ದಿನದ ಸುದ್ದಿ

ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಿದ ಶಾಹುಮಹರಾಜ್ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ನೆನೆಯಬೇಕು : ಸಿದ್ದರಾಮಯ್ಯ

Published

on

ಸುದ್ದಿದಿನ ಡೆಸ್ಕ್ : ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಆಯೋಜಿಸಿದ್ದ ಶ್ರೀಮತಿ ಇಂದಿರಾ ಗಾಂಧಿ, ದಿ.ರಾಜೀವ್ ಗಾಂಧಿ & ದಿ.ದೇವರಾಜ ಅರಸು ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಿಜೆಪಿಯವರಿಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿಯಿಲ್ಲ, ಈ ಹಿಂದೆ ಎಲ್.ಕೆ.ಅಡ್ವಾಣಿಯವರು ಹಿಂದುಳಿದ ವರ್ಗಗಳಿಗೆ ಮೀಸಲಾತಿ ವಿರೋಧಿಸಿ ರಥಯಾತ್ರೆ ನಡೆಸಿದ್ದರು ಎಂದು ಹೇಳಿದರು.

ಹಿಂದುಳಿದ ಜಾತಿಗಳಿಗೆ ಸ್ವಾತಂತ್ರ್ಯ ಪೂರ್ವದಲ್ಲಿಯೇ ಮೀಸಲಾತಿ ನೀಡಲು ಪ್ರಮುಖ ಪಾತ್ರ ವಹಿಸಿದವರು ಶಾಹು ಮಹಾರಾಜರು ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಆ ಮಹಾ ಪುರುಷರನ್ನು ಇಂದಿಗೂ ನಾವು ನೆನೆಯಬೇಕು ಎಂದು ಸ್ಮರಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version