Connect with us

ದಿನದ ಸುದ್ದಿ

ಗೋಕಾಕ್ ಪಟ್ಟಣ ನೆರೆಯಿಂದ‌ ಕಂಗೆಟ್ಟಾಗ, ರಮೇಶ್ ಜಾರಕಿಹೊಳಿ ಹೋಟೆಲ್‌ನ ಎಸಿ ರೂಮ್‌ನಲ್ಲಿ ಮಸ್ತಿ ಮಾಡ್ತಿದ್ರು : ಸಿದ್ದರಾಮಯ್ಯ ಕಿಡಿ

Published

on

ಸುದ್ದಿದಿನ,ಡೆಸ್ಕ್ : ಗೋಕಾಕ್‌ನಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಬೃಹತ್ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ನಮ್ಮ‌ ಪಕ್ಷದ ಅಭ್ಯರ್ಥಿ ಲಖನ್ ಜಾರಕಿಹೊಳಿ ಅವರ ಪರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ ಯಾಚಿಸಿದರು.

ಕಳೆದ ಚುನಾವಣೆಯಲ್ಲಿ ಕ್ಷೇತ್ರದ ಜನಾದೇಶ ಪಡೆದು ಗೆದ್ದಿದ್ದ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಪಕ್ಷಕ್ಕೆ ತನ್ನನ್ನು ತಾನು ಮಾರಿಕೊಂಡಿದ್ದರ ಫಲ ಇಂದು ಗೋಕಾಕ್ ಕ್ಷೇತ್ರ ಉಪಚುನಾವಣೆ ಎದುರಿಸುವಂತಾಗಿದೆ. ಪಕ್ಷಾಂತರ ಮಾಡಿದ ಶಾಸಕರೆಲ್ಲ ರಾಜಕೀಯದಲ್ಲಿರಲು ಅನರ್ಹರು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮತ್ತೆ ಅಂಥವರಿಗೆ ಮತ ನೀಡುತ್ತೀರ? ಮಂತ್ರಿಯಾಗಿದ್ದ ಸತೀಶ್ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈಬಿಟ್ಟು, ರಮೇಶ್ ಜಾರಕಿಹೊಳಿ ಅವರಿಗೆ ಅವಕಾಶ ನೀಡಿದ್ದೆ. ಮಂತ್ರಿಯಾದವರು ಸಂಪುಟ ಸಭೆಗೆ ಹಾಜರಾಗಬೇಕಲ್ವೇ? ಆದರೆ ಈ ಆಸಾಮಿ ಹತ್ತು ಸಚಿವ ಸಂಪುಟ ಸಭೆಗಳಿಗೇ ಹೋಗಲಿಲ್ಲ. ಇಂಥವರು ಯಾವ ಪುರುಷಾರ್ಥಕ್ಕೆ ಮಂತ್ರಿಯಾಗಿರಬೇಕು? ಎಂದು ಕಿಡಿಕಾರಿದರು.

ಬಳ್ಳಾರಿ ರೀತಿಯಲ್ಲಿಯೇ ಗೋಕಾಕ್ ಅನ್ನು ಸಹ ‘ರಿಪಬ್ಲಿಕ್ ಆಫ್ ಗೋಕಾಕ್’ ಮಾಡಿದ್ದಾರೆ. ಇಲ್ಲಿ‌ ರಮೇಶ್ ಜಾರಕಿಹೊಳಿಯದ್ದೇ ದರ್ಬಾರ್ ಆಗಿದೆ. ಕ್ಷೇತ್ರದ ಜನರಿಗೆ ಸ್ವಾತಂತ್ರ್ಯ ಬೇಕು, ಇಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಮರು ಸ್ಥಾಪನೆಯಾಗಬೇಕು ಎಂದಾದರೆ ನಮ್ಮ‌ ಪಕ್ಷದ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿಕೊಡಬೇಕು. ಪ್ರವಾಹ ಬಂದಾಗ ನಾನು ಗೋಕಾಕ್‌ಗೆ ಬಂದಿದ್ದೆ. ಹಳೆ ಗೋಕಾಕ್ ಪಟ್ಟಣ ಸಂಪೂರ್ಣ ಕೊಚ್ಚಿ ಹೋಗಿತ್ತು. ಜನ ಬೀದಿಗಳಲ್ಲಿ ವಾಸಿಸುತ್ತಿದ್ದರು. ಜನರ ಕಷ್ಟ ಕಾಲದಲ್ಲಿ ಜೊತೆಗೆ ನಿಂತು ಅವರಿಗೆ ಧೈರ್ಯ ತುಂಬಬೇಕಿದ್ದ ಶಾಸಕ ಮುಂಬೈ, ದೆಹಲಿ ಅಂತ ಊರೂರು ಅಲೆಯುತ್ತಿದ್ದರು. ಆಗ ಸತೀಶ್ ಜಾರಕಿಹೊಳಿ ಮತ್ತು ಲಖನ್ ಜಾರಕಿಹೊಳಿ ಜನರ ಜೊತೆ ಇದ್ದರು ಎಂದರು.

ಗೋಕಾಕ್ ಪಟ್ಟಣ ನೀರಿನಲ್ಲಿ ಮುಳುಗಿ ಹೋಗಿತ್ತು, ಜನ ಬದುಕಿಗಾಗಿ ನೆಲೆ ಹುಡುಕುತ್ತಿದ್ದರೆ ರಮೇಶ್ ಜಾರಕಿಹೊಳಿ ಮುಂಬೈನ ಪಂಚತಾರಾ ಹೋಟೆಲ್‌ನ ಎಸಿ ರೂಮ್‌ನಲ್ಲಿ ಮೋಜು ಮಸ್ತಿ ಮಾಡುತ್ತಾ ಕಾಲ ಕಳೆಯುತ್ತಿದ್ದರು. ಇಂಥ ಶಾಸಕ ಮತ್ತೆ ನಮಗೆ ಬೇಕಾ ಎಂದು ಜನತೆ ಯೋಚನೆ ಮಾಡಿ ಮತ ಚಲಾಯಿಸಬೇಕು. ಸತೀಶ್ ಜಾರಕಿಹೊಳಿ ನನ್ನ ಧೀರ್ಘ ಕಾಲದ ಗೆಳೆಯ, ನಿಷ್ಠಾವಂತ ನಾಯಕ ಕೂಡ. ಇನ್ನು ಲಖನ್ ಜಾರಕಿಹೊಳಿ ಯುವ ಉತ್ಸಾಹಿ ರಾಜಕಾರಣಿ. ಜನಸೇವೆ ಮಾಡುವ ಹಂಬಲ, ಕಾಳಜಿ ಅವರಲ್ಲಿದೆ. ಡಿಸೆಂಬರ್ 5ರಂದು ನಡೆಯುವ ಉಪಚುನಾವಣೆಯಲ್ಲಿ ಲಖನ್‌ಗೆ ಮತ ನೀಡಿ ಗೆಲ್ಲಿಸಿಕೊಡಿ, ಅವರೊಂದಿಗೆ ನಾವಿರುತ್ತೇವೆ, ಕ್ಷೇತ್ರದ ಅಭಿವೃದ್ಧಿಯನ್ನು ನಾವು ಬೆಂಬಲಿಸುತ್ತೇವೆ ಎಂದು ಮತದಾರರಲ್ಲಿ ಮನವಿಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending