Connect with us

ರಾಜಕೀಯ

ದೇಶ ಪ್ರೇಮದ ಹೆಸರಿನಲ್ಲಿ ಅಮಾಯಕರ ಹತ್ಯೆಗೆ ಮೋದಿ‌ ಸರ್ಕಾರದ ಬೆಂಬಲ : ಸಿದ್ದರಾಮಯ್ಯ ಆಕ್ರೋಶ

Published

on

ಸುದ್ದಿದಿನ, ಚಿಕ್ಕಮಗಳೂರು : ರಾಜ್ಯಪಾಲರ ಭಾಷಣ ನಾಡಿನ ಮತ್ತು ಜನತೆಯ ಹಿತಾಸಕ್ತಿಯ ಪರವಾಗಿ ಇದ್ದರೆ ನಾವು ಪ್ರತಿಭಟಿಸುವಂತಹ ಪ್ರಮೇಯವೇ ಬರುವುದಿಲ್ಲ. ಭಾಷಣದಲ್ಲಿ ಆಕ್ಷೇಪಾರ್ಹ ವಿಚಾರಗಳು ಇದ್ದರೆ ಖಂಡಿತಾ ವಿರೋಧಿಸುತ್ತೇವೆ, ಆಗ ನಮ್ಮ ಬಾಯಿ ಮುಚ್ಚಿಸೋಕೆ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಟಿಯಲ್ಲಿಂದು ಆಕ್ರೋಶ ವ್ಯಕ್ತಪಡಿಸಿದರು.

ಶುಕ್ರವಾರ ಚಿಕ್ಕಮಗಳೂರುನಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾಜಿ‌ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ ಅವರು, ಕಳೆದ ಬಾರಿ ಕೇಂದ್ರದ ಬಜೆಟ್ ಗಾತ್ರ ರೂ.27 ಲಕ್ಷ ಕೋಟಿಯಾಗಿತ್ತು, ಅದರಲ್ಲಿ ಎಷ್ಟು ಹಣ ಬಿಡುಗಡೆಯಾಗಿದೆ, ಎಷ್ಟು ಹಣ ಖರ್ಚಾಗಿದೆ ಎಂಬುದು ನಾಳೆ ತಿಳಿಯುತ್ತೆ. 6 ವರ್ಷದಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ, ಪ್ರಧಾನಿ ಮೋದಿಯವರು ನೀಡಿದ ಭರವಸೆ ಎಲ್ಲವೂ ಈಡೇರಿದ್ದರೆ ಈಗಾಗಲೇ ಸ್ವರ್ಗ ಸೃಷ್ಟಿಯಾಗಿರಬೇಕಿತ್ತು.

ಬಿಜೆಪಿಯವರು ಸ್ವರ್ಗ ಸೃಷ್ಟಿ ಮಾಡ್ತೀವಿ ಅಂತ ಹೇಳಿ ದೇಶವನ್ನು ನರಕ ಮಾಡಿದ್ದಾರೆ. ದೇಶದ ನಿರುದ್ಯೋಗ ಸಮಸ್ಯೆ, ಹಸಿವು, ಜಿಡಿಪಿ ಕುಸಿತ, ಭ್ರಷ್ಟಾಚಾರದ ಹೆಚ್ಚಳ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಉತ್ಪಾದನೆ ಕುಸಿತ, ಇಳಿಕೆಯಾಗುತ್ತಿರುವ ರಫ್ತು ಪ್ರಮಾಣದ ಬಗ್ಗೆ ಮಾತನಾಡಲಿ. ದೇಶದ ಈ ದುಸ್ಥಿತಿಗೆ ಕಾರಣ ಯಾರು? ಎಂದು ಕಿಡಿ ವ್ಯಕ್ತಪಡಿಸಿದರು. ‌

‘ಈಶ್ವರ್ ಅಲ್ಲಾ ತೇರೆ ನಾಮ್
ಸಬ್‌ಕೋ ಸನ್ಮತಿ ದೇ ಭಗವಾನ್’ ಎಂದು ಸೌಹಾರ್ದತೆ ಸಾರಿದ ಕಾರಣಕ್ಕಾಗಿ ಮಹಾತ್ಮ ಗಾಂಧಿಯವರನ್ನು ಸಂಘಪರಿವಾರ ಗುಂಡಿಟ್ಟು ಕೊಂದಿತ್ತು. ಈಗ ಅದೇ ಸಂಘಟನೆಗೆ ಸೇರಿದ ಗೂಂಡಾ ಒಬ್ಬ ಜಾಮಿಯಾ ವಿಶ್ವವಿದ್ಯಾಲಯದ ಮೌನ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದ್ದಾನೆ.

ಸೌಹಾರ್ದತೆ ಎಂದರೆ ಬಿಜೆಪಿಗೆ ಏಕಿಷ್ಟು ಭಯ? ಮಹಾತ್ಮ ಗಾಂಧಿಯವರ ಸಮಾಧಿಸ್ಥಳ ರಾಜ್‌ಘಾಟ್‌ಗೆ ಹೊರಟಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರ ಕಣ್ಣೆದುರೇ ಗೂಂಡಾ ಒಬ್ಬ ಗುಂಡು ಹಾರಿಸಿದ್ರೂ ಪೊಲೀಸರು ಮೌನವಾಗಿದ್ರು. ಗೂಂಡಾವೊಬ್ಬನಿಗೆ ಇಷ್ಟು ಧೈರ್ಯ ಬರಲು ಹೇಗೆ ಸಾಧ್ಯ? ಇದಕ್ಕೆ ಯಾರ ಬೆಂಬಲವಿದೆ? ಎಂಬುದರ ಬಗ್ಗೆ ಮೊದಲು ತನಿಖೆಯಾಗಬೇಕು ಎಂದು ಒತ್ತಾಯಿಸಿದರು.

ದೇಶ ವಿನಾಶದತ್ತ ಸಾಗುತ್ತಿದೆ. ಸಮಾಜಘಾತುಕರು, ಗೂಂಡಾಗಳೆಲ್ಲ ದೇಶಪ್ರೇಮದ ಸೋಗಿನಲ್ಲಿ ಅಮಾಯಕರ ಹತ್ಯೆಗೆ ನಿಂತಿದ್ದಾರೆ. ಇಂಥ ಹತ್ಯೆಗಳಿಗೆ ಸರ್ಕಾರವೂ ಬೆಂಬಲಿಸುತ್ತಿರುವುದು ದೇಶದ ಕರಾಳ ದಿನಗಳನ್ನು ಖಾತ್ರಿಪಡಿಸುತ್ತಿದೆ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಪುರಾವೆ ಬೇಕೆ? ಎಂದು‌ ಬಿಜೆಪಿ ಸರ್ಕಾವನ್ನು ತರಾಟೆಗೆ ತೆಗೆದುಕೊಂಡರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಎಸ್.ಎಸ್.ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಶಾಮನೂರು ಶಿವಶಂಕರಪ್ಪ ಚಾಲನೆ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆಯ ಕೆ.ಆರ್. ರಸ್ತೆಯಲ್ಲಿರುವ ಎಸ್.ಎಸ್. ಜನರಲ್ ಆಸ್ಪತ್ರೆ, ದಾವಣಗೆರೆ ದಕ್ಷಿಣದ ಜನರಿಗೆ, ವಿಶೇಷವಾಗಿ ನಗರದ ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಕೈಗೆಟುಕುವ, ಸುಲಭವಾಗಿ ಸಿಗುವ ಆರೋಗ್ಯ ಸೇವೆಯನ್ನು ಒದಗಿಸಲು ಮುಂದಾಗಿದೆ.

ಇಂದು ಸಂಜೆ ಶಾಸಕರು, ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳೂ ಆದ ಡಾ|| ಶಾಮನೂರು ಶಿವಶಂಕರಪ್ಪನವರು ಚಾಲನೆ ನೀಡಿ ಮಾತನಾಡಿ ಈಗಾಗಲೇ ಹೊರರೋಗಿಗಳ ವಿಭಾಗ, ಡಯಾಲಿಸಿಸ್ ಕೇಂದ್ರ ಸೇರಿದಂತೆ ವಿವಿಧ ಆರೋಗ್ಯ ಸೇವೆಯನ್ನು ನೀಡುತ್ತಿರುವ ಈ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದಿನಿಂದ ಮಹಿಳೆಯರು ಮತ್ತು ಮಕ್ಕಳಿಗೆ ಕೈಗೆಟುಕುವ ಒಳರೋಗಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪೂರೈಸುವ ಉದ್ದೇಶದಿಂದ 50 ಹಾಸಿಗೆಗಳ ಒಳರೋಗಿ ವಿಭಾಗವನ್ನು ಆರಂಭಿಸಲಾಗುತ್ತಿದೆ ಎಂದರು.

ಸಮುದಾಯ ವೈದ್ಯಕೀಯ ವಿಭಾಗದಿಂದ ನಡೆಸುವ ಕ್ಯಾನ್ಸರ್ ಪತ್ತೆ ಪರೀಕ್ಷಾ ಕ್ಲಿನಿಕ್, ಉಚಿತ ಡಯಾಲಿಸಿಸ್ ಸೇವೆಗಳು, ರಕ್ತದಲ್ಲಿನ ಸಕ್ಕರೆ, ಹಿಮೋಗ್ಲೋಬಿನ್, ಮೂತ್ರಪಿಂಡದ ಕಾರ್ಯ ಪರೀಕ್ಷೆಗಳು ಮತ್ತು ಮೂತ್ರ ಪರೀಕ್ಷೆಗಳಂತಹ ಮೂಲಭೂತ ಪ್ರಯೋಗಾಲಯ ಪರೀಕ್ಷೆಗಳು ನಡೆಯುತ್ತಿದ್ದು, ಆಸ್ಪತ್ರೆಯಲ್ಲಿ ಇಲ್ಲಿನ ಜನರಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಒಳರೋಗಿಗಳ ವಿಭಾಗವನ್ನು ಆರಂಬಿಸಿದ್ದು, ಈ ಭಾಗದ ಜನರು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.

ಒಳರೋಗಿ ವಿಭಾಗದ ಸೇವೆಗಳನ್ನು ಬೆಂಬಲಿಸುವ ಉದ್ದೇಶದಿಂದ, ಅಲ್ಟ್ರಾಸೌಂಡ್ ಮತ್ತು ಎಕ್ಸ್-ರೇ, ಡಯೊಗ್ನೊಸ್ಟಿಕ್ ಸೇರಿದಂತೆ ಇತರೆ ಆರೋಗ್ಯ ಸೇವೆಗಳನ್ನೂ ಪರಿಚಯಿಸಿ ರಿಯಾಯಿತಿ ದರದಲ್ಲಿ ಒದಗಿಸಲಾಗುವುದು, ಯಾವುದೇ ರೋಗಿಯನ್ನು ವೆಚ್ಚದ ಕಾರಣದಿಂದಾಗಿ ವಾಪಾಸ್ ಕಳಿಸುವುದಿಲ್ಲ ಎಂದು ಭರವಸೆ ನೀಡಿದರು.

ಸಾರ್ವಜನಿಕರಿಗೆ ಹೆಚ್ಚಿನ ನೆರವು ನೀಡಲು ಎಸ್.ಎಸ್.ಕೇರ್ ಟ್ರಸ್ಟ್ ಕೂಡ ನಮ್ಮೊಂದಿಗೆ ಕೈಜೋಡಿಸಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್.ಎಸ್.ಕೇರ್ ಟ್ರಸ್ಟ್ ಲೈಫ್ ಟ್ಟಸ್ರಿಗಳು, ದಾವಣಗೆರೆ ಸಂಸದರಾದ ಡಾ|| ಪ್ರಭಾ ಮಲ್ಲಿಕಾರ್ಜುನ್ ಅವರು ಮಾತನಾಡಿ 2019ರಿಂದ ಆರಂಭವಾದ ಎಸ್.ಎಸ್.ಕೇರ್ ಟ್ರಸ್ಟ್ ಅನೇಕ ಆರೋಗ್ಯ ಸೇವೆಗಳನ್ನು ಒದಗಿಸಲು ಡಾ|| ಶಾಮನೂರು ಶಿವಶಂಕರಪ್ಪನವರ ಪ್ರೇರಣೆಯೇ ಸಾಕ್ಷಿ ಎಂದರು.

ಈ ಸಂದರ್ಭದಲ್ಲಿ ಬಾಪೂಜಿ ಆಡಳಿತ ಮಂಡಳಿಯ ಸದಸ್ಯರಾದ ಅಥಣಿ ವೀರಣ್ಣನವರು, ಶ್ರೀಮತಿ ಕಿರುವಾಡಿ ಗಿರಿಜಮ್ಮ, ಸಂಪನ್ನ ಮುತಾಲಿಕ್, ಬಾಪೂಜಿ ವಿದ್ಯಾಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ಪ್ರೊ|| ಬಕ್ಕಪ್ಪ, ಎಸ್‌ಎಸ್‌ಐಎಂಎಸ್‌ಆರ್‌ಸಿ ಪ್ರಾಂಶುಪಾಲರಾದ ಡಾ. ಪ್ರಸಾದ್, ಎಸ್‌ಎಸ್‌ಐಎಂಎಸ್‌ಆರ್‌ಸಿ ವೈದ್ಯಕೀಯ ನಿರ್ದೇಶಕರಾದ ಡಾ. ಅರುಣಕುಮಾರ್ ಅಜ್ಜಪ್ಪ, ಬಾಪೂಜಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಕುಮಾರ್, ಸತ್ಯನಾರಾಯಣ, ಡಾ|| ಪ್ರಶಾಂತಕುಮಾರಿ, ಡಾ|| ಶ್ರೇಷ್ಠ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್, ದಾದು ಸೇಠ್, ಚಮನ್ ಸಾಬ್, ಮುನ್ನಾ ಪೈಲ್ವಾನ್, ಮುದೇಗೌಡ್ರು ಗಿರೀಶ್, ಜಿ.ಎಸ್.ಮಂಜುನಾಥ್ (ಗಡಿಗುಡಾಳ್) ಮತ್ತಿತರರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಶೀಘ್ರದಲ್ಲೇ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ : ಗೃಹ ಸಚಿವ ಜಿ. ಪರಮೇಶ್ವರ್

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ಪಿಎಸ್‌ಐ ಹಗರಣ ನಂತರ ಐದು ವರ್ಷಗಳಿಂದ ಇಲ್ಲಿವರೆಗೂ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿರಲಿಲ್ಲ. ಈಗ ಶೀಘ್ರದಲ್ಲಿಯೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬಾಗಲಕೋಟೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ಕಳೆದ ಐದು ವರ್ಷಗಳಿಂದ ಯಾವುದೇ ನೇಮಕಾತಿಗಳು ಆಗಿಲ್ಲ. ಒಂದು ಸಾವಿರ ಪಿಎಸ್‌ಐ ಹುದ್ದೆಗಳು ಖಾಲಿ ಇದ್ದು, ಈಗಾಗಲೇ 500 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ನಡೆದಿದ್ದು, ಕೆಲವರು ತರಬೇತಿಯಲ್ಲಿದ್ದಾರೆ. ಇಲಾಖೆಯಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹಂತ-ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending