ರಾಜಕೀಯ
ಇದು ರೈತರ, ಯುವಜನರ ಮತ್ತು ಗ್ರಾಮೀಣ ಭಾರತದ ವಿರೋಧಿ ಬಜೆಟ್ : ಸಿದ್ದರಾಮಯ್ಯ ಕಿಡಿ

ಸುದ್ದಿದಿನ,ಬೆಂಗಳೂರು ; 2019-20ರ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯ ಪತ್ರ ಸಂಪೂರ್ಣವಾಗಿ ರೈತರು, ಯುವಜನರು ಮತ್ತು ಗ್ರಾಮೀಣ ಭಾರತದ ವಿರೋಧಿ ಆಯವ್ಯಯ ಪತ್ರ ಎಂದು ಹೇಳಬಹುದಾಗಿದೆ. ರಾಜಕೀಯ ಕಾರಣಕ್ಕೆ ಈ ಟೀಕೆಯನ್ನು ನಾನು ಮಾಡುತ್ತಿಲ್ಲ. ಯಾರಾದರೂ ಆಯವ್ಯಯ ಪತ್ರವನ್ನು ಓದಿದರೆ ಮೇಲ್ನೋಟಕ್ಕೆ ಈ ಮೂರು ಕ್ಷೇತ್ರಗಳನ್ನು ಕಡೆಗಣಿಸಿರುವುದು ಸ್ಪಷ್ಟವಾಗಿ ಗೋಚರವಾಗುತ್ತದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಇಂದು ಮಂಡನೆಯಾದ ಕೇಂದ್ರ ಬಜೆಟ್ ಬಗ್ಗೆ ಟ್ವೀಟ್ ಮಾಡಿರುವ ಅವರು, ಸರ್ಕಾರದ ಸಾಧನೆಗಳನ್ನು ಲೆಕ್ಕಕ್ಕೆ ಇಟ್ಟುಕೊಳ್ಳದೆ ಪ್ರಚಾರ ವೈಭವಕ್ಕೆ ಮರುಳಾಗಿ ಮತಚಲಾಯಿಸಿದರೆ ಏನಾಗುತ್ತದೆ ಎನ್ನುವುದಕ್ಕೆ ಕೇಂದ್ರ ಸರ್ಕಾರದ 2019-20 ಸಾಲಿನ ಆಯವ್ಯಯ ಪತ್ರ ಜ್ವಲಂತ ಸಾಕ್ಷಿ. ಇದರ ಜತೆಗೆ ಮಹಿಳೆಯರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳನ್ನು ಕೂಡಾ ನಿರ್ಲಕ್ಷಿಸಲಾಗಿದೆ. ದೇಶದ ರೈತರು ಸರಿಯಾದ ಮಳೆ ಇಲ್ಲದೆ, ಬೆಳೆದ ಬೆಳೆಗೆ ಯೋಗ್ಯ ಬೆಲೆ ಇಲ್ಲದೆ ಕಂಗಾಲಾಗಿದ್ದಾರೆ. ದೇಶದ ಯುವಜನತೆ ನಿರುದ್ಯೋಗದಿಂದಾಗಿ ದಿಕ್ಕೆಟ್ಟು ಕೂತಿದ್ದಾರೆ. ಈ ಎರಡು ಪ್ರಮುಖ ಸಮಸ್ಯೆಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವ ನರೇಂದ್ರ ಮೋದಿ ಸರ್ಕಾರ ತಮ್ಮದು ಹೇಗೆ ರೈತ ಮತ್ತು ಯುವಜನ ವಿರೋಧಿ ಪಕ್ಷ ಎನ್ನುವುದನ್ನು ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.
ದೇಶಾದ್ಯಂತ ರೈತರು ಸಂಕಷ್ಟದಲ್ಲಿದ್ದಾರೆ. ಒಂದೆಡೆ ಬರಗಾಲ, ಇನ್ನೊಂದೆಡೆ ಬೆಳೆದ ಬೆಳೆಗೆ ಬೆಲೆ ಇಲ್ಲ, ಮತ್ತೊಂದೆಡೆ ಮಾಡಿದ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಬೇಕಾದ ಅಸಹಾಯಕತೆ. ಕಳೆದ ಐದು ವರ್ಷಗಳಲ್ಲಿ ವಂಚಕ ಉದ್ಯಮಿಗಳನ್ನು ಪೋಷಿಸುತ್ತಾ ರೈತ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿರುವ ಮೋದಿ ಸರ್ಕಾರ ತನ್ನ ರೈತ ವಿರೋಧಿ ನೀತಿಯನ್ನು ಮುಂದುವರಿಸಿಕೊಂಡು ಹೋಗುವ ಸೂಚನೆಯನ್ನು ಆಯವ್ಯಯಪತ್ರದಲ್ಲಿ ನೀಡಿದೆ ಎಂದಿದ್ದಾರೆ.
