದಕ ಪದಾರ್ಥಗಳು ನಮ್ಮ ಮಕ್ಕಳ ಭವಿಷ್ಯವನ್ನು ಹಾಳು ಮಾಡುತ್ತಿವೆ. ಈ ಕೆಟ್ಟ ಸರ್ಕಾರದಿಂದ ಯವ ನ್ಯಾಯವನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಸರ್ಕಾರದ ವರ್ತನೆ ಇನ್ನಷ್ಟು ಹಿಂಸೆ ಸೃಷ್ಟಿಸುವಂತೆ ಇದೆಯೆ ಹೊರತು, ಶಾಂತಿ ಸ್ಥಾಪಿಸುವ ಕಡೆಗೆ ಇಲ್ಲ. ಇನ್ನಷ್ಟು ಅಮಾಯಕರ ಹೆಣ ಬಿದ್ದರೆ ಮಾತ್ರ ತಮ್ಮ ರಾಜಕೀಯ ನಡೆಯುತ್ತದೆ ಎಂದು ಈ ದುಷ್ಟರು ಭಾವಿಸಿದ್ದಾರೆ. 2018 ರ ಬಿಜೆಪಿಯ ಪ್ರಣಾಳಿಕೆಯಲ್ಲಿ ಎನ್ ಐ ಎ ಸ್ಥಾಪಿಸುತ್ತೇವೆ ಎಂದು ಆಶ್ವಾಸನೆ ಕೊಟ್ಟಿದ್ದರು. ಈಗ ಅದನ್ನು ಮರೆತವರಂತೆ ವರ್ತಿಸುತ್ತಿದ್ದಾರೆ. ಇಷ್ಟೊಂದು ದುರ್ಬಲವಾದ ಹಾಗೂ ಕ್ರೂರ ಮನಸ್ಥಿತಿಯ ಮುಖ್ಯಮಂತ್ರಿ, ಬೇಜವಾಬ್ಧಾರಿ ನಡವಳಿಕೆಯ ಗೃಹಮಂತ್ರಿಯನ್ನು ರಾಜ್ಯ ಕಂಡಿರಲಿಲ್ಲ.
ಆದ್ದರಿಂದ ಮತ್ತೊಮ್ಮೆ ತಮ್ಮನ್ನು ವಿನಂತಿಸುತ್ತೇನೆ. ಕೆಟ್ಟ ಕಾರಣಕ್ಕಾಗಿ ಕರಾವಳಿಯು ರಾಜ್ಯಕ್ಕೆ ಮಾದರಿಯಾಗುವುದು ಬೇಡ. 30 ವರ್ಷಗಳ ಹಿಂದೆ ಕರಾವಳಿಯನ್ನು ರಾಜ್ಯ- ದೇಶಗಳ ಜನರು ಪ್ರೀತಿ, ಗೌರವ ಮತ್ತು ಹೆಮ್ಮೆಯ ಭಾವನೆಗಳಿಂದ ನೋಡುತ್ತಿದ್ದರಲ್ಲ, ಅಂಥ ಕರಾವಳಿಯನ್ನು ದಯಮಾಡಿ ನಿರ್ಮಾಣ ಮಾಡಿ. ದ್ವೇಷ ಹುಟ್ಟಿಸುವ, ಕೊಲೆಗೆ, ಹಿಂಸೆಗೆ ಪ್ರೇರೇಪಿಸುವ ಎಲ್ಲ ರಾಕ್ಷಸರನ್ನು ದೂರ ಮಾಡಿ ಇದರ ವಿರುದ್ಧ ಧೈರ್ಯವಾಗಿ ನಿಲ್ಲಿ, ಸೌಹಾರ್ದ ಸಭೆಗಳನ್ನು ಪ್ರಾರಂಭಿಸಿ, ಮನೆಯ ಸದಸ್ಯರನ್ನು ಕಳೆದುಕೊಂಡ ಕುಟುಂಬದ ಸದಸ್ಯರುಗಳೆಲ್ಲರೂ ಧರ್ಮಾತೀತವಾಗಿ ಒಂದಾಗಿ ವೇದಿಕೆ ರಚಿಸಿಕೊಂಡು ಶಾಂತಿ ಸೌಹಾರ್ದದ ಕರಾವಳಿ ನಿರ್ಮಿಸಲು ಮುಂದಾಗಿ, ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ. ಮುಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಈ ಸಭೆಗಳನ್ನು ಅಧಿಕೃತಗೊಳಿಸುತ್ತೇವೆ ಎಂದು ತಿಳಿಸಬಯಸುತ್ತೇನೆ. ಈಗ ನಾಡಿನಲ್ಲಿ ಅತ್ಯಂತ ತುರ್ತಾಗಿ ಶಾಂತಿಯುತವಾದ ವಾತಾವರಣ ನಿರ್ಮಾಣವಾಗಬೇಕಾಗಿದೆ ಅದನ್ನು ಸರ್ವರೂ ಸೇರಿ ಈಡೇರಿಸಬೇಕೆಂದು ತಮ್ಮನ್ನು ಕೈ ಮುಗಿದು ವಿನಂತಿಸುತ್ತೇನೆ ಎಂದಿದ್ದಾರೆ.
2013 ರಿಂದ 2017ರ ವರೆಗಿನ ಅವಧಿಯಲ್ಲಿ ನಡೆದ ಹನ್ನೊಂದು ಮುಸ್ಲಿಮರ ಹತ್ಯೆಗಳ ಎಂಟು ಪ್ರಕರಣಗಳಲ್ಲಿ ಬಜರಂಗದಳ, ತಲಾ ಒಂದು ಪ್ರಕರಣಗಳಲ್ಲಿ ಹಿಂದೂ ಜಾಗರಣಾ ವೇದಿಕೆ, ಶ್ರೀರಾಮಸೇನೆ ಮತ್ತು ವಿಶ್ವ ಹಿಂದೂ ಪರಿಷತ್ ನ ಕಾರ್ಯಕರ್ತರು ಆರೋಪಿಗಳಾಗಿದ್ದಾರೆ. 115 ಆರೋಪಿಗಳ ವಿರುದ್ಧ ಕಾನೂನುಕ್ರಮ ಕೈಗೊಳ್ಳಲಾಗಿದೆ. 4/6 pic.twitter.com/dUxRP6bYbg
— Siddaramaiah (@siddaramaiah) July 29, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.
ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.
ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.
2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.
ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.
ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.
ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)
ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.
ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.
ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.
ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.
ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ5 days agoಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
-
ದಿನದ ಸುದ್ದಿ3 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ5 days agoಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ6 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ6 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ6 days agoಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ3 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

