ರಾಜಕೀಯ

ಯಡಿಯೂರಪ್ಪರಿಂದ‌ ಜಾಗತಿಕ ಮಟ್ಟದಲ್ಲಿ ದೇಶದ ಮಾನ ಹರಾಜಾಗಿದೆ : ಸಿದ್ದರಾಮಯ್ಯ‌ ಕಿಡಿ

Published

on

ಸುದ್ದಿದಿನ ಡೆಸ್ಕ್ : ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರ ಸಾವಿನಲ್ಲಿ ರಾಜಕೀಯ ಲಾಭ ಕಾಣುತ್ತಿರುವ ಯಡಿಯೂರಪ್ಪ ಅವರ ಹೇಳಿಕೆ ಅಧಿಕಾರದಲ್ಲಿರುವ ಬಿಜೆಪಿ‌‌ ಸರ್ಕಾರ ದ ಉದ್ದೇಶದ ಬಗ್ಗೆ ಸಂಶಯ ಹುಟ್ಟುವಂತೆ ಮಾಡಿದೆ. ಪ್ರಧಾನಿ ನರೇಂದ್ರಮೋದಿ ಅವರು ಇದಕ್ಕೆ ಸ್ಪಷ್ಟೀಕರಣ‌ ನೀಡಬೇಕು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿ ಟ್ವೀಟ್ ಮಾಡಿದ್ದಾರೆ.

ದೇಶದ ಸೈನಿಕರು ಪ್ರಾಣವನ್ನೂ ಲೆಕ್ಕಿಸದೆ ಗಡಿಯಲ್ಲಿ ಹೋರಾಡುವುದು ಬಿಜೆಪಿಯನ್ನು ಗೆಲ್ಲಿಸುವುದಕ್ಕಲ್ಲ ಎಂಬ ಕನಿಷ್ಟ ಜ್ಞಾನವೂ ಇಲ್ಲದ ಪ್ರತಾಪ್ ಸಿಂಹ ಸಂಸದರಾಗಿರುವುದು ದುರಂತ.

ಯಡಿಯೂರಪ್ಪನವರ ಹೇಳಿಕೆಯಿಂದ ಈಗಾಗಲೇ ಜಾಗತಿಕ ಮಟ್ಟದಲ್ಲಿ ದೇಶ ತಲೆತಗ್ಗಿಸುವಂತಾಗಿದೆ, ಇನ್ನಾದರೂ ಇಂತಹ ವಿಚಾರದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ ಎಂದು ವಾಗ್ದಾಳಿ‌‌ನಡೆಸಿದ್ದಾರೆ .

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version