ರೈತರ ಸಾಲ ಮನ್ನಾ ಮಾಡಬೇಕೆಂದು ಇಡೀ ದೇಶದ ರೈತರು ಒಕ್ಕೊರಲಿನಿಂದ ಮೊರೆ ಇಡುತ್ತಿದ್ದಾರೆ. ರಾಜ್ಯದ ಹಿಂದಿನ ಕಾಂಗ್ರೆಸ್ ಸರ್ಕಾರ ಮತ್ತು ಈಗಿನ ಮೈತ್ರಿ ಸರ್ಕಾರಗಳೆರಡೂ ರೈತರ ಮೊರೆಗೆ ಓಗೊಟ್ಟು ಸಾಲ ಮನ್ನಾ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿದೆ. ಆದರೆ ನರೇಂದ್ರ ಮೋದಿ ಸರ್ಕಾರ ರೈತರ ಮೊರೆ ಕೇಳದೆ ಇರುವಷ್ಟು ಕಿವುಡಾಗಿದೆ.
ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲವನ್ನು ಮನ್ನಾ ಮಾಡಬೇಕೆಂದು ನಾನು ಮುಖ್ಯಮಂತ್ರಿಯಾಗಿದ್ದ ದಿನಗಳಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ವಂಚಕ ಉದ್ಯಮಿಗಳಿಗೆ ಬ್ಯಾಂಕುಗಳ ಖಜಾನೆಯನ್ನು ತೆರೆದಿಟ್ಟು, ಅವರನ್ನು ವಿದೇಶಕ್ಕೆ ಹಾರಲು ಬಿಟ್ಟ ಸರ್ಕಾರ ರೈತರನ್ನು ಮಾತ್ರ ಸತತವಾಗಿ ಸಂಪೂರ್ಣವಾಗಿ ಕಡೆಗಣಿಸುತ್ತಾ ಬಂದಿದೆ ಎಂದು ನುಡಿದಿದ್ದಾರೆ.
ಕೃಷಿ ಬೆಳವಣಿಗೆಗೆ ಪೂರಕವಾಗಿರುವ ನೀರಾವರಿ, ತೋಟಗಾರಿಕೆ, ಸಹಕಾರ ಕ್ಷೇತ್ರಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ನಿರುದ್ಯೋಗ ತಾಂಡವವಾಡುತ್ತಿರುವ ಈ ದಿನಗಳಲ್ಲಿ ಅತ್ಯಂತ ಹೆಚ್ಚು ಉದ್ಯೋಗ ಸೃಷ್ಟಿಸುತ್ತಿರುವ ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಿರುವುದರಿಂದ ನಿರುದ್ಯೋಗದ ಪ್ರಮಾಣ ಮಾತ್ರವಲ್ಲ ಗ್ರಾಮೀಣ ಪ್ರದೇಶಗಳಿಂದ ನಗರಕ್ಕೆ ವಲಸೆ ಪ್ರಮಾಣ ಹೆಚ್ಚಾಗಲಿದೆ. ರೈತರ ಆದಾಯವನ್ನು ದುಪ್ಪಟ್ಟುಗೊಳಿಸುತ್ತೇವೆ ಎಂದು ಐದು ವರ್ಷಗಳ ಹಿಂದೆ ಆಶ್ವಾಸನೆ ನೀಡಿದ್ದ ಮೋದಿ ಸರ್ಕಾರ ಈ ಆಯವ್ಯಯ ಪತ್ರದಲ್ಲಿಯೂ ಕೂಡಾ ಅದರ ಬಗ್ಗೆ ಉಲ್ಲೇಖ ಮಾಡಿಲ್ಲ. ಕಳೆದ ಐದು ವರ್ಷಗಳಲ್ಲಿ ಕೇವಲ 0.3 % ನಷ್ಟು ಮಾತ್ರ ಬಜೆಟ್ ಹಣವನ್ನು ಖರ್ಚು ಮಾಡಿರುವುದು ಸರ್ಕಾರದ ದುರಹಂಕಾರ ನೀತಿಗೆ ಸಾಕ್ಷಿ.
ನೀರಾವರಿ ಕ್ಷೇತ್ರಕ್ಕೆ ಕಳೆದ ನಾಲ್ಕು ವರ್ಷಗಳಲ್ಲಿ 433 ಕೋಟಿ ರೂಪಾಯಿಗಳಷ್ಟು ಕಡಿಮೆ ಖರ್ಚು ಮಾಡಲಾಗಿದೆ. ಮನೆಮನೆಗೆ ಕುಡಿಯುವ ನೀರು ಪೂರೈಸುವ ಆಕರ್ಷಕ ಯೋಜನೆಯನ್ನು ಪ್ರಕಟಿಸಿರುವ ಸರ್ಕಾರ ನೀರು ಸಂಗ್ರಹದ ಬಗ್ಗೆ ಮಾತ್ರ ಏನನ್ನೂ ಹೇಳಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಇಲ್ಲಿಯವರೆಗೆ ನಿರುದ್ಯೋಗ ಪ್ರಮಾಣದ ಬಗ್ಗೆ ಕಣ್ಣು ಮುಚ್ಚಾಲೆ ಆಡುತ್ತಾ ಬಂದಿರುವ ಕೇಂದ್ರ ಸರ್ಕಾರ ಇದೇ ಮೊದಲ ಬಾರಿಗೆ ನಿರುದ್ಯೋಗದ ಪ್ರಮಾಣ 45 ವರ್ಷಗಳಲ್ಲಿ ಗರಿಷ್ಠ ಮಟ್ಟ ತಲುಪಿದೆ ಎಂದು ಒಪ್ಪಿಕೊಂಡಿದೆ. ನೋಟ್ ಬ್ಯಾನ್, ಕೈಗಾರಿಕಾ ಕ್ಷೇತ್ರದ ಹಿನ್ನಡೆ ಮತ್ತು ಅವೈಜ್ಞಾನಿಕ ಜಿಎಸ್ ಟಿಯಿಂದಾಗಿ ನಿರುದ್ಯೋಗ ಹೆಚ್ಚಾಗಲಿದೆ ಎಂದು ನಮ್ಮ ಪಕ್ಷ ಸಾರಿ ಸಾರಿ ಹೇಳಿದರೂ ಪ್ರಧಾನಿ ಮೋದಿಯವರು ಕಿವಿಗೆ ಹಾಕಿಕೊಂಡಿರಲಿಲ್ಲ. ಈಗ ಅನಿವಾರ್ಯವಾಗಿ ಸರ್ಕಾರ ತಪ್ಪೊಪ್ಪಿಕೊಂಡಿದೆ ಎಂದು ಟೀಕಿಸಿದ್ದಾರೆ.
ಕಾಯಕವೇ ಕೈಲಾಸ ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ ಮಾತ್ರಕ್ಕೆ ಉದ್ಯೋಗ ಸೃಷ್ಟಿಯಾಗುವುದಿಲ್ಲ ಎನ್ನುವುದು ಹಣಕಾಸ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ತಿಳಿದಿರಬೇಕು. ತಂತ್ರ-ಮಂತ್ರದಿಂದ ಚುನಾವಣೆ ಗೆಲ್ಲಬಹುದೇನೋ, ಆದರೆ ಉದ್ಯೋಗವನ್ನು ಸೃಷ್ಟಿಸಲಾಗುವುದಿಲ್ಲ. ಮತ್ತೆ ಮತ್ತೆ ಕೌಶಲಾಭಿವೃದ್ಧಿಯ ಜಪ ಮಾಡುವ ಮೋದಿ ಸರ್ಕಾರ ಉದ್ಯೋಗ ಸೃಷ್ಟಿಗೆ ನಿರ್ದಿಷ್ಟ ಯೋಜನೆಗಳನ್ನು ರೂಪಿಸಲು ಸೋತಿದೆ ಎಂದು ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದಿಂದ ಆರೋಗ್ಯ ಕ್ಷೇತ್ರ ಕೂಡಾ ನಿರ್ಲಕ್ಷ್ಯಕ್ಕೀಡಾಗಿದೆ. ಬಹುಪ್ರಚಾರದ ರಾಷ್ಟ್ರೀಯ ಆರೋಗ್ಯ ಮಿಷನ್ ಗೆ ಕಳೆದ ಐದು ವರ್ಷಗಳಲ್ಲಿ ಶೇಕಡಾ 13ರಷ್ಟು ಹಣ ಕಡಿತಗೊಳಿಸಲಾಗಿದೆ. ಜಿಡಿಪಿಯ ಶೇಕಡಾ 3ರಷ್ಟು ಹಣವನ್ನು ಆರೋಗ್ಯ ಕ್ಷೇತ್ರಕ್ಕೆ ನೀಡಬೇಕೆಂಬುದು ನಮ್ಮ ಪಕ್ಷದ ಬೇಡಿಕೆಯಾಗಿತ್ತು. ಇದೇ ರೀತಿ ಶಿಕ್ಷಣ ಕ್ಷೇತ್ರ ಕೂಡಾ ಅವಗಣನೆಗೆ ಒಳಗಾಗಿದೆ.
ಜಾಗತಿಕವಾಗಿ ತೈಲಬೆಲೆ ಕಡಿಮೆಯಾಗುತ್ತಿದ್ದರೂ ನರೇಂದ್ರ ಮೋದಿ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಬೆಲೆಯನ್ನು ಎರಡು ರೂಪಾಯಿಗಳಷ್ಟು ಏರಿಸಿದೆ. ಇದೊಂದು ಅನಗತ್ಯ ಬೆಲೆ ಹೆಚ್ಚಳವಾಗಿದ್ದು ಇದರಿಂದ ಸಹಜವಾಗಿಯೇ ಅಗತ್ಯವಸ್ತುಗಳ ಬೆಲೆ ಏರಿಕೆಯಾಗಲಿದೆ, ಸಾರಿಗೆ ದುಬಾರಿಯಾಗಲಿದೆ, ಇದರಿಂದ ಸಾಮಾನ್ಯ ಜನರ ಕಷ್ಟಗಳು ಹೆಚ್ಚಾಗಲಿವೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಓರ್ವ ಮಹಿಳೆಯಾಗಿ ಮಹಿಳಾ ಕಲ್ಯಾಣ ಕ್ಷೇತ್ರವನ್ನೇ ನಿರ್ಲಕ್ಷಿಸಿದ್ದಾರೆ. ಕಳೆದೆರಡು ವರ್ಷಗಳಲ್ಲಿ ಮಹಿಳಾಕಲ್ಯಾಣ ಕಾರ್ಯಕ್ರಮಗಳಿಗೆ ಸುಮಾರು 2000 ಕೋಟಿ ರೂಪಾಯಿ ಅನುದಾನವನ್ನು ಕಡಿತಗೊಳಿಸಲಾಗಿದೆ. ಹೊಸ ಆಯವ್ಯಯ ಪತ್ರದಲ್ಲಿ ಕೂಡಾ ಉತ್ತೇಜನಕಾರಿಯಾಗಿರುವ ಯಾವ ಕಾರ್ಯಕ್ರಮಗಳನ್ನು ನೀಡಲಾಗಿಲ್ಲ ಎಂದು ನಿರಾಶೆ ವ್ಯಕ್ತಪಡಿಸಿದ್ದಾರೆ.
ತಮಗಿರುವ ಬಹುಮತದ ಬಲದಿಂದ ತಾವು ನಡೆದದ್ದೇ ದಾರಿ ಎಂಬ ದುರಹಂಕಾರ ಸರ್ಕಾರದ ನಡೆಯಲ್ಲಿ ಕಾಣಬಹುದಾಗಿದೆ. ದೇಶದ ಜನತೆಗೆ ತಮ್ಮ ತಪ್ಪಿನ ತಿಳುವಳಿಕೆಯನ್ನು ಸರ್ಕಾರವೇ ಮಾಡಿಕೊಟ್ಟಿದೆ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.
ಕೆಎಸ್ಆರ್ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.
ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ17 hours ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ17 hours ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ17 hours ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ4 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ17 hours ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ4 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ17 hours ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