ದಿನದ ಸುದ್ದಿ
ಹಿಂದುಳಿದ ವರ್ಗಗಳಿಗೆ ಮೀಸಲಾತಿ ನೀಡಿದ ಶಾಹುಮಹರಾಜ್ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ನೆನೆಯಬೇಕು : ಸಿದ್ದರಾಮಯ್ಯ
ಸುದ್ದಿದಿನ ಡೆಸ್ಕ್ : ಮಾಜಿ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಆಯೋಜಿಸಿದ್ದ ಶ್ರೀಮತಿ ಇಂದಿರಾ ಗಾಂಧಿ, ದಿ.ರಾಜೀವ್ ಗಾಂಧಿ & ದಿ.ದೇವರಾಜ ಅರಸು ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಿಜೆಪಿಯವರಿಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿಯಿಲ್ಲ, ಈ ಹಿಂದೆ ಎಲ್.ಕೆ.ಅಡ್ವಾಣಿಯವರು ಹಿಂದುಳಿದ ವರ್ಗಗಳಿಗೆ ಮೀಸಲಾತಿ ವಿರೋಧಿಸಿ ರಥಯಾತ್ರೆ ನಡೆಸಿದ್ದರು ಎಂದು ಹೇಳಿದರು.
ಹಿಂದುಳಿದ ಜಾತಿಗಳಿಗೆ ಸ್ವಾತಂತ್ರ್ಯ ಪೂರ್ವದಲ್ಲಿಯೇ ಮೀಸಲಾತಿ ನೀಡಲು ಪ್ರಮುಖ ಪಾತ್ರ ವಹಿಸಿದವರು ಶಾಹು ಮಹಾರಾಜರು ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಆ ಮಹಾ ಪುರುಷರನ್ನು ಇಂದಿಗೂ ನಾವು ನೆನೆಯಬೇಕು ಎಂದು ಸ್ಮರಿಸಿದರು.
ಹಿಂದುಳಿದ ವರ್ಗಗಳಿಗೆ ಮೀಸಲಾತಿ ವಿರೋಧಿಸಿ ರಥ ಯಾತ್ರೆ ಮಾಡಿದವರು ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿಯವರು. ಆ ರಥ ಯಾತ್ರೆ ತಡೆದವರು ಲಾಲೂ ಪ್ರಸಾದ್ ಅವರು. ಹಿಂದುಳಿದ ವರ್ಗಗಳ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇಲ್ಲ. ಅವರದ್ದೇನಿದ್ದರು ಕೇವಲ ಸ್ವಾರ್ಥ ರಾಜಕಾರಣ ಅಷ್ಟೆ.
— Siddaramaiah (@siddaramaiah) November 20, 2018
ಬಿಜೆಪಿಯವರು ಬಹಳ ಡೇಂಜರ್. ಜನರ ದಾರಿ ತಪ್ಪಿಸಿ ಹೇಗಾದರೂ ಮಾಡಿ ಅಧಿಕಾರ ಹಿಡಿಯುವುದಷ್ಟೇ ಅವರ ಗುರಿ. ಕಳೆದ ನಾಲ್ಕೂವರೆ ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವುದನ್ನು ಬಿಟ್ಟರೆ ಅಹಿಂದ ವರ್ಗಕ್ಕೆ ಏನು ಮಾಡಿದ್ದಾರೆ?#ದೇವರಾಜಅರಸುಜಯಂತಿ
— Siddaramaiah (@siddaramaiah) November 20, 2018
ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಆಯೋಜಿಸಿದ್ದ ಶ್ರೀಮತಿ ಇಂದಿರಾ ಗಾಂಧಿ, ದಿ.ರಾಜೀವ್ ಗಾಂಧಿ & ದಿ.ದೇವರಾಜ ಅರಸು ಅವರ ಜಯಂತಿ ಕಾರ್ಯಕ್ರಮವನ್ನು ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಎಂ.ಡಿ.ಲಕ್ಷ್ಮಿನಾರಾಯಣ್ ಅವರೊಂದಿಗೆ ಉದ್ಘಾಟಿಸಿದೆ.@INCKarnataka @dineshgrao pic.twitter.com/SQl4kzjQsU
— Siddaramaiah (@siddaramaiah) November 20, 2018
ಸುದ್ದಿದಿನ.ಕಾಂ|ವಾಟ್ಸಾಪ್|9986715401